
ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ
ಬೆಂಗಳೂರು: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಜೂನ್ನಲ್ಲಿ ನಡೆಸಿದ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಫಲಿತಾಂಶವನ್ನು ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ಜುಲೈ 19ರ ಮಧ್ಯಾಹ್ನ 12 ಗಂಟೆಯ ನಂತರ ಎಸ್ಎಂಎಸ್ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಪ್ರೌಢಶಿಕ್ಷಣ ಪರೀûಾ ಮಂಡಳಿ ತಿಳಿಸಿದೆ. ರಾಜ್ಯದ 13,036 ಪ್ರೌಢಶಾಲೆಯ 20,8151 ವಿದ್ಯಾರ್ಥಿಗಳು ಪರೀಕ್ಷೆ

ಬೆಳಗ್ಗೆ 8ರಿಂದಲೇ ಕಾಲೇಜು
ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಬೆಳಗ್ಗೆ ತರಗತಿ ಆರಂಭಿಸುವ ಸಮಯವನ್ನು ಮತ್ತೆ ಪರಿಷ್ಕರಿಸಲಾಗಿದೆ. ಸ್ವಂತ ಕಟ್ಟಡ ಇಲ್ಲದ ಹಾಗೂ ಕೊಠಡಿಗಳ ಕೊರತೆ ಯಿದ್ದು, ಎರಡು ಪಾಳಿಯಲ್ಲಿ ತರಗತಿ ನಡೆಸುವ ಕಾಲೇಜುಗಳಲ್ಲಿ ಬೆಳಗ್ಗೆ 8 ಗಂಟೆಯಿಂದಲೇ ತರಗತಿ ಆರಂಭಿಸುವಂತೆ ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಿಸಿದೆ. ಕಾಲೇಜು ತರಗತಿ ಆರಂಭಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು, ಪ್ರಾಂಶುಪಾಲರು, ಪ್ರಾಧ್ಯಾಪಕರ ಸಂಘ ಹ
ಪಿ.ಯು. ಉಪನ್ಯಾಸಕರ ಹುದ್ದೆ: ವೇಳಾಪಟ್ಟಿ ಪ್ರಕಟ
ಬೆಂಗಳೂರು: ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ನೇಮಕಾತಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವೆಬ್ಸೈಟ್ನಲ್ಲಿ ಪ್ರಕಟಿಸಿದೆ. ಮಾಹಿತಿಗೆ: http://kea.kar.nic.in ಸಂಪರ್ಕ: 080-23564583

ಪಿಜಿ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಆರಂಭ
ಬೆಂಗಳೂರು: ಜ್ಞಾನಭಾರತಿ ಆವರಣ, ರಾಮನಗರ ಸ್ನಾತಕೋತ್ತರ ಕೇಂದ್ರ ಹಾಗೂ ಸಂಯೋಜಿತ ಕಾಲೇಜುಗಳ ಮೂಲಕ 2018-19ನೇ ಸಾಲಿನಲ್ಲಿ ಕೊಡಮಾಡುವ ವಿವಿಧ ಸ್ನಾತಕೋತ್ತರ ಕೋರ್ಸ್ಗಳಿಗೆ ಬೆಂಗಳೂರು ವಿಶ್ವವಿದ್ಯಾಲಯವು ಅರ್ಜಿ ಆಹ್ವಾನಿಸಿದೆ. ಜುಲೈ 9ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಜ್ಞಾನಭಾರತಿ ಆವರಣದ ಕಲಾ ವಿಭಾಗದಲ್ಲಿ ಎಂ.ಎ ಕನ್ನಡ, ಅರ್ಥಶಾಸ್ತ್ರ, ಇಂಗ್ಲಿಷ್, ಹಿಂದಿ, ಇತಿಹಾಸ, ಪತ್ರಿಕೋದ್ಯಮ ಮತ್ತು ಸಂವಹನ, ತತ್ವಶಾಸ್ತ್ರ, ರಾಜ್ಯಶಾಸ್ತ್

ಎಂಜಿನಿಯರಿಂಗ್ ಕೋರ್ಸ್ಗೆ 46 ಸಾವಿರ ಸೀಟು
ಬೆಂಗಳೂರು: ವೃತ್ತಿಪರ ಕೋರ್ಸ್ಗಳ ಸೀಟ್ ಮ್ಯಾಟ್ರಿಕ್ಸ್ ಈಗಾಗಲೇ ಪ್ರಕಟಿಸಿದ್ದರೂ ಎಂಜಿನಿಯರಿಂಗ್ ಮತ್ತು ಆರ್ಕಿಟೆಕ್ಚರ್ ಕೋರ್ಸ್ಗಳ ಸೀಟುಗಳ ವಿವರವನ್ನು ಪ್ರಕಟಿಸದಿದ್ದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದೀಗ ಈ ಎರಡು ಕೋರ್ಟ್ಗಳ ಸರ್ಕಾರಿ ಕೋಟಾ, ಹೈದರಾಬಾದ್ ಕರ್ನಾಟಕ ಕೋಟಾ ಹಾಗೂ ವಿಶೇಷ ಕೋಟಾದ ಸೀಟುಗಳ ಕಾಲೇಜುವಾರು ಪಟ್ಟಿಯನ್ನು ಪ್ರಕಟಿಸಿದೆ. ಪ್ರಾಧಿಕಾರದ ವೆಬ್ಸೈಟ್

ಸರ್ಕಾರಿ ಪಿಯುಸಿ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ತರಬೇತಿ
ಬೆಂಗಳೂರು: ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶಪಡೆಯುವ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಹೀಗಾಗಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ರಾಜ್ಯ ಸರ್ಕಾರದ ಪದವಿಪೂರ್ವ ಕಾಲೇಜುಗಳಲ್ಲಿ ವಿಜ್ಞಾನ ವಿಷಯದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಇದರಿಂದ ಅನುಕೂಲವಾಗಲಿದೆ. ಪ್ರತಿ ವಾರ ಬುಧವಾರ, ಗುರುವಾರ, ಶುಕ್ರವಾರ ಹಾಗೂ ಶನಿವಾರಗಳಂದು 15 ಗಂಟೆ ಬೆಳಗ್ಗೆ 7.30ರಿಂದ 9 ಗಂಟೆಯವರೆಗೆ ತರಬೇತಿ ನೀ

ವಿದ್ಯಾ ದಾನದ ಹೆಸರಿನಲ್ಲಿ ಹಣ ಲೂಟಿ ಸ್ಪ್ರಿಂಗ್ ಪೀಲ್ಡ್(Spring field) ಶಾಲೆ ವಿರುದ್ಧ ಪೋಷಕರಿಂದ ದೂರು
ಚನ್ನಪಟ್ಟಣ: ವಿದ್ಯಾದಾನದ ಹೆಸರಿನಲ್ಲಿ ನಾಯಿಕೊಡೆಯಂತೆ ತಲೆ ಎತ್ತಿರುವ ಶಾಲೆಗಳು ಶಿಕ್ಷಣದ ವ್ಯಾಪಾರಿ ಕರಣಕ್ಕೆ ನಿಂತಿವೆ. ಇದಕ್ಕೆ ತಾಜಾ ಉದಾಹರಣೆ ಎಂಬಂತೆ ಆರ್ಟಿಇ ಮಕ್ಕಳಿಂದ ಶುಲ್ಕ ವಸೂಲಿಗೆ ನಿಂತ ಖಾಸಗಿ ಶಾಲೆಯ ವಿರುದ್ಧ ಪೋಷಕರು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಖಾಸಗಿ ಶಾಲೆಗಳು ಪೋಷಕರನ್ನು ಶುಲ್ಕದ ಹೆಸರಿನಲ್ಲಿ ಉರಿದು ಮುಕ್ಕುತ್ತಿವೆ ಎಂಬ ಕೂಗು ವ್ಯಾಪಕವಾಗಿದೆ. ಡೊನೇಷನ್ ಹಾವಳಿಯನ್ನು ನಿಯಂತ್ರಿಸಲು ಸರ್ಕಾರ ಸಾಕಷ್ಟ

ಇಂದು11ಗಂಟೆಗೆ ಪಿಯುಸಿ ಫಲಿತಾಂಶ
ಬೆಂಗಳೂರು: ಲಕ್ಷಾಂತರ ವಿದ್ಯಾರ್ಥಿಗಳು ತುದಿಗಾಲಿನಲ್ಲಿ ನಿಂತು ಕಾತರರಾಗಿರುವ ದ್ವಿತೀಯ ಪಿಯುಸಿ ಫಲಿತಾಂಶ ಸೋಮವಾರ ಬೆಳಗ್ಗೆ 11 ಗಂಟೆಗೆ ಮಲ್ಲೇಶ್ವರದ ಪದವಿಪೂರ್ವ ಇಲಾಖೆಯ ಕಚೇರಿಯಲ್ಲಿ ಪ್ರಕಟವಾಗಲಿದೆ. ಇಲಾಖೆಯ ವೆಬ್ಸೈಟ್ karresults.nic.in ಮತ್ತು pue.kar.nic.in ನಲ್ಲಿ ಬೆಳಗ್ಗೆ 11.30ರ ನಂತರ ಫಲಿತಾಂಶ ಲಭ್ಯವಾಗಲಿದೆ. ಇದರೊಂದಿಗೆ 3,37,860
ಸಿಬಿಎಸ್ಇ: 10ನೇ ತರಗತಿ ವಿದ್ಯಾರ್ಥಿಗಳಿಗೆ ಎರಡು ಕೃಪಾಂಕ
ನವದೆಹಲಿ: ಹತ್ತನೇ ತರಗತಿಯ ಇಂಗ್ಲಿಷ್ ಪ್ರಶ್ನೆಪತ್ರಿಕೆಯಲ್ಲಿ ಮುದ್ರಣ ದೋಷ ಇದ್ಪ ಕಾರಣ ವಿದ್ಯಾರ್ಥಿಗಳಿಗೆ ಎರಡು ಕೃಪಾಂಕಗಳನ್ನು ನೀಡಲು ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ಇ) ನಿರ್ಧರಿಸಿದೆ. ಮಾರ್ಚ್ 12ರಂದು ಇಂಗ್ಲಿಷ್ ವಿಷಯದ ಪರೀಕ್ಷೆ ನಡೆದಿತ್ತು. ಪ್ರಶ್ನೆ ಪತ್ರಿಕೆಯಲ್ಲಿ ಮುದ್ರಣ ದೋಷವಿರುವ ಬಗ್ಗೆ ಕೆಲವು ಶಿಕ್ಷಕಕರು ಮತ್ತು ವಿದ್ಯಾರ್ಥಿಗಳು ಮಂಡಳಿಯ ಗಮನಕ್ಕೆ ತಂದಿದ್ದರು. ‘ಪ್ರಶ್ನೆ ಪತ್ರಿಕೆಯಲ್ಲಿ ಮುದ್

ನಾಳೆಯಿಂದ ಸಿಇಟಿ ಪರೀಕ್ಷೆ
ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವೃತ್ತಿ ಶಿಕ್ಷಣ ಕೋರ್ಸ್ಗಳಿಗಾಗಿ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಇದೇ 18ರಿಂದ ಪ್ರಾರಂಭವಾಗಲಿದೆ. 18ರಂದು ಜೀವವಿಜ್ಞಾನ, ಗಣಿತ, 19ಕ್ಕೆ ಭೌತವಿಜ್ಞಾನ ಮತ್ತು ರಸಾಯನವಿಜ್ಞಾನ ಪರೀಕ್ಷೆ ನಡೆಯಲಿದೆ. 20ಕ್ಕೆ ಹೊರರಾಜ್ಯದ ಅಭ್ಯರ್ಥಿಗಳಿಗೆ ಕನ್ನಡ ಭಾಷೆ ಪರೀಕ್ಷೆ ಇರಲಿದೆ. ಇದೇ ಮೊದಲ ಬಾರಿಗೆ ಪ್ರಶ್ನೆಪತ್ರಿಕೆಗಳನ್ನು ಕನ್ನಡ ಹಾಗೂ ಇಂಗ್ಲಿಷ್ನಲ್ಲಿ ಮುದ್ರಿಸಲಾಗಿದೆ. ಆಯುಷ್, ನ್ಯಾಚುರೋಪತಿ