Tel: 7676775624 | Mail: info@yellowandred.in

Language: EN KAN

    Follow us :


ಸಾವಿತ್ರಿ ಜ್ಯೋತಿ ಬಾಫುಲೆ ಹೆಣ್ಣು ಮಕ್ಕಳ ದನಿಯಾದರೆ ಕುವೆಂಪು ಶೂದ್ರರ ದನಿಯಾಗಿದ್ದರು ಸುತರಾ

Posted date: 04 Jan, 2020

Powered by:     Yellow and Red

ಸಾವಿತ್ರಿ ಜ್ಯೋತಿ ಬಾಫುಲೆ ಹೆಣ್ಣು ಮಕ್ಕಳ ದನಿಯಾದರೆ ಕುವೆಂಪು ಶೂದ್ರರ ದನಿಯಾಗಿದ್ದರು ಸುತರಾ

ಚನ್ನಪಟ್ಟಣ: ಭಾರತ ದೇಶದ ಮೊದಲ ಮಹಿಳಾ ಶಿಕ್ಷಕಿಯಾಗಿ ದಲಿತರ, ದಮನಿತರ ದನಿಯಾಗಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಆಸರೆಯಾಗಿ ನಿಂತವರು ಸಾವಿತ್ರಿ ಜ್ಯೋತಿ ಬಾಫುಲೆಯವರು, ಅದೇ ರೀತಿ ಶೂದ್ರರು ಅದರಲ್ಲೂ ರೈತನೇ ಜೀವ ರಾಶಿಗಳ ಜೀವನಾಡಿ ಎಂದು ತಮ್ಮ ಸಾಹಿತ್ಯ ಗಳಿಂದ ನಿರೂಪಿಸಿ ಜನಮಾನಸದಲ್ಲಿ ಅಜರಾಮರವಾಗಿ ಉಳಿದರು ಎಂದು ಬಯಲುಸೀಮೆ ಪತ್ರಿಕೆಯ ಸಂಪಾದಕ ಸು ತ ರಾಮೇಗೌಡ ತಿಳಿಸಿದರು.

ಅವರು ನಗರದ ಕೋಟೆ ಯಲ್ಲಿರುವ ರಾಘವೇಂದ್ರ ಐಟಿಐ ಕಾಲೇಜಿನಲ್ಲಿ ಆರ್ಕಿಟೆಕ್ಟ್ ಆಫ್ ಕಾನ್ಸಿಟ್ಯೂಷನ್ ಡಾ ಬಿ ಆರ್ ಅಂಬೇಡ್ಕರ್, ಕಲ್ಚರಲ್ ಸೋಷಿಯಲ್ ಎಜುಕೇಷನ್ ಟ್ರಸ್ಟ್ ಕನ್ನಡ ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಮಹಾತ್ಮ ಜ್ಯೋತಿ ಬಾಫುಲೆ ಹಾಗೂ ರಾಷ್ಟ್ರಕವಿ ಕುವೆಂಪು ಜನ್ಮದಿನದ ಪ್ರಯುಕ್ತ  ಜಾನಪದ ಗೀತಗಾಯನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ಹೆಣ್ಣು ಮಕ್ಕಳಿಗೆ ವಿದ್ಯೆಯೆ ಬೇಡ ಎನ್ನುತ್ತಿದ್ದ ಆ ಕಾಲದಲ್ಲಯೇ ಸಾವಿತ್ರಿ ಜ್ಯೋತಿ ಬಾಫುಲೆಯವರು ಶಾಲೆಯ ಮೆಟ್ಟಿಲೇರಿ ದೇಶದ ಮೊದಲ ಮಹಿಳಾ ಶಿಕ್ಷಕಿಯಾಗಿ ಹೆಣ್ಣು ಮಕ್ಕಳಿಗೆ ಮಾದರಿಯಾದರೆ ಶೂದ್ರನಿಗೇನು ಬರುತ್ತದೆ ಎಂದು ಹೀಯಾಳಿಸುತ್ತಿದ್ದ ಮೇಲ್ವರ್ಗದ ಜನರಿಗೆ ತಮ್ಮ ಕಾವ್ಯಗಳ ಮೂಲಕ ಶೂದ್ರ ಮತ್ತು ರೈತನೇ ಎಲ್ಲಾ ವರ್ಗದ ಜನಾಂಗದವರಿಗೆ ಮತ್ತು ಸಕಲ ಜೀವರಾಶಿಗಳಿಗೆ ಅನ್ನದಾತ ಎಂದು ನಿರೂಪಿಸಿಕೊಟ್ಟರು. ಕುವೆಂಪುರವರಿಗೂ ಮತ್ತು ಚನ್ನಪಟ್ಟಣಕ್ಕೂ ಅವಿನಾಭಾವ ಸಂಭಂಧವಿತ್ತು, ಅವರು ವಿದ್ಯಾರ್ಥಿಯಾಗಿದ್ದಾಗಿಂದ ಕುಲಪತಿಗಳಾಗುವ ತನಕವೂ ಆಗಾಗ ಬಂದು ಹೋಗುತ್ತಿದ್ದರು. ಅವರ ಎಲ್ಲಾ ಕೃತಿಗಳನ್ನು ಚನ್ನಪಟ್ಟಣ ತಾಲ್ಲೂಕಿನ ಮಂದಿ ಹೆಚ್ಚು ಹೊತ್ತಿ ಮೆರೆಸಿದ್ದಾರೆ, ಇದೆಲ್ಲವನ್ನೂ ಅವರು ತಮ್ಮ ನೆನಪಿನದೋಣಿ ಯಲ್ಲಿ ಉಲ್ಲೇಖಿಸಿದ್ದಾರೆ ಎಂದು ನೆನಪಿನ ಬುತ್ತಿಯನ್ನು ತೆರೆದಿಟ್ಟರು.


ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷರಾದ ಬಿ ಚಲುವರಾಜು ಮಾತನಾಡಿ ಸಾವಿತ್ರಿ ಬಾಫುಲೆಯವರು ಹಾಕಿ ಕೊಟ್ಟ ಬುನಾದಿ ಯಿಂದಲೇ ಇಂದು ಅನೇಕ ಮಹಿಳೆಯರು ಉನ್ನತ ಸ್ಥಾನದಲ್ಲಿರಲು ಸಾಧ್ಯವಾಯಿತು, ಹಾಗೆಯೇ ಉಳುವ ಯೋಗಿಯ ನೋಡಲ್ಲಿ ಎಂಬ ಕುವೆಂಪು ಅವರ ಕವಿವಾಣಿಯೇ ರೈತನ ದನಿಯಾಗಿ ಹೊರಹೊಮ್ಮಿತು ಎಂದರು.


ಸನ್ಮಾನ ಸ್ವೀಕರಿಸಿ ಮಾತನಾಡಿದ ಜಾನಪದ ಕಲಾವಿದೆ ಲಕ್ಷ್ಮಿ ಗೋ ರಾ ಶ್ರೀನಿವಾಸ ರವರು ಮಾತನಾಡಿ ಹೆಣ್ಣು ತಾಯಿಯಾಗಿ, ಅಕ್ಕತಂಗಿಯರಾಗಿ, ಮಡದಿಯಾಗಿ ಹಾಗೂ ಪ್ರೇಯಸಿಯಾಗಿ ಬೇಕು. ಆದರೆ ಮಗಳಾಗಿ ಬೇಡ ಎಂಬ ಧೋರಣೆ ಇಂದಿನ ಕೆಲವರಲ್ಲಿದೆ. ಇದನ್ನು ತಮ್ಮ ಕೊಳಕು ಮನಸ್ಸಿನಿಂದ ಹೊರ ದಬ್ಬಬೇಕು. ಹಾಗೆ ಇಂದಿನ ಪೀಳಿಗೆಯ ಕೆಲ ಯುವಕರು ಹೆಣ್ಣಿನ ಮೇಲೆ ನಡೆಸುವ ದೌರ್ಜನ್ಯವನ್ನು ಹತ್ತಿಕ್ಕಬೇಕು, ಬೇರೆಯವರ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಎಸಗುವ ಮುನ್ನ ತಮ್ಮ ಕುಟುಂಬದ ಹೆಣ್ಣು ಮಕ್ಕಳನ್ನು ನೆನೆದರೆ ಬಹುಶಃ ಇಂತಹ ಕೃತ್ಯಕ್ಕೆ ಅವರು ಕೈ ಹಾಕಲಾರರು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.


ಕಾರ್ಯಕ್ರಮದಲ್ಲಿ ಸಿದ್ದರಾಜು ರಾಂಪುರ, ಮಂಜೇಶಬಾಬು, ಶಿವಣ್ಣ ಮತ್ತಿತರ ಕಲಾವಿದರು ಗೀತಗಾಯನ ನಡೆಸಿಕೊಟ್ಟರು.

ಹಿರಿಯ ಫಾರ್ಮಾಸಿಸ್ಟ್ ವೇದಮೂರ್ತಿ, ಕಾಲೇಜಿನ ಪ್ರಾಂಶುಪಾಲ ಸುಜಯಸಿಂಹ‌, ಟ್ರಸ್ಟ್ ನ ಅಧ್ಯಕ್ಷ ಬಸವರಾಜ ಗುರುವಿನಪುರ ಉಪಸ್ಥಿತರಿದ್ದರು. ಮಹೇಶ್ ಮೌರ್ಯ ನಿರೂಪಿಸಿದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in education »

ಅಂದು ಶಾಲೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಅಪ್ಪಗೆರೆ ತಿಮ್ಮರಾಜು
ಅಂದು ಶಾಲೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಅಪ್ಪಗೆರೆ ತಿಮ್ಮರಾಜು

ಚನ್ನಪಟ್ಟಣ: ನಾವು ನಮ್ಮ ಕಾಲದಲ್ಲಿ ಶಾಲೆಗೆ ಹೋಗಿ ವಿದ್ಯೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಹಲವಾರು ಸಮಸ್ಯೆಗಳು ನಮ್ಮ ಎದುರಿಗಿದ್ದವು. ಆದರೆ, ಈಗ ಅಂತಹ

ಪ್ರತಿ ವಿದ್ಯಾರ್ಥಿಗಳು ಕೌಶಲ್ಯ ರೂಢಿಸಿಕೊಳ್ಳಬೇಕು: ಶಿಕ್ಷಣಾಧಿಕಾರಿ ಮರಿಗೌಡ
ಪ್ರತಿ ವಿದ್ಯಾರ್ಥಿಗಳು ಕೌಶಲ್ಯ ರೂಢಿಸಿಕೊಳ್ಳಬೇಕು: ಶಿಕ್ಷಣಾಧಿಕಾರಿ ಮರಿಗೌಡ

ಚನ್ನಪಟ್ಟಣ: ಶಾಲಾ ವಿದ್ಯಾರ್ಥಿಗಳು ಕೇವಲ ಪಾಠ ಮತ್ತು ಆಟಕ್ಕೆ ಸೀಮಿತವಾಗದೆ ವಿವಿಧ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಕೌಶಲ್ಯ ಕಲಿತ ಮಕ್ಕಳ ಪ್ರತಿಭೆಯನ್ನ

ಪ್ರತಿ ಸರ್ಕಾರಗಳು ಪದವೀಧರರ ಜೊತೆ ಚೆಲ್ಲಾಟವಾಡುತ್ತಿವೆ, ಉದಯ್ ಸಿಂಗ್
ಪ್ರತಿ ಸರ್ಕಾರಗಳು ಪದವೀಧರರ ಜೊತೆ ಚೆಲ್ಲಾಟವಾಡುತ್ತಿವೆ, ಉದಯ್ ಸಿಂಗ್

ಚನ್ನಪಟ್ಟಣ: ಪ್ರತಿ ವರ್ಷವೂ ಲಕ್ಷಾಂತರ ಯುವಕ ಯುವತಿಯರು ಪದವಿಯೊಂದಿಗೆ ಹೊರಬರುತ್ತಾರೆ. ವಿಶ್ವ ವಿದ್ಯಾಲಯಗಳಿಂದ ಪದವಿಯೊಂದಿಗೆ ಬರುವವರಿಗೆ ಸೂಕ್ತ  ಉದ್ಯೋಗ

ದಿವ್ಯಚೇತನ ಇಂಗ್ಲಿಷ್ ಶಾಲೆಯಲ್ಲಿ ಮೇಳೈಸಿದ ಮಿನಿ ವಿಜ್ಞಾನ ಮೇಳ
ದಿವ್ಯಚೇತನ ಇಂಗ್ಲಿಷ್ ಶಾಲೆಯಲ್ಲಿ ಮೇಳೈಸಿದ ಮಿನಿ ವಿಜ್ಞಾನ ಮೇಳ

ಚನ್ನಪಟ್ಟಣ: ಅಗಸ್ತ್ಯ ಅಂತರಾಷ್ಟ್ರೀಯ ಪ್ರತಿಷ್ಠಾನ ಬ್ರಾಡ್ಕಾಂ ವಿಜ್ಞಾನ ಕೇಂದ್ರ ಚನ್ನಪಟ್ಟಣ ಇವರ ವತಿಯಿಂದ ನಗರದ ದಿವ್ಯ ಚೇತನ ಇಂಗ್ಲಿಷ್ ಪ್ರೌಢಶಾಲೆಯಲ್ಲ

ಪಾಠದ ಜೊತೆಗೆ ಆಟದಲ್ಲಿಯೂ ಮುಂಚೂಣಿಗೆ ಬರಬೇಕು. ವಿ ಬಾಲಸುಬ್ರಹ್ಮಣ್ಯಂ
ಪಾಠದ ಜೊತೆಗೆ ಆಟದಲ್ಲಿಯೂ ಮುಂಚೂಣಿಗೆ ಬರಬೇಕು. ವಿ ಬಾಲಸುಬ್ರಹ್ಮಣ್ಯಂ

ಚನ್ನಪಟ್ಟಣ,: ಪ್ರತಿಯೊಬ್ಬ ವಿದ್ಯಾರ್ಥಿಯು ಶಿಕ್ಷಣದ ಜೊತೆಯಲ್ಲಿ ಕ್ರೀಡಾಮನೋಭಾವನೆ ಬೆಳಸಿಕೊಳ್ಳಬೇಕು. ಮನಸ್ಸು ಉಲ್ಲಸಿತವಾಗಲು ಕ್ರೀಡೆ ಸಹಕಾರಿ ಎಂದು ಬಾಲು

ಉಪನ್ಯಾಸಕರ ಧರಣಿ, ಕಲಿಕೆಗೆ ತೊಂದರೆ, ಎಬಿವಿಪಿ ಯಿಂದ ಪ್ರತಿಭಟನೆ
ಉಪನ್ಯಾಸಕರ ಧರಣಿ, ಕಲಿಕೆಗೆ ತೊಂದರೆ, ಎಬಿವಿಪಿ ಯಿಂದ ಪ್ರತಿಭಟನೆ

ಚನ್ನಪಟ್ಟಣ: ಸರ್ಕಾರಿ ಕಾಲೇಜುಗಳ ಉಪನ್ಯಾಸಕರು ಧರಣಿ ನಿರತರಾಗಿರುವುದರಿಂದ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯಿದೆ. ಇದರಿಂದ ಶೈಕ್ಷಣಿಕ ವರ್ಷದ ಕಲಿಕೆಗೆ ತೊ

ಆರೋಗ್ಯ, ಆಯಸ್ಸು ಹೆಚ್ಚಿಸುವ ವೈದ್ಯರು ಆರೋಗ್ಯ ಕಾಪಾಡಿಕೊಳ್ಳಬೇಕು. ಚಾಮುಂಡೇಶ್ವರಿ ಆಸ್ಪತ್ರೆ ಉದ್ಘಾಟನೆಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ
ಆರೋಗ್ಯ, ಆಯಸ್ಸು ಹೆಚ್ಚಿಸುವ ವೈದ್ಯರು ಆರೋಗ್ಯ ಕಾಪಾಡಿಕೊಳ್ಳಬೇಕು. ಚಾಮುಂಡೇಶ್ವರಿ ಆಸ್ಪತ್ರೆ ಉದ್ಘಾಟನೆಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ

ಚನ್ನಪಟ್ಟಣ:bಆಸ್ಪತ್ರೆಗೆ ಬರುವ ರೋಗಿಗಳ ಅರೋಗ್ಯ ತಪಾಸಿಸಿ, ರೋಗ ವಾಸಿ ಮಾಡಿ, ಅವರ ಆರೋಗ್ಯ ದ ಜೊತೆಗೆ ಆಯಸ್ಸನ್ನು ಹೆಚ್ಚಿಸುವಲ್ಲಿ ನಿಷ್ಣಾತರಾದ ವೈದ್ಯರು

ಪೆಟ್ಟಾ ಸರ್ಕಾರಿ ಶಾಲಾ ಆವರಣದಲ್ಲಿ ನಗರಸಭೆಯ ಕಸದ ರಾಶಿ, ಅಲ್ಲಗಳೆದ ಪೌರಾಯುಕ್ತ
ಪೆಟ್ಟಾ ಸರ್ಕಾರಿ ಶಾಲಾ ಆವರಣದಲ್ಲಿ ನಗರಸಭೆಯ ಕಸದ ರಾಶಿ, ಅಲ್ಲಗಳೆದ ಪೌರಾಯುಕ್ತ

ಚನ್ನಪಟ್ಟಣ: ನಗರದ ಡೂಂ ಲೈಟ್ ವೃತ್ತದಲ್ಲಿರುವ ಏಳು ದಶಕದಷ್ಟು ಹಳೆಯಾದಾದ ಪೆಟ್ಟಾ ಹೆಸರಿನ ಸರ್ಕಾರಿ ಶಾಲಾ ಆವರಣದಲ್ಲಿ ಹತ್ತಾರು ಟನ್ ಕಸದ ರಾಶಿಯನ್ನು ರಾ

ಆರ್ಥಿಕವಾಗಿ ಬೆಳೆದವರೆಲ್ಲರೂ ವಿದ್ಯಾರ್ಜನೆಗೆ ಮುಂದಡಿಯಿಡಬೇಕು, ಸಚಿವ ಮಧುಬಂಗಾರಪ್ಪ
ಆರ್ಥಿಕವಾಗಿ ಬೆಳೆದವರೆಲ್ಲರೂ ವಿದ್ಯಾರ್ಜನೆಗೆ ಮುಂದಡಿಯಿಡಬೇಕು, ಸಚಿವ ಮಧುಬಂಗಾರಪ್ಪ

ಚನ್ನಪಟ್ಟಣ: ಬಡತನದ ಬೇಗೆಯಲ್ಲಿ ಬೆಂದು, ಉನ್ನತ ಶಿಕ್ಷಣ ಪಡೆದು, ಉತ್ತಮ ಸ್ಥಾನಮಾನದ ಜೊತೆಗೆ ಆರ್ಥಿಕವಾಗಿ ಸದೃಢವಾದ ನಂತರ ತನ್ನ ಜನ್ಮದಾತರಿಗೆ, ಹುಟ್ಡಿದೂರ

ಕಾವೇರಿ ಕಿಚ್ಚು, ರಾಮನಗರ ಜಿಲ್ಲೆ ಬಂದ್, ಶಾಲಾ-ಕಾಲೇಜಿಗೆ ರಜೆ, ಸರ್ಕಾರಿ ಕಛೇರಿ ರಜೆಗಾಗಿ ಕಾಯುತ್ತಿರುವ ನೌಕರರು
ಕಾವೇರಿ ಕಿಚ್ಚು, ರಾಮನಗರ ಜಿಲ್ಲೆ ಬಂದ್, ಶಾಲಾ-ಕಾಲೇಜಿಗೆ ರಜೆ, ಸರ್ಕಾರಿ ಕಛೇರಿ ರಜೆಗಾಗಿ ಕಾಯುತ್ತಿರುವ ನೌಕರರು

ರಾಮನಗರ: ನಮ್ಮ ರಾಜ್ಯದ ಕೆಲ ಭಾಗಗಳಿಗೆ ಕುಡಿಯುವ ನೀರಿಗೆ ತತ್ವಾರವಾಗಿದೆ, ಮಂಡ್ಯ, ಮೈಸೂರು ಭಾಗದ ರೈತರಿಗೆ ಬೆಳೆ ಬೆಳೆಯಲು ನೀರಿಲ್ಲಾ, ಇಂತಹ ಸಂಕಷ್ಟದ ಸಮಯ

Top Stories »  


Top ↑