ಶಿಕ್ಷಣಕ್ಕೆ ಒತ್ತು ನೀಡುತ್ತೇನೆ, ಕಾಲೇಜಿನ ಸರ್ವಾಂಗೀಣ ಅಭಿವೃದ್ಧಿ ಗೆ ಬದ್ಧ ಕುಮಾರಸ್ವಾಮಿ
ಚನ್ನಪಟ್ಟಣ: ಮೂವತ್ತಾರು ಲಕ್ಷ ರೂಪಾಯಿಗಳ ಡೆಸ್ಕ್, ಸುಸಜ್ಜಿತ ಕ್ಯಾಂಟೀನ್ ಮತ್ತು ಕಂಪ್ಯೂಟರ್ ಲ್ಯಾಬ್ ಗೆ ಸಂಬಂಧಿಸಿದ ಪರಿಕರಗಳನ್ನು ಕೊಡಿಸಿ, ಶಿಕ್ಷಣಕ್ಕೆ ಒತ್ತು ನೀಡಿ ಕಾಲೇಜಿನ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವುದಾಗಿ ಕ್ಷೇತ್ರದ ಶಾಸಕರು, ಮಾಜಿ ಮುಖ್ಯಮಂತ್ರಿಯೂ ಆದ ಹೆಚ್ ಡಿ ಕುಮಾರಸ್ವಾಮಿ ಯವರು ಘೋಷಿಸಿದರು.
ಅವರು ಇಂದು ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನಲ್ಲಿ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳಿಗೆ ಉಚಿತ ಕಂಪ್ಯೂಟರ್ ನೀಡುವ ಕಾರ್ಯಕ್ರಮದಲ್ಲಿ ಕಂಪ್ಯೂಟರ್ ವಿತರಿಸಿ ಮಾತನಾಡಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ರೈತರು ನನ್ನ ಮನೆ ಬಾಗಿಲಿಗೆ ಎಡತಾಕುತ್ತಿದ್ದಾರೆ, ನೀವು ಸಾಲ ಮನ್ನಾ ಮಾಡಿದ್ದರಲ್ಲಿ ಶೇಕಡಾ ೫೦ ರಷ್ಟು ಮಾತ್ರ ತೀರಿದ್ದು ಬಾಕಿ ಹಣ ಮತ್ತು ಬಡ್ಡಿಗಾಗಿ ಬ್ಯಾಂಕ್ ನವರು ಪೀಡಿಸುತ್ತಿದ್ದಾರೆ ಎಂದು, ರಾಷ್ಟ್ರೀಯ ಬ್ಯಾಂಕ್ ನ ಅಧಿಕಾರಿಗಳೊಂದಿಗೆ ಈಗಾಗಲೇ ಚರ್ಚಿಸಿದ್ದು ಮುಂದಿನ ದಿನಗಳಲ್ಲಿ ಸಾಲ ಮನ್ನಾದ ಪ್ರಕ್ರಿಯೆ ಮುಗಿಸುತ್ತೇನೆ. ತೆಲಂಗಾಣ ಮತ್ತು ಮಹಾರಾಷ್ಟ್ರ ರಾಜ್ಯಗಳು ಸಹ ನನ್ನ ಮಾದರಿಯನ್ನು ಅನುಸರಿಸುತ್ತಿದ್ದಾರೆ ಎಂದರು.
ಕಾಲೇಜಿನ ಮಕ್ಕಳಿಗೆ ಉಚಿತ ಲ್ಯಾಪ್ಟಾಪ್ ನೀಡುವ ಯೋಜನೆ ಕಾಂಗ್ರೆಸ್ ಪಕ್ಷದ್ದು, ಅವರು ಒಂದು ಸಮುದಾಯಕ್ಕೆ ಮಾತ್ರ ಕೊಡಲು ತೀರ್ಮಾನಿಸಿದ್ದರು, ನಾನು ಮೈಸೂರಿನ ಮಹಾರಾಣಿ ಕಾಲೇಜಿಗೆ ಹೋಗಿದ್ದಾಗ ವಿದ್ಯಾರ್ಥಿಗಳು ನಮಗ್ಯಾಕೆ ಕೊಡುವುದಿಲ್ಲ, ನಮ್ಮನಮ್ಮಲ್ಲಿ ಯಾಕೆ ತಾರತಮ್ಯ ಎಂದು ಪ್ರಶ್ನಿಸಿದರು. ತಕ್ಷಣವೇ ನಾನು ಎಲ್ಲಾ ಮಕ್ಕಳಿಗೂ ವಿತರಿಸಲು ತೀರ್ಮಾನಿಸಿದೆ. ಅದಕ್ಕೆ ವಿಧಾನಸಭೆಯಲ್ಲಿ ಹಲವು ವಾಗ್ಬಾಣಗಳನ್ಮು ಎದುರಿಸಬೇಕಾಯಿತು. ಈಗಿನ ಸರ್ಕಾರ ಮುಂದೆ ಕೊಡುವುದಿಲ್ಲ ಎಂದು ತೀರ್ಮಾನಿಸಿದ್ದಾರೆ, ೧,೦೦೦ ಪಬ್ಲಿಕ್ ಶಾಲೆಗಳನ್ನು ತೆರೆದಿದ್ದರಿಂದ ಗ್ರಾಮೀಣ ಪ್ರದೇಶದವರಿಗೆ ಅನುಕೂಲವಾಗಿದ್ದು ಮುಂದೆ ಇಂತಹ ಶಾಲೆಗಳ ಅವಶ್ಯಕತೆ ಇದೆ ಎಂದು ಪ್ರತಿಪಾದಿಸಿದರು.
ಕಾಲೇಜಿನ ಉಪನ್ಯಾಸಕರು ಕುಮಾರಸ್ವಾಮಿ ಯವರನ್ನು ಹೊಗಳಿದ್ದನ್ನು ಗಮನಿಸಿದ ಕುಮಾರಸ್ವಾಮಿ ಯವರು ನನ್ನ ಕೆಲಸಕ್ಕೆ ಯಾರೂ ಹೊಗಳಬೇಕಾಗಿಲ್ಲ, ನನಗೆ ಮುಜುಗರವಾಗುತ್ತದೆ, ಈ ಕ್ಷೇತ್ರದ ಶಾಸಕನಾಗಿ ನನ್ನ ಕರ್ತವ್ಯ ಎಂದು ಸಮರ್ಥಿಸಿಕೊಂಡರು. ನಾನು ಹದಿನಾಲ್ಕು ತಿಂಗಳು ಯಾರದೋ ಹಂಗಿನಲ್ಲಿ ಮುಖ್ಯಮಂತ್ರಿಯಾಗಿ ಒತ್ತಡದಿಂದ ಕೆಲಸ ನಿರ್ವಹಿಸಿದೆನಾದರೂ ಉತ್ತಮ ಕೆಲಸ ಮಾಡಿದ್ದೇನೆ. ಮಾಧ್ಯಮಗಳು ಮತ್ತು ಜನರು ಅದನ್ನು ಗುರುತಿಸಿಲಿಲ್ಲ. ಶಿಕ್ಷಣಕ್ಕಾಗಿ ೧,೨೦೦ ಕೋಟಿ ಮೀಸಲಿಟ್ಟಿದ್ದೇನೆ, ಕಣ್ವ ಬಳಿ ನಿರ್ಮಾಣವಾಗುತ್ತಿರುವ ಕೆಎಂಎಫ್ ನಲ್ಲಿ ಕೇವಲ ಐವತ್ತರಿಂದ ಅರವತ್ತು ಮಂದಿಯನ್ನು ಮಾತ್ರ ಕೆಲಸಕ್ಕೆ ತೆಗೆದುಕೊಳ್ಳುತ್ತಾರೆ, ಚನ್ನಪಟ್ಟಣ ಒಂದರಲ್ಲೇ ಐದುನೂರಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. ಹೇಗೆ ಕೆಲಸ ಕೊಡಿಸಲು ಸಾಧ್ಯ ಎಂದು ಮಾರ್ಮಿಕವಾಗಿ ಮಾತನಾಡಿದರು.
ರಾಜ್ಯದಲ್ಲಿ ಪೀಣ್ಯ ಕೈಗಾರಿಕೆ ಸೇರಿದಂತೆ ಶೇಕಡಾ ಐವತ್ತರಷ್ಟು ಕೈಗಾರಿಕೆಗಳು ಮುಚ್ಚಿ ಹೋಗಿವೆ, ದಿನಂಪ್ರತಿ ಕನಿಷ್ಠ ಐವತ್ತು ಮಂದಿ ಕೆಲಸಕ್ಕಾಗಿ ನನ್ನ ಮನೆ ಮುಂದೆ ಬರುತ್ತಾರೆ, ನಿರುದ್ಯೋಗ ಸಮಸ್ಯೆ ಪ್ರಧಾನಿಗೆ ಗೊತ್ತಾಗುತ್ತಿಲ್ಲವೇ ? ಟ್ರಂಪ್ ಭಾರತಕ್ಕೆ ಭೇಟಿ ನೀಡಿರುವುದು ಮುಂದಿನ ಚುನಾವಣೆಯನ್ನು ಗೆಲ್ಲಲು ಅಮೆರಿಕಾ ಭಾರತೀಯ ರ ಓಟನ್ನು ಬಲಪಡಿಸಿಕೊಳ್ಳಲೇ ವಿನಹ ಭಾರತದ ಅಭಿವೃದ್ಧಿಗಲ್ಲ, ಭಾರತೀಯರಿಗೆ ಇದರಿಂದ ಇನ್ನೂರು ಕೋಟಿ ಖರ್ಚಾಯಿತೇ ವಿನಹ ಲಾಭವಿಲ್ಲ, ಆ ದೇಶದ ಉತ್ಪನ್ನಗಳನ್ನು ರಫ್ತು ಮಾಡಲು ಹವಣಿಸುತ್ತಿದ್ದು, ಆಮದು ಇಲ್ಲ, ಟ್ರಂಪ್ ಆಗಮನಕ್ಕೆ ಖರ್ಚು ಮಾಡಿದ ಹಣದಲ್ಲಿ ಕನಿಷ್ಠ ಹತ್ತು ಹಳ್ಳಿಗಳನ್ನಾಗಲಿ ಅಥವಾ ಗೋಡೆ ಕಟ್ಟಿ ಮರೆಮಾಚಿದ ಸ್ಲಂ ನ್ನು ಉದ್ದರಿಸಿಬಹುದಾಗಿತ್ತು ಎಂದು ಅಭಿಪ್ರಾಯ ಪಟ್ಟರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲ ವೆಂಕಟೇಶ್ ರವರು ನಮ್ಮ ಕಾಲೇಜು ಮುಂದಿನ ದಿನಗಳಲ್ಲಿ ನ್ಯಾಕ್ (NAAC, ರಾಷ್ಟ್ರೀಯ ಮೌಲ್ಯಾಂಕನ ಪರಿಷತ್ತು) ಗೆ ಒಳಪಡಲಿದ್ದು, ಬೆಂಗಳೂರು ವಿಶ್ವವಿದ್ಯಾಲಯ ಅಲ್ಲದೇ ಕರ್ನಾಟಕ ರಾಜ್ಯದಲ್ಲಿಯೇ ಉತ್ತಮ ಗುಣಮಟ್ಟದ ಕಾಲೇಜಾಗಲಿದ್ದು ಇದು ಮಾನ್ಯ ಕುಮಾರಸ್ವಾಮಿ ಯವರ ಕೊಡುಗೆ ಎಂದರೆ ತಪ್ಪಾಗಲಾರದು ಎಂದರು.
ಇದೇ ವೇಳೆ ಹಳೆಯ ವಿದ್ಯಾರ್ಥಿ ಸಂಘದಿಂದ ಮಾನ್ಯ ಕುಮಾರಸ್ವಾಮಿ ಯವರನ್ನು ಸನ್ಮಾನಿಸಲಾಯಿತು. ಸನ್ಮಾನದ ವೇಳೆಗೂ ಮುನ್ನಾ ಪ್ರಾಧ್ಯಾಪಕರಿಬ್ಬರ ಗುಸುಗುಸು ವಾಗ್ವಾದವೂ ನಡೆದಿದ್ದು ಅಲ್ಲಿದ್ದವರನ್ನು ಚಕಿತಗೊಳಿಸಿತು. ಡಾ ಅಣ್ಣಯ್ಯ ತೈಲೂರು ರವರು ನಿರೂಪಿಸಿದರೆ, ರಾಜ್ಯಶಾಸ್ತ್ರ ಪ್ರಾಧ್ಯಾಪಕ ಭರತರಾಜ್ ಸ್ವಾಗತಿಸಿದರು, ಇತಿಹಾಸ ಪ್ರಾಧ್ಯಾಪಕ ಚಿಕ್ಕಚನ್ನಯ್ಯ ನವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಒಟ್ಟಾರೆ ಈ ಮೂವರು ಸಹ ಕುಮಾರಸ್ವಾಮಿ ಯವರನ್ನು ಹಾಡಿಹೊಗಳಿ ಮುಖ ಸ್ತುತಿ ಮಾಡಿದ್ದು ಕುಮಾರಸ್ವಾಮಿ ಯವರಿಗೆ ಮುಜುಗರ ತಂದಿದ್ದು ಅವರು ಅದನ್ನು ತಮ್ಮ ಭಾಷಣದಲ್ಲಿಯೂ ಸಹ ಉಲ್ಲೇಖಿಸಿದರು. ಕಾರ್ಯಕ್ರಮದಲ್ಲಿ ಸಹಸ್ರಾರು ವಿದ್ಯಾರ್ಥಿಗಳು ಜಯಮುತ್ತು, ಲಿಂಗೇಶಕುಮಾರ್, ಗೋವಿಂದಳ್ಳಿ ನಾಗರಾಜು ಸೇರಿದಂತೆ ಜೆಡಿಎಸ್ ಮುಖಂಡರು ಭಾಗವಹಿಸಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in education »
ಅಂದು ಶಾಲೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಅಪ್ಪಗೆರೆ ತಿಮ್ಮರಾಜು
ಚನ್ನಪಟ್ಟಣ: ನಾವು ನಮ್ಮ ಕಾಲದಲ್ಲಿ ಶಾಲೆಗೆ ಹೋಗಿ ವಿದ್ಯೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಹಲವಾರು ಸಮಸ್ಯೆಗಳು ನಮ್ಮ ಎದುರಿಗಿದ್ದವು. ಆದರೆ, ಈಗ ಅಂತಹ
ಪ್ರತಿ ವಿದ್ಯಾರ್ಥಿಗಳು ಕೌಶಲ್ಯ ರೂಢಿಸಿಕೊಳ್ಳಬೇಕು: ಶಿಕ್ಷಣಾಧಿಕಾರಿ ಮರಿಗೌಡ
ಚನ್ನಪಟ್ಟಣ: ಶಾಲಾ ವಿದ್ಯಾರ್ಥಿಗಳು ಕೇವಲ ಪಾಠ ಮತ್ತು ಆಟಕ್ಕೆ ಸೀಮಿತವಾಗದೆ ವಿವಿಧ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಕೌಶಲ್ಯ ಕಲಿತ ಮಕ್ಕಳ ಪ್ರತಿಭೆಯನ್ನ
ಪ್ರತಿ ಸರ್ಕಾರಗಳು ಪದವೀಧರರ ಜೊತೆ ಚೆಲ್ಲಾಟವಾಡುತ್ತಿವೆ, ಉದಯ್ ಸಿಂಗ್
ಚನ್ನಪಟ್ಟಣ: ಪ್ರತಿ ವರ್ಷವೂ ಲಕ್ಷಾಂತರ ಯುವಕ ಯುವತಿಯರು ಪದವಿಯೊಂದಿಗೆ ಹೊರಬರುತ್ತಾರೆ. ವಿಶ್ವ ವಿದ್ಯಾಲಯಗಳಿಂದ ಪದವಿಯೊಂದಿಗೆ ಬರುವವರಿಗೆ ಸೂಕ್ತ ಉದ್ಯೋಗ
ದಿವ್ಯಚೇತನ ಇಂಗ್ಲಿಷ್ ಶಾಲೆಯಲ್ಲಿ ಮೇಳೈಸಿದ ಮಿನಿ ವಿಜ್ಞಾನ ಮೇಳ
ಚನ್ನಪಟ್ಟಣ: ಅಗಸ್ತ್ಯ ಅಂತರಾಷ್ಟ್ರೀಯ ಪ್ರತಿಷ್ಠಾನ ಬ್ರಾಡ್ಕಾಂ ವಿಜ್ಞಾನ ಕೇಂದ್ರ ಚನ್ನಪಟ್ಟಣ ಇವರ ವತಿಯಿಂದ ನಗರದ ದಿವ್ಯ ಚೇತನ ಇಂಗ್ಲಿಷ್ ಪ್ರೌಢಶಾಲೆಯಲ್ಲ
ಪಾಠದ ಜೊತೆಗೆ ಆಟದಲ್ಲಿಯೂ ಮುಂಚೂಣಿಗೆ ಬರಬೇಕು. ವಿ ಬಾಲಸುಬ್ರಹ್ಮಣ್ಯಂ
ಚನ್ನಪಟ್ಟಣ,: ಪ್ರತಿಯೊಬ್ಬ ವಿದ್ಯಾರ್ಥಿಯು ಶಿಕ್ಷಣದ ಜೊತೆಯಲ್ಲಿ ಕ್ರೀಡಾಮನೋಭಾವನೆ ಬೆಳಸಿಕೊಳ್ಳಬೇಕು. ಮನಸ್ಸು ಉಲ್ಲಸಿತವಾಗಲು ಕ್ರೀಡೆ ಸಹಕಾರಿ ಎಂದು ಬಾಲು
ಉಪನ್ಯಾಸಕರ ಧರಣಿ, ಕಲಿಕೆಗೆ ತೊಂದರೆ, ಎಬಿವಿಪಿ ಯಿಂದ ಪ್ರತಿಭಟನೆ
ಚನ್ನಪಟ್ಟಣ: ಸರ್ಕಾರಿ ಕಾಲೇಜುಗಳ ಉಪನ್ಯಾಸಕರು ಧರಣಿ ನಿರತರಾಗಿರುವುದರಿಂದ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯಿದೆ. ಇದರಿಂದ ಶೈಕ್ಷಣಿಕ ವರ್ಷದ ಕಲಿಕೆಗೆ ತೊ
ಆರೋಗ್ಯ, ಆಯಸ್ಸು ಹೆಚ್ಚಿಸುವ ವೈದ್ಯರು ಆರೋಗ್ಯ ಕಾಪಾಡಿಕೊಳ್ಳಬೇಕು. ಚಾಮುಂಡೇಶ್ವರಿ ಆಸ್ಪತ್ರೆ ಉದ್ಘಾಟನೆಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ
ಚನ್ನಪಟ್ಟಣ:bಆಸ್ಪತ್ರೆಗೆ ಬರುವ ರೋಗಿಗಳ ಅರೋಗ್ಯ ತಪಾಸಿಸಿ, ರೋಗ ವಾಸಿ ಮಾಡಿ, ಅವರ ಆರೋಗ್ಯ ದ ಜೊತೆಗೆ ಆಯಸ್ಸನ್ನು ಹೆಚ್ಚಿಸುವಲ್ಲಿ ನಿಷ್ಣಾತರಾದ ವೈದ್ಯರು
ಪೆಟ್ಟಾ ಸರ್ಕಾರಿ ಶಾಲಾ ಆವರಣದಲ್ಲಿ ನಗರಸಭೆಯ ಕಸದ ರಾಶಿ, ಅಲ್ಲಗಳೆದ ಪೌರಾಯುಕ್ತ
ಆರ್ಥಿಕವಾಗಿ ಬೆಳೆದವರೆಲ್ಲರೂ ವಿದ್ಯಾರ್ಜನೆಗೆ ಮುಂದಡಿಯಿಡಬೇಕು, ಸಚಿವ ಮಧುಬಂಗಾರಪ್ಪ
ಚನ್ನಪಟ್ಟಣ: ಬಡತನದ ಬೇಗೆಯಲ್ಲಿ ಬೆಂದು, ಉನ್ನತ ಶಿಕ್ಷಣ ಪಡೆದು, ಉತ್ತಮ ಸ್ಥಾನಮಾನದ ಜೊತೆಗೆ ಆರ್ಥಿಕವಾಗಿ ಸದೃಢವಾದ ನಂತರ ತನ್ನ ಜನ್ಮದಾತರಿಗೆ, ಹುಟ್ಡಿದೂರ
ಕಾವೇರಿ ಕಿಚ್ಚು, ರಾಮನಗರ ಜಿಲ್ಲೆ ಬಂದ್, ಶಾಲಾ-ಕಾಲೇಜಿಗೆ ರಜೆ, ಸರ್ಕಾರಿ ಕಛೇರಿ ರಜೆಗಾಗಿ ಕಾಯುತ್ತಿರುವ ನೌಕರರು
ರಾಮನಗರ: ನಮ್ಮ ರಾಜ್ಯದ ಕೆಲ ಭಾಗಗಳಿಗೆ ಕುಡಿಯುವ ನೀರಿಗೆ ತತ್ವಾರವಾಗಿದೆ, ಮಂಡ್ಯ, ಮೈಸೂರು ಭಾಗದ ರೈತರಿಗೆ ಬೆಳೆ ಬೆಳೆಯಲು ನೀರಿಲ್ಲಾ, ಇಂತಹ ಸಂಕಷ್ಟದ ಸಮಯ
ಪ್ರತಿಕ್ರಿಯೆಗಳು