ಪಿಯುಸಿ ಫಲಿತಾಂಶ; ಉಕ ಜಿಲ್ಲೆ ಪ್ರಥಮ, ವಿಜಯಪುರ ಕೊನೆಯ ಸ್ಥಾನ. ೨೫ ನೇ ಸ್ಥಾನಕ್ಕೆ ಕುಸಿದ ರಾಮನಗರ
ಬೆಂಗಳೂರು:ಜು/೧೪/೨೦/ಮಂಗಳವಾರ. ಬಹುನಿರೀಕ್ಷಿತ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಶೇ.೬೧.೮೦ ಫಲಿತಾಂಶ ಬಂದಿದೆ. ಇಂದು ಬೆಳಗ್ಗೆ ೧೧.೩೦ ಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದು, ಇಲಾಖೆಯ ವೆಬ್ ಸೈಟ್ ನಲ್ಲಿ ಅಧಿಕೃತ ಫಲಿತಾಂಶ ಪ್ರಕಟವಾಗಿದೆ.
ವಿದ್ಯಾರ್ಥಿಗಳು ತಮ್ಮ ಫಲಿತಾಂಶ ತಿಳಿಯಲು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ www.karresults.nic.in ಗೆ ಭೇಟಿ ನೀಡಿ ಫಲಿತಾಂಶ ನೋಡಬಹುದು.
೧,೦೧೬ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳನ್ನು ನಡೆಸಲಾಗಿದ್ದು, ಸುಮಾರು ೭೦ ಮೌಲ್ಯಮಾಪನ ಕೇಂದ್ರಗಳಲ್ಲಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮಾಡಲಾಗಿದೆ. ಒಟ್ಟು ೬,೭೫,೨೭೭ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ ಹೊಸಬರು ೫,೫೬೨೬೭ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಇದರಲ್ಲಿ ೩,೮೪,೯೪೭ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪುನಾರಾವರ್ತಿತ ೯೧,೦೨೫ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇದರಲ್ಲಿ ೨೫,೬೦೨ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಶೇ. ೭೬.೦೨, ವಾಣಿಜ್ಯ ವಿಭಾಗದಲ್ಲಿ ಶೇ,೬೫.೫೨ , ಕಲಾವಿಭಾಗದಲ್ಲಿ ಶೇ. ೪೧.೨೭ ರಷ್ಟು ವಿದ್ಯಾರ್ಥಿ ಗಳು ಉತ್ತೀರ್ಣರಾಗಿದ್ದಾರೆ.
ಜಿಲ್ಲಾವಾರು ಫಲಿತಾಂಶದಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಈ ಎರಡು ಜಿಲ್ಲೆಗಳಲ್ಲಿ ಶೇ. ೯೦.೭೫ ರಷ್ಟು ಫಲಿತಾಂಶ ಬಂದಿದೆ. ವಿಜಯಪುರ ಜಿಲ್ಲೆ ಕೊನೆಯ ಸ್ಥಾನ ಪಡೆದುಕೊಂಡಿದೆ.
ಯಾವ ಜಿಲ್ಲೆಗೆ ಎಷ್ಟನೇ ಸ್ಥಾನ ?
ಉಡುಪಿ - ಶೇ. ೯೦.೭೧, ದಕ್ಷಿಣ ಕನ್ನಡ- ಶೇ.೯೦.೭೧, ಕೊಡಗು- ಶೇ.೮೧.೫೩, ಉತ್ತರ ಕನ್ನಡ- ಶೇ.೮೦.೯೭, ಚಿಕ್ಕ ಮಗಳೂರು- ಶೇ.೭೯.೧೧, ಬೆಂಗಳೂರು ದಕ್ಷಿಣ- ಶೇ. ೭೭.೫೬, ಬೆಂಗಳೂರು ಉತ್ತರ - ಶೇ.೭೫.೫೪, ಬಾಗಲಕೋಟೆ- ಶೇ.೭೪. ೫೯, ಚಿಕ್ಕಬಳ್ಳಾಪುರ- ಶೇ.೭೩.೭೪, ಶಿವಮೊಗ್ಗ- ಶೇ.೭೨.೧೯, ಹಾಸನ - ಶೇ.೭೦.೧೮, ಚಾಮರಾಜ ನಗರ- ಶೇ.೬೯.೨೯, ಬೆಂಗ ಳೂರು ಗ್ರಾಮಾಂತರ- ಶೇ.೬೯.೦೨, ಹಾವೇರಿ- ಶೇ.೬೮.೦೧, ಮೈಸೂರು- ಶೇ.೬೭.೯೮, ಕೋಲಾರ ಶೇ.೬೭.೪೨, ಧಾರವಾಡ- ಶೇ.೬೭ .೩೧, ಬೀದರ್ - ಶೇ.೬೪.೬೧, ದಾವಣಗೆರೆ- ಶೇ.೬೪.೦೯, ಚಿಕ್ಕೋಡಿ- ಶೇ.೬೩.೮೮, ಮಂಡ್ಯ -ಶೇ.೬೩.೮೨, ಗದಗ - ಶೇ.೬೩, ತುಮಕೂರು- ಶೇ.೬೨.೨೬. ಬಳ್ಳಾರಿ- ಶೇ.೬೨.೦೨, ರಾಮನಗರ- ಶೇ.೬೦.೯೬, ಕೊಪ್ಪಳ- ಶೇ.೬೦.೦೯, ಬೆಳಗಾವಿ- ಶೇ.೫೯.೦೭, ಯಾದಗಿರಿ- ಶೇ.೫೮.೩೮, ಕಲಬುರಗಿ- ಶೇ. ೫೮.೨೭, ಚಿತ್ರದುರ್ಗ- ಶೇ.೫೬.೦೮, ರಾಯ ಚೂರು- ಶೇ.೫೬.೨೨, ವಿಜಯಪುರ- ಶೇ.೫೪.೨೨ ಸ್ಥಾನ ಪಡೆದಿವೆ ಎಂದು ಅವರು ತಿಳಿಸಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in education »
ಅಂದು ಶಾಲೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಅಪ್ಪಗೆರೆ ತಿಮ್ಮರಾಜು
ಚನ್ನಪಟ್ಟಣ: ನಾವು ನಮ್ಮ ಕಾಲದಲ್ಲಿ ಶಾಲೆಗೆ ಹೋಗಿ ವಿದ್ಯೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಹಲವಾರು ಸಮಸ್ಯೆಗಳು ನಮ್ಮ ಎದುರಿಗಿದ್ದವು. ಆದರೆ, ಈಗ ಅಂತಹ
ಪ್ರತಿ ವಿದ್ಯಾರ್ಥಿಗಳು ಕೌಶಲ್ಯ ರೂಢಿಸಿಕೊಳ್ಳಬೇಕು: ಶಿಕ್ಷಣಾಧಿಕಾರಿ ಮರಿಗೌಡ
ಚನ್ನಪಟ್ಟಣ: ಶಾಲಾ ವಿದ್ಯಾರ್ಥಿಗಳು ಕೇವಲ ಪಾಠ ಮತ್ತು ಆಟಕ್ಕೆ ಸೀಮಿತವಾಗದೆ ವಿವಿಧ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಕೌಶಲ್ಯ ಕಲಿತ ಮಕ್ಕಳ ಪ್ರತಿಭೆಯನ್ನ
ಪ್ರತಿ ಸರ್ಕಾರಗಳು ಪದವೀಧರರ ಜೊತೆ ಚೆಲ್ಲಾಟವಾಡುತ್ತಿವೆ, ಉದಯ್ ಸಿಂಗ್
ಚನ್ನಪಟ್ಟಣ: ಪ್ರತಿ ವರ್ಷವೂ ಲಕ್ಷಾಂತರ ಯುವಕ ಯುವತಿಯರು ಪದವಿಯೊಂದಿಗೆ ಹೊರಬರುತ್ತಾರೆ. ವಿಶ್ವ ವಿದ್ಯಾಲಯಗಳಿಂದ ಪದವಿಯೊಂದಿಗೆ ಬರುವವರಿಗೆ ಸೂಕ್ತ ಉದ್ಯೋಗ
ದಿವ್ಯಚೇತನ ಇಂಗ್ಲಿಷ್ ಶಾಲೆಯಲ್ಲಿ ಮೇಳೈಸಿದ ಮಿನಿ ವಿಜ್ಞಾನ ಮೇಳ
ಚನ್ನಪಟ್ಟಣ: ಅಗಸ್ತ್ಯ ಅಂತರಾಷ್ಟ್ರೀಯ ಪ್ರತಿಷ್ಠಾನ ಬ್ರಾಡ್ಕಾಂ ವಿಜ್ಞಾನ ಕೇಂದ್ರ ಚನ್ನಪಟ್ಟಣ ಇವರ ವತಿಯಿಂದ ನಗರದ ದಿವ್ಯ ಚೇತನ ಇಂಗ್ಲಿಷ್ ಪ್ರೌಢಶಾಲೆಯಲ್ಲ
ಪಾಠದ ಜೊತೆಗೆ ಆಟದಲ್ಲಿಯೂ ಮುಂಚೂಣಿಗೆ ಬರಬೇಕು. ವಿ ಬಾಲಸುಬ್ರಹ್ಮಣ್ಯಂ
ಚನ್ನಪಟ್ಟಣ,: ಪ್ರತಿಯೊಬ್ಬ ವಿದ್ಯಾರ್ಥಿಯು ಶಿಕ್ಷಣದ ಜೊತೆಯಲ್ಲಿ ಕ್ರೀಡಾಮನೋಭಾವನೆ ಬೆಳಸಿಕೊಳ್ಳಬೇಕು. ಮನಸ್ಸು ಉಲ್ಲಸಿತವಾಗಲು ಕ್ರೀಡೆ ಸಹಕಾರಿ ಎಂದು ಬಾಲು
ಉಪನ್ಯಾಸಕರ ಧರಣಿ, ಕಲಿಕೆಗೆ ತೊಂದರೆ, ಎಬಿವಿಪಿ ಯಿಂದ ಪ್ರತಿಭಟನೆ
ಚನ್ನಪಟ್ಟಣ: ಸರ್ಕಾರಿ ಕಾಲೇಜುಗಳ ಉಪನ್ಯಾಸಕರು ಧರಣಿ ನಿರತರಾಗಿರುವುದರಿಂದ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯಿದೆ. ಇದರಿಂದ ಶೈಕ್ಷಣಿಕ ವರ್ಷದ ಕಲಿಕೆಗೆ ತೊ
ಆರೋಗ್ಯ, ಆಯಸ್ಸು ಹೆಚ್ಚಿಸುವ ವೈದ್ಯರು ಆರೋಗ್ಯ ಕಾಪಾಡಿಕೊಳ್ಳಬೇಕು. ಚಾಮುಂಡೇಶ್ವರಿ ಆಸ್ಪತ್ರೆ ಉದ್ಘಾಟನೆಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ
ಚನ್ನಪಟ್ಟಣ:bಆಸ್ಪತ್ರೆಗೆ ಬರುವ ರೋಗಿಗಳ ಅರೋಗ್ಯ ತಪಾಸಿಸಿ, ರೋಗ ವಾಸಿ ಮಾಡಿ, ಅವರ ಆರೋಗ್ಯ ದ ಜೊತೆಗೆ ಆಯಸ್ಸನ್ನು ಹೆಚ್ಚಿಸುವಲ್ಲಿ ನಿಷ್ಣಾತರಾದ ವೈದ್ಯರು
ಪೆಟ್ಟಾ ಸರ್ಕಾರಿ ಶಾಲಾ ಆವರಣದಲ್ಲಿ ನಗರಸಭೆಯ ಕಸದ ರಾಶಿ, ಅಲ್ಲಗಳೆದ ಪೌರಾಯುಕ್ತ
ಆರ್ಥಿಕವಾಗಿ ಬೆಳೆದವರೆಲ್ಲರೂ ವಿದ್ಯಾರ್ಜನೆಗೆ ಮುಂದಡಿಯಿಡಬೇಕು, ಸಚಿವ ಮಧುಬಂಗಾರಪ್ಪ
ಚನ್ನಪಟ್ಟಣ: ಬಡತನದ ಬೇಗೆಯಲ್ಲಿ ಬೆಂದು, ಉನ್ನತ ಶಿಕ್ಷಣ ಪಡೆದು, ಉತ್ತಮ ಸ್ಥಾನಮಾನದ ಜೊತೆಗೆ ಆರ್ಥಿಕವಾಗಿ ಸದೃಢವಾದ ನಂತರ ತನ್ನ ಜನ್ಮದಾತರಿಗೆ, ಹುಟ್ಡಿದೂರ
ಕಾವೇರಿ ಕಿಚ್ಚು, ರಾಮನಗರ ಜಿಲ್ಲೆ ಬಂದ್, ಶಾಲಾ-ಕಾಲೇಜಿಗೆ ರಜೆ, ಸರ್ಕಾರಿ ಕಛೇರಿ ರಜೆಗಾಗಿ ಕಾಯುತ್ತಿರುವ ನೌಕರರು
ರಾಮನಗರ: ನಮ್ಮ ರಾಜ್ಯದ ಕೆಲ ಭಾಗಗಳಿಗೆ ಕುಡಿಯುವ ನೀರಿಗೆ ತತ್ವಾರವಾಗಿದೆ, ಮಂಡ್ಯ, ಮೈಸೂರು ಭಾಗದ ರೈತರಿಗೆ ಬೆಳೆ ಬೆಳೆಯಲು ನೀರಿಲ್ಲಾ, ಇಂತಹ ಸಂಕಷ್ಟದ ಸಮಯ
ಪ್ರತಿಕ್ರಿಯೆಗಳು