Tel: 7676775624 | Mail: info@yellowandred.in

Language: EN KAN

    Follow us :


ರಾಜ್ಯ ಮತ್ತು ತಾಲೂಕಿಗೆ ಟಾಪರ್ ಚನ್ನಪಟ್ಟಣ ತಾಲ್ಲೂಕಿನ ವಿದ್ಯಾರ್ಥಿನಿಯರು

Posted date: 15 Jul, 2020

Powered by:     Yellow and Red

ರಾಜ್ಯ ಮತ್ತು ತಾಲೂಕಿಗೆ ಟಾಪರ್ ಚನ್ನಪಟ್ಟಣ ತಾಲ್ಲೂಕಿನ ವಿದ್ಯಾರ್ಥಿನಿಯರು

ಚನ್ನಪಟ್ಟಣ:ಜು/೧೫/೨೦/ಬುಧವಾರ. ನಿನ್ನೆ ದ್ವಿತೀಯ ಪಿಯುಸಿ ಫಲಿತಾಂಶ ಹೊರಬಿದ್ದಿದ್ದು,  ತಾಲೂಕಿನ ವಿದ್ಯಾರ್ಥಿನಿ ಬೃಂದಾ.ಜೆ.ಎನ್ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಗಳಿಸುವ ಮೂಲಕ ತಾಲ್ಲೂಕಿಗೆ ಗೌರವ ತಂದಿದ್ದಾಳೆ.

ಈಕೆ ಜಗದಾಪುರ ಗ್ರಾಮದ ನಿವಾಸಿಯಾಗಿದ್ದು, ಮೈಸೂರಿನ ಬಿಜಿಎಸ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಪ್ರಾಥಮಿಕ ಶಿಕ್ಷಣವನ್ನು ಜಗದಾಪುರ ಗ್ರಾಮದಲ್ಲಿ ಓದಿದ್ದ ಈಕೆ, ನವೋದಯ ಪರೀಕ್ಷೆಯಲ್ಲಿ ಉತ್ತೀರ್ಣಳಾಗಿ ದೊಡ್ಡಬಳ್ಳಾಪುರದಲ್ಲಿನ ನವೋದಯ ಶಾಲೆಯಲ್ಲಿ ೫ ರಿಂದ ೧೦ ನೇ ತರಗತಿ ವರಗೆ ವ್ಯಾಸಂಗ ಮಾಡಿದ್ದಳು. ಪಿಯುಸಿಗೆ ಮೈಸೂರಿನ ಬಿಜಿಎಸ್ ಕಾಲೇಜಿಗೆ ಸೇರ್ಪಡೆಯಾಗಿ ಈ ಸಾಧನೆ ಮಾಡಿದ್ದಾಳೆ.


ತಂದೆ ನಾಗೇಶ್, ತಾಯಿ ಕಮಲಾ ವ್ಯವಸಾಯ ಮಾಡಿಕೊಂಡು ಮಗಳನ್ನು ಓದಿಸುತ್ತಿದ್ದಾರೆ. ಬೃಂದಾಗೆ ಓರ್ವ ಸಹೋದರ, ಓರ್ವ ಸಹೋದರಿಯೂ ಇದ್ದಾರೆ. ಈ ಬಾರಿಯ ಪಿಯುಸಿಯಲ್ಲಿ ಬೃಂದಾ ಇಂಗ್ಲಿಷ್‌ನಲ್ಲಿ- ೯೬, ಕನ್ನಡ - ೧೦೦, ಎಕಾ ನಾಮಿಕ್ಸ್ - ೧೦೦, ಬ್ಯುಸಿ ನೆಸ್ ಸ್ಟಡೀಸ್ - ೧೦೦, ಅಕೌಂಟ್ಸ್ - ೧೦೦, ಕಂಪ್ಯೂ ಟರ್ ಸೈನ್ಸ್ - ೧೦೦ ಅಂಕ ಗಳಿಸುವ ಮೂಲಕ ೬೦೦ ಕ್ಕೆ ೫೯೬ ಅಂಕಗಳಿಸಿ ಶೇ.೯೯. ೦೩ ಪಡೆದು ಕಾಮರ್ಸ್ ವಿಭಾಗದಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದ್ದಾಳೆ.


ಚನ್ನಪಟ್ಟಣ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.೯೭.೨೦ ಫಲಿತಾಂಶ ದಾಖಲಿಸುವ ಮೂಲಕ ಜ್ಞಾನ ಸರೋವರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಎಂ.ವಿ ಧನುಪ್ರಿಯ ಚನ್ನಪಟ್ಟಣ ತಾಲ್ಲೂಕು ಟಾಪರ್ ಆಗಿ ಹೊರಹೊಮ್ಮಿದ್ದಾರೆ.

ವಾಣಿಜ್ಯ ವಿಭಾಗ ವಿದ್ಯಾರ್ಥಿಯಾಗಿರುವ ಇವರು ೬೦೦ಕ್ಕೆ ೫೮೪ ಅಂಕಗಳನ್ನು ಗಳಿಸಿದ್ದಾರೆ. ಅಲ್ಲದೆ ವ್ಯವಹಾರ ಅಧ್ಯಯನ, ಗಣಕವಿಜ್ಞಾನ ಹಾಗೂ ಅರ್ಥಶಾಸ್ತ್ರ ವಿಷಯದಲ್ಲಿ ೧೦೦ಕ್ಕೆ ೧೦೦ ಅಂಕ ಪಡೆದು, ಗಮನ ಸೆಳೆದಿದ್ದಾರೆ.


ಜ್ಞಾನ ಸರೋವರ ಪದವಿ ಪೂರ್ವ ಕಾಲೇಜಿಗೆ ಶೇ.೯೬.೧೫ ಫಲಿತಾಂಶ ಬಂದಿದೆ. ಪರೀಕ್ಷೆ ಬರೆದ ೭೮ ವಿದ್ಯಾರ್ಥಿಗಳ ಪೈಕಿ ೭೫ ಮಂದಿ ಉತ್ತೀರ್ಣರಾಗಿದ್ದಾರೆ. ೧೮ ಮಂದಿ ಅತ್ಯುನ್ನತ ಶ್ರೇಣಿ ಹಾಗೂ ೪೩ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆಗೊಂಡಿದ್ದಾರೆ. ತಾಲ್ಲೂಕು ಟಾಪರ್ ಆಗಿರುವ ವಿದ್ಯಾರ್ಥಿಗೆ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷರಾದ ಎಂ.ಬಿ ರಾಹುಲ್ ರಾಜೇ ಅರಸ್, ಕಾರ್ಯದರ್ಶಿ ಆರ್. ಆರ್ದಶ ಕುಮಾರ್, ಖಜಾಂಜಿ ಬಿ.ಎಸ್.ಹೇಮಲತಾ, ಪ್ರಾಂಶುಪಾಲ ಜಯರಾಮೇಗೌಡ ಸೇರಿದಂತೆ ಭೋದಕ ಮತ್ತು ಭೋದಕೇತರ ವರ್ಗದ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.


ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in education »

ಅಂದು ಶಾಲೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಅಪ್ಪಗೆರೆ ತಿಮ್ಮರಾಜು
ಅಂದು ಶಾಲೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಅಪ್ಪಗೆರೆ ತಿಮ್ಮರಾಜು

ಚನ್ನಪಟ್ಟಣ: ನಾವು ನಮ್ಮ ಕಾಲದಲ್ಲಿ ಶಾಲೆಗೆ ಹೋಗಿ ವಿದ್ಯೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಹಲವಾರು ಸಮಸ್ಯೆಗಳು ನಮ್ಮ ಎದುರಿಗಿದ್ದವು. ಆದರೆ, ಈಗ ಅಂತಹ

ಪ್ರತಿ ವಿದ್ಯಾರ್ಥಿಗಳು ಕೌಶಲ್ಯ ರೂಢಿಸಿಕೊಳ್ಳಬೇಕು: ಶಿಕ್ಷಣಾಧಿಕಾರಿ ಮರಿಗೌಡ
ಪ್ರತಿ ವಿದ್ಯಾರ್ಥಿಗಳು ಕೌಶಲ್ಯ ರೂಢಿಸಿಕೊಳ್ಳಬೇಕು: ಶಿಕ್ಷಣಾಧಿಕಾರಿ ಮರಿಗೌಡ

ಚನ್ನಪಟ್ಟಣ: ಶಾಲಾ ವಿದ್ಯಾರ್ಥಿಗಳು ಕೇವಲ ಪಾಠ ಮತ್ತು ಆಟಕ್ಕೆ ಸೀಮಿತವಾಗದೆ ವಿವಿಧ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಕೌಶಲ್ಯ ಕಲಿತ ಮಕ್ಕಳ ಪ್ರತಿಭೆಯನ್ನ

ಪ್ರತಿ ಸರ್ಕಾರಗಳು ಪದವೀಧರರ ಜೊತೆ ಚೆಲ್ಲಾಟವಾಡುತ್ತಿವೆ, ಉದಯ್ ಸಿಂಗ್
ಪ್ರತಿ ಸರ್ಕಾರಗಳು ಪದವೀಧರರ ಜೊತೆ ಚೆಲ್ಲಾಟವಾಡುತ್ತಿವೆ, ಉದಯ್ ಸಿಂಗ್

ಚನ್ನಪಟ್ಟಣ: ಪ್ರತಿ ವರ್ಷವೂ ಲಕ್ಷಾಂತರ ಯುವಕ ಯುವತಿಯರು ಪದವಿಯೊಂದಿಗೆ ಹೊರಬರುತ್ತಾರೆ. ವಿಶ್ವ ವಿದ್ಯಾಲಯಗಳಿಂದ ಪದವಿಯೊಂದಿಗೆ ಬರುವವರಿಗೆ ಸೂಕ್ತ  ಉದ್ಯೋಗ

ದಿವ್ಯಚೇತನ ಇಂಗ್ಲಿಷ್ ಶಾಲೆಯಲ್ಲಿ ಮೇಳೈಸಿದ ಮಿನಿ ವಿಜ್ಞಾನ ಮೇಳ
ದಿವ್ಯಚೇತನ ಇಂಗ್ಲಿಷ್ ಶಾಲೆಯಲ್ಲಿ ಮೇಳೈಸಿದ ಮಿನಿ ವಿಜ್ಞಾನ ಮೇಳ

ಚನ್ನಪಟ್ಟಣ: ಅಗಸ್ತ್ಯ ಅಂತರಾಷ್ಟ್ರೀಯ ಪ್ರತಿಷ್ಠಾನ ಬ್ರಾಡ್ಕಾಂ ವಿಜ್ಞಾನ ಕೇಂದ್ರ ಚನ್ನಪಟ್ಟಣ ಇವರ ವತಿಯಿಂದ ನಗರದ ದಿವ್ಯ ಚೇತನ ಇಂಗ್ಲಿಷ್ ಪ್ರೌಢಶಾಲೆಯಲ್ಲ

ಪಾಠದ ಜೊತೆಗೆ ಆಟದಲ್ಲಿಯೂ ಮುಂಚೂಣಿಗೆ ಬರಬೇಕು. ವಿ ಬಾಲಸುಬ್ರಹ್ಮಣ್ಯಂ
ಪಾಠದ ಜೊತೆಗೆ ಆಟದಲ್ಲಿಯೂ ಮುಂಚೂಣಿಗೆ ಬರಬೇಕು. ವಿ ಬಾಲಸುಬ್ರಹ್ಮಣ್ಯಂ

ಚನ್ನಪಟ್ಟಣ,: ಪ್ರತಿಯೊಬ್ಬ ವಿದ್ಯಾರ್ಥಿಯು ಶಿಕ್ಷಣದ ಜೊತೆಯಲ್ಲಿ ಕ್ರೀಡಾಮನೋಭಾವನೆ ಬೆಳಸಿಕೊಳ್ಳಬೇಕು. ಮನಸ್ಸು ಉಲ್ಲಸಿತವಾಗಲು ಕ್ರೀಡೆ ಸಹಕಾರಿ ಎಂದು ಬಾಲು

ಉಪನ್ಯಾಸಕರ ಧರಣಿ, ಕಲಿಕೆಗೆ ತೊಂದರೆ, ಎಬಿವಿಪಿ ಯಿಂದ ಪ್ರತಿಭಟನೆ
ಉಪನ್ಯಾಸಕರ ಧರಣಿ, ಕಲಿಕೆಗೆ ತೊಂದರೆ, ಎಬಿವಿಪಿ ಯಿಂದ ಪ್ರತಿಭಟನೆ

ಚನ್ನಪಟ್ಟಣ: ಸರ್ಕಾರಿ ಕಾಲೇಜುಗಳ ಉಪನ್ಯಾಸಕರು ಧರಣಿ ನಿರತರಾಗಿರುವುದರಿಂದ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯಿದೆ. ಇದರಿಂದ ಶೈಕ್ಷಣಿಕ ವರ್ಷದ ಕಲಿಕೆಗೆ ತೊ

ಆರೋಗ್ಯ, ಆಯಸ್ಸು ಹೆಚ್ಚಿಸುವ ವೈದ್ಯರು ಆರೋಗ್ಯ ಕಾಪಾಡಿಕೊಳ್ಳಬೇಕು. ಚಾಮುಂಡೇಶ್ವರಿ ಆಸ್ಪತ್ರೆ ಉದ್ಘಾಟನೆಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ
ಆರೋಗ್ಯ, ಆಯಸ್ಸು ಹೆಚ್ಚಿಸುವ ವೈದ್ಯರು ಆರೋಗ್ಯ ಕಾಪಾಡಿಕೊಳ್ಳಬೇಕು. ಚಾಮುಂಡೇಶ್ವರಿ ಆಸ್ಪತ್ರೆ ಉದ್ಘಾಟನೆಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ

ಚನ್ನಪಟ್ಟಣ:bಆಸ್ಪತ್ರೆಗೆ ಬರುವ ರೋಗಿಗಳ ಅರೋಗ್ಯ ತಪಾಸಿಸಿ, ರೋಗ ವಾಸಿ ಮಾಡಿ, ಅವರ ಆರೋಗ್ಯ ದ ಜೊತೆಗೆ ಆಯಸ್ಸನ್ನು ಹೆಚ್ಚಿಸುವಲ್ಲಿ ನಿಷ್ಣಾತರಾದ ವೈದ್ಯರು

ಪೆಟ್ಟಾ ಸರ್ಕಾರಿ ಶಾಲಾ ಆವರಣದಲ್ಲಿ ನಗರಸಭೆಯ ಕಸದ ರಾಶಿ, ಅಲ್ಲಗಳೆದ ಪೌರಾಯುಕ್ತ
ಪೆಟ್ಟಾ ಸರ್ಕಾರಿ ಶಾಲಾ ಆವರಣದಲ್ಲಿ ನಗರಸಭೆಯ ಕಸದ ರಾಶಿ, ಅಲ್ಲಗಳೆದ ಪೌರಾಯುಕ್ತ

ಚನ್ನಪಟ್ಟಣ: ನಗರದ ಡೂಂ ಲೈಟ್ ವೃತ್ತದಲ್ಲಿರುವ ಏಳು ದಶಕದಷ್ಟು ಹಳೆಯಾದಾದ ಪೆಟ್ಟಾ ಹೆಸರಿನ ಸರ್ಕಾರಿ ಶಾಲಾ ಆವರಣದಲ್ಲಿ ಹತ್ತಾರು ಟನ್ ಕಸದ ರಾಶಿಯನ್ನು ರಾ

ಆರ್ಥಿಕವಾಗಿ ಬೆಳೆದವರೆಲ್ಲರೂ ವಿದ್ಯಾರ್ಜನೆಗೆ ಮುಂದಡಿಯಿಡಬೇಕು, ಸಚಿವ ಮಧುಬಂಗಾರಪ್ಪ
ಆರ್ಥಿಕವಾಗಿ ಬೆಳೆದವರೆಲ್ಲರೂ ವಿದ್ಯಾರ್ಜನೆಗೆ ಮುಂದಡಿಯಿಡಬೇಕು, ಸಚಿವ ಮಧುಬಂಗಾರಪ್ಪ

ಚನ್ನಪಟ್ಟಣ: ಬಡತನದ ಬೇಗೆಯಲ್ಲಿ ಬೆಂದು, ಉನ್ನತ ಶಿಕ್ಷಣ ಪಡೆದು, ಉತ್ತಮ ಸ್ಥಾನಮಾನದ ಜೊತೆಗೆ ಆರ್ಥಿಕವಾಗಿ ಸದೃಢವಾದ ನಂತರ ತನ್ನ ಜನ್ಮದಾತರಿಗೆ, ಹುಟ್ಡಿದೂರ

ಕಾವೇರಿ ಕಿಚ್ಚು, ರಾಮನಗರ ಜಿಲ್ಲೆ ಬಂದ್, ಶಾಲಾ-ಕಾಲೇಜಿಗೆ ರಜೆ, ಸರ್ಕಾರಿ ಕಛೇರಿ ರಜೆಗಾಗಿ ಕಾಯುತ್ತಿರುವ ನೌಕರರು
ಕಾವೇರಿ ಕಿಚ್ಚು, ರಾಮನಗರ ಜಿಲ್ಲೆ ಬಂದ್, ಶಾಲಾ-ಕಾಲೇಜಿಗೆ ರಜೆ, ಸರ್ಕಾರಿ ಕಛೇರಿ ರಜೆಗಾಗಿ ಕಾಯುತ್ತಿರುವ ನೌಕರರು

ರಾಮನಗರ: ನಮ್ಮ ರಾಜ್ಯದ ಕೆಲ ಭಾಗಗಳಿಗೆ ಕುಡಿಯುವ ನೀರಿಗೆ ತತ್ವಾರವಾಗಿದೆ, ಮಂಡ್ಯ, ಮೈಸೂರು ಭಾಗದ ರೈತರಿಗೆ ಬೆಳೆ ಬೆಳೆಯಲು ನೀರಿಲ್ಲಾ, ಇಂತಹ ಸಂಕಷ್ಟದ ಸಮಯ

Top Stories »  


Top ↑