ಎಸ್ ಎಸ್ ಎಲ್ ಸಿ ಯಲ್ಲಿ ರಾಮನಗರ ಎಂಟನೇ ಸ್ಥಾನ, ಚನ್ನಪಟ್ಟಣ ಮೊದಲನೇ ಸ್ಥಾನ
ರಾಮನಗರ:ಆ/10/20/ಸೋಮವರ. ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ನೆನ್ನೆ ಪ್ರಕಟವಾಗಿದ್ದು, ಪ್ರತಿ ಬಾರಿಯಂತೆ ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.
ಕೋವಿಡ್ ಸಂಕಷ್ಟ ದಿಂದಾಗಿ ಪೂರ್ವ ನಿಗದಿತ ಪರೀಕ್ಷೆ ಮುಂದೂಡಲಾಗಿತ್ತು. ಇದರಿಂದ ವಿದ್ಯಾರ್ಥಿಗಳು ಸಾಕಷ್ಟು ಆತಂಕಕ್ಕೆ ಒಳಗಾಗಿದ್ದರು. ಇವೆಲ್ಲದರ ನಡುವೆ ರಾಜ್ಯದಲ್ಲಿ ಒಟ್ಟಾರೆ ಶೇ.71.80 ರಷ್ಟು ಫಲಿತಾಂಶ ಬಂದಿದೆ.
ಒಟ್ಟು 5,82,316 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಆರು ವಿದ್ಯಾರ್ಥಿಗಳು 625 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.
ಜಿ.ಕೆ.ಅಮೋಘ್, ಚಿರಾಯು, ನಿಖಿಲೇಶ್, ಮಂಡ್ಯದ ನೀರಜ್ ಕಡ್ಡಿ, ಸುಳ್ಯದ ಅನುಷ್, ಚಿಕ್ಕಮಗಳೂರಿನ ತನ್ಮಯ್ ೬೨೫ ಅಂಕಗಳನ್ನು ಗಳಿಸಿ ಟಾಪರ್ಗಳಾಗಿದ್ದಾರೆ.
ಈ ಬಾರಿ ಎ, ಬಿ, ಸಿ ಎಂದು ಜಿಲ್ಲೆಗಳ ಫಲಿತಾಂಶವನ್ನು ವರ್ಗೀಕರಿಸಲಾಗಿದೆ. ೧೧ ವಿದ್ಯಾರ್ಥಿಗಳು ೬೨೪ ಅಂಕ ಪಡೆದಿದ್ದರೆ, ೪೩ ವಿದ್ಯಾರ್ಥಿಗಳು ೬೨೩ ಅಂಕ ಪಡೆದಿದ್ದಾರೆ. ಜಿಲ್ಲಾವಾರು ಫಲಿತಾಂಶದಲ್ಲಿ ಚಿಕ್ಕಬಳ್ಳಾಪುರ ಪ್ರಥಮ ಸ್ಥಾನವನ್ನು, ಬೆಂಗಳೂರು ಗ್ರಾಮಾಂತರ, ದ್ವಿತೀಯ ಸ್ಥಾನವನ್ನು ಮಧುಗಿರಿ ತೃತೀಯ ಸ್ಥಾನ ಪಡೆದಿದ್ದು, ಯಾದಗಿರಿ ಕೊನೆಯ ಸ್ಥಾನದಲ್ಲಿದೆ.
ಈ ಸಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಮನಗ ಜಿಲ್ಲೆಯಿ ೮ ನೆಯ ಸ್ಥಾನಕ್ಕೆ ತೃಪ್ತಿಗೊಂಡಿದೆ. ಕಳೆದ ಸಾರಿ ಜಿಲ್ಲೆಯ ಫಲಿತಾಂಶ ರಾಜ್ಯದಲ್ಲಿಯೇ ಮೂರನೇ ಸ್ಥಾನದಲ್ಲಿತ್ತು. ಈ ೫ ಸ್ಥಾನ ಹಿಂದಕ್ಕೆ ತಳ್ಳಲ್ಪಟ್ಟಿದೆ.
*ಚನ್ನಪಟ್ಟಣ ತಾಲ್ಲೂಕು ಜಿಲ್ಲೆಗೆ ಪ್ರಥಮ:*
ಈ ಸಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಚನ್ನಪಟ್ಟಣ ತಾಲ್ಲೂಕು ಜಿಲ್ಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ಕನಕಪುರ ಎರಡನೆಯ ಸ್ಥಾನ ಗಳಿಸಿದೆ. ಮಾಗಡಿ ಮೂರನೆಯ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದೆ. ಜಿಲ್ಲಾ ಕೇಂದ್ರ ಸ್ಥಾನವಾದ ರಾಮನಗರ ತಾಲ್ಲೂಕು ೪ ನೇ ಸ್ಥಾನಕ್ಕೆ ತೃಪ್ತಿಹೊಂದಿದೆ.
ಕಳೆದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಮಾಗಡಿ ತಾಲ್ಲೂಕು ಪ್ರಥಮ ಸ್ಥಾನವನ್ನು ಪಡೆದಿದ್ದನ್ನು ಇಲ್ಲಿ ಸ್ಮರಿಸಬಹುದು.
ಗ್ರೇಡ್ ವಾರು ಪಡೆದಿರುವ ಫಲಿತಾಂಶದಂತೆ ಚನ್ನಪಟ್ಟಣ ಮತ್ತು ಮಾಗಡಿ ತಾಲ್ಲೂಕುಗಳು ‘ಎ’ ಗ್ರೇಡ್ ಪಡೆದುಕೊಂಡಿದ್ದರೆ, ರಾಮನಗರ ಹಾಗೂ ಕನಕಪುರ ತಾಲ್ಲೂಕುಗಳು ‘ಬಿ’ ಗ್ರೇಡ್ ಅನ್ನು ಪಡೆದುಕೊಂಡಿವೆ.
ಕೊರೊನಾ ಅಡೆತಡೆಯಿಂದ ಈ ಸಾರಿಯ ಫಲಿತಾಂಶ ಸಾಕಷ್ಟು ಕುಸಿಯಬಹುದು ಎಂಬ ಅನ್ನಿಸಿಕೆ ಇತ್ತು. ಆದರೆ ಫಲಿತಾಂಶ ಪ್ರಕಟಣೆಯ ನಂತರ ಆ ರೀತಿಯ ಲೆಕ್ಕಾಚಾರ ತಪ್ಪು ಎನ್ನಿಸಿದೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in education »
ಅಂದು ಶಾಲೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಅಪ್ಪಗೆರೆ ತಿಮ್ಮರಾಜು
ಚನ್ನಪಟ್ಟಣ: ನಾವು ನಮ್ಮ ಕಾಲದಲ್ಲಿ ಶಾಲೆಗೆ ಹೋಗಿ ವಿದ್ಯೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಹಲವಾರು ಸಮಸ್ಯೆಗಳು ನಮ್ಮ ಎದುರಿಗಿದ್ದವು. ಆದರೆ, ಈಗ ಅಂತಹ
ಪ್ರತಿ ವಿದ್ಯಾರ್ಥಿಗಳು ಕೌಶಲ್ಯ ರೂಢಿಸಿಕೊಳ್ಳಬೇಕು: ಶಿಕ್ಷಣಾಧಿಕಾರಿ ಮರಿಗೌಡ
ಚನ್ನಪಟ್ಟಣ: ಶಾಲಾ ವಿದ್ಯಾರ್ಥಿಗಳು ಕೇವಲ ಪಾಠ ಮತ್ತು ಆಟಕ್ಕೆ ಸೀಮಿತವಾಗದೆ ವಿವಿಧ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಕೌಶಲ್ಯ ಕಲಿತ ಮಕ್ಕಳ ಪ್ರತಿಭೆಯನ್ನ
ಪ್ರತಿ ಸರ್ಕಾರಗಳು ಪದವೀಧರರ ಜೊತೆ ಚೆಲ್ಲಾಟವಾಡುತ್ತಿವೆ, ಉದಯ್ ಸಿಂಗ್
ಚನ್ನಪಟ್ಟಣ: ಪ್ರತಿ ವರ್ಷವೂ ಲಕ್ಷಾಂತರ ಯುವಕ ಯುವತಿಯರು ಪದವಿಯೊಂದಿಗೆ ಹೊರಬರುತ್ತಾರೆ. ವಿಶ್ವ ವಿದ್ಯಾಲಯಗಳಿಂದ ಪದವಿಯೊಂದಿಗೆ ಬರುವವರಿಗೆ ಸೂಕ್ತ ಉದ್ಯೋಗ
ದಿವ್ಯಚೇತನ ಇಂಗ್ಲಿಷ್ ಶಾಲೆಯಲ್ಲಿ ಮೇಳೈಸಿದ ಮಿನಿ ವಿಜ್ಞಾನ ಮೇಳ
ಚನ್ನಪಟ್ಟಣ: ಅಗಸ್ತ್ಯ ಅಂತರಾಷ್ಟ್ರೀಯ ಪ್ರತಿಷ್ಠಾನ ಬ್ರಾಡ್ಕಾಂ ವಿಜ್ಞಾನ ಕೇಂದ್ರ ಚನ್ನಪಟ್ಟಣ ಇವರ ವತಿಯಿಂದ ನಗರದ ದಿವ್ಯ ಚೇತನ ಇಂಗ್ಲಿಷ್ ಪ್ರೌಢಶಾಲೆಯಲ್ಲ
ಪಾಠದ ಜೊತೆಗೆ ಆಟದಲ್ಲಿಯೂ ಮುಂಚೂಣಿಗೆ ಬರಬೇಕು. ವಿ ಬಾಲಸುಬ್ರಹ್ಮಣ್ಯಂ
ಚನ್ನಪಟ್ಟಣ,: ಪ್ರತಿಯೊಬ್ಬ ವಿದ್ಯಾರ್ಥಿಯು ಶಿಕ್ಷಣದ ಜೊತೆಯಲ್ಲಿ ಕ್ರೀಡಾಮನೋಭಾವನೆ ಬೆಳಸಿಕೊಳ್ಳಬೇಕು. ಮನಸ್ಸು ಉಲ್ಲಸಿತವಾಗಲು ಕ್ರೀಡೆ ಸಹಕಾರಿ ಎಂದು ಬಾಲು
ಉಪನ್ಯಾಸಕರ ಧರಣಿ, ಕಲಿಕೆಗೆ ತೊಂದರೆ, ಎಬಿವಿಪಿ ಯಿಂದ ಪ್ರತಿಭಟನೆ
ಚನ್ನಪಟ್ಟಣ: ಸರ್ಕಾರಿ ಕಾಲೇಜುಗಳ ಉಪನ್ಯಾಸಕರು ಧರಣಿ ನಿರತರಾಗಿರುವುದರಿಂದ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯಿದೆ. ಇದರಿಂದ ಶೈಕ್ಷಣಿಕ ವರ್ಷದ ಕಲಿಕೆಗೆ ತೊ
ಆರೋಗ್ಯ, ಆಯಸ್ಸು ಹೆಚ್ಚಿಸುವ ವೈದ್ಯರು ಆರೋಗ್ಯ ಕಾಪಾಡಿಕೊಳ್ಳಬೇಕು. ಚಾಮುಂಡೇಶ್ವರಿ ಆಸ್ಪತ್ರೆ ಉದ್ಘಾಟನೆಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ
ಚನ್ನಪಟ್ಟಣ:bಆಸ್ಪತ್ರೆಗೆ ಬರುವ ರೋಗಿಗಳ ಅರೋಗ್ಯ ತಪಾಸಿಸಿ, ರೋಗ ವಾಸಿ ಮಾಡಿ, ಅವರ ಆರೋಗ್ಯ ದ ಜೊತೆಗೆ ಆಯಸ್ಸನ್ನು ಹೆಚ್ಚಿಸುವಲ್ಲಿ ನಿಷ್ಣಾತರಾದ ವೈದ್ಯರು
ಪೆಟ್ಟಾ ಸರ್ಕಾರಿ ಶಾಲಾ ಆವರಣದಲ್ಲಿ ನಗರಸಭೆಯ ಕಸದ ರಾಶಿ, ಅಲ್ಲಗಳೆದ ಪೌರಾಯುಕ್ತ
ಆರ್ಥಿಕವಾಗಿ ಬೆಳೆದವರೆಲ್ಲರೂ ವಿದ್ಯಾರ್ಜನೆಗೆ ಮುಂದಡಿಯಿಡಬೇಕು, ಸಚಿವ ಮಧುಬಂಗಾರಪ್ಪ
ಚನ್ನಪಟ್ಟಣ: ಬಡತನದ ಬೇಗೆಯಲ್ಲಿ ಬೆಂದು, ಉನ್ನತ ಶಿಕ್ಷಣ ಪಡೆದು, ಉತ್ತಮ ಸ್ಥಾನಮಾನದ ಜೊತೆಗೆ ಆರ್ಥಿಕವಾಗಿ ಸದೃಢವಾದ ನಂತರ ತನ್ನ ಜನ್ಮದಾತರಿಗೆ, ಹುಟ್ಡಿದೂರ
ಕಾವೇರಿ ಕಿಚ್ಚು, ರಾಮನಗರ ಜಿಲ್ಲೆ ಬಂದ್, ಶಾಲಾ-ಕಾಲೇಜಿಗೆ ರಜೆ, ಸರ್ಕಾರಿ ಕಛೇರಿ ರಜೆಗಾಗಿ ಕಾಯುತ್ತಿರುವ ನೌಕರರು
ರಾಮನಗರ: ನಮ್ಮ ರಾಜ್ಯದ ಕೆಲ ಭಾಗಗಳಿಗೆ ಕುಡಿಯುವ ನೀರಿಗೆ ತತ್ವಾರವಾಗಿದೆ, ಮಂಡ್ಯ, ಮೈಸೂರು ಭಾಗದ ರೈತರಿಗೆ ಬೆಳೆ ಬೆಳೆಯಲು ನೀರಿಲ್ಲಾ, ಇಂತಹ ಸಂಕಷ್ಟದ ಸಮಯ
ಪ್ರತಿಕ್ರಿಯೆಗಳು