ಸರ್ಕಾರಿ ಶಾಲೆ ಮುಂದೆ ದಾಖಲಾತಿಗೆ ಸರದಿಯಲ್ಲಿ ಜನರು ನಿಲ್ಲಬೇಕು: ಸುರೇಶ್ ಕುಮಾರ್
ಸರ್ಕಾರಿ ಶಾಲೆಗಳಲ್ಲೂ ಮಕ್ಕಳ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಿಗೆ ಬೇಕಿರುವ ಸೌಲಭ್ಯವನ್ನು ಕಲ್ಪಿಸಿ ಸರ್ಕಾರಿ ಶಾಲೆಯ ಮುಂದೆ ದಾಖಲಾತಿಗೆ ಜನರು ಸರತಿ ಸಾಲಿನಲ್ಲಿ ನಿಲ್ಲುವಂತೆ ಬೆಳೆಯಬೇಕು ಎಂದು ಪ್ರಾಥಮಿಕ , ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಎಸ್. ಸುರೇಶ್ ಕುಮಾರ್ ಅವರು ತಿಳಿಸಿದರು.
ಕಣ್ವ ಡಯೋಗನಾಸ್ಟಿಕ್ ನ ಡಾ: ವೆಂಕಟಪ್ಪ ಅವರು ಹೊಂಗನೂರು ಶಾಲೆಯಲ್ಲಿ ವಿದ್ಯಾಭ್ಯಾಸ ನಡೆಸಿರುತ್ತಾರೆ. ಹಾಗೂ ಶಾಲೆಗೆ ಬೇಕಿರುವ ಮೂಲಭೂತ ವ್ಯವಸ್ಥೆ ಕಲ್ಪಿಸಲು ಮುಂದೆ ಬಂದಿರುತ್ತಾರೆ. ಈ ಹಿನ್ನಲೆಯಲ್ಲಿ ಸಚಿವರು ಇಂದು ಚನ್ನಪಟ್ಟಣ ತಾಲ್ಲೂಕಿನ ಹೊಂಗನೂರು ಶಾಲೆಗೆ ಭೇಟಿ ನೀಡಿ ಚರ್ಚಿಸಿದರು.
ಹೊಂಗನೂರು ಶಾಲೆ 4.5 ಎಕರೆ ಸ್ಥಳಾವಕಾಶ ಹೊಂದಿದ್ದು, ಇಲ್ಲಿ ಕ್ರೀಡೆ, ಸಂಸ್ಕೃತಿಕ ಚಟುವಟಿಕೆ, ಪಠ್ಯ ಚಟುವಟಿಕೆ ನಡೆಸಲು ಮಕ್ಕಳಿಗೆ ಅನುಕೂಲವಾಗುವಂತೆ ಸೌಲಭ್ಯಗಳನ್ನು ಕಲ್ಪಿಸಬಹುದು.ಇದಕ್ಕೆ ಒಳ್ಳೆಯ ರೀತಿಯಲ್ಲಿ ಯೋಜನೆ ರೂಪಿಸಿ. ಡಾ: ವೆಂಕಟಪ್ಪ ಅವರು ಶಾಲೆ ಅಭಿವೃದ್ಧಿ ಪಡಿಸಲು ಮುಂದೆ ಬಂದಿದ್ದು, ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಮನರೇಗಾ ಯೋಜನೆಯಡಿ ಶಾಲೆಯಲ್ಲಿ ಆಟದ ಮೈದಾನ, ಕಾಂಪೌಂಡ್, ಕೈತೋಟ,ಮಳೆ ನೀರು ಕೊಯ್ಲು ಮುಂತಾದ ಕಾಮಗಾರಿಗಳನ್ನು ಕೈಗೊಳ್ಳಬಹುದು ಈ ಬಗ್ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.
ಜುಲೈ 15 ರಿಂದ ಮುಂದಿನ ಶೈಕ್ಷಣಿಕ ಸಾಲು ಪ್ರಾರಂಭವಾಗಲಿದೆ. ಮುಂದಿನ ಶೈಕ್ಷಣಿಕ ಸಾಲನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಯೋಜನೆ ರೂಪಿಸಿ ಎಂದರು.
ಹೊಂಗನೂರು ಭಾಗದಿಂದ ಬಹಳಷ್ಟು ವಿದ್ಯಾರ್ಥಿಗಳು ಪಿ.ಯು.ಸಿ ವಿದ್ಯಾಭ್ಯಾಸ ಕ್ಕಾಗಿ ಚನ್ನಪಟ್ಟಣಕ್ಕೆ ತೆರಳುತ್ತಾರೆ. ಹೊಂಗನೂರಿನಲ್ಲಿ ಎಲ್.ಕೆ.ಜಿ ಯಿಂದ ಪಿಯುಸಿ ವರೆಗೂ ವಿದ್ಯಾಭ್ಯಾಸ ನೀಡಲು ಕೆ.ಪಿ.ಎಸ್ ಶಾಲೆಯಾಗಿ ಪರಿವರ್ತಿಸಲು ಅಥವಾ ಸೂಕ್ತ ಯೋಜನೆ ರೂಪಿಸಲು ಚಿಂತಿಸಲಾಗುವುದು ಎಂದರು.
ಶಾಲೆಯಲ್ಲಿ ದಾಖಲಾತಿಯ ಬಗ್ಗೆ ಮಾಹಿತಿ ಪಡೆದ ಸಚಿವರು ಕಳೆದ ಸಾಲಿಗಿಂತ ಈ ಬಾರಿ ಹೆಚ್ಚು ಮಕ್ಕಳು ದಾಖಲಾಗಿದ್ದು,ಸರ್ಕಾರಿ ಶಾಲೆಯ ಮಕ್ಕಳಲ್ಲಿ ಪ್ರತಿಭೆ ತುಂಬಿರುತ್ತದೆ. ಅದನ್ನು ಹೊರತರುವ ಕೆಲಸ ಶಿಕ್ಷಕರು ಮಾಡಬೇಕು. ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ವಿಕಸನ ಕಾರ್ಯಕ್ರಮದಡಿ ಉಚಿತವಾಗಿ ಬೆಂಗಳೂರಿನಲ್ಲಿ ತರಬೇತಿ ನೀಡಲಾಗುವುದು. ಈ ಕಾರ್ಯಕ್ರಮವನ್ನು ಫೇಸ್ ಬುಕ್ ಹಾಗೂ ಯು ಟ್ಯೂಬ್ ನಲ್ಲೂ ಸಹ ವಿದ್ಯಾರ್ಥಿಗಳು ನೋಡಬಹುದಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸೋಮಶೇಖರ್ ಯ್ಯ ಹಾಗೂ ಶಾಲೆಯ ಪ್ರಾಂಶುಪಾಲರು ಶಿಕ್ಷಕರು ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in education »
ಅಂದು ಶಾಲೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಅಪ್ಪಗೆರೆ ತಿಮ್ಮರಾಜು
ಚನ್ನಪಟ್ಟಣ: ನಾವು ನಮ್ಮ ಕಾಲದಲ್ಲಿ ಶಾಲೆಗೆ ಹೋಗಿ ವಿದ್ಯೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಹಲವಾರು ಸಮಸ್ಯೆಗಳು ನಮ್ಮ ಎದುರಿಗಿದ್ದವು. ಆದರೆ, ಈಗ ಅಂತಹ
ಪ್ರತಿ ವಿದ್ಯಾರ್ಥಿಗಳು ಕೌಶಲ್ಯ ರೂಢಿಸಿಕೊಳ್ಳಬೇಕು: ಶಿಕ್ಷಣಾಧಿಕಾರಿ ಮರಿಗೌಡ
ಚನ್ನಪಟ್ಟಣ: ಶಾಲಾ ವಿದ್ಯಾರ್ಥಿಗಳು ಕೇವಲ ಪಾಠ ಮತ್ತು ಆಟಕ್ಕೆ ಸೀಮಿತವಾಗದೆ ವಿವಿಧ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಕೌಶಲ್ಯ ಕಲಿತ ಮಕ್ಕಳ ಪ್ರತಿಭೆಯನ್ನ
ಪ್ರತಿ ಸರ್ಕಾರಗಳು ಪದವೀಧರರ ಜೊತೆ ಚೆಲ್ಲಾಟವಾಡುತ್ತಿವೆ, ಉದಯ್ ಸಿಂಗ್
ಚನ್ನಪಟ್ಟಣ: ಪ್ರತಿ ವರ್ಷವೂ ಲಕ್ಷಾಂತರ ಯುವಕ ಯುವತಿಯರು ಪದವಿಯೊಂದಿಗೆ ಹೊರಬರುತ್ತಾರೆ. ವಿಶ್ವ ವಿದ್ಯಾಲಯಗಳಿಂದ ಪದವಿಯೊಂದಿಗೆ ಬರುವವರಿಗೆ ಸೂಕ್ತ ಉದ್ಯೋಗ
ದಿವ್ಯಚೇತನ ಇಂಗ್ಲಿಷ್ ಶಾಲೆಯಲ್ಲಿ ಮೇಳೈಸಿದ ಮಿನಿ ವಿಜ್ಞಾನ ಮೇಳ
ಚನ್ನಪಟ್ಟಣ: ಅಗಸ್ತ್ಯ ಅಂತರಾಷ್ಟ್ರೀಯ ಪ್ರತಿಷ್ಠಾನ ಬ್ರಾಡ್ಕಾಂ ವಿಜ್ಞಾನ ಕೇಂದ್ರ ಚನ್ನಪಟ್ಟಣ ಇವರ ವತಿಯಿಂದ ನಗರದ ದಿವ್ಯ ಚೇತನ ಇಂಗ್ಲಿಷ್ ಪ್ರೌಢಶಾಲೆಯಲ್ಲ
ಪಾಠದ ಜೊತೆಗೆ ಆಟದಲ್ಲಿಯೂ ಮುಂಚೂಣಿಗೆ ಬರಬೇಕು. ವಿ ಬಾಲಸುಬ್ರಹ್ಮಣ್ಯಂ
ಚನ್ನಪಟ್ಟಣ,: ಪ್ರತಿಯೊಬ್ಬ ವಿದ್ಯಾರ್ಥಿಯು ಶಿಕ್ಷಣದ ಜೊತೆಯಲ್ಲಿ ಕ್ರೀಡಾಮನೋಭಾವನೆ ಬೆಳಸಿಕೊಳ್ಳಬೇಕು. ಮನಸ್ಸು ಉಲ್ಲಸಿತವಾಗಲು ಕ್ರೀಡೆ ಸಹಕಾರಿ ಎಂದು ಬಾಲು
ಉಪನ್ಯಾಸಕರ ಧರಣಿ, ಕಲಿಕೆಗೆ ತೊಂದರೆ, ಎಬಿವಿಪಿ ಯಿಂದ ಪ್ರತಿಭಟನೆ
ಚನ್ನಪಟ್ಟಣ: ಸರ್ಕಾರಿ ಕಾಲೇಜುಗಳ ಉಪನ್ಯಾಸಕರು ಧರಣಿ ನಿರತರಾಗಿರುವುದರಿಂದ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯಿದೆ. ಇದರಿಂದ ಶೈಕ್ಷಣಿಕ ವರ್ಷದ ಕಲಿಕೆಗೆ ತೊ
ಆರೋಗ್ಯ, ಆಯಸ್ಸು ಹೆಚ್ಚಿಸುವ ವೈದ್ಯರು ಆರೋಗ್ಯ ಕಾಪಾಡಿಕೊಳ್ಳಬೇಕು. ಚಾಮುಂಡೇಶ್ವರಿ ಆಸ್ಪತ್ರೆ ಉದ್ಘಾಟನೆಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ
ಚನ್ನಪಟ್ಟಣ:bಆಸ್ಪತ್ರೆಗೆ ಬರುವ ರೋಗಿಗಳ ಅರೋಗ್ಯ ತಪಾಸಿಸಿ, ರೋಗ ವಾಸಿ ಮಾಡಿ, ಅವರ ಆರೋಗ್ಯ ದ ಜೊತೆಗೆ ಆಯಸ್ಸನ್ನು ಹೆಚ್ಚಿಸುವಲ್ಲಿ ನಿಷ್ಣಾತರಾದ ವೈದ್ಯರು
ಪೆಟ್ಟಾ ಸರ್ಕಾರಿ ಶಾಲಾ ಆವರಣದಲ್ಲಿ ನಗರಸಭೆಯ ಕಸದ ರಾಶಿ, ಅಲ್ಲಗಳೆದ ಪೌರಾಯುಕ್ತ
ಆರ್ಥಿಕವಾಗಿ ಬೆಳೆದವರೆಲ್ಲರೂ ವಿದ್ಯಾರ್ಜನೆಗೆ ಮುಂದಡಿಯಿಡಬೇಕು, ಸಚಿವ ಮಧುಬಂಗಾರಪ್ಪ
ಚನ್ನಪಟ್ಟಣ: ಬಡತನದ ಬೇಗೆಯಲ್ಲಿ ಬೆಂದು, ಉನ್ನತ ಶಿಕ್ಷಣ ಪಡೆದು, ಉತ್ತಮ ಸ್ಥಾನಮಾನದ ಜೊತೆಗೆ ಆರ್ಥಿಕವಾಗಿ ಸದೃಢವಾದ ನಂತರ ತನ್ನ ಜನ್ಮದಾತರಿಗೆ, ಹುಟ್ಡಿದೂರ
ಕಾವೇರಿ ಕಿಚ್ಚು, ರಾಮನಗರ ಜಿಲ್ಲೆ ಬಂದ್, ಶಾಲಾ-ಕಾಲೇಜಿಗೆ ರಜೆ, ಸರ್ಕಾರಿ ಕಛೇರಿ ರಜೆಗಾಗಿ ಕಾಯುತ್ತಿರುವ ನೌಕರರು
ರಾಮನಗರ: ನಮ್ಮ ರಾಜ್ಯದ ಕೆಲ ಭಾಗಗಳಿಗೆ ಕುಡಿಯುವ ನೀರಿಗೆ ತತ್ವಾರವಾಗಿದೆ, ಮಂಡ್ಯ, ಮೈಸೂರು ಭಾಗದ ರೈತರಿಗೆ ಬೆಳೆ ಬೆಳೆಯಲು ನೀರಿಲ್ಲಾ, ಇಂತಹ ಸಂಕಷ್ಟದ ಸಮಯ
ಪ್ರತಿಕ್ರಿಯೆಗಳು