Tel: 7676775624 | Mail: info@yellowandred.in

Language: EN KAN

    Follow us :


1 ರಿಂದ 9 ನೇ ತರಗತಿ ವಿದ್ಯಾರ್ಥಿಗಳೆಲ್ಲರೂ ಪಾಸ್; ಜೂ.15 ರಿಂದ ಹೊಸ ಶೈಕ್ಷಣಿಕ ವರ್ಷ. ಶಿಕ್ಷಣ ಇಲಾಖೆ

Posted date: 20 Apr, 2021

Powered by:     Yellow and Red

1 ರಿಂದ 9 ನೇ ತರಗತಿ ವಿದ್ಯಾರ್ಥಿಗಳೆಲ್ಲರೂ ಪಾಸ್; ಜೂ.15 ರಿಂದ ಹೊಸ ಶೈಕ್ಷಣಿಕ ವರ್ಷ. ಶಿಕ್ಷಣ ಇಲಾಖೆ

ಬೆಂಗಳೂರು: 1 ರಿಂದ 9 ನೇ ತರಗತಿಯವರೆಗಿನ ಎಲ್ಲಾ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ. ಈ ಎಲ್ಲಾ ತರಗತಿಗಳ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ಬಡ್ತಿ ನೀಡಬೇಕು ಎಂದು ರಾಜ್ಯ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಆದರೆ, ನಿಗದಿಯಂತೆ 10 ನೇ ತರಗತಿ ಪರೀಕ್ಷೆ ಜೂನ್ 21 ರಿಂದ ಪ್ರಾರಂಭವಾಗಲಿದೆ ಎಂದು ಶಿಕ್ಷಣ ಇಲಾಖೆ ಇಂದು ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಿದೆ.


ಕೋವಿಡ್ ಹಿನ್ನೆಲೆಯಲ್ಲಿ ಭೌತಿಕವಾಗಿ ಶಾಲೆಗಳು ಆರಂಭವಾಗದ ಹಿನ್ನೆಲೆಯಲ್ಲಿ ಒಂದ ರಿಂದ ಒಂಬತ್ತನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಈವರೆಗೆ ಆನ್​ಲೈನ್ ಮತ್ತು ವಿದ್ಯಾಗಮ ಯೋಜನೆ ಅಡಿ ನಡೆದ ಪಾಠಗಳಲ್ಲಿ ಅವರು ತೋರಿದ ಪ್ರಗತಿ ಇತ್ಯಾದಿ ಅಂಶಗಳೊಂದಿಗೆ ಚೈಲ್ಡ್ ಪ್ರೊಫೈಲ್ (ಕೃತಿ ಸಂಪುಟ) ತಯಾರಿಸಬೇಕು. ಸಿಸಿಇ ನಿಯಮಗಳಂತೆ ಇತರೆ ಲಭ್ಯ ದಾಖಲೆಗಳನ್ನು ಅವಲೋಕಿಸಿ ಈವರೆಗೆ ಪೂರೈಸಿದ ಪಠ್ಯವಸ್ತು ಅಥವಾ ಸಾಮರ್ಥ್ಯಗಳ ಸಾಧನೆ ಮತ್ತು ಕೊರತೆಗಳನ್ನು ವಿಶ್ಲೇಷಿಸಿ ಪ್ರಗತಿ ಪತ್ರದಲ್ಲಿ ದಾಖಲಿಸಿ ಎಲ್ಲಾ ವಿದ್ಯಾರ್ಥಿಗಳನ್ನ ಮುಂದಿನ ತರಗತಿಗೆ ಬಡ್ತಿ ನೀಡಬೇಕು. ಈ ಮಕ್ಕಳಿಗೆ ಪ್ರತ್ಯೇಕ ಮೌಲ್ಯಾಂಕನ . ಈ ಪ್ರಕ್ರಿಯೆಯನ್ನು ಏಪ್ರಿಲ್ 30 ರೊಳಗೆ ಪೂರ್ಣಗೊಳಿಸಬೇಕು ಎಂದು ಸೂಚಿಸಲಾಗಿದೆ.


ಆರರಿಂದ ಒಂಬತ್ತನೇ ತರಗತಿಯವರೆಗಿನ ವಿದ್ಯಾರ್ಥಿಗಳು ವಿದ್ಯಾಗಮ ಕಾರ್ಯಕ್ರಮದಲ್ಲಿನ ದಾಖಲೆಗಳು ಮತ್ತು ಸಂವಹನದ ಆಧಾರದ ಮೇಲೆ, ಭೌತಿಕ ಹಾಗೂ ಆನ್‌ಲೈನ್ ಶಿಕ್ಷಣದ ಮೂಲಕ ತರಗತಿಯಲ್ಲಿ ವಿದ್ಯಾರ್ಥಿಗಳ ಕಲಿಕಾ ಪ್ರಗತಿ ಮತ್ತು ಮಕ್ಕಳಿಗೆ ನೀಡಿದ ಕಲಿಕಾ ಪೂರಕ ಚಟುವಟಿಕೆಗಳನ್ನು ಆಧರಿಸಿ ಸಂಗ್ರಹಿಸಿದ ದಾಖಲೆಗಳ ಕೃತಿಸಂಪುಟ (ಚೈಲ್ಡ್ ಪ್ರೊಫೈಲ್) ಮೇಲೆ ಮೌಲ್ಯಾಂಕನ ಮಾಡಬೇಕು. ಅವುಗಳ ದಾಖಲೆಯನ್ನಾಧರಿಸಿ ಪಡೆದ ಅಂಕಗಳನ್ನು 100 ಕ್ಕೆ ವೃದ್ಧಿಸಿ ಶ್ರೇಣಿಯನ್ನು ನಮೂದಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.


ಈವರೆಗೆ ಪೂರೈಸಿರುವ ಪಠ್ಯವಸ್ತು ಮತ್ತು ಕಲಿಕಾ ಸಾಮಥ್ಯಗಳ ಮೂಲಕ ವಿದ್ಯಾರ್ಥಿಗಳನ್ನು ಮೌಲ್ಯಮಾಪನ ಮಾಡಿ ಮುಂದಿನ ತರಗತಿಗಳಿಗೆ ಬಡ್ತಿ ನೀಡಬೇಕು ಮತ್ತು ಪ್ರಗತಿ ಪತ್ರದಲ್ಲಿ ದಾಖಲಿಸಬೇಕು. ಈ ಪ್ರಕ್ರಿಯೆಯು ಏಪ್ರಿಲ್ 30 ರೊಳಗೆ ಪೂರ್ಣಗೊಳ್ಳಬೇಕು ಎಂದು ಹೇಳಿದೆ. 

ವಿದ್ಯಾರ್ಥಿಗಳ ಕಲಿಕೆಯಲ್ಲಿ ತೋರಿದ ಪ್ರಗತಿ ಮತ್ತು ಕೊರತೆಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಶೈಕ್ಷಣಿಕ ವರ್ಷದ ಆರಂಭದಲ್ಲಿ ಸೇತು-ಬಂಧ ಕಾರ್ಯಕ್ರಮ ನಡೆಸಿ ಈ ಕೊರತೆಯನ್ನು ತುಂಬಲು ಕ್ರಮವಹಿಸಬೇಕು. ಈ ಮಕ್ಕಳಿಗೆ ಮುಂದಿನ ಶೈಕ್ಷಣಿಕ ವರ್ಷದ ವೇಳೆ ನೈದಾನಿಕ ಪರೀಕ್ಷೆ ನಡೆಸಿ ಹಿಂದಿನ ವರ್ಷದ ಕಲಿಕೆಯ ಮಟ್ಟವನ್ನು ಗುರುತಿಸಬೇಕು. ನಂತರ ಸೇತು ಬಂಧ ಕಾರ್ಯಕ್ರಮದ ಮೂಲಕ ಆ ಕೊರತೆ ತುಂಬಿ ನಂತರ ಸಾಫಲ್ಯ ಪರೀಕ್ಷೆ ನಡೆಸಿ ವಿದ್ಯಾರ್ಥಿಗಳಲ್ಲಿ ಕಲಿಕೆ ಆಗಿರುವುದನ್ನು ದೃಢೀಕರಿಸಿ ಮುಂದಿನ ತರಗತಿಯ ಬೋಧನೆ ಪ್ರಾರಂಭಿಸಬೇಕು ಎಂದು ಶಿಕ್ಷಣ ಇಲಾಖೆ ತನ್ನ ಆದೇಶದಲ್ಲಿ ತಿಳಿಸಿದೆ.


1 ರಿಂದ 7 ನೇ ತರಗತಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಮೇ 1 ರಿಂದ ಜೂನ್ 14 ರವರೆಗೆ ಬೇಸಿಗೆ ರಜೆ ಎಂದು ಘೋಷಿಸಲಾಗಿದೆ. 

ಜೂನ್ 15 ರಿಂದ 2021-22ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ. 

8 ಮತ್ತು 9 ನೇ ತರಗತಿ ಮಕ್ಕಳಿಗೆ ಮೇ 1 ರಿಂದ ಜುಲೈ 14 ರವರೆಗೆ ಬೇಸಿಗೆ ರಜೆ ಇದೆ. ಜುಲೈ 15 ರಿಂದ ಮುಂದಿನ ಶೈಕ್ಷಣಿಕ ವರ್ಷ ಪ್ರಾರಂಭವಾಗುತ್ತದೆ ಎಂದು ತಿಳಿಸಲಾಗಿದೆ.


ಪ್ರೌಢ ಶಾಲೆಗಳಲ್ಲಿನ ಶಿಕ್ಷಕರಿಗೆ ಜೂನ್ 15 ರಿಂದ ಜುಲೈ 14 ರವರೆಗೆ ಬೇಸಿಗೆ ರಜೆ ಇರುತ್ತದೆ.

ಜೂನ್ 21 ರಿಂದ ಜುಲೈ 5 ರವರೆಗೆ ಎಸ್ಎಸ್ಎಲ್‌ಸಿ ಪರೀಕ್ಷೆಗಳು ನಡೆಯುತ್ತವೆ.

ಆದರೆ, ಈ ವೇಳಾಪಟ್ಟಿ ಕೇವಲ ತಾತ್ಕಾಲಿಕವಾಗಿದ್ದು, ಕೋವಿಡ್ ಸೋಂಕಿನ ಸ್ಥಿತಿಗತಿ ಅನುಸಾರ ಬದಲಾಗುವ ಸಾಧ್ಯತೆ ಇದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in education »

ಅಂದು ಶಾಲೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಅಪ್ಪಗೆರೆ ತಿಮ್ಮರಾಜು
ಅಂದು ಶಾಲೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಅಪ್ಪಗೆರೆ ತಿಮ್ಮರಾಜು

ಚನ್ನಪಟ್ಟಣ: ನಾವು ನಮ್ಮ ಕಾಲದಲ್ಲಿ ಶಾಲೆಗೆ ಹೋಗಿ ವಿದ್ಯೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಹಲವಾರು ಸಮಸ್ಯೆಗಳು ನಮ್ಮ ಎದುರಿಗಿದ್ದವು. ಆದರೆ, ಈಗ ಅಂತಹ

ಪ್ರತಿ ವಿದ್ಯಾರ್ಥಿಗಳು ಕೌಶಲ್ಯ ರೂಢಿಸಿಕೊಳ್ಳಬೇಕು: ಶಿಕ್ಷಣಾಧಿಕಾರಿ ಮರಿಗೌಡ
ಪ್ರತಿ ವಿದ್ಯಾರ್ಥಿಗಳು ಕೌಶಲ್ಯ ರೂಢಿಸಿಕೊಳ್ಳಬೇಕು: ಶಿಕ್ಷಣಾಧಿಕಾರಿ ಮರಿಗೌಡ

ಚನ್ನಪಟ್ಟಣ: ಶಾಲಾ ವಿದ್ಯಾರ್ಥಿಗಳು ಕೇವಲ ಪಾಠ ಮತ್ತು ಆಟಕ್ಕೆ ಸೀಮಿತವಾಗದೆ ವಿವಿಧ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಕೌಶಲ್ಯ ಕಲಿತ ಮಕ್ಕಳ ಪ್ರತಿಭೆಯನ್ನ

ಪ್ರತಿ ಸರ್ಕಾರಗಳು ಪದವೀಧರರ ಜೊತೆ ಚೆಲ್ಲಾಟವಾಡುತ್ತಿವೆ, ಉದಯ್ ಸಿಂಗ್
ಪ್ರತಿ ಸರ್ಕಾರಗಳು ಪದವೀಧರರ ಜೊತೆ ಚೆಲ್ಲಾಟವಾಡುತ್ತಿವೆ, ಉದಯ್ ಸಿಂಗ್

ಚನ್ನಪಟ್ಟಣ: ಪ್ರತಿ ವರ್ಷವೂ ಲಕ್ಷಾಂತರ ಯುವಕ ಯುವತಿಯರು ಪದವಿಯೊಂದಿಗೆ ಹೊರಬರುತ್ತಾರೆ. ವಿಶ್ವ ವಿದ್ಯಾಲಯಗಳಿಂದ ಪದವಿಯೊಂದಿಗೆ ಬರುವವರಿಗೆ ಸೂಕ್ತ  ಉದ್ಯೋಗ

ದಿವ್ಯಚೇತನ ಇಂಗ್ಲಿಷ್ ಶಾಲೆಯಲ್ಲಿ ಮೇಳೈಸಿದ ಮಿನಿ ವಿಜ್ಞಾನ ಮೇಳ
ದಿವ್ಯಚೇತನ ಇಂಗ್ಲಿಷ್ ಶಾಲೆಯಲ್ಲಿ ಮೇಳೈಸಿದ ಮಿನಿ ವಿಜ್ಞಾನ ಮೇಳ

ಚನ್ನಪಟ್ಟಣ: ಅಗಸ್ತ್ಯ ಅಂತರಾಷ್ಟ್ರೀಯ ಪ್ರತಿಷ್ಠಾನ ಬ್ರಾಡ್ಕಾಂ ವಿಜ್ಞಾನ ಕೇಂದ್ರ ಚನ್ನಪಟ್ಟಣ ಇವರ ವತಿಯಿಂದ ನಗರದ ದಿವ್ಯ ಚೇತನ ಇಂಗ್ಲಿಷ್ ಪ್ರೌಢಶಾಲೆಯಲ್ಲ

ಪಾಠದ ಜೊತೆಗೆ ಆಟದಲ್ಲಿಯೂ ಮುಂಚೂಣಿಗೆ ಬರಬೇಕು. ವಿ ಬಾಲಸುಬ್ರಹ್ಮಣ್ಯಂ
ಪಾಠದ ಜೊತೆಗೆ ಆಟದಲ್ಲಿಯೂ ಮುಂಚೂಣಿಗೆ ಬರಬೇಕು. ವಿ ಬಾಲಸುಬ್ರಹ್ಮಣ್ಯಂ

ಚನ್ನಪಟ್ಟಣ,: ಪ್ರತಿಯೊಬ್ಬ ವಿದ್ಯಾರ್ಥಿಯು ಶಿಕ್ಷಣದ ಜೊತೆಯಲ್ಲಿ ಕ್ರೀಡಾಮನೋಭಾವನೆ ಬೆಳಸಿಕೊಳ್ಳಬೇಕು. ಮನಸ್ಸು ಉಲ್ಲಸಿತವಾಗಲು ಕ್ರೀಡೆ ಸಹಕಾರಿ ಎಂದು ಬಾಲು

ಉಪನ್ಯಾಸಕರ ಧರಣಿ, ಕಲಿಕೆಗೆ ತೊಂದರೆ, ಎಬಿವಿಪಿ ಯಿಂದ ಪ್ರತಿಭಟನೆ
ಉಪನ್ಯಾಸಕರ ಧರಣಿ, ಕಲಿಕೆಗೆ ತೊಂದರೆ, ಎಬಿವಿಪಿ ಯಿಂದ ಪ್ರತಿಭಟನೆ

ಚನ್ನಪಟ್ಟಣ: ಸರ್ಕಾರಿ ಕಾಲೇಜುಗಳ ಉಪನ್ಯಾಸಕರು ಧರಣಿ ನಿರತರಾಗಿರುವುದರಿಂದ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯಿದೆ. ಇದರಿಂದ ಶೈಕ್ಷಣಿಕ ವರ್ಷದ ಕಲಿಕೆಗೆ ತೊ

ಆರೋಗ್ಯ, ಆಯಸ್ಸು ಹೆಚ್ಚಿಸುವ ವೈದ್ಯರು ಆರೋಗ್ಯ ಕಾಪಾಡಿಕೊಳ್ಳಬೇಕು. ಚಾಮುಂಡೇಶ್ವರಿ ಆಸ್ಪತ್ರೆ ಉದ್ಘಾಟನೆಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ
ಆರೋಗ್ಯ, ಆಯಸ್ಸು ಹೆಚ್ಚಿಸುವ ವೈದ್ಯರು ಆರೋಗ್ಯ ಕಾಪಾಡಿಕೊಳ್ಳಬೇಕು. ಚಾಮುಂಡೇಶ್ವರಿ ಆಸ್ಪತ್ರೆ ಉದ್ಘಾಟನೆಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ

ಚನ್ನಪಟ್ಟಣ:bಆಸ್ಪತ್ರೆಗೆ ಬರುವ ರೋಗಿಗಳ ಅರೋಗ್ಯ ತಪಾಸಿಸಿ, ರೋಗ ವಾಸಿ ಮಾಡಿ, ಅವರ ಆರೋಗ್ಯ ದ ಜೊತೆಗೆ ಆಯಸ್ಸನ್ನು ಹೆಚ್ಚಿಸುವಲ್ಲಿ ನಿಷ್ಣಾತರಾದ ವೈದ್ಯರು

ಪೆಟ್ಟಾ ಸರ್ಕಾರಿ ಶಾಲಾ ಆವರಣದಲ್ಲಿ ನಗರಸಭೆಯ ಕಸದ ರಾಶಿ, ಅಲ್ಲಗಳೆದ ಪೌರಾಯುಕ್ತ
ಪೆಟ್ಟಾ ಸರ್ಕಾರಿ ಶಾಲಾ ಆವರಣದಲ್ಲಿ ನಗರಸಭೆಯ ಕಸದ ರಾಶಿ, ಅಲ್ಲಗಳೆದ ಪೌರಾಯುಕ್ತ

ಚನ್ನಪಟ್ಟಣ: ನಗರದ ಡೂಂ ಲೈಟ್ ವೃತ್ತದಲ್ಲಿರುವ ಏಳು ದಶಕದಷ್ಟು ಹಳೆಯಾದಾದ ಪೆಟ್ಟಾ ಹೆಸರಿನ ಸರ್ಕಾರಿ ಶಾಲಾ ಆವರಣದಲ್ಲಿ ಹತ್ತಾರು ಟನ್ ಕಸದ ರಾಶಿಯನ್ನು ರಾ

ಆರ್ಥಿಕವಾಗಿ ಬೆಳೆದವರೆಲ್ಲರೂ ವಿದ್ಯಾರ್ಜನೆಗೆ ಮುಂದಡಿಯಿಡಬೇಕು, ಸಚಿವ ಮಧುಬಂಗಾರಪ್ಪ
ಆರ್ಥಿಕವಾಗಿ ಬೆಳೆದವರೆಲ್ಲರೂ ವಿದ್ಯಾರ್ಜನೆಗೆ ಮುಂದಡಿಯಿಡಬೇಕು, ಸಚಿವ ಮಧುಬಂಗಾರಪ್ಪ

ಚನ್ನಪಟ್ಟಣ: ಬಡತನದ ಬೇಗೆಯಲ್ಲಿ ಬೆಂದು, ಉನ್ನತ ಶಿಕ್ಷಣ ಪಡೆದು, ಉತ್ತಮ ಸ್ಥಾನಮಾನದ ಜೊತೆಗೆ ಆರ್ಥಿಕವಾಗಿ ಸದೃಢವಾದ ನಂತರ ತನ್ನ ಜನ್ಮದಾತರಿಗೆ, ಹುಟ್ಡಿದೂರ

ಕಾವೇರಿ ಕಿಚ್ಚು, ರಾಮನಗರ ಜಿಲ್ಲೆ ಬಂದ್, ಶಾಲಾ-ಕಾಲೇಜಿಗೆ ರಜೆ, ಸರ್ಕಾರಿ ಕಛೇರಿ ರಜೆಗಾಗಿ ಕಾಯುತ್ತಿರುವ ನೌಕರರು
ಕಾವೇರಿ ಕಿಚ್ಚು, ರಾಮನಗರ ಜಿಲ್ಲೆ ಬಂದ್, ಶಾಲಾ-ಕಾಲೇಜಿಗೆ ರಜೆ, ಸರ್ಕಾರಿ ಕಛೇರಿ ರಜೆಗಾಗಿ ಕಾಯುತ್ತಿರುವ ನೌಕರರು

ರಾಮನಗರ: ನಮ್ಮ ರಾಜ್ಯದ ಕೆಲ ಭಾಗಗಳಿಗೆ ಕುಡಿಯುವ ನೀರಿಗೆ ತತ್ವಾರವಾಗಿದೆ, ಮಂಡ್ಯ, ಮೈಸೂರು ಭಾಗದ ರೈತರಿಗೆ ಬೆಳೆ ಬೆಳೆಯಲು ನೀರಿಲ್ಲಾ, ಇಂತಹ ಸಂಕಷ್ಟದ ಸಮಯ

Top Stories »  


Top ↑