ಇಂದಿನಿಂದ ಆರಂಭಗೊಂಡ ಎಸ್ಎಸ್ಎಲ್ಸಿ ಪರೀಕ್ಷೆ. 17 ಪರೀಕ್ಷೆ ಕೇಂದ್ರಗಳು, 3,104 ವಿದ್ಯಾರ್ಥಿಗಳು
ರಾಜ್ಯದಾದ್ಯಂತ ಇಂದು ನಡೆಯುತ್ತಿರುವ ಎಸ್ಎಸ್ಎಲ್ಸಿ ಪರೀಕ್ಷೆಯು ತಾಲ್ಲೂಕಿನಲ್ಲಿಯೂ ನಡೆಯುತ್ತಿದೆ. ತಾಲ್ಲೂಕಿನಾದ್ಯಂತ ಒಟ್ಟು ಹದಿನೇಳು ಕೇಂದ್ರಗಳಲ್ಲಿ ಒಟ್ಟು 3,104 ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲಿದ್ದು, ಶಿಕ್ಷಣ ಇಲಾಖೆಯು ಆರೋಗ್ಯ ಇಲಾಖೆ ಮತ್ತು ಪೋಲಿಸ್ ಇಲಾಖೆಯ, ಸ್ಕೌಟ್ ಗೈಡ್ ಜೊತೆಗೂಡಿ ಮುಂಜಾಗ್ರತಾ ಕ್ರಮ ಕೈಗೊಂಡಿರುವುದಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜು ತಿಳಿಸಿದರು.
ನಗರದ ಬಾಲಕರ ಪದವಿ ಪೂರ್ವ ಕಾಲೇಜು, ಬಾಲಕಿಯರ ಪದವಿ ಪೂರ್ವ ಕಾಲೇಜು, ಒಕ್ಕಲಿಗರ ಸಾರ್ವಜನಿಕ ವಿದ್ಯಾರ್ಥಿ ನಿಲಯ, ಬಾಲು ಪಬ್ಲಿಕ್ ಶಾಲೆ, ಸೇಂಟ್ ಆನ್ಸ್ ಶಾಲೆ, ಸೇಂಟ್ ಜೋಸೆಫ್ ಶಾಲೆ ಮತ್ತು ಆ್ಯಪಲ್ ಶಾಲೆಯನ್ನು ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರಗಳನ್ನಾಗಿ ಆಯ್ಕೆ ಮಾಡಿಕೊಂಡಿದ್ದು, ಗ್ರಾಮೀಣ ಭಾಗದಲ್ಲಿ ಕೋಡಂಬಳ್ಳಿ, ಅಕ್ಕೂರು, ಹೊಂಗನೂರು, ಅರಳಾಳುಸಂದ್ರ, ಇಗ್ಗಲೂರು, ಚಕ್ಕೆರೆ, ಮತ್ತೀಕೆರೆ-ಶೆಟ್ಟಿಹಳ್ಳಿ, ಹೊನ್ನನಾಯಕನಹಳ್ಳಿ, ಬೇವೂರು ಮತ್ತು ನಾಗವಾರ ಗ್ರಾಮಗಳ ಮತ್ತು ಅನುದಾನಿತ ಶಾಲೆಗಳನ್ನು ಪರೀಕ್ಷಾ ಕೇಂದ್ರಗಳನ್ನಾಗಿ ಆಯ್ಕೆ ಮಾಡಿಕೊಂಡಿರುವುದಾಗಿ ಎಸ್ಎಸ್ಎಲ್ಸಿ ನೋಡಲ್ ಅಧಿಕಾರಿ ಯೋಗೇಶ್ ಮಾಹಿತಿ ನೀಡಿದ್ದಾರೆ.
ಒಟ್ಟು ಹದಿನೇಳು ಕೇಂದ್ರಗಳಲ್ಲಿ 1587 ಗಂಡು ಮಕ್ಕಳು ಮತ್ತು 1517 ಹೆಣ್ಣು ಮಕ್ಕಳು ಸೇರಿದಂತೆ ಒಟ್ಟು 3,104 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಪ್ರತಿ ಡೆಸ್ಕ್ ಗೆ ಒಬ್ಬ ವಿದ್ಯಾರ್ಥಿಗೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ. ಒಳಬರುವ ಮುಂಚೆಯೇ ಪ್ರತಿ ವಿದ್ಯಾರ್ಥಿಗಳಿಗೆ ಮಾಸ್ಕ್, ನೀಡಲಾಗುತ್ತಿದ್ದು, ಸ್ಯಾನಿಟೈಸರ್ ಮಾಡಲಾಗುತ್ತಿದೆ. ಕೋವಿಡ್ ಟೆಂಪ್ರೇಚರ್ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಯಾವುದೇ ವಿದ್ಯಾರ್ಥಿಗಳಿಗೆ ಕೋವಿಡ್ ಶಂಕೆ ಕಂಡುಬಂದರೆ, ಅವರನ್ನು ನೇರವಾಗಿ ಆ್ಯಂಬುಲೆನ್ಸ್ ಮೂಲಕ ಹೊನ್ನನಾಯಕನಹಳ್ಳಿ ಗ್ರಾಮದಲ್ಲಿರುವ ಕೋವಿಡ್ ಸೆಂಟರ್ ಗೆ ಕರೆದೊಯ್ದು, ಪರೀಕ್ಷೆ ಬರೆಸಲಾಗುವುದು ಎಂದು ತಿಳಿಸಿದ್ದಾರೆ.
ತಾಲೂಕಿನಾದ್ಯಂತ ಇರುವ ಹದಿನೇಳು ಪರೀಕ್ಷಾ ಕೇಂದ್ರಗಳಲ್ಲಿ 288 ಕೊಠಡಿಗಳನ್ನು ಸಜ್ಜುಗೊಳಿಸಿದ್ದು, ಒಟ್ಟಾರೆ 544 ಮಂದಿ ವಿವಿಧ ರೀತಿಯ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಇಂದು ಬೆಳಿಗ್ಗೆ 10:30 ರಿಂದ ಮಧ್ಯಾಹ 01:30 ರವರೆಗೆ ಗಣಿತ, ವಿಜ್ಞಾನ ಮತ್ತು ಸಮಾಜ ವಿಷಯಗಳ ಪರೀಕ್ಷೆ ನಡೆಯಲಿದೆ. ನಾಳೆ ರಜೆ ಇದ್ದು ನಾಡಿದ್ದು ಅಂದರೆ ಗುರುವಾರ ಕನ್ನಡ ಭಾಷಾವಾರು ಪ್ರಥಮ, ದ್ವಿತೀಯ ಮತ್ತು ತೃತೀಯ ಪರೀಕ್ಷೆಗಳು ನಡೆಯುತ್ತವೆ.
ಇಂದು ಮೊದಲನೇ ದಿನವೇ 56 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದು, ಇದೇ ಸಾಲಿನ 50 ವಿದ್ಯಾರ್ಥಿಗಳು, 3 ಮಂದಿ ಕಳೆದ ಸಾಲಿನ ಅನುತ್ತೀರ್ಣವಾಗಿದ್ದ ವಿದ್ಯಾರ್ಥಿಗಳು ಮತ್ತು 3 ಮಂದಿ ಖಾಸಗಿ ವಿದ್ಯಾರ್ಥಿಗಳು ಗೈರುಹಾಜರಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದೆ, ಗೊಂದಲವಿಲ್ಲದೆ ಪರೀಕ್ಷೆಯು ಯಶಸ್ವಿಯಾಗಿ ನಡೆಯುತು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in education »
ಅಂದು ಶಾಲೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಅಪ್ಪಗೆರೆ ತಿಮ್ಮರಾಜು
ಚನ್ನಪಟ್ಟಣ: ನಾವು ನಮ್ಮ ಕಾಲದಲ್ಲಿ ಶಾಲೆಗೆ ಹೋಗಿ ವಿದ್ಯೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಹಲವಾರು ಸಮಸ್ಯೆಗಳು ನಮ್ಮ ಎದುರಿಗಿದ್ದವು. ಆದರೆ, ಈಗ ಅಂತಹ
ಪ್ರತಿ ವಿದ್ಯಾರ್ಥಿಗಳು ಕೌಶಲ್ಯ ರೂಢಿಸಿಕೊಳ್ಳಬೇಕು: ಶಿಕ್ಷಣಾಧಿಕಾರಿ ಮರಿಗೌಡ
ಚನ್ನಪಟ್ಟಣ: ಶಾಲಾ ವಿದ್ಯಾರ್ಥಿಗಳು ಕೇವಲ ಪಾಠ ಮತ್ತು ಆಟಕ್ಕೆ ಸೀಮಿತವಾಗದೆ ವಿವಿಧ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಕೌಶಲ್ಯ ಕಲಿತ ಮಕ್ಕಳ ಪ್ರತಿಭೆಯನ್ನ
ಪ್ರತಿ ಸರ್ಕಾರಗಳು ಪದವೀಧರರ ಜೊತೆ ಚೆಲ್ಲಾಟವಾಡುತ್ತಿವೆ, ಉದಯ್ ಸಿಂಗ್
ಚನ್ನಪಟ್ಟಣ: ಪ್ರತಿ ವರ್ಷವೂ ಲಕ್ಷಾಂತರ ಯುವಕ ಯುವತಿಯರು ಪದವಿಯೊಂದಿಗೆ ಹೊರಬರುತ್ತಾರೆ. ವಿಶ್ವ ವಿದ್ಯಾಲಯಗಳಿಂದ ಪದವಿಯೊಂದಿಗೆ ಬರುವವರಿಗೆ ಸೂಕ್ತ ಉದ್ಯೋಗ
ದಿವ್ಯಚೇತನ ಇಂಗ್ಲಿಷ್ ಶಾಲೆಯಲ್ಲಿ ಮೇಳೈಸಿದ ಮಿನಿ ವಿಜ್ಞಾನ ಮೇಳ
ಚನ್ನಪಟ್ಟಣ: ಅಗಸ್ತ್ಯ ಅಂತರಾಷ್ಟ್ರೀಯ ಪ್ರತಿಷ್ಠಾನ ಬ್ರಾಡ್ಕಾಂ ವಿಜ್ಞಾನ ಕೇಂದ್ರ ಚನ್ನಪಟ್ಟಣ ಇವರ ವತಿಯಿಂದ ನಗರದ ದಿವ್ಯ ಚೇತನ ಇಂಗ್ಲಿಷ್ ಪ್ರೌಢಶಾಲೆಯಲ್ಲ
ಪಾಠದ ಜೊತೆಗೆ ಆಟದಲ್ಲಿಯೂ ಮುಂಚೂಣಿಗೆ ಬರಬೇಕು. ವಿ ಬಾಲಸುಬ್ರಹ್ಮಣ್ಯಂ
ಚನ್ನಪಟ್ಟಣ,: ಪ್ರತಿಯೊಬ್ಬ ವಿದ್ಯಾರ್ಥಿಯು ಶಿಕ್ಷಣದ ಜೊತೆಯಲ್ಲಿ ಕ್ರೀಡಾಮನೋಭಾವನೆ ಬೆಳಸಿಕೊಳ್ಳಬೇಕು. ಮನಸ್ಸು ಉಲ್ಲಸಿತವಾಗಲು ಕ್ರೀಡೆ ಸಹಕಾರಿ ಎಂದು ಬಾಲು
ಉಪನ್ಯಾಸಕರ ಧರಣಿ, ಕಲಿಕೆಗೆ ತೊಂದರೆ, ಎಬಿವಿಪಿ ಯಿಂದ ಪ್ರತಿಭಟನೆ
ಚನ್ನಪಟ್ಟಣ: ಸರ್ಕಾರಿ ಕಾಲೇಜುಗಳ ಉಪನ್ಯಾಸಕರು ಧರಣಿ ನಿರತರಾಗಿರುವುದರಿಂದ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯಿದೆ. ಇದರಿಂದ ಶೈಕ್ಷಣಿಕ ವರ್ಷದ ಕಲಿಕೆಗೆ ತೊ
ಆರೋಗ್ಯ, ಆಯಸ್ಸು ಹೆಚ್ಚಿಸುವ ವೈದ್ಯರು ಆರೋಗ್ಯ ಕಾಪಾಡಿಕೊಳ್ಳಬೇಕು. ಚಾಮುಂಡೇಶ್ವರಿ ಆಸ್ಪತ್ರೆ ಉದ್ಘಾಟನೆಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ
ಚನ್ನಪಟ್ಟಣ:bಆಸ್ಪತ್ರೆಗೆ ಬರುವ ರೋಗಿಗಳ ಅರೋಗ್ಯ ತಪಾಸಿಸಿ, ರೋಗ ವಾಸಿ ಮಾಡಿ, ಅವರ ಆರೋಗ್ಯ ದ ಜೊತೆಗೆ ಆಯಸ್ಸನ್ನು ಹೆಚ್ಚಿಸುವಲ್ಲಿ ನಿಷ್ಣಾತರಾದ ವೈದ್ಯರು
ಪೆಟ್ಟಾ ಸರ್ಕಾರಿ ಶಾಲಾ ಆವರಣದಲ್ಲಿ ನಗರಸಭೆಯ ಕಸದ ರಾಶಿ, ಅಲ್ಲಗಳೆದ ಪೌರಾಯುಕ್ತ
ಆರ್ಥಿಕವಾಗಿ ಬೆಳೆದವರೆಲ್ಲರೂ ವಿದ್ಯಾರ್ಜನೆಗೆ ಮುಂದಡಿಯಿಡಬೇಕು, ಸಚಿವ ಮಧುಬಂಗಾರಪ್ಪ
ಚನ್ನಪಟ್ಟಣ: ಬಡತನದ ಬೇಗೆಯಲ್ಲಿ ಬೆಂದು, ಉನ್ನತ ಶಿಕ್ಷಣ ಪಡೆದು, ಉತ್ತಮ ಸ್ಥಾನಮಾನದ ಜೊತೆಗೆ ಆರ್ಥಿಕವಾಗಿ ಸದೃಢವಾದ ನಂತರ ತನ್ನ ಜನ್ಮದಾತರಿಗೆ, ಹುಟ್ಡಿದೂರ
ಕಾವೇರಿ ಕಿಚ್ಚು, ರಾಮನಗರ ಜಿಲ್ಲೆ ಬಂದ್, ಶಾಲಾ-ಕಾಲೇಜಿಗೆ ರಜೆ, ಸರ್ಕಾರಿ ಕಛೇರಿ ರಜೆಗಾಗಿ ಕಾಯುತ್ತಿರುವ ನೌಕರರು
ರಾಮನಗರ: ನಮ್ಮ ರಾಜ್ಯದ ಕೆಲ ಭಾಗಗಳಿಗೆ ಕುಡಿಯುವ ನೀರಿಗೆ ತತ್ವಾರವಾಗಿದೆ, ಮಂಡ್ಯ, ಮೈಸೂರು ಭಾಗದ ರೈತರಿಗೆ ಬೆಳೆ ಬೆಳೆಯಲು ನೀರಿಲ್ಲಾ, ಇಂತಹ ಸಂಕಷ್ಟದ ಸಮಯ
ಪ್ರತಿಕ್ರಿಯೆಗಳು