Tel: 7676775624 | Mail: info@yellowandred.in

Language: EN KAN

    Follow us :


ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಕ್ರಮ: ಹೆಚ್ಚಿನ ವಿಚಾರಣೆಗಾಗಿ ಮೂವರು ಪೊಲೀಸರ ವಶಕ್ಕೆ: ಏಳು ಆರೋಪಿಗಳು ನ್ಯಾಯಾಂಗ ಬಂಧನಕ್ಕೆ

Posted date: 26 May, 2022

Powered by:     Yellow and Red

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಕ್ರಮ: ಹೆಚ್ಚಿನ ವಿಚಾರಣೆಗಾಗಿ ಮೂವರು ಪೊಲೀಸರ ವಶಕ್ಕೆ: ಏಳು ಆರೋಪಿಗಳು ನ್ಯಾಯಾಂಗ ಬಂಧನಕ್ಕೆ

ರಾಮನಗರ: 2022-23 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಹತ್ತು ಆರೋಪಿಗಳನ್ನು ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಇವರಲ್ಲಿ ಮೂವರನ್ನು‌ ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ.

ಮಾಗಡಿಯ ಕೆಂಪೇಗೌಡ ಶಾಲೆಯ ಪ್ರಾಚಾರ್ಯ ಶ್ರೀನಿವಾಸ, ಗುಮಾಸ್ತ ರಂಗೇಗೌಡ ಹಾಗೂ ರಂಗನಾಥ ಶಾಲೆಯ ಹಿಂದಿ ಶಿಕ್ಷಕ ಕೃಷ್ಣಮೂರ್ತಿ ಅವರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ. ಉಳಿದ ಏಳು ಮಂದಿಯನ್ನು ನ್ಯಾಯಾಂಗ ವಶಕ್ಕೆ ನೀಡಲಾಗಿದೆ.


*ಪ್ರಕರಣದ ವಿವರ:*

ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಪೊಲೀಸರು ಬುಧವಾರ ರಾಮನಗರ ಜಿಲ್ಲೆ ಮಾಗಡಿಯ ವಿವಿಧ ಶಾಲೆಗಳ ಶಿಕ್ಷಕರು, ಸಿಬ್ಬಂದಿ ಮತ್ತು ಪತ್ರಕರ್ತ ಸೇರಿದಂತೆ ಹತ್ತು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.


ಕಳೆದ ಮಾರ್ಚ್‌–ಏಪ್ರಿಲ್‌ ತಿಂಗಳಿನಲ್ಲಿ ನಡೆದ ಹತ್ತನೇ ತರಗತಿಯ ಪರೀಕ್ಷೆಯ ಆರೂ ವಿಷಯಗಳ ಪ್ರಶ್ನೆಪತ್ರಿಕೆಗಳು ಸೋರಿಕೆ ಆಗಿರುವ ಸಂಗತಿ ಪೊಲೀಸರ ಪ್ರಾಥಮಿಕ ತನಿಖೆಯಿಂದ ಬಹಿರಂಗಗೊಂಡಿದೆ.


ಪ್ರಕರಣದ ಪ್ರಮುಖ ಆರೋಪಿ ಎನ್ನಲಾಗಿರುವ ಹಾಗೂ ಮಾಗಡಿಯ ಕೆಂಪೇಗೌಡ ಪ್ರೌಢಶಾಲೆಯ ಗುಮಾಸ್ತ ರಂಗೇಗೌಡ ಅವರನ್ನು ಪೊಲೀಸರು ಮಂಗಳವಾರ ಸಂಜೆ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದರು. ಆತ ನೀಡಿದ ಮಾಹಿತಿ ಆಧರಿಸಿ ಉಳಿದ ಹತ್ತು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಆರೋಪಿಗಳಾದ ಕೆಂಪೇಗೌಡ ಶಾಲೆಯ ಪ್ರಾಚಾರ್ಯ ಶ್ರೀನಿವಾಸ, ಹಿಂದಿ ಶಿಕ್ಷಕ ಕೃಷ್ಣಮೂರ್ತಿ, ವಿವಿಧ ಶಾಲೆಗಳ ಶಿಕ್ಷಕರಾದ ಸುಬ್ರಹ್ಮಣ್ಯ (ವಿಜ್ಞಾನ), ಶ್ರೀನಿವಾಸ (ಸಮಾಜ ವಿಜ್ಞಾನ) ಅರ್ಜುನ್ (ಕನ್ನಡ), ಅಲೀಂ ಉಲ್ಲಾ (ಹಿಂದಿ), ನಾಗರಾಜು (ಇಂಗ್ಲಿಷ್‌), ಲೋಕೇಶ್ ಮತ್ತು ಸ್ಥಳೀಯ ಪತ್ರಕರ್ತ ವಿಜಯ್‌ಕುಮಾರ್ ಎಂಬುವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.


ಈಗಾಗಲೇ ಪೊಲೀಸರು ಆರೋಪಿ ಗಳೆಲ್ಲರ ಮೊಬೈಲ್‌ ಗಳನ್ನು ವಶಕ್ಕೆ ಪಡೆದಿದ್ದು, ಅದರಲ್ಲಿಯ ಮಾಹಿತಿ ಜಾಲಾಡುತ್ತಿದ್ದಾರೆ. ಪರೀಕ್ಷಾ ಕೇಂದ್ರದ ಸಿಸಿಟಿವಿ ದೃಶ್ಯಾವಳಿಗಳನ್ನೂ ವಶಕ್ಕೆ ನೀಡುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಆರೋಪಿಗಳ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.


*ವಾಟ್ಸ್‌ಆ್ಯಪ್‌ನಲ್ಲಿ ಪ್ರಶ್ನೆಪತ್ರಿಕೆ:*

ಮಾಗಡಿಯ ರಂಗನಾಥಸ್ವಾಮಿ ಪ್ರೌಢ ಶಾಲೆಯಲ್ಲಿ ಪರೀಕ್ಷಾ ಕೇಂದ್ರ ಇತ್ತು. ಅಲ್ಲಿನ ಹಿಂದಿ ಶಿಕ್ಷಕ ಕೃಷ್ಣಮೂರ್ತಿ ಪರೀಕ್ಷಾ ಕೊಠಡಿ ಮೇಲ್ವಿಚಾರಕರಾಗಿ ಕೆಲಸ ಮಾಡುತ್ತಿದ್ದರು. ಅವರು ಪ್ರತಿ ಪರೀಕ್ಷೆಯ ಆರಂಭದ 15 ನಿಮಿಷಕ್ಕೆ ಮುನ್ನವೇ ಮೊಬೈಲ್‌ನಲ್ಲಿ ಪ್ರಶ್ನೆಪತ್ರಿಕೆಯ ಫೋಟೊ ತೆಗೆದು ಅದನ್ನು ಕೆಂಪೇಗೌಡ ಪ್ರೌಢಶಾಲೆಯ ಗುಮಾಸ್ತ ರಂಗೇಗೌಡ ಅವರಿಗೆ ರವಾನಿಸುತ್ತಿದ್ದರು. ರಂಗೇಗೌಡ ಆಯಾ ಪರೀಕ್ಷೆಯ ವಿಷಯ ತಜ್ಞರನ್ನು ಕೂರಿಸಿಕೊಂಡು ಅವರಿಂದ ಅದಕ್ಕೆ ಉತ್ತರ ಬರೆಯಿಸಿ ಅದನ್ನು ಮತ್ತೆ ಪರೀಕ್ಷಾ ಕೇಂದ್ರಕ್ಕೆ ರವಾನಿಸುತ್ತಿದ್ದರು. ಆ ಉತ್ತರವನ್ನು ಇಡೀ ಪರೀಕ್ಷಾ ಕೇಂದ್ರದ ಮಕ್ಕಳಿಗೆ ಹೇಳಿಕೊಡುತ್ತಿದ್ದರು ಎಂದು ರಾಮನಗರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ. ಸಂತೋಷ್ ಬಾಬು ಮಾಹಿತಿ ನೀಡಿದರು.


ಮಾಗಡಿಯ ಇತರ ಪರೀಕ್ಷಾ ಕೇಂದ್ರಗಳಲ್ಲಿಯೂ ಇದೇ ರೀತಿ ಅಕ್ರಮ ನಡೆದಿರುವ ಸಾಧ್ಯತೆಗಳ ಬಗ್ಗೆಯೂ ತನಿಖೆ ಕೈಗೊಂಡಿದ್ದೇವೆ. ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಫೇಲಾಗಬಾರದು ಎಂಬ ಕಾರಣಕ್ಕೆ ಹೀಗೆ ಮಾಡಿದೆವು ಎಂದು ಆರೋಪಿಗಳು ಹೇಳಿದ್ದಾರೆ. ಹಣ ಪಡೆದು ಉತ್ತರ ಹೇಳಿಕೊಡಲಾಗಿದೆಯೇ ಎಂಬ ಕುರಿತು ತನಿಖೆ ನಡೆಸುತ್ತಿದ್ದೇವೆ ಎಂದರು.

 

*ಮಾಗಡಿ: ಅಂಕಗಳಿಕೆ ದಿಢೀರ್ ಏರಿಕೆ*

ಪ್ರಕರಣದ ಪ್ರಮುಖ ಆರೋಪಿ ರಂಗೇಗೌಡ ಎಂಬುವರ ಪುತ್ರಿ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿದ್ದು, ಉತ್ತಮ ಅಂಕ ಪಡೆದಿದ್ದಾಳೆ. ಪರೀಕ್ಷೆ ವೇಳೆ ಮಗಳಿಗೂ ಸಹಾಯ ಮಾಡಿದ್ದಾಗಿ ಆರೋಪಿ ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾರೆ.


ಪರೀಕ್ಷೆ ಅಕ್ರಮ ನಡೆದಿರುವ ಕೆಂಪೇಗೌಡ ಶಾಲೆ ಶೇ 100ರಷ್ಟು ಫಲಿತಾಂಶ ಪಡೆದಿದೆ. ಒಟ್ಟು 65 ವಿದ್ಯಾರ್ಥಿಗಳ ಪೈಕಿ 54 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ ಹಾಗೂ ಉಳಿದವರು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಇಬ್ಬರು ವಿದ್ಯಾರ್ಥಿಗಳು 625ಕ್ಕೆ 624 ಅಂಕ ಪಡೆದಿದ್ದಾರೆ.


ಮಾಗಡಿಯ ಇನ್ನೂ ನಾಲ್ಕಾರು ಶಾಲೆಗಳು ಇದೇ ಮಾದರಿಯ ಫಲಿತಾಂಶ ದಾಖಲಿಸಿದ್ದು, ಅಂಕ ಗಳಿಕೆ ಪ್ರಮಾಣದಲ್ಲಿಯೂ ಸಾಕಷ್ಟು ಏರಿಕೆ ಕಂಡುಬಂದಿದೆ. ಈ ಎಲ್ಲದರ ಬಗ್ಗೆ ವಿವರಣೆ ನೀಡುವಂತೆ ಪೊಲೀಸರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.


*ಬಿಇಓ ತಲೆದಂಡ ಸಾಧ್ಯತೆ:*

ಅಕ್ರಮದ ಮಾಹಿತಿ ಗೊತ್ತಿದ್ದರೂ ಕ್ರಮ ಕೈಗೊಳ್ಳದ ಆರೋಪದ ಮೇಲೆ ಮಾಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಯತಿಕುಮಾರ್ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ವಾಟ್ಸ್‌ಆ್ಯಪ್‌ನಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾದ ಸಂಗತಿ ಯತಿಕುಮಾರ್‌ ಅವರಿಗೆ ಮೊದಲೇ ತಿಳಿದಿತ್ತು. ಆರೋಪಿಗಳ ಬಗ್ಗೆ ಗೊತ್ತಿದ್ದರೂ ಅವರು ಮೇಲಧಿಕಾರಿಗಳಿಗೆ ಮಾಹಿತಿ ನೀಡಿ ಕ್ರಮಕ್ಕೆ ಮುಂದಾಗಲಿಲ್ಲ ಎಂದು ದೂರಲಾಗಿದೆ.

 

*ಬ್ಲಾಕ್‌ಮೇಲ್‌ ಮಾಡಿ ಸಿಕ್ಕಿಬಿದ್ದರು!*

ಏಪ್ರಿಲ್‌ 11ರಂದು ವಿಜ್ಞಾನ ಪರೀಕ್ಷೆ ನಡೆದಿದ್ದು, ಅಂದು 10.30ಕ್ಕೆ ಆರೋಪಿ ರಂಗೇಗೌಡ ಪ್ರಶ್ನೆಪತ್ರಿಕೆಯನ್ನು ವಾಟ್ಸ್‌ಆ್ಯಪ್‌ನಲ್ಲಿ ಕೃಷ್ಣಮೂರ್ತಿಗೆ ಕಳುಹಿಸುವ ಬದಲಾಗಿ ಶಿಕ್ಷಕರ ಗುಂಪೊಂದಕ್ಕೆ ಹಾಕಿದ್ದರು. ನಂತರ ಎಚ್ಚೆತ್ತು ಅದನ್ನು ಡಿಲಿಟ್‌ ಮಾಡಿದ್ದರು. ಅಷ್ಟರಲ್ಲೇ ಶಿಕ್ಷಕ ಲೋಕೇಶ್‌ ಗುಂಪಿನಿಂದ ಪ್ರಶ್ನೆಪತ್ರಿಕೆಯನ್ನು ತಮ್ಮ ಮೊಬೈಲ್‌ಗೆ ಡೌನ್‌ಲೋಡ್ ಮಾಡಿಕೊಂಡಿದ್ದರು.


ಇದನ್ನೇ ಇಟ್ಟುಕೊಂಡು ಶಿಕ್ಷಕ ಲೋಕೇಶ್‌, ರಂಗೇಗೌಡ ಅವರನ್ನು ಬ್ಲಾಕ್‌ಮೇಲ್‌ ಮಾಡಿ ₹10 ಸಾವಿರ ಪಡೆದಿದ್ದರು. ಸ್ಥಳೀಯ ಪತ್ರಿಕೆಯೊಂದರ ಪತ್ರಕರ್ತ ವಿಜಯ್‌ಕುಮಾರ್ ಸಹ ರಂಗೇಗೌಡ ಅವರನ್ನು ಬೆದರಿಸಿ ಹಣ ವಸೂಲಿ ಮಾಡಿದ್ದರು. ಈ ಇಬ್ಬರು ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿದ್ದು, ಇದಕ್ಕೆ ರಂಗೇಗೌಡ ಒಪ್ಪಿರಲಿಲ್ಲ. ಹೀಗಾಗಿ ಲೋಕೇಶ್‌ ಬೇರೊಂದು ಹೆಸರಿನಲ್ಲಿ ಮಾಗಡಿ ಪೊಲೀಸರಿಗೆ ಪತ್ರ ಬರೆದು ವಿಷಯ ಬಹಿರಂಗಪಡಿಸಿದರು ಎಂದು ತಿಳಿದುಬಂದಿದೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in education »

ಅಂದು ಶಾಲೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಅಪ್ಪಗೆರೆ ತಿಮ್ಮರಾಜು
ಅಂದು ಶಾಲೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಅಪ್ಪಗೆರೆ ತಿಮ್ಮರಾಜು

ಚನ್ನಪಟ್ಟಣ: ನಾವು ನಮ್ಮ ಕಾಲದಲ್ಲಿ ಶಾಲೆಗೆ ಹೋಗಿ ವಿದ್ಯೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಹಲವಾರು ಸಮಸ್ಯೆಗಳು ನಮ್ಮ ಎದುರಿಗಿದ್ದವು. ಆದರೆ, ಈಗ ಅಂತಹ

ಪ್ರತಿ ವಿದ್ಯಾರ್ಥಿಗಳು ಕೌಶಲ್ಯ ರೂಢಿಸಿಕೊಳ್ಳಬೇಕು: ಶಿಕ್ಷಣಾಧಿಕಾರಿ ಮರಿಗೌಡ
ಪ್ರತಿ ವಿದ್ಯಾರ್ಥಿಗಳು ಕೌಶಲ್ಯ ರೂಢಿಸಿಕೊಳ್ಳಬೇಕು: ಶಿಕ್ಷಣಾಧಿಕಾರಿ ಮರಿಗೌಡ

ಚನ್ನಪಟ್ಟಣ: ಶಾಲಾ ವಿದ್ಯಾರ್ಥಿಗಳು ಕೇವಲ ಪಾಠ ಮತ್ತು ಆಟಕ್ಕೆ ಸೀಮಿತವಾಗದೆ ವಿವಿಧ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಕೌಶಲ್ಯ ಕಲಿತ ಮಕ್ಕಳ ಪ್ರತಿಭೆಯನ್ನ

ಪ್ರತಿ ಸರ್ಕಾರಗಳು ಪದವೀಧರರ ಜೊತೆ ಚೆಲ್ಲಾಟವಾಡುತ್ತಿವೆ, ಉದಯ್ ಸಿಂಗ್
ಪ್ರತಿ ಸರ್ಕಾರಗಳು ಪದವೀಧರರ ಜೊತೆ ಚೆಲ್ಲಾಟವಾಡುತ್ತಿವೆ, ಉದಯ್ ಸಿಂಗ್

ಚನ್ನಪಟ್ಟಣ: ಪ್ರತಿ ವರ್ಷವೂ ಲಕ್ಷಾಂತರ ಯುವಕ ಯುವತಿಯರು ಪದವಿಯೊಂದಿಗೆ ಹೊರಬರುತ್ತಾರೆ. ವಿಶ್ವ ವಿದ್ಯಾಲಯಗಳಿಂದ ಪದವಿಯೊಂದಿಗೆ ಬರುವವರಿಗೆ ಸೂಕ್ತ  ಉದ್ಯೋಗ

ದಿವ್ಯಚೇತನ ಇಂಗ್ಲಿಷ್ ಶಾಲೆಯಲ್ಲಿ ಮೇಳೈಸಿದ ಮಿನಿ ವಿಜ್ಞಾನ ಮೇಳ
ದಿವ್ಯಚೇತನ ಇಂಗ್ಲಿಷ್ ಶಾಲೆಯಲ್ಲಿ ಮೇಳೈಸಿದ ಮಿನಿ ವಿಜ್ಞಾನ ಮೇಳ

ಚನ್ನಪಟ್ಟಣ: ಅಗಸ್ತ್ಯ ಅಂತರಾಷ್ಟ್ರೀಯ ಪ್ರತಿಷ್ಠಾನ ಬ್ರಾಡ್ಕಾಂ ವಿಜ್ಞಾನ ಕೇಂದ್ರ ಚನ್ನಪಟ್ಟಣ ಇವರ ವತಿಯಿಂದ ನಗರದ ದಿವ್ಯ ಚೇತನ ಇಂಗ್ಲಿಷ್ ಪ್ರೌಢಶಾಲೆಯಲ್ಲ

ಪಾಠದ ಜೊತೆಗೆ ಆಟದಲ್ಲಿಯೂ ಮುಂಚೂಣಿಗೆ ಬರಬೇಕು. ವಿ ಬಾಲಸುಬ್ರಹ್ಮಣ್ಯಂ
ಪಾಠದ ಜೊತೆಗೆ ಆಟದಲ್ಲಿಯೂ ಮುಂಚೂಣಿಗೆ ಬರಬೇಕು. ವಿ ಬಾಲಸುಬ್ರಹ್ಮಣ್ಯಂ

ಚನ್ನಪಟ್ಟಣ,: ಪ್ರತಿಯೊಬ್ಬ ವಿದ್ಯಾರ್ಥಿಯು ಶಿಕ್ಷಣದ ಜೊತೆಯಲ್ಲಿ ಕ್ರೀಡಾಮನೋಭಾವನೆ ಬೆಳಸಿಕೊಳ್ಳಬೇಕು. ಮನಸ್ಸು ಉಲ್ಲಸಿತವಾಗಲು ಕ್ರೀಡೆ ಸಹಕಾರಿ ಎಂದು ಬಾಲು

ಉಪನ್ಯಾಸಕರ ಧರಣಿ, ಕಲಿಕೆಗೆ ತೊಂದರೆ, ಎಬಿವಿಪಿ ಯಿಂದ ಪ್ರತಿಭಟನೆ
ಉಪನ್ಯಾಸಕರ ಧರಣಿ, ಕಲಿಕೆಗೆ ತೊಂದರೆ, ಎಬಿವಿಪಿ ಯಿಂದ ಪ್ರತಿಭಟನೆ

ಚನ್ನಪಟ್ಟಣ: ಸರ್ಕಾರಿ ಕಾಲೇಜುಗಳ ಉಪನ್ಯಾಸಕರು ಧರಣಿ ನಿರತರಾಗಿರುವುದರಿಂದ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯಿದೆ. ಇದರಿಂದ ಶೈಕ್ಷಣಿಕ ವರ್ಷದ ಕಲಿಕೆಗೆ ತೊ

ಆರೋಗ್ಯ, ಆಯಸ್ಸು ಹೆಚ್ಚಿಸುವ ವೈದ್ಯರು ಆರೋಗ್ಯ ಕಾಪಾಡಿಕೊಳ್ಳಬೇಕು. ಚಾಮುಂಡೇಶ್ವರಿ ಆಸ್ಪತ್ರೆ ಉದ್ಘಾಟನೆಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ
ಆರೋಗ್ಯ, ಆಯಸ್ಸು ಹೆಚ್ಚಿಸುವ ವೈದ್ಯರು ಆರೋಗ್ಯ ಕಾಪಾಡಿಕೊಳ್ಳಬೇಕು. ಚಾಮುಂಡೇಶ್ವರಿ ಆಸ್ಪತ್ರೆ ಉದ್ಘಾಟನೆಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ

ಚನ್ನಪಟ್ಟಣ:bಆಸ್ಪತ್ರೆಗೆ ಬರುವ ರೋಗಿಗಳ ಅರೋಗ್ಯ ತಪಾಸಿಸಿ, ರೋಗ ವಾಸಿ ಮಾಡಿ, ಅವರ ಆರೋಗ್ಯ ದ ಜೊತೆಗೆ ಆಯಸ್ಸನ್ನು ಹೆಚ್ಚಿಸುವಲ್ಲಿ ನಿಷ್ಣಾತರಾದ ವೈದ್ಯರು

ಪೆಟ್ಟಾ ಸರ್ಕಾರಿ ಶಾಲಾ ಆವರಣದಲ್ಲಿ ನಗರಸಭೆಯ ಕಸದ ರಾಶಿ, ಅಲ್ಲಗಳೆದ ಪೌರಾಯುಕ್ತ
ಪೆಟ್ಟಾ ಸರ್ಕಾರಿ ಶಾಲಾ ಆವರಣದಲ್ಲಿ ನಗರಸಭೆಯ ಕಸದ ರಾಶಿ, ಅಲ್ಲಗಳೆದ ಪೌರಾಯುಕ್ತ

ಚನ್ನಪಟ್ಟಣ: ನಗರದ ಡೂಂ ಲೈಟ್ ವೃತ್ತದಲ್ಲಿರುವ ಏಳು ದಶಕದಷ್ಟು ಹಳೆಯಾದಾದ ಪೆಟ್ಟಾ ಹೆಸರಿನ ಸರ್ಕಾರಿ ಶಾಲಾ ಆವರಣದಲ್ಲಿ ಹತ್ತಾರು ಟನ್ ಕಸದ ರಾಶಿಯನ್ನು ರಾ

ಆರ್ಥಿಕವಾಗಿ ಬೆಳೆದವರೆಲ್ಲರೂ ವಿದ್ಯಾರ್ಜನೆಗೆ ಮುಂದಡಿಯಿಡಬೇಕು, ಸಚಿವ ಮಧುಬಂಗಾರಪ್ಪ
ಆರ್ಥಿಕವಾಗಿ ಬೆಳೆದವರೆಲ್ಲರೂ ವಿದ್ಯಾರ್ಜನೆಗೆ ಮುಂದಡಿಯಿಡಬೇಕು, ಸಚಿವ ಮಧುಬಂಗಾರಪ್ಪ

ಚನ್ನಪಟ್ಟಣ: ಬಡತನದ ಬೇಗೆಯಲ್ಲಿ ಬೆಂದು, ಉನ್ನತ ಶಿಕ್ಷಣ ಪಡೆದು, ಉತ್ತಮ ಸ್ಥಾನಮಾನದ ಜೊತೆಗೆ ಆರ್ಥಿಕವಾಗಿ ಸದೃಢವಾದ ನಂತರ ತನ್ನ ಜನ್ಮದಾತರಿಗೆ, ಹುಟ್ಡಿದೂರ

ಕಾವೇರಿ ಕಿಚ್ಚು, ರಾಮನಗರ ಜಿಲ್ಲೆ ಬಂದ್, ಶಾಲಾ-ಕಾಲೇಜಿಗೆ ರಜೆ, ಸರ್ಕಾರಿ ಕಛೇರಿ ರಜೆಗಾಗಿ ಕಾಯುತ್ತಿರುವ ನೌಕರರು
ಕಾವೇರಿ ಕಿಚ್ಚು, ರಾಮನಗರ ಜಿಲ್ಲೆ ಬಂದ್, ಶಾಲಾ-ಕಾಲೇಜಿಗೆ ರಜೆ, ಸರ್ಕಾರಿ ಕಛೇರಿ ರಜೆಗಾಗಿ ಕಾಯುತ್ತಿರುವ ನೌಕರರು

ರಾಮನಗರ: ನಮ್ಮ ರಾಜ್ಯದ ಕೆಲ ಭಾಗಗಳಿಗೆ ಕುಡಿಯುವ ನೀರಿಗೆ ತತ್ವಾರವಾಗಿದೆ, ಮಂಡ್ಯ, ಮೈಸೂರು ಭಾಗದ ರೈತರಿಗೆ ಬೆಳೆ ಬೆಳೆಯಲು ನೀರಿಲ್ಲಾ, ಇಂತಹ ಸಂಕಷ್ಟದ ಸಮಯ

Top Stories »  


Top ↑