Tel: 7676775624 | Mail: info@yellowandred.in

Language: EN KAN

    Follow us :


ಜವಳಿ ಮತ್ತು ಕೈಮಗ್ಗ ಡಿಪ್ಲೊಮಾ ಗೆ ಅರ್ಜಿ ಆಹ್ವಾನ

Posted date: 10 Jun, 2023

Powered by:     Yellow and Red

ಜವಳಿ ಮತ್ತು ಕೈಮಗ್ಗ ಡಿಪ್ಲೊಮಾ ಗೆ ಅರ್ಜಿ ಆಹ್ವಾನ

ರಾಮನಗರ, ಜೂ. 09:    ರಾಮನಗರ ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2023-24ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮೋ (ಡಿ.ಹೆಚ್.ಟಿ.ಟಿ.) ಕೋರ್ಸ್ ಕಲಿಕೆಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿಯ ಪ್ರಕಾರ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ.2,500/- ಶಿಷ್ಯವೇತನ ನೀಡಲಾಗವುದು ಹಾಗೂ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು. ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷ್‌ನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.


ದಿನಾಂಕ: 01/07/2023ಕ್ಕೆ ಅನ್ವಯಿಸುವಂತೆ, ಸಾಮಾನ್ಯ ವರ್ಗದ ಅಭ್ಯರ್ಥಿಗಳು 15 ರಿಂದ 23 ರ ವಯೋಮಿತಿಯಲ್ಲಿರಬೇಕು ಹಾಗೂ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 15 ರಿಂದ 25 ರ ವಯೋಮಿತಿಯಲ್ಲಿರಬೇಕು. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೋಢೀಕೃತ ಅಂಕಗಳು ಮೆರಿಟ್ ಲೆಕ್ಕಾಚಾರಕ್ಕೆ ಆಧಾರವಾಗಿರುತ್ತದೆ.


ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾ ಡಿಪ್ಲೋಮೋ ಸಂಸ್ಥೆಗಳಲ್ಲಿ ಕೋರ್ಸ್ ಪ್ರವೇಶ ಕುರಿತಂತೆ ಕೌನ್ಸಿಲಿಂಗ್‌ಗಾಗಿ ಕರೆಯಲಾಗುವುದು.  hಣಣಠಿs://ಞhಣigಚಿಜಚಿg.ಚಿಛಿ.iಟಿ/ಂಜmissioಟಿಈoಡಿm.ಠಿಜಜಿ ಈ ಲಿಂಕ್ ಮೂಲಕ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡು ಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪುರ, ಗದಗ-582102 ಇವರಿಗೆ ಸಲ್ಲಿಸಬಹುದಾಗಿದೆ.


ಅರ್ಜಿ ಸಲ್ಲಿಸಲು ಜೂ. 15 ಕೊನೆಯ ದಿನವಾಗಿದೆ. ತರಬೇತಿ ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ನಿಗದಿತ ನಮೂನೆ ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗೆ ಜವಳಿ ಅಭಿವೃದ್ಧಿ ಆಯುಕ್ತರ ಕಚೇರಿ ದೂ.ಸಂ. 080-23564828/ 23568223/23563903 ಅಥವಾ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪುರ, ಗದಗ, (ದೂರವಾಣಿ ಸಂ. 08372-297221) ಅಥವಾ ಸಹಾಯಕ ನಿರ್ದೇಶಕರ ಕಛೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್ ಭವನ, ಮೊದಲನೆ ಮಹಡಿ, ರಾಮನಗರ ಇವರನ್ನು ಸಂಪರ್ಕಿಸುವಂತೆ ರಾಮನಗರ ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in education »

ಜವಾಹರ್ ನವೋದಯ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಹಾಕುವಂತೆ ಬಿಇಓ ಮರಿಗೌಡ ಮನವಿ
ಜವಾಹರ್ ನವೋದಯ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಹಾಕುವಂತೆ ಬಿಇಓ ಮರಿಗೌಡ ಮನವಿ

ಚನ್ನಪಟ್ಟಣ : ಕನಕಪುರ ತಾಲೂಕಿನ ಶಿವನಹಳ್ಳಿ ಬಳಿ ಇರುವ ಜವಾಹರ್ ನವೋದಯ ವಿದ್ಯಾಲಯದಲ್ಲಿ 2024-25ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕೆ, ನವೋದಯ ವಿದ್ಯಾಲಯ ಸ

ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನ

ರಾಮನಗರ: ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ರಾಮನಗರ ಜಿಲ್ಲೆಯ ವಸತಿ ಶಾಲೆ, ಕಾಲೇಜು ಹಾಗೂ ಮೌಲಾನಾ ಆಜ

ಅನಧಿಕೃತ ಶಾಲೆಗಳಿಗೆ ದಾಖಲಾತಿ ಮಾಡಿಸಬೇಡಿ: ಕ್ಷೇತ್ರ ಶಿಕ್ಷಣಾಧಿಕಾರಿ
ಅನಧಿಕೃತ ಶಾಲೆಗಳಿಗೆ ದಾಖಲಾತಿ ಮಾಡಿಸಬೇಡಿ: ಕ್ಷೇತ್ರ ಶಿಕ್ಷಣಾಧಿಕಾರಿ

ರಾಮನಗರ, ಜೂ. 28:   ಅನುದಾನ ರಹಿತ ಶಾಲೆಗಳು 2023-24ನೇ ಸಾಲಿನಲ್ಲಿ ಆಡಳಿತ ಮಂಡಳಿಯವರು ಇಲಾಖೆಯ ಅನುಮತಿ ಪಡೆಯದೇ ಶಾಲೆಗಳನ್ನು ನಡೆಸುತ್ತ

ಪಜಾ ಮತ್ತು ಪಪಂ ದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ರಾಮನಗರ, ಜೂ. 17:    ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರ

ಸಿಂ.ಲಿಂ.ನಾಗರಾಜು ಪ್ರತಿಷ್ಠಾನ ವತಿಯಿಂದ ಇರುಳಿಗರದೊಡ್ಡಿ ಶಾಲಾ ಮಕ್ಕಳಿಗೆ ಬ್ಯಾಗ್, ಪಠ್ಯ ಸಾಮಗ್ರಿ ವಿತರಣೆ
ಸಿಂ.ಲಿಂ.ನಾಗರಾಜು ಪ್ರತಿಷ್ಠಾನ ವತಿಯಿಂದ ಇರುಳಿಗರದೊಡ್ಡಿ ಶಾಲಾ ಮಕ್ಕಳಿಗೆ ಬ್ಯಾಗ್, ಪಠ್ಯ ಸಾಮಗ್ರಿ ವಿತರಣೆ

ಚನ್ನಪಟ್ಟಣ:  ದಾನಿಗಳು ನೀಡುವ ಪಠ್ಯ ಸಾಮಗ್ರಿಗಳನ್ನು ಸದ್ಬಳಕೆ ಮಾಡಿಕೊಂಡು ಶಾಲಾ ಮಕ್ಕಳು ವಿಶೇಷವಾಗಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಉನ್ನತ

ಜವಳಿ ಮತ್ತು ಕೈಮಗ್ಗ ಡಿಪ್ಲೊಮಾ ಗೆ ಅರ್ಜಿ ಆಹ್ವಾನ
ಜವಳಿ ಮತ್ತು ಕೈಮಗ್ಗ ಡಿಪ್ಲೊಮಾ ಗೆ ಅರ್ಜಿ ಆಹ್ವಾನ

ರಾಮನಗರ, ಜೂ. 09:    ರಾಮನಗರ ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2023-24ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು

ಎಂಬಿಬಿಎಸ್ ನಲ್ಲಿ ಗೋಲ್ಡ್ ಮೆಡಲ್, ಪಿಜಿ ಯಲ್ಲಿ ದೇಶಕ್ಕೆ ಎರಡು ಸಾವಿರ ರ್ಯಾಂಕ್ ಪಡೆದ ಅಪ್ಪಟ ಗ್ರಾಮೀಣ ಪ್ರತಿಭೆ ಚಕ್ಕಲೂರು ಗ್ರಾಮದ ಡಾ ಅನುಶ್ರೀ
ಎಂಬಿಬಿಎಸ್ ನಲ್ಲಿ ಗೋಲ್ಡ್ ಮೆಡಲ್, ಪಿಜಿ ಯಲ್ಲಿ ದೇಶಕ್ಕೆ ಎರಡು ಸಾವಿರ ರ್ಯಾಂಕ್ ಪಡೆದ ಅಪ್ಪಟ ಗ್ರಾಮೀಣ ಪ್ರತಿಭೆ ಚಕ್ಕಲೂರು ಗ್ರಾಮದ ಡಾ ಅನುಶ್ರೀ

ಚನ್ನಪಟ್ಟಣ: ತಾಲ್ಲೂಕಿನ ಚಕ್ಕಲೂರು ಗ್ರಾಮದಿಂದ ಚನ್ನಪಟ್ಟಣ ನಗರಕ್ಕೆ ಪ್ರತಿದಿನ ಅಂದರೆ ಹದಿನಾಲ್ಕು ವರ್ಷಗಳ ಕಾಲ ಇಪ್ಪತ್ನಾಲ್ಕು ಕಿಲೋಮೀಟರ್ ಪ್ರಯಾಣ

ಎನ್.ಎಸ್.ಎಸ್. ಶಿಬಿರಾರ್ಥಿಗಳಿಗೆ ಸಮೀಕ್ಷೆವೇಳೆ ಅಪೌಷ್ಠಿಕತೆ ನಿಯಂತ್ರಣ ಕುರಿತು ಜಾಗೃತಿ ಮೂಡಿಸಲು ಸಲಹೆ - ಡಾ. ಶಶಿಕಲಾ
ಎನ್.ಎಸ್.ಎಸ್. ಶಿಬಿರಾರ್ಥಿಗಳಿಗೆ ಸಮೀಕ್ಷೆವೇಳೆ ಅಪೌಷ್ಠಿಕತೆ ನಿಯಂತ್ರಣ ಕುರಿತು ಜಾಗೃತಿ ಮೂಡಿಸಲು ಸಲಹೆ - ಡಾ. ಶಶಿಕಲಾ

ರಾಮನಗರ, ಮೇ 2: ಅಪೌಷ್ಠಿಕತೆ ಮುಖ್ಯವಾದ ಆರೋಗ್ಯ ಸಮಸ್ಯೆಯಾಗಿದ್ದು. ಅಪೌಷ್ಠಿಕತೆ ಎಲ್ಲಾ ವಯಸ್ಸಿನಲ್ಲಿಯೂ ಕಂಡು ಬರುತ್ತದೆ. ಅಪೌಷ್ಠಿಕತೆ ನಿವಾರಿಸಲು ತಾಯಿ

ಶಿಸ್ತು ಮತ್ತು ಶ್ರದ್ಧೆ ಇದ್ದರೆ ಅಸಾಧ್ಯವಾದುದನ್ನು ಸಾಧಿಸಬಹುದು. ಸಾಹಿತಿ ವಿಜಯ್ ರಾಂಪುರ
ಶಿಸ್ತು ಮತ್ತು ಶ್ರದ್ಧೆ ಇದ್ದರೆ ಅಸಾಧ್ಯವಾದುದನ್ನು ಸಾಧಿಸಬಹುದು. ಸಾಹಿತಿ ವಿಜಯ್ ರಾಂಪುರ

ಚನ್ನಪಟ್ಟಣ :ಪ್ರತಿ ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಅವಧಿಯಲ್ಲಿ ಶಿಸ್ತು ಮತ್ತು ಶ್ರದ್ಧೆಯ ಜೊತೆಗೆ ಸಮಯ ಪಾಲನೆ ರೂಢಿಸಿಕೊಂಡಲ್ಲಿ, ವಿದ್ಯಾರ್ಥಿಗಳು ತಮ್ಮ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಕ್ರಮ: ಹೆಚ್ಚಿನ ವಿಚಾರಣೆಗಾಗಿ ಮೂವರು ಪೊಲೀಸರ ವಶಕ್ಕೆ: ಏಳು ಆರೋಪಿಗಳು ನ್ಯಾಯಾಂಗ ಬಂಧನಕ್ಕೆ
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಕ್ರಮ: ಹೆಚ್ಚಿನ ವಿಚಾರಣೆಗಾಗಿ ಮೂವರು ಪೊಲೀಸರ ವಶಕ್ಕೆ: ಏಳು ಆರೋಪಿಗಳು ನ್ಯಾಯಾಂಗ ಬಂಧನಕ್ಕೆ

ರಾಮನಗರ: 2022-23 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಹತ್ತು ಆರೋಪಿಗಳನ್ನು ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಇವರಲ್ಲಿ ಮೂವರನ್ನು‌ ಹೆಚ್ಚಿನ ವಿಚಾರಣೆಗಾ

Top Stories »  


Top ↑