ಕುವೆಂಪು ನಗರದ ಒಂದನೇ ತಿರುವಿನಲ್ಲಿ ವಾಹನಗಳ ದಟ್ಟಣೆ
ಚನ್ನಪಟ್ಟಣ: ಪಟ್ಟಣದ ಕುವೆಂಪು ನಗರದ ಒಂದನೇ ತಿರುವು ಸದಾ ಜನಜಂಗುಳಿ ಮತ್ತು ವಾಹನಗಳ ದಟ್ಟಣೆಯಿಂದ ಕೂಡಿದ್ದು ಪಾದಚಾರಿಗಳಿಗೆ ಹಾಗೂ ಆ ಭಾಗದ ನಿವಾಸಿಗಳಿಗೆ ಕಿರಿಕಿರಿಯನ್ನುಂಟು ಮಾಡಿದೆ. ಸದಾ ಜನಜಂಗುಳಿಯಿಂದ ಗಿಜಿಗುಡುವ ಕುವೆಂಪುನಗರದ ಒಂದನೇ ತಿರುವಿನಲ್ಲಿ ಅಡ್ಡಾದಿಡ್ಡಿ ವಾಹನ ನಿಲುಗಡೆಯಿಂದ ಸಾರ್ವಜನಿಕರಿಗೆ ಇನ್ನಿಲ್ಲದ ರೀತಿಯಲ್ಲಿ ಸಮಸ್ಯೆ ಭಾದಿಸ ತೊಡಗಿದೆ.
ನಗರದ ಪ್ರಮುಖ ಜನಸಂದಣಿ ಸ್ಥಳಗಳಲ್ಲಿ ಇದೂ ಸಹ ಒಂದಾಗಿದ್ದು, ಇಲ್ಲಿನ ರಸ್ತೆಯಲ್ಲಿ ಸಬ್ ರಿಜಿಸ್ಟಾರ್ ಕಚೇರಿ, ಕರ್ನಾಟಕ ಬ್ಯಾಂಕ್, ಬರೋಡಾ ಬ್ಯಾಂಕ್, ಉಜ್ಜೀವನ್ ಬ್ಯಾಂಕ್, ಬಿಎಸ್ಎನ್ಎಲ್ ಕಛೇರಿ, ಸೆಂಟ್ ಆನ್ಸ್ ಸ್ಕೂಲ್, ಧರ್ಮಸ್ಥಳ ಗ್ರಾಮಾಭಿವೃದ್ದಿ ಕಛೇರಿ, ಶ್ರೀ ರಾಮ್ ಪೈನಾನ್ಸ್, ಮುದ್ರಣಾಲಯ, ಗ್ರಂಥಾಲಯ, ಆಸ್ಪತ್ರೆ, ಮಾಲ್ ಸೇರಿದಂತೆ ಬಹುತೇಕ ಜನಸೇರುವ ಕಚೇರಿಗಳೆ ಅಧಿಕವಾಗಿದ್ದು ಜೊತೆಗೆ ಇದೊಂದು ಲಿಂಕ್ ರಸ್ತೆ ಯಾಗಿರುವ ಕಾರಣ ಬಹುತೇಕ ವಾಹನ ಸವಾರರು ಸಂಚಾರಕ್ಕೆ ಈ ರಸ್ತೆಯನ್ನೇ ಹೆಚ್ಚು ಆಶ್ರಯಿಸಿರುವ ಕಾರಣ ಈ ರಸ್ತೆಯಲ್ಲಿ ಸಂಚಾರ ಸಹಜವಾಗೇ ಹೆಚ್ಚಾಗಿರುತ್ತದೆ.
ಪ್ರತಿನಿತ್ಯ ಸಾವಿರಾರು ಮಂದಿ ಈ ರಸ್ತೆಯಲ್ಲಿ ಸಂಚರಿಸುತ್ತಿದ್ದರೂ ಸಹ ಇಲ್ಲಿ ವಾಹನಗಳ ನಿಲುಗಡೆಗಾಗಲಿ, ಸಾರ್ವಜನಿಕರ ಸುಗಮ ಸಂಚಾರಕ್ಕಾಗಲಿ ಸೂಕ್ತ ವ್ಯವಸ್ಥೆ ಕಲ್ಪಿಸುವಲ್ಲಿ ಸಂಚಾರಿ ಪೊಲೀಸರು ಸಂಪೂರ್ಣ ವಿಫಲರಾಗಿದ್ದಾರೆ.
ವಿವಿಧ ಕಚೇರಿಗಳು, ಅಂಗಡಿ ಮುಂಗಟ್ಟುಗಳ ಮಾಲೀಕರುಗಳು, ಬ್ಯಾಂಕ್ ಸಿಬ್ಬಂದಿಗಳು ವಾಹನಗಳೆ ನೂರಾರು ಸಂಖ್ಯೆಯಲ್ಲಿದ್ದು ಇವರುಗಳ ವಾಹನಗಳಿಗೆ ಪಾರ್ಕಿಂಗ್ ಸೌಲಭ್ಯ ಇಲ್ಲವಾಗಿದ್ದು, ಸಾರ್ವಜನಿಕರ ವಾಹನಗಳ ಪಾರ್ಕಿಂಗ್ ಮಾತು ದೂರವೇ ಸರಿ. ಬೆಳಿಗ್ಗೆ 10 ರಿಂದ ಹಿಡಿದು ಸಂಜೆ 5 ರ ವರೆಗೆ ಈ ರಸ್ತೆಯಲ್ಲಿ ಸುಗಮವಾಗಿ ನಡೆದಾಡುವುದು ಕಷ್ಟವೆನಿಸುವಷ್ಟರ ಮಟ್ಟಿಗೆ ಇಲ್ಲಿ ಸದಾ ಜನಜಂಗುಳಿ ಸೇರಿರುತ್ತದೆ.
*ಸಬ್ ರಿಜಿಸ್ಟಾರ್ ಕಚೇರಿಯಿಂದಲೇ ಸಮಸ್ಯೆ :*
ಈ ರಸ್ತೆಯಲ್ಲಿ ಇಷ್ಟೂಂದು ಸಂಚಾರ ವ್ಯತ್ಯಯ ಉಂಟಾಗಲು ಇಲ್ಲಿರುವ ಸಬ್ ರಿಜಿಸ್ಟಾರ್ ಕಚೆರಿಯೇ ಪ್ರಮುಖ ಕಾರಣವಾಗಿದ್ದು, ದಿನಿನಿತ್ಯ ಈ ಕಚೇರಿಗೆ ನೂರಾರು ಮಂದಿ ಆಗಮಿಸತ್ತಾ ಅವರೊಟ್ಟಿಗೆ ನಾಲ್ಕಾರು ವಾಹನಗಳು, ಹತ್ತಾರು ಸಂಬಂಧಿಕರು ಆಗಮಿಸುವ ಕಾರಣ ಅವರ ವಾಹನಗಳ ನಿಲುಗಡೆಯಿಂದ ಹೆಚ್ಚಿನ ತೊಂದರೆ ಉಂಟಾಗುತ್ತಿದೆ.
*ಶಾಲಾ ಮಕ್ಕಳಿಗೆ ಸಾಕಷ್ಟು ತೊಂದರೆ:*
ಈ ರಸ್ತೆಯ ಕೊನೆಯಲ್ಲಿ ಸೆಂಟ್ ಆನ್ಸ್ ಶಾಲೆಯಿದ್ದು ಸಾವಿರಾರು ವಿದ್ಯಾರ್ಥಿಗಳು ಶಾಲೆಯಲ್ಲಿ ಕಲಿಯುತ್ತಿದ್ದು, ಶಾಲಾ ವಾಹನಗಳು, ಪೋಷಕರುಗಳು ತಮ್ಮ ಮಕ್ಕಳನ್ನು ಕರೆತರಲು ಹಾಗೂ ಶಾಲೆಗೆ ಬಿಡಲು ಇದೇ ರಸ್ತೆಯನ್ನು ಬಳಸಿಕೊಳ್ಳುತ್ತಾರೆ. ಆದರೆ ಇಲ್ಲಿನ ವಿಪರೀತ ವಾಹನದಟ್ಟನೆಯಿಂದ ಮಕ್ಕಳು ಮತ್ತು ಪೋಷಕರುಗಳು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ.
*ಪೊಲೀಸ್ ಇಲಾಖೆ ಗಮನಹರಿಸಿಲಿ:*
ಕಳೆದ ಹಲವಾರು ವರ್ಷಗಳಿಂದಲೂ ಈ ರಸ್ತೆಯಲ್ಲಿ ಸಂಚಾರಿ ಸಮಸ್ಯೆ ಇದ್ದು ಇದನ್ನು ಬಗೆಹರಿಸುವಂತೆ ಸಾಕಷ್ಟು ಬಾರಿ ಪೊಲೀಸ್ ಇಲಾಖೆಗೆ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳ ಮುಖಂಡರು ಮನವಿ ಮಾಡಿಕೊಂಡಿದ್ದು, ಒಂದರೆಡು ದಿನ ಈ ಬಗ್ಗೆ ಚಿತ್ತ ಹರಿಸುವ ಇಲಾಖೆ ಸಹ ನಂತರ ಅದರತ್ತ ನಿರ್ಲಕ್ಷ್ಯ ವಹಿಸಿ ಸುಮ್ಮನಾಗುತ್ತಿರುವ ಹಿನ್ನೆಲೆಯಲ್ಲಿ ಸಮಸ್ಯೆ ಹಾಗೇ ಉಳಿದಿದ್ದು, ಇನ್ನಾದರೂ ಈ ಬಗ್ಗೆ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಇದಕ್ಕೆ ಹಿತಶ್ರೀ ಹಾಡುವರೆ ಕಾದು ನೋಡಬೇಕಿದೆ.
ಕುವೆಂಪು ನಗರದ ರಸ್ತೆಯ ಸಂಚಾರದಟ್ಟಣೆ ಸಮಸ್ಯೆಯು ಗಮನಕ್ಕೆ ಬಂದಿದ್ದು, ಇಲ್ಲಿನ ಸಿಬ್ಬಂದಿಗಳನ್ನು ನಿಯೋಜಿಸುವ ಮೂಲಕ ಅಡ್ಡಾದಿಡ್ಡಿ ವಾಹನಗಳ ನಿಲುಗಡೆಗೆ ಬ್ರೇಕ್ ಹಾಕಲಾಗುವುದು ಹಾಗೂ ಸೂಚನಾಫಲಕಗಳನ್ನು ಅಳವಡಿಸುವ ಮುಖಾಂತರ ಜಾಗೃತಿ ಮೂಡಿಸಿ, ಬಿಲ್ಡಿಂಗ್ ಮಾಲೀಕರುಗಳಿಗೂ ಎಚ್ಚರಿಕೆ ಕೊಡುವ ಕೆಲಸ ಮಾಡಲಾಗುವುದು.
ನಾಳೆಯಿಂದಲೆ ರಸ್ತೆಯ ಒಂದು ಕಡೆ ಮಾತ್ರ ವಾಹನ ನಿಲ್ಲಿಸಲು ಸೂಚನೆ ನೀಡಿ ಸಿಬ್ಬಂದಿಯನ್ನು ನೇಮಿಸಲಾಗುವುದು.
*ಶುಭಾಂಬಿಕಾ ಪಿಎಸ್ಐ ಸಂಚಾರಿ ಪೊಲೀಸ್ ಠಾಣೆ.*
ನಗರದ ಪ್ರಮುಖ ರಸ್ತೆಯಾದ ಇದು ಲಿಂಕ್ ರಸ್ತೆಯಾಗಿದ್ದು, ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಕಾರಣ ಬಹುತೇಕರು ಈ ರಸ್ತೆಯನ್ನೇ ಹೆಚ್ಚು ಬಳಕೆ ಮಾಡುತ್ತಾರೆ, ಆದರೆ ಇಲ್ಲಿ ವಾಹನಗಳ ದಟ್ಟಣೆ ಅಧಿಕವಾಗಿದ್ದು, ಪಾದಾಚಾರಿಗಳು ನಡೆದಾಡಲು ಇಲ್ಲಿ ಕಷ್ಟಸಾಧ್ಯವಾಗಿದೆ, ಕೆಲವಾರು ಬಾರಿ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆಗಳು ಸಹ ನಡೆದಿದ್ದು, ಸಂಚಾರಿ ಪೊಲೀಸರು ಇತ್ತ ಗಮನಹರಿಸಿ ಸಮಸ್ಯೆ ಬಗೆಹರಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡಬೇಕಾಗಿದೆ.
*ಶಿವರಾಮ್(ಕೆಂಪ), ಮಾ.ಗ್ರಾ.ಪಂ.ಸದಸ್ಯರು.*
ಗೋ ರಾ ಶ್ರೀನಿವಾಸ...
ಮೊ:9845856139.
Recent news in education »
ಅಂದು ಶಾಲೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಅಪ್ಪಗೆರೆ ತಿಮ್ಮರಾಜು
ಚನ್ನಪಟ್ಟಣ: ನಾವು ನಮ್ಮ ಕಾಲದಲ್ಲಿ ಶಾಲೆಗೆ ಹೋಗಿ ವಿದ್ಯೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಹಲವಾರು ಸಮಸ್ಯೆಗಳು ನಮ್ಮ ಎದುರಿಗಿದ್ದವು. ಆದರೆ, ಈಗ ಅಂತಹ
ಪ್ರತಿ ವಿದ್ಯಾರ್ಥಿಗಳು ಕೌಶಲ್ಯ ರೂಢಿಸಿಕೊಳ್ಳಬೇಕು: ಶಿಕ್ಷಣಾಧಿಕಾರಿ ಮರಿಗೌಡ
ಚನ್ನಪಟ್ಟಣ: ಶಾಲಾ ವಿದ್ಯಾರ್ಥಿಗಳು ಕೇವಲ ಪಾಠ ಮತ್ತು ಆಟಕ್ಕೆ ಸೀಮಿತವಾಗದೆ ವಿವಿಧ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಕೌಶಲ್ಯ ಕಲಿತ ಮಕ್ಕಳ ಪ್ರತಿಭೆಯನ್ನ
ಪ್ರತಿ ಸರ್ಕಾರಗಳು ಪದವೀಧರರ ಜೊತೆ ಚೆಲ್ಲಾಟವಾಡುತ್ತಿವೆ, ಉದಯ್ ಸಿಂಗ್
ಚನ್ನಪಟ್ಟಣ: ಪ್ರತಿ ವರ್ಷವೂ ಲಕ್ಷಾಂತರ ಯುವಕ ಯುವತಿಯರು ಪದವಿಯೊಂದಿಗೆ ಹೊರಬರುತ್ತಾರೆ. ವಿಶ್ವ ವಿದ್ಯಾಲಯಗಳಿಂದ ಪದವಿಯೊಂದಿಗೆ ಬರುವವರಿಗೆ ಸೂಕ್ತ ಉದ್ಯೋಗ
ದಿವ್ಯಚೇತನ ಇಂಗ್ಲಿಷ್ ಶಾಲೆಯಲ್ಲಿ ಮೇಳೈಸಿದ ಮಿನಿ ವಿಜ್ಞಾನ ಮೇಳ
ಚನ್ನಪಟ್ಟಣ: ಅಗಸ್ತ್ಯ ಅಂತರಾಷ್ಟ್ರೀಯ ಪ್ರತಿಷ್ಠಾನ ಬ್ರಾಡ್ಕಾಂ ವಿಜ್ಞಾನ ಕೇಂದ್ರ ಚನ್ನಪಟ್ಟಣ ಇವರ ವತಿಯಿಂದ ನಗರದ ದಿವ್ಯ ಚೇತನ ಇಂಗ್ಲಿಷ್ ಪ್ರೌಢಶಾಲೆಯಲ್ಲ
ಪಾಠದ ಜೊತೆಗೆ ಆಟದಲ್ಲಿಯೂ ಮುಂಚೂಣಿಗೆ ಬರಬೇಕು. ವಿ ಬಾಲಸುಬ್ರಹ್ಮಣ್ಯಂ
ಚನ್ನಪಟ್ಟಣ,: ಪ್ರತಿಯೊಬ್ಬ ವಿದ್ಯಾರ್ಥಿಯು ಶಿಕ್ಷಣದ ಜೊತೆಯಲ್ಲಿ ಕ್ರೀಡಾಮನೋಭಾವನೆ ಬೆಳಸಿಕೊಳ್ಳಬೇಕು. ಮನಸ್ಸು ಉಲ್ಲಸಿತವಾಗಲು ಕ್ರೀಡೆ ಸಹಕಾರಿ ಎಂದು ಬಾಲು
ಉಪನ್ಯಾಸಕರ ಧರಣಿ, ಕಲಿಕೆಗೆ ತೊಂದರೆ, ಎಬಿವಿಪಿ ಯಿಂದ ಪ್ರತಿಭಟನೆ
ಚನ್ನಪಟ್ಟಣ: ಸರ್ಕಾರಿ ಕಾಲೇಜುಗಳ ಉಪನ್ಯಾಸಕರು ಧರಣಿ ನಿರತರಾಗಿರುವುದರಿಂದ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯಿದೆ. ಇದರಿಂದ ಶೈಕ್ಷಣಿಕ ವರ್ಷದ ಕಲಿಕೆಗೆ ತೊ
ಆರೋಗ್ಯ, ಆಯಸ್ಸು ಹೆಚ್ಚಿಸುವ ವೈದ್ಯರು ಆರೋಗ್ಯ ಕಾಪಾಡಿಕೊಳ್ಳಬೇಕು. ಚಾಮುಂಡೇಶ್ವರಿ ಆಸ್ಪತ್ರೆ ಉದ್ಘಾಟನೆಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ
ಚನ್ನಪಟ್ಟಣ:bಆಸ್ಪತ್ರೆಗೆ ಬರುವ ರೋಗಿಗಳ ಅರೋಗ್ಯ ತಪಾಸಿಸಿ, ರೋಗ ವಾಸಿ ಮಾಡಿ, ಅವರ ಆರೋಗ್ಯ ದ ಜೊತೆಗೆ ಆಯಸ್ಸನ್ನು ಹೆಚ್ಚಿಸುವಲ್ಲಿ ನಿಷ್ಣಾತರಾದ ವೈದ್ಯರು
ಪೆಟ್ಟಾ ಸರ್ಕಾರಿ ಶಾಲಾ ಆವರಣದಲ್ಲಿ ನಗರಸಭೆಯ ಕಸದ ರಾಶಿ, ಅಲ್ಲಗಳೆದ ಪೌರಾಯುಕ್ತ
ಆರ್ಥಿಕವಾಗಿ ಬೆಳೆದವರೆಲ್ಲರೂ ವಿದ್ಯಾರ್ಜನೆಗೆ ಮುಂದಡಿಯಿಡಬೇಕು, ಸಚಿವ ಮಧುಬಂಗಾರಪ್ಪ
ಚನ್ನಪಟ್ಟಣ: ಬಡತನದ ಬೇಗೆಯಲ್ಲಿ ಬೆಂದು, ಉನ್ನತ ಶಿಕ್ಷಣ ಪಡೆದು, ಉತ್ತಮ ಸ್ಥಾನಮಾನದ ಜೊತೆಗೆ ಆರ್ಥಿಕವಾಗಿ ಸದೃಢವಾದ ನಂತರ ತನ್ನ ಜನ್ಮದಾತರಿಗೆ, ಹುಟ್ಡಿದೂರ
ಕಾವೇರಿ ಕಿಚ್ಚು, ರಾಮನಗರ ಜಿಲ್ಲೆ ಬಂದ್, ಶಾಲಾ-ಕಾಲೇಜಿಗೆ ರಜೆ, ಸರ್ಕಾರಿ ಕಛೇರಿ ರಜೆಗಾಗಿ ಕಾಯುತ್ತಿರುವ ನೌಕರರು
ರಾಮನಗರ: ನಮ್ಮ ರಾಜ್ಯದ ಕೆಲ ಭಾಗಗಳಿಗೆ ಕುಡಿಯುವ ನೀರಿಗೆ ತತ್ವಾರವಾಗಿದೆ, ಮಂಡ್ಯ, ಮೈಸೂರು ಭಾಗದ ರೈತರಿಗೆ ಬೆಳೆ ಬೆಳೆಯಲು ನೀರಿಲ್ಲಾ, ಇಂತಹ ಸಂಕಷ್ಟದ ಸಮಯ
ಪ್ರತಿಕ್ರಿಯೆಗಳು