Tel: 7676775624 | Mail: info@yellowandred.in

Language: EN KAN

    Follow us :


ಜವಾಹರ್ ನವೋದಯ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಹಾಕುವಂತೆ ಬಿಇಓ ಮರಿಗೌಡ ಮನವಿ

Posted date: 24 Jul, 2023

Powered by:     Yellow and Red

ಜವಾಹರ್ ನವೋದಯ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಹಾಕುವಂತೆ ಬಿಇಓ ಮರಿಗೌಡ ಮನವಿ

ಚನ್ನಪಟ್ಟಣ : ಕನಕಪುರ ತಾಲೂಕಿನ ಶಿವನಹಳ್ಳಿ ಬಳಿ ಇರುವ ಜವಾಹರ್ ನವೋದಯ ವಿದ್ಯಾಲಯದಲ್ಲಿ 2024-25ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕೆ, ನವೋದಯ ವಿದ್ಯಾಲಯ ಸಮಿತಿ ವತಿಯಿಂದ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ತಾಲೂಕಿನ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರು ತಮ್ಮ ಶಾಲೆಯಲ್ಲಿ 5ನೇ ತರಗತಿಯನ್ನು ಓದುತ್ತಿರುವ ವಿದ್ಯಾರ್ಥಿಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಹಾಕಿಸಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎನ್ ಮರೀಗೌಡ ತಿಳಿಸಿದ್ದಾರೆ.


ಅರ್ಜಿ ಪ್ರಕ್ರಿಯೆ ದಿನಾಂಕ 20-06-2023 ರಿಂದ ಆರಂಭವಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಆಗಸ್ಟ್ 10, 2023 ಕೊನೆಯ ದಿನವಾಗಿದೆ. ನವೋದಯ ವಿದ್ಯಾಲಯಕ್ಕೆ ಅರ್ಜಿ ಸಲ್ಲಿಸುವವರು ಜಿಲ್ಲೆಯ ನಿವಾಸಿಗಳಾಗಿರಬೇಕು. ಅರ್ಜಿದಾರರು 2023-24ರಲ್ಲಿ ಸರ್ಕಾರಿ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಯಲ್ಲಿ 5ನೇ ತರಗತಿಯಲ್ಲಿ ಓದುತ್ತಿರಬೇಕು. ಅದೇ  ಶಾಲೆಗಳಲ್ಲಿ 3 ಮತ್ತು 4ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು, ಮೇ 1,2012 ರಿಂದ ಏಪ್ರಿಲ್ 30, 2014ರ ನಡುವೆ ಜನಿಸಿರಬೇಕು. ಈ ಅರ್ಹತೆಗಳನ್ನು ಹೊಂದಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ .


ಜವಾಹರ್ ನವೋದಯ ವಿದ್ಯಾಲಯ ಆಯ್ಕೆ ಪರೀಕ್ಷೆಯ ಪ್ರಮಾಣ ಪತ್ರವನ್ನು 5ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಭರ್ತಿ ಮಾಡಿ ವಿದ್ಯಾರ್ಥಿಯ ಭಾವಚಿತ್ರ ಮತ್ತು ಸಹಿ ಪಾಲಕರ ಸಹಿ ಮತ್ತು ಮುಖ್ಯೋಪಾಧ್ಯಾಯರ ಸಹಿ, ರಾಮನಗರ ಜಿಲ್ಲೆಗೆ ಸಂಬಂಧಿಸಿದ ಆಧಾರ್ ಕಾರ್ಡ್ ಅಥವಾ ವಾಸಸ್ಥಳ ದೃಢೀಕರಣ ಪತ್ರದೊಂದಿಗೆ ಅಪ್ಲೋಡ್ ಮಾಡಬೇಕು,ಉಚಿತವಾಗಿ ಅರ್ಜಿಯನ್ನು ಸಲ್ಲಿಸಲು 5ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಪ್ರಮಾಣ ಪತ್ರವನ್ನು ಭರ್ತಿ ಮಾಡಿ  ವಿದ್ಯಾರ್ಥಿಯ ಭಾವಚಿತ್ರ ಮತ್ತು ಸಹಿ, ಪಾಲಕರ ಸಹಿ ರಾಮನಗರ ಜಿಲ್ಲೆಗೆ ಸಂಬಂಧಿಸಿದ ಆಧಾರ್ ಕಾರ್ಡ್ ಅಥವಾ ವಾಸಸ್ಥಳ ದೃಡೀಕರಣ ಪತ್ರದೊಂದಿಗೆ  ಜವಾಹರ್ ನವೋದಯ ವಿದ್ಯಾಲಯ ಶಿವನಹಳ್ಳಿ ಬಟ್ಟಲು ಗುಂಡಪ್ಪ ದೇವಸ್ಥಾನದ ಹತ್ತಿರ ಕನಕಪುರ ತಾಲೂಕು ಇಲ್ಲಿಗೆ ನೇರವಾಗಿ ಭೇಟಿ ನೀಡಿಯೂ ಕೂಡ  ಅರ್ಜಿ ಸಲ್ಲಿಸಬಹುದು ಎಂದಿದ್ದಾರೆ.

ಈ ಶಾಲೆಯಲ್ಲಿ ಉಚಿತ ವಸತಿ ಶಿಕ್ಷಣ, ಬಾಲಕ ಬಾಲಕಿಯರಿಗೆ ಪ್ರತ್ಯೇಕ ವಿದ್ಯಾರ್ಥಿ ನಿಲಯಗಳು, ಎನ್. ಸಿ. ಸಿ, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಕ್ರೀಡೆಗಳಿಗೆ ಉತ್ತೇಜನವಿರುವುದರಿಂದ, ಪ್ರಯೋಗಾಲಯಗಳು, ಕಂಪ್ಯೂಟರ್ ಲ್ಯಾಬ್, ಗ್ರಂಥಾಲಯ ಮತ್ತು ಸ್ಮಾರ್ಟ್ ತರಗತಿಗಳ ಸೌಲಭ್ಯವಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ  ವಿದ್ಯಾರ್ಥಿಗಳು  ಈ ಶಾಲೆಗೆ  ದಾಖಲಾಗಲು ಅರ್ಜಿ ಸಲ್ಲಿಸಬೇಕೆಂದು ಮನವಿ ಮಾಡಿದ್ದಾರೆ .


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in education »

ಜವಾಹರ್ ನವೋದಯ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಹಾಕುವಂತೆ ಬಿಇಓ ಮರಿಗೌಡ ಮನವಿ
ಜವಾಹರ್ ನವೋದಯ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಹಾಕುವಂತೆ ಬಿಇಓ ಮರಿಗೌಡ ಮನವಿ

ಚನ್ನಪಟ್ಟಣ : ಕನಕಪುರ ತಾಲೂಕಿನ ಶಿವನಹಳ್ಳಿ ಬಳಿ ಇರುವ ಜವಾಹರ್ ನವೋದಯ ವಿದ್ಯಾಲಯದಲ್ಲಿ 2024-25ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕೆ, ನವೋದಯ ವಿದ್ಯಾಲಯ ಸ

ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನ

ರಾಮನಗರ: ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ರಾಮನಗರ ಜಿಲ್ಲೆಯ ವಸತಿ ಶಾಲೆ, ಕಾಲೇಜು ಹಾಗೂ ಮೌಲಾನಾ ಆಜ

ಅನಧಿಕೃತ ಶಾಲೆಗಳಿಗೆ ದಾಖಲಾತಿ ಮಾಡಿಸಬೇಡಿ: ಕ್ಷೇತ್ರ ಶಿಕ್ಷಣಾಧಿಕಾರಿ
ಅನಧಿಕೃತ ಶಾಲೆಗಳಿಗೆ ದಾಖಲಾತಿ ಮಾಡಿಸಬೇಡಿ: ಕ್ಷೇತ್ರ ಶಿಕ್ಷಣಾಧಿಕಾರಿ

ರಾಮನಗರ, ಜೂ. 28:   ಅನುದಾನ ರಹಿತ ಶಾಲೆಗಳು 2023-24ನೇ ಸಾಲಿನಲ್ಲಿ ಆಡಳಿತ ಮಂಡಳಿಯವರು ಇಲಾಖೆಯ ಅನುಮತಿ ಪಡೆಯದೇ ಶಾಲೆಗಳನ್ನು ನಡೆಸುತ್ತ

ಪಜಾ ಮತ್ತು ಪಪಂ ದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ರಾಮನಗರ, ಜೂ. 17:    ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರ

ಸಿಂ.ಲಿಂ.ನಾಗರಾಜು ಪ್ರತಿಷ್ಠಾನ ವತಿಯಿಂದ ಇರುಳಿಗರದೊಡ್ಡಿ ಶಾಲಾ ಮಕ್ಕಳಿಗೆ ಬ್ಯಾಗ್, ಪಠ್ಯ ಸಾಮಗ್ರಿ ವಿತರಣೆ
ಸಿಂ.ಲಿಂ.ನಾಗರಾಜು ಪ್ರತಿಷ್ಠಾನ ವತಿಯಿಂದ ಇರುಳಿಗರದೊಡ್ಡಿ ಶಾಲಾ ಮಕ್ಕಳಿಗೆ ಬ್ಯಾಗ್, ಪಠ್ಯ ಸಾಮಗ್ರಿ ವಿತರಣೆ

ಚನ್ನಪಟ್ಟಣ:  ದಾನಿಗಳು ನೀಡುವ ಪಠ್ಯ ಸಾಮಗ್ರಿಗಳನ್ನು ಸದ್ಬಳಕೆ ಮಾಡಿಕೊಂಡು ಶಾಲಾ ಮಕ್ಕಳು ವಿಶೇಷವಾಗಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಉನ್ನತ

ಜವಳಿ ಮತ್ತು ಕೈಮಗ್ಗ ಡಿಪ್ಲೊಮಾ ಗೆ ಅರ್ಜಿ ಆಹ್ವಾನ
ಜವಳಿ ಮತ್ತು ಕೈಮಗ್ಗ ಡಿಪ್ಲೊಮಾ ಗೆ ಅರ್ಜಿ ಆಹ್ವಾನ

ರಾಮನಗರ, ಜೂ. 09:    ರಾಮನಗರ ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2023-24ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು

ಎಂಬಿಬಿಎಸ್ ನಲ್ಲಿ ಗೋಲ್ಡ್ ಮೆಡಲ್, ಪಿಜಿ ಯಲ್ಲಿ ದೇಶಕ್ಕೆ ಎರಡು ಸಾವಿರ ರ್ಯಾಂಕ್ ಪಡೆದ ಅಪ್ಪಟ ಗ್ರಾಮೀಣ ಪ್ರತಿಭೆ ಚಕ್ಕಲೂರು ಗ್ರಾಮದ ಡಾ ಅನುಶ್ರೀ
ಎಂಬಿಬಿಎಸ್ ನಲ್ಲಿ ಗೋಲ್ಡ್ ಮೆಡಲ್, ಪಿಜಿ ಯಲ್ಲಿ ದೇಶಕ್ಕೆ ಎರಡು ಸಾವಿರ ರ್ಯಾಂಕ್ ಪಡೆದ ಅಪ್ಪಟ ಗ್ರಾಮೀಣ ಪ್ರತಿಭೆ ಚಕ್ಕಲೂರು ಗ್ರಾಮದ ಡಾ ಅನುಶ್ರೀ

ಚನ್ನಪಟ್ಟಣ: ತಾಲ್ಲೂಕಿನ ಚಕ್ಕಲೂರು ಗ್ರಾಮದಿಂದ ಚನ್ನಪಟ್ಟಣ ನಗರಕ್ಕೆ ಪ್ರತಿದಿನ ಅಂದರೆ ಹದಿನಾಲ್ಕು ವರ್ಷಗಳ ಕಾಲ ಇಪ್ಪತ್ನಾಲ್ಕು ಕಿಲೋಮೀಟರ್ ಪ್ರಯಾಣ

ಎನ್.ಎಸ್.ಎಸ್. ಶಿಬಿರಾರ್ಥಿಗಳಿಗೆ ಸಮೀಕ್ಷೆವೇಳೆ ಅಪೌಷ್ಠಿಕತೆ ನಿಯಂತ್ರಣ ಕುರಿತು ಜಾಗೃತಿ ಮೂಡಿಸಲು ಸಲಹೆ - ಡಾ. ಶಶಿಕಲಾ
ಎನ್.ಎಸ್.ಎಸ್. ಶಿಬಿರಾರ್ಥಿಗಳಿಗೆ ಸಮೀಕ್ಷೆವೇಳೆ ಅಪೌಷ್ಠಿಕತೆ ನಿಯಂತ್ರಣ ಕುರಿತು ಜಾಗೃತಿ ಮೂಡಿಸಲು ಸಲಹೆ - ಡಾ. ಶಶಿಕಲಾ

ರಾಮನಗರ, ಮೇ 2: ಅಪೌಷ್ಠಿಕತೆ ಮುಖ್ಯವಾದ ಆರೋಗ್ಯ ಸಮಸ್ಯೆಯಾಗಿದ್ದು. ಅಪೌಷ್ಠಿಕತೆ ಎಲ್ಲಾ ವಯಸ್ಸಿನಲ್ಲಿಯೂ ಕಂಡು ಬರುತ್ತದೆ. ಅಪೌಷ್ಠಿಕತೆ ನಿವಾರಿಸಲು ತಾಯಿ

ಶಿಸ್ತು ಮತ್ತು ಶ್ರದ್ಧೆ ಇದ್ದರೆ ಅಸಾಧ್ಯವಾದುದನ್ನು ಸಾಧಿಸಬಹುದು. ಸಾಹಿತಿ ವಿಜಯ್ ರಾಂಪುರ
ಶಿಸ್ತು ಮತ್ತು ಶ್ರದ್ಧೆ ಇದ್ದರೆ ಅಸಾಧ್ಯವಾದುದನ್ನು ಸಾಧಿಸಬಹುದು. ಸಾಹಿತಿ ವಿಜಯ್ ರಾಂಪುರ

ಚನ್ನಪಟ್ಟಣ :ಪ್ರತಿ ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಅವಧಿಯಲ್ಲಿ ಶಿಸ್ತು ಮತ್ತು ಶ್ರದ್ಧೆಯ ಜೊತೆಗೆ ಸಮಯ ಪಾಲನೆ ರೂಢಿಸಿಕೊಂಡಲ್ಲಿ, ವಿದ್ಯಾರ್ಥಿಗಳು ತಮ್ಮ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಕ್ರಮ: ಹೆಚ್ಚಿನ ವಿಚಾರಣೆಗಾಗಿ ಮೂವರು ಪೊಲೀಸರ ವಶಕ್ಕೆ: ಏಳು ಆರೋಪಿಗಳು ನ್ಯಾಯಾಂಗ ಬಂಧನಕ್ಕೆ
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಕ್ರಮ: ಹೆಚ್ಚಿನ ವಿಚಾರಣೆಗಾಗಿ ಮೂವರು ಪೊಲೀಸರ ವಶಕ್ಕೆ: ಏಳು ಆರೋಪಿಗಳು ನ್ಯಾಯಾಂಗ ಬಂಧನಕ್ಕೆ

ರಾಮನಗರ: 2022-23 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಹತ್ತು ಆರೋಪಿಗಳನ್ನು ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಇವರಲ್ಲಿ ಮೂವರನ್ನು‌ ಹೆಚ್ಚಿನ ವಿಚಾರಣೆಗಾ

Top Stories »  


Top ↑