Tel: 7676775624 | Mail: info@yellowandred.in

Language: EN KAN

    Follow us :


ತಾಲ್ಲೂಕು ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಟಿ ವಿ ಗಿರೀಶ್ ಆಯ್ಜೆ, ಹಲವರಿಂದ ಅಭಿನಂದನೆ

Posted date: 11 Nov, 2023

Powered by:     Yellow and Red

ತಾಲ್ಲೂಕು ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಟಿ ವಿ ಗಿರೀಶ್ ಆಯ್ಜೆ, ಹಲವರಿಂದ ಅಭಿನಂದನೆ

ಚನ್ನಪಟ್ಟಣ:ನಗರದ ನ್ಯಾಯಾಲಯದಲ್ಲಿರುವ ವಕೀಲರ ಸಂಘದ ಕಛೇರಿಯಲ್ಲಿ ತಾಲ್ಲೂಕು ವಕೀಲರ ಸಂಘದ ಚುನಾವಣೆಯು ಶನಿವಾರ ಜರುಗಿದ್ದು ಅತ್ಯಧಿಕ ಮತಗಳನ್ನು ಪಡೆಯುವ ಮೂಲಕ ಟಿ ವಿ ಗಿರೀಶ್ ಆಯ್ಕೆಯಾದರು. ಎರಡು ವರ್ಷಕ್ಜೊಮ್ಮೆ ನಡೆಯುವ ವಕೀಲರ ಸಂಘದ ಚುನಾವಣೆಯಲ್ಲಿ ಅಧ್ಯಕ್ಷ ಗಾದಿಗೆ ನಾಲ್ಕು ಮಂದಿ, ಉಪಾಧ್ಯಕ್ಷ ಗಾದಿಗೆ ಇಬ್ಬರು, ಕಾರ್ಯದರ್ಶಿ ಗಾದಿಗೆ ಮೂವರು ಹಾಗೂ ಖಜಾಂಚಿ ಸ್ಥಾನಕ್ಕೆ ಇಬ್ಬರು ಸ್ಪರ್ಧೆ ಮಾಡಿದ್ದು ಟಿ ವಿ ಗಿರೀಶ್ ೯೨ ಮತಗಳನ್ನು ಪಡೆದು ಜಯಭೇರಿ ಬಾರಿಸಿದ್ದಾರೆ.


ಇದೇ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಟಿ ವಿ ಗಿರೀಶ್ ಮಾತನಾಡಿ ಅಧ್ಯಕ್ಷ ಗಾದಿಗೆ ಒಟ್ಟು ಮೂರು ಬಾರಿ ಸ್ಪರ್ಧೆ ಮಾಡಿದ್ದು, ಎರಡನೇ ಅವಧಿಯಲ್ಲಿ ಒಮ್ಮೆ ಕೇವಲ ಒಂದು ಮತದಿಂದ ಸೋಲನ್ನು ಅನುಭವಿಸಿದ್ದೆ, ಮೊದಲ ಮತ್ತು ಮೂರನೇ ಬಾರಿ ಜಯಭೇರಿ ಬಾರಿಸಿದ್ದು, ಬೆಂಬಲಿಸಿದ ಎಲ್ಲಾ ವಕೀಲರಿಗೂ ವಂದಿಸುತ್ತೇನೆ. ನನ್ನ ಅಧ್ಯಕ್ಷ ಅವಧಿಯಲ್ಲಿ ವಕೀಲರಿಗೆ ಮೂಲಭೂತ ವ್ಯವಸ್ಥೆಗಳನ್ನು ಕಲ್ಪಿಸುವುದು ನನ್ನ ಪ್ರಥಮ ಗುರಿಯಾಗಿದೆ. ಪದಾಧಿಕಾರಿಗಳು ಹಾಗೂ ಎಲ್ಲಾ ವಕೀಲರನ್ನು ಒಗ್ಗೂಡಿಸಿ ಗ್ರಂಥಾಲಯ ಸೇರಿದಂತೆ ವಿವಿಧ ಯೋಜನೆಗಳನ್ನು ರೂಪಿಸಿ ಅಭಿವೃದ್ಧಿ ಪಡಿಸಲಾಗುವುದು ಎಂದರು.


ಚನ್ನಪಟ್ಟಣ ದಲ್ಲಿ ೧೯೮೭ ರಲ್ಲಿ ನ್ಯಾಯಾಲಯ ಆರಂಭವಾಗಿದ್ದು, ಹಿರಿಯ ವಕೀಲರಾದ ಆರ್ ಟಿ ಕೃಷ್ಣ ರವರ ನೇತೃತ್ವದಲ್ಲಿ ಆರಂಭವಾದ ವಕೀಲರ ಸಂಘಕ್ಕೆ ಇಲ್ಲಿಯವರೆಗೆ ಯಾವುದೇ ಮಹಿಳಾ ವಕೀಲರು ಅಧ್ಯಕ್ಷ ಗಾದಿಗೆ ಸ್ಪರ್ಧಿಸಿರಲಿಲ್ಲ. ಇದೇ ಪ್ರಥಮ ಬಾರಿಗೆ ಕಳೆದ ಬಾರಿ ಉಪಾಧ್ಯಕ್ಷರಾಗಿದ್ದ ಅಂಬಿಕಾ ರವರು ೪೩ ಮಹಿಳಾ ವಕೀಲರ ಜೊತೆಗೆ ಎಲ್ಲಾ ವಕೀಲರ ಬೆಂಬಲ ಸಿಗಬಹುದು ಎಂಬ ಹಿನ್ನೆಲೆಯಲ್ಲಿ ಸ್ಪರ್ಧಿಸಿದ್ದು, ಕೇವಲ ೧೮ ಮತಗಳನ್ನು ಪಡೆದು ಪರಾಜಿತರಾದರು. ಉಳಿದಂತೆ ಜೆ ಟಿ ಪ್ರಕಾಶ್ ೧೧ ಹಾಗೂ ವೆಂಕಟೇಶ್ ೦೩ ಮತಗಳನ್ನು ಪಡೆದು ಪರಾಜಿತರಾದರು.


ಉಪಾಧ್ಯಕ್ಷ ಸ್ಥಾನಕ್ಕೆ ಇಬ್ಬರು ಸ್ಪರ್ಧಿಸಿದ್ದು, ಎಸ್ ಬಿ ಧನಂಜಯ ೬೪ ಮತಗಳನ್ನು ಪಡೆದು ವಿಜಯಶಾಲಿಯಾದರೆ, ರಂಗಸ್ವಾಮಿ ೫೯ ಮತಗಳನ್ನು ಪಡೆದು ಪರಾಜಿತರಾದರು.

ಕಾರ್ಯದರ್ಶಿ ಸ್ಥಾನಕ್ಕೆ ಮೂರು ಮಂದಿ ಸ್ಪರ್ಧಿಸಿದ್ದು, ದೇವರಾಜು ೬೩ ಮತಗಳನ್ನು ಪಡೆದು ಜಯಶಾಲಿಯಾದರೆ, ವಸಂತಕುಮಾರ್ ೪೦ ಮತಗಳು ಹಾಗೂ ಎಲ್ ಶಿವರಾಜು ೧೮ ಮತಗಳನ್ನು ಪಡೆದರು.

ಖಜಾಂಚಿ ಸ್ಥಾನಕ್ಕೆ ಈರ್ವರು ಸ್ಪರ್ಧೆ ಮಾಡಿದ್ದು, ಹೇಮಂತ್ ೬೭ ಮತಗಳನ್ನು ಪಡೆದು ಬೀಗಿದರೆ ಹನುಮಂತಯ್ಯ ೫೩ ಮತಗಳನ್ನು ಪಡೆದು ಸೋಲೊಪ್ಪಿಕೊಂಡಿದ್ದಾರೆ.


ಇದೇ ಸಂದರ್ಭದಲ್ಲಿ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಒಟ್ಟು ೧೨೮ ಮತದಾರರ ಪೈಕಿ ಮೂವರು ಗೈರಾಗಿದ್ದು, ೧೨೫ ಮಂದಿ ಮತ ಚಲಾಯಿಸಿದರು. ಚುನಾವಣಾಧಿಕಾರಿಗಳಾಗಿ ಬಿ ಶಿವರಾಜೇಗೌಡ, ಎಲ್ ಸತೀಶ್, ಎಸ್ ಗಂಗಾಧರ್ ಮತ್ತು ಸಿ ಸುಕನ್ಯಾ ಕಾರ್ಯನಿರ್ವಹಿಸಿದರು. ಗೆದ್ದ ಅಭ್ಯರ್ಥಿಗಳನ್ನು ಕಾಂಗ್ರೆಸ್ ಪಕ್ಷದ ಹಲವಾರು ಮುಖಂಡರು ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು, ಸಂಘಸಂಸ್ಥೆಗಳ ಪದಾಧಿಕಾರಿಗಳು ಅಭಿನಂದಿಸಿದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in education »

ಅಂದು ಶಾಲೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಅಪ್ಪಗೆರೆ ತಿಮ್ಮರಾಜು
ಅಂದು ಶಾಲೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಅಪ್ಪಗೆರೆ ತಿಮ್ಮರಾಜು

ಚನ್ನಪಟ್ಟಣ: ನಾವು ನಮ್ಮ ಕಾಲದಲ್ಲಿ ಶಾಲೆಗೆ ಹೋಗಿ ವಿದ್ಯೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಹಲವಾರು ಸಮಸ್ಯೆಗಳು ನಮ್ಮ ಎದುರಿಗಿದ್ದವು. ಆದರೆ, ಈಗ ಅಂತಹ

ಪ್ರತಿ ವಿದ್ಯಾರ್ಥಿಗಳು ಕೌಶಲ್ಯ ರೂಢಿಸಿಕೊಳ್ಳಬೇಕು: ಶಿಕ್ಷಣಾಧಿಕಾರಿ ಮರಿಗೌಡ
ಪ್ರತಿ ವಿದ್ಯಾರ್ಥಿಗಳು ಕೌಶಲ್ಯ ರೂಢಿಸಿಕೊಳ್ಳಬೇಕು: ಶಿಕ್ಷಣಾಧಿಕಾರಿ ಮರಿಗೌಡ

ಚನ್ನಪಟ್ಟಣ: ಶಾಲಾ ವಿದ್ಯಾರ್ಥಿಗಳು ಕೇವಲ ಪಾಠ ಮತ್ತು ಆಟಕ್ಕೆ ಸೀಮಿತವಾಗದೆ ವಿವಿಧ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಕೌಶಲ್ಯ ಕಲಿತ ಮಕ್ಕಳ ಪ್ರತಿಭೆಯನ್ನ

ಪ್ರತಿ ಸರ್ಕಾರಗಳು ಪದವೀಧರರ ಜೊತೆ ಚೆಲ್ಲಾಟವಾಡುತ್ತಿವೆ, ಉದಯ್ ಸಿಂಗ್
ಪ್ರತಿ ಸರ್ಕಾರಗಳು ಪದವೀಧರರ ಜೊತೆ ಚೆಲ್ಲಾಟವಾಡುತ್ತಿವೆ, ಉದಯ್ ಸಿಂಗ್

ಚನ್ನಪಟ್ಟಣ: ಪ್ರತಿ ವರ್ಷವೂ ಲಕ್ಷಾಂತರ ಯುವಕ ಯುವತಿಯರು ಪದವಿಯೊಂದಿಗೆ ಹೊರಬರುತ್ತಾರೆ. ವಿಶ್ವ ವಿದ್ಯಾಲಯಗಳಿಂದ ಪದವಿಯೊಂದಿಗೆ ಬರುವವರಿಗೆ ಸೂಕ್ತ  ಉದ್ಯೋಗ

ದಿವ್ಯಚೇತನ ಇಂಗ್ಲಿಷ್ ಶಾಲೆಯಲ್ಲಿ ಮೇಳೈಸಿದ ಮಿನಿ ವಿಜ್ಞಾನ ಮೇಳ
ದಿವ್ಯಚೇತನ ಇಂಗ್ಲಿಷ್ ಶಾಲೆಯಲ್ಲಿ ಮೇಳೈಸಿದ ಮಿನಿ ವಿಜ್ಞಾನ ಮೇಳ

ಚನ್ನಪಟ್ಟಣ: ಅಗಸ್ತ್ಯ ಅಂತರಾಷ್ಟ್ರೀಯ ಪ್ರತಿಷ್ಠಾನ ಬ್ರಾಡ್ಕಾಂ ವಿಜ್ಞಾನ ಕೇಂದ್ರ ಚನ್ನಪಟ್ಟಣ ಇವರ ವತಿಯಿಂದ ನಗರದ ದಿವ್ಯ ಚೇತನ ಇಂಗ್ಲಿಷ್ ಪ್ರೌಢಶಾಲೆಯಲ್ಲ

ಪಾಠದ ಜೊತೆಗೆ ಆಟದಲ್ಲಿಯೂ ಮುಂಚೂಣಿಗೆ ಬರಬೇಕು. ವಿ ಬಾಲಸುಬ್ರಹ್ಮಣ್ಯಂ
ಪಾಠದ ಜೊತೆಗೆ ಆಟದಲ್ಲಿಯೂ ಮುಂಚೂಣಿಗೆ ಬರಬೇಕು. ವಿ ಬಾಲಸುಬ್ರಹ್ಮಣ್ಯಂ

ಚನ್ನಪಟ್ಟಣ,: ಪ್ರತಿಯೊಬ್ಬ ವಿದ್ಯಾರ್ಥಿಯು ಶಿಕ್ಷಣದ ಜೊತೆಯಲ್ಲಿ ಕ್ರೀಡಾಮನೋಭಾವನೆ ಬೆಳಸಿಕೊಳ್ಳಬೇಕು. ಮನಸ್ಸು ಉಲ್ಲಸಿತವಾಗಲು ಕ್ರೀಡೆ ಸಹಕಾರಿ ಎಂದು ಬಾಲು

ಉಪನ್ಯಾಸಕರ ಧರಣಿ, ಕಲಿಕೆಗೆ ತೊಂದರೆ, ಎಬಿವಿಪಿ ಯಿಂದ ಪ್ರತಿಭಟನೆ
ಉಪನ್ಯಾಸಕರ ಧರಣಿ, ಕಲಿಕೆಗೆ ತೊಂದರೆ, ಎಬಿವಿಪಿ ಯಿಂದ ಪ್ರತಿಭಟನೆ

ಚನ್ನಪಟ್ಟಣ: ಸರ್ಕಾರಿ ಕಾಲೇಜುಗಳ ಉಪನ್ಯಾಸಕರು ಧರಣಿ ನಿರತರಾಗಿರುವುದರಿಂದ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯಿದೆ. ಇದರಿಂದ ಶೈಕ್ಷಣಿಕ ವರ್ಷದ ಕಲಿಕೆಗೆ ತೊ

ಆರೋಗ್ಯ, ಆಯಸ್ಸು ಹೆಚ್ಚಿಸುವ ವೈದ್ಯರು ಆರೋಗ್ಯ ಕಾಪಾಡಿಕೊಳ್ಳಬೇಕು. ಚಾಮುಂಡೇಶ್ವರಿ ಆಸ್ಪತ್ರೆ ಉದ್ಘಾಟನೆಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ
ಆರೋಗ್ಯ, ಆಯಸ್ಸು ಹೆಚ್ಚಿಸುವ ವೈದ್ಯರು ಆರೋಗ್ಯ ಕಾಪಾಡಿಕೊಳ್ಳಬೇಕು. ಚಾಮುಂಡೇಶ್ವರಿ ಆಸ್ಪತ್ರೆ ಉದ್ಘಾಟನೆಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ

ಚನ್ನಪಟ್ಟಣ:bಆಸ್ಪತ್ರೆಗೆ ಬರುವ ರೋಗಿಗಳ ಅರೋಗ್ಯ ತಪಾಸಿಸಿ, ರೋಗ ವಾಸಿ ಮಾಡಿ, ಅವರ ಆರೋಗ್ಯ ದ ಜೊತೆಗೆ ಆಯಸ್ಸನ್ನು ಹೆಚ್ಚಿಸುವಲ್ಲಿ ನಿಷ್ಣಾತರಾದ ವೈದ್ಯರು

ಪೆಟ್ಟಾ ಸರ್ಕಾರಿ ಶಾಲಾ ಆವರಣದಲ್ಲಿ ನಗರಸಭೆಯ ಕಸದ ರಾಶಿ, ಅಲ್ಲಗಳೆದ ಪೌರಾಯುಕ್ತ
ಪೆಟ್ಟಾ ಸರ್ಕಾರಿ ಶಾಲಾ ಆವರಣದಲ್ಲಿ ನಗರಸಭೆಯ ಕಸದ ರಾಶಿ, ಅಲ್ಲಗಳೆದ ಪೌರಾಯುಕ್ತ

ಚನ್ನಪಟ್ಟಣ: ನಗರದ ಡೂಂ ಲೈಟ್ ವೃತ್ತದಲ್ಲಿರುವ ಏಳು ದಶಕದಷ್ಟು ಹಳೆಯಾದಾದ ಪೆಟ್ಟಾ ಹೆಸರಿನ ಸರ್ಕಾರಿ ಶಾಲಾ ಆವರಣದಲ್ಲಿ ಹತ್ತಾರು ಟನ್ ಕಸದ ರಾಶಿಯನ್ನು ರಾ

ಆರ್ಥಿಕವಾಗಿ ಬೆಳೆದವರೆಲ್ಲರೂ ವಿದ್ಯಾರ್ಜನೆಗೆ ಮುಂದಡಿಯಿಡಬೇಕು, ಸಚಿವ ಮಧುಬಂಗಾರಪ್ಪ
ಆರ್ಥಿಕವಾಗಿ ಬೆಳೆದವರೆಲ್ಲರೂ ವಿದ್ಯಾರ್ಜನೆಗೆ ಮುಂದಡಿಯಿಡಬೇಕು, ಸಚಿವ ಮಧುಬಂಗಾರಪ್ಪ

ಚನ್ನಪಟ್ಟಣ: ಬಡತನದ ಬೇಗೆಯಲ್ಲಿ ಬೆಂದು, ಉನ್ನತ ಶಿಕ್ಷಣ ಪಡೆದು, ಉತ್ತಮ ಸ್ಥಾನಮಾನದ ಜೊತೆಗೆ ಆರ್ಥಿಕವಾಗಿ ಸದೃಢವಾದ ನಂತರ ತನ್ನ ಜನ್ಮದಾತರಿಗೆ, ಹುಟ್ಡಿದೂರ

ಕಾವೇರಿ ಕಿಚ್ಚು, ರಾಮನಗರ ಜಿಲ್ಲೆ ಬಂದ್, ಶಾಲಾ-ಕಾಲೇಜಿಗೆ ರಜೆ, ಸರ್ಕಾರಿ ಕಛೇರಿ ರಜೆಗಾಗಿ ಕಾಯುತ್ತಿರುವ ನೌಕರರು
ಕಾವೇರಿ ಕಿಚ್ಚು, ರಾಮನಗರ ಜಿಲ್ಲೆ ಬಂದ್, ಶಾಲಾ-ಕಾಲೇಜಿಗೆ ರಜೆ, ಸರ್ಕಾರಿ ಕಛೇರಿ ರಜೆಗಾಗಿ ಕಾಯುತ್ತಿರುವ ನೌಕರರು

ರಾಮನಗರ: ನಮ್ಮ ರಾಜ್ಯದ ಕೆಲ ಭಾಗಗಳಿಗೆ ಕುಡಿಯುವ ನೀರಿಗೆ ತತ್ವಾರವಾಗಿದೆ, ಮಂಡ್ಯ, ಮೈಸೂರು ಭಾಗದ ರೈತರಿಗೆ ಬೆಳೆ ಬೆಳೆಯಲು ನೀರಿಲ್ಲಾ, ಇಂತಹ ಸಂಕಷ್ಟದ ಸಮಯ

Top Stories »  


Top ↑