ಒಳ್ಳೆಯವರಾಗಿ ಉತ್ತಮ ಜೀವನ ರೂಪಿಸಿಕೊಳ್ಳಿ, ರೌಡಿ ಶೀಟರ್ ಗಳಿಗೆ ಪಾಠ ಮಾಡಿದ ಡಿವೈಎಸ್ಪಿ ಕೆ ಸಿ ಗಿರಿ
ಚನ್ನಪಟ್ಟಣ: ರೌಡಿಶೀಟರ್ ಗಳು ಅಪರಾಧ ಕೃತ್ಯಗಳಿಂದ ದೂರವಿರಬೇಕು. ಸಮಾಜದಲ್ಲಿ ತಮ್ಮ ನಡತೆಯನ್ನು ಸುಧಾರಿಸಿಕೊಳ್ಳಬೇಕು. ತಮ್ಮ ಸನ್ನಡತೆಯ ಆಧಾರದ ಮೇಲೆ ರೌಡಿ ಶೀಟರ್ ನಿಂದ ಬಿಡುಗಡೆ ಮಾಡಲು ಸಾಧ್ಯವಾಗುತ್ತದೆ, ಇಲ್ಲದಿದ್ದಲ್ಲಿ ಕಠಿಣ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಡಿವೈಎಸ್ಪಿ ಕೆ.ಸಿ.ಗಿರಿ ತಿಳಿಸಿದರು.
ನಗರದ ಪುರಪೊಲೀಸ್ ಠಾಣೆ ಆವರಣದಲ್ಲಿ ತಾಲ್ಲೂಕಿನ ಎಲ್ಲಾ ಪೋಲಿಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಗಳ ಪರೇಡ್ ನಡೆಸಿ ಮಾತನಾಡಿದ ಅವರು, ರೌಡಿಶೀಟರ್ ಗಳು ಇನ್ನಾದರೂ ಎಚ್ಚೆತ್ತುಕೊಂಡು ತಮ್ಮ ನಡತೆಯನ್ನು ಬದಲಿಸಿಕೊಳ್ಳಬೇಕು. ಇಲ್ಲದಿದ್ದಲ್ಲಿ ಶಾಶ್ವತವಾಗಿರೌಡಿಶೀಟರ್ ಗಳಾಗಿಯೇ ಉಳಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಅಪರಾಧ ಕೃತ್ಯಗಳಲ್ಲಿ ತೊಡಗುವುದರಿಂದ ನಿಮ್ಮ ಜತೆಗೆ ನಿಮ್ಮ ಕುಟುಂಬದ ಹೆಸರು ಸಹ ಹಾಳಾಗುತ್ತದೆ. ಇದರಿಂದ ಸಾಕಷ್ಟು ತೊಂದರೆ ಅನುಭವಿಸಬೇಕಾಗುತ್ತದೆ. ಇಷ್ಟು ದಿನ ಹೇಗೆ ನಡೆದಿಕೊಂಡಿರೋ ಗೊತ್ತಿಲ್ಲ, ಆದರೆ, ಇನ್ನು ಮುಂದೆ ಯಾವುದಾದರೂ ಸಮಾಜ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದರೆ ಕಠಿಣ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಇನ್ನು ಮುಂದಾದರೂ ತಮ್ಮ ನಡೆತೆಯನ್ನು ರೌಡಿಶೀಟರ್ ಗಳು ಬದಲಿಸಿಕೊಂಡು ಸಮಾಜದ ಮುಖ್ಯ ವಾಹಿನಿಯಲ್ಲಿ ಸಾಮಾನ್ಯರಂತೆ ತೊಡಗಿಸಿಕೊಳ್ಳಬೇಕು. ಅಪರಾಧ ಕೃತ್ಯಗಳಲ್ಲಿ ತೊಡಗದೇ ಉತ್ತಮ ನಡತೆಯಿಂದ ನಡೆದುಕೊಂಡಲ್ಲಿ ರೌಡಿಶೀಟರ್ ಪಟ್ಟಿಯಿಂದ ಹೆಸರನ್ನು ತೆಗೆಯುವ ಕುರಿತು ಪರಿಶೀಲಿಸಲಾಗುವುದು ಎಂದು ಭರವಸೆ ನೀಡಿದರು.
ಅಪರಾಧ ಕೃತ್ಯಗಳನ್ನು ನಡೆಸಿಯೂ ಹಣಬಲದಿಂದ ಅಥವಾ ಯಾರದೋ ಪ್ರಭಾವದಿಂದ ಪಾರಾಗುತ್ತೇವೆ ಎಂಬ ಭ್ರಮೆಯಿಂದ ರೌಡಿಗಳು ಹೊರಬರಬೇಕು. ಸಮಾಜಘಾತಕ ಕೆಲಸದಲ್ಲಿ ತೊಡಗಿಸಿಕೊಂಡಲ್ಲಿ ಯಾರೂ ಎಷ್ಟೇ ಪ್ರಭಾವಶಾಲಿಯಾಗಿದ್ದರೂ ಹೆಡೆಮುರಿ ಕಟ್ಟಲಾಗುವುದು. ಆದ್ದರಿಂದ ಇನ್ನಾದರೂ ನಿಮ್ಮ ನಡೆತೆಯನ್ನು ಸುಧಾರಿಸಿಕೊಳ್ಳಿ ಎಂದು ಸಲಹೆ ನೀಡಿದರು.
ಪುರಪೊಲೀಸ್ ಠಾಣೆ, ಪೂರ್ವ ಪೊಲೀಸ್ ಠಾಣೆ, ಗ್ರಾಮಾಂತರ ಪೊಲೀಸ್ ಠಾಣೆ, ಅಕ್ಕೂರು ಪೊಲೀಸ್ ಠಾಣೆ ಹಾಗೂ ಎಂ.ಕೆ.ದೊಡ್ಡಿ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿಶೀಟರ್ ಗಳ ಪರೇಡ್ ನಡೆಸಲಾಯಿತು.
ಈ ಸಂದರ್ಭದಲ್ಲಿ ನಗರ ವೃತ್ತ ನಿರೀಕ್ಷಕರಾದ ಶೋಭಾ, ಟಿ.ಟಿ.ಕೃಷ್ಣ, ಪಿಎಸ್ಐಗಳಾದ ಹರೀಶ್, ಲಿಯಾಕತ್, ಬಸವರಾಜು, ಸೌಜನ್ಯ , ಮಾದೇಶ್, ಮಹೇಶ್ ಹಾಗೂ ಪೊಲೀಸ್ ಸಿಬ್ಬಂದಿ ಇದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in education »
ಅಂದು ಶಾಲೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಅಪ್ಪಗೆರೆ ತಿಮ್ಮರಾಜು
ಚನ್ನಪಟ್ಟಣ: ನಾವು ನಮ್ಮ ಕಾಲದಲ್ಲಿ ಶಾಲೆಗೆ ಹೋಗಿ ವಿದ್ಯೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಹಲವಾರು ಸಮಸ್ಯೆಗಳು ನಮ್ಮ ಎದುರಿಗಿದ್ದವು. ಆದರೆ, ಈಗ ಅಂತಹ
ಪ್ರತಿ ವಿದ್ಯಾರ್ಥಿಗಳು ಕೌಶಲ್ಯ ರೂಢಿಸಿಕೊಳ್ಳಬೇಕು: ಶಿಕ್ಷಣಾಧಿಕಾರಿ ಮರಿಗೌಡ
ಚನ್ನಪಟ್ಟಣ: ಶಾಲಾ ವಿದ್ಯಾರ್ಥಿಗಳು ಕೇವಲ ಪಾಠ ಮತ್ತು ಆಟಕ್ಕೆ ಸೀಮಿತವಾಗದೆ ವಿವಿಧ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಕೌಶಲ್ಯ ಕಲಿತ ಮಕ್ಕಳ ಪ್ರತಿಭೆಯನ್ನ
ಪ್ರತಿ ಸರ್ಕಾರಗಳು ಪದವೀಧರರ ಜೊತೆ ಚೆಲ್ಲಾಟವಾಡುತ್ತಿವೆ, ಉದಯ್ ಸಿಂಗ್
ಚನ್ನಪಟ್ಟಣ: ಪ್ರತಿ ವರ್ಷವೂ ಲಕ್ಷಾಂತರ ಯುವಕ ಯುವತಿಯರು ಪದವಿಯೊಂದಿಗೆ ಹೊರಬರುತ್ತಾರೆ. ವಿಶ್ವ ವಿದ್ಯಾಲಯಗಳಿಂದ ಪದವಿಯೊಂದಿಗೆ ಬರುವವರಿಗೆ ಸೂಕ್ತ ಉದ್ಯೋಗ
ದಿವ್ಯಚೇತನ ಇಂಗ್ಲಿಷ್ ಶಾಲೆಯಲ್ಲಿ ಮೇಳೈಸಿದ ಮಿನಿ ವಿಜ್ಞಾನ ಮೇಳ
ಚನ್ನಪಟ್ಟಣ: ಅಗಸ್ತ್ಯ ಅಂತರಾಷ್ಟ್ರೀಯ ಪ್ರತಿಷ್ಠಾನ ಬ್ರಾಡ್ಕಾಂ ವಿಜ್ಞಾನ ಕೇಂದ್ರ ಚನ್ನಪಟ್ಟಣ ಇವರ ವತಿಯಿಂದ ನಗರದ ದಿವ್ಯ ಚೇತನ ಇಂಗ್ಲಿಷ್ ಪ್ರೌಢಶಾಲೆಯಲ್ಲ
ಪಾಠದ ಜೊತೆಗೆ ಆಟದಲ್ಲಿಯೂ ಮುಂಚೂಣಿಗೆ ಬರಬೇಕು. ವಿ ಬಾಲಸುಬ್ರಹ್ಮಣ್ಯಂ
ಚನ್ನಪಟ್ಟಣ,: ಪ್ರತಿಯೊಬ್ಬ ವಿದ್ಯಾರ್ಥಿಯು ಶಿಕ್ಷಣದ ಜೊತೆಯಲ್ಲಿ ಕ್ರೀಡಾಮನೋಭಾವನೆ ಬೆಳಸಿಕೊಳ್ಳಬೇಕು. ಮನಸ್ಸು ಉಲ್ಲಸಿತವಾಗಲು ಕ್ರೀಡೆ ಸಹಕಾರಿ ಎಂದು ಬಾಲು
ಉಪನ್ಯಾಸಕರ ಧರಣಿ, ಕಲಿಕೆಗೆ ತೊಂದರೆ, ಎಬಿವಿಪಿ ಯಿಂದ ಪ್ರತಿಭಟನೆ
ಚನ್ನಪಟ್ಟಣ: ಸರ್ಕಾರಿ ಕಾಲೇಜುಗಳ ಉಪನ್ಯಾಸಕರು ಧರಣಿ ನಿರತರಾಗಿರುವುದರಿಂದ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯಿದೆ. ಇದರಿಂದ ಶೈಕ್ಷಣಿಕ ವರ್ಷದ ಕಲಿಕೆಗೆ ತೊ
ಆರೋಗ್ಯ, ಆಯಸ್ಸು ಹೆಚ್ಚಿಸುವ ವೈದ್ಯರು ಆರೋಗ್ಯ ಕಾಪಾಡಿಕೊಳ್ಳಬೇಕು. ಚಾಮುಂಡೇಶ್ವರಿ ಆಸ್ಪತ್ರೆ ಉದ್ಘಾಟನೆಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ
ಚನ್ನಪಟ್ಟಣ:bಆಸ್ಪತ್ರೆಗೆ ಬರುವ ರೋಗಿಗಳ ಅರೋಗ್ಯ ತಪಾಸಿಸಿ, ರೋಗ ವಾಸಿ ಮಾಡಿ, ಅವರ ಆರೋಗ್ಯ ದ ಜೊತೆಗೆ ಆಯಸ್ಸನ್ನು ಹೆಚ್ಚಿಸುವಲ್ಲಿ ನಿಷ್ಣಾತರಾದ ವೈದ್ಯರು
ಪೆಟ್ಟಾ ಸರ್ಕಾರಿ ಶಾಲಾ ಆವರಣದಲ್ಲಿ ನಗರಸಭೆಯ ಕಸದ ರಾಶಿ, ಅಲ್ಲಗಳೆದ ಪೌರಾಯುಕ್ತ
ಆರ್ಥಿಕವಾಗಿ ಬೆಳೆದವರೆಲ್ಲರೂ ವಿದ್ಯಾರ್ಜನೆಗೆ ಮುಂದಡಿಯಿಡಬೇಕು, ಸಚಿವ ಮಧುಬಂಗಾರಪ್ಪ
ಚನ್ನಪಟ್ಟಣ: ಬಡತನದ ಬೇಗೆಯಲ್ಲಿ ಬೆಂದು, ಉನ್ನತ ಶಿಕ್ಷಣ ಪಡೆದು, ಉತ್ತಮ ಸ್ಥಾನಮಾನದ ಜೊತೆಗೆ ಆರ್ಥಿಕವಾಗಿ ಸದೃಢವಾದ ನಂತರ ತನ್ನ ಜನ್ಮದಾತರಿಗೆ, ಹುಟ್ಡಿದೂರ
ಕಾವೇರಿ ಕಿಚ್ಚು, ರಾಮನಗರ ಜಿಲ್ಲೆ ಬಂದ್, ಶಾಲಾ-ಕಾಲೇಜಿಗೆ ರಜೆ, ಸರ್ಕಾರಿ ಕಛೇರಿ ರಜೆಗಾಗಿ ಕಾಯುತ್ತಿರುವ ನೌಕರರು
ರಾಮನಗರ: ನಮ್ಮ ರಾಜ್ಯದ ಕೆಲ ಭಾಗಗಳಿಗೆ ಕುಡಿಯುವ ನೀರಿಗೆ ತತ್ವಾರವಾಗಿದೆ, ಮಂಡ್ಯ, ಮೈಸೂರು ಭಾಗದ ರೈತರಿಗೆ ಬೆಳೆ ಬೆಳೆಯಲು ನೀರಿಲ್ಲಾ, ಇಂತಹ ಸಂಕಷ್ಟದ ಸಮಯ
ಪ್ರತಿಕ್ರಿಯೆಗಳು