ಪ್ರತಿ ವಿದ್ಯಾರ್ಥಿಗಳು ಕೌಶಲ್ಯ ರೂಢಿಸಿಕೊಳ್ಳಬೇಕು: ಶಿಕ್ಷಣಾಧಿಕಾರಿ ಮರಿಗೌಡ
ಚನ್ನಪಟ್ಟಣ: ಶಾಲಾ ವಿದ್ಯಾರ್ಥಿಗಳು ಕೇವಲ ಪಾಠ ಮತ್ತು ಆಟಕ್ಕೆ ಸೀಮಿತವಾಗದೆ ವಿವಿಧ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಕೌಶಲ್ಯ ಕಲಿತ ಮಕ್ಕಳ ಪ್ರತಿಭೆಯನ್ನು ಹೊರಸೂಸುವ ಆ ಒಂದು ದಿನವೇ ಸಡಗರ, ಸಂಭ್ರಮ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮರಿಗೌಡ ತಿಳಿಸಿದರು.
ಅವರು ನಗರದ ಬಾಲು ಶಾಲೆಯ ಆಟದ ಮೈದಾನ (ಹಳೇ ಕೊರ್ಟ್ ಹತ್ತಿರ) ಕೋಟೆಯಲ್ಲಿ ಆಯೋಜಿಸಿದ್ದ ಬಾಲು ಶಾಲೆಯ ೨೨ ನೇವರ್ಷ ದ ವಾರ್ಷಿಕೋತ್ಸವ ಸಮಾರಂಭ- ೨೦೨೪ ರ ಸಡಗರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಕ್ಕಳಲ್ಲಿ ಸುಪ್ತ ಪ್ರತಿಭೆ ಇರುತ್ತದೆ, ಆ ಪ್ರತಿಭೆಯನ್ನು ಗುರುತಿಸಲು ಶಿಕ್ಷಕರು ಹಾಗೂ ಪೋಷಕರು ಸಶಕ್ತರಾಗಬೇಕು. ಈ ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಪ್ರತಿವರ್ಷದಂತೆ ಈ ವರ್ಷವು ವಾರ್ಷಿಕೋತ್ಸವ ಕಾರ್ಯಕ್ರಮ ಆಯೋಜಿಸಿದ್ದು ಮಕ್ಕಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ. ಇಂದು ಅವರ ಪ್ರತಿಭೆಯನ್ನು ಗುರುತಿಸುವ ದಿನವಾಗಿದೆ ಎಂದರು.
ಪ್ರತಿಯೊಂದು ಮನೆಯಲ್ಲಿಯು ಪೋಷಕರು ತಮ್ಮ ಮಕ್ಕಳ ಪ್ರತಿಭೆಯನ್ನು ಗುರುತಿಸಬೇಕು ಹಾಗೂ ಮಕ್ಕಳು ಯಾವುದರ ಬಗ್ಗೆ ಆಸಕ್ತಿ ಹೊಂದಿದ್ದಾರೆಂದು ತಿಳಿದುಕೊಂಡು ಮಕ್ಕಳಿಗೆ ಯಾವುದರ ಬಗ್ಗೆ ಅಸಕ್ತಿ ಇದೆ ಅದನ್ನು ಪ್ರೊತ್ಸಾಹಿಸಿದರೆ ಮಕ್ಕಳು ರಾಷ್ಟ್ರದ ಆಸ್ತಿಯಾಗುತ್ತಾರೆ, ಸಮಾಜಘಾತುಕ ವ್ಯಕ್ತಿ ಯಾಗುವುದಿಲ್ಲ. ಇದು ಅವರ ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದರು.
ಮಕ್ಕಳ ಪರೀಕ್ಷೆ ಸಮಯದಲ್ಲಿ ಎರಡು ತಿಂಗಳು ಟಿವಿ ಬಂದ್ ಮಾಡಿದರೆ ಮಕ್ಕಳು ಹೆಚ್ಚು ಶಿಕ್ಷಣ ಪಡೆಯಲು ಸಾದ್ಯವಾಗುತ್ತದೆ. ಹಾಗೂ ಅವರ ಗಮನ ಓದುವುದನ್ನು ಬಿಟ್ಟು ಬೇರೆ ಕಡೆ ಹೋಗುವುದಿಲ್ಲ ಎಂದರು.
ಕರ್ನಾಟಕದ ಮಕ್ಕಳು ತುಂಬಾ ಬುದ್ದಿವಂತರು. ಅಮೆರಿಕಾ ದೇಶದ ಶಿಕ್ಷಣಕ್ಕೆ ಪೈಪೋಟಿಕೊಡುವ ದೇಶ ಯಾವುದೇಂದರೆ ಅದು ಭಾರತ ಅದರಲ್ಲೂ ಕರ್ನಾಟಕ ಮುಂದು ಎಂದು ಸ್ವತಃ ಅಮೇರಿಕಾ ಅಧ್ಯಕ್ಷರಾಗಿದ್ದ ಬರಾಕ್ ಒಬಾಮಾ ತಿಳಿಸಿದ್ದಾರೆ ಎಂದು ನೆನಪಿಸಿದರು. ಶೈಕ್ಷಣಿಕ ಸಂಸ್ಥೆಗಳು ಮತ್ತು ಪೋಷಕರು ಮಕ್ಕಳ ಬೆನ್ನಿಗೆ ನಿಂತು ಪ್ರೋತ್ಸಾಹಿಸಿದರೆ ದೇಶದ ಸತ್ಪ್ರಜೆಗಳಾಗಿ ಬೆಳೆಯುತ್ತಾರೆ ಎಂದ ಅವರು, ಈ ನಿಟ್ಟಿನಲ್ಲಿ ಬಾಲು ಶಿಕ್ಣಣ ಸಂಸ್ಥೆ ಯು ಮಕ್ಕಳಿಗೆ ಕಡಿಮೆ ಶುಲ್ಕ ಪಡೆದು ಉತ್ತಮ ಶಿಕ್ಷಣ ನೀಡುತ್ತಿದೆ ಎಂದು ತಿಳಿಸಿ ಶಾಲೆಯು ಇನ್ನು ಎತ್ತರಕ್ಕೆ ಬೆಳೆಯಲಿ ಎಂದು ಇದೇ ಸಮಯದಲ್ಲಿ ಆಶಿಸಿದರು.
ಸಂದರ್ಭದಲ್ಲಿ ಕಳೆದ ವರ್ಷ ಎಸ್ಎಸ್ಎಲ್ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಹಾಗೂ ಗಣ್ಯರನ್ನು ಬಾಲು ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾದ ವೆಂಕಟಸುಬ್ಬಯ ಚೆಟ್ಟಿ, ಬಾಲು ಸಂಸ್ಥೆಯ ಜಂಟಿ ನಿರ್ದೇಶಕ ಬಾಲಸುಬ್ರಹ್ಮಣ್ಯಂ, ಡಾ.ಮನೋಜ್ ಅವರು ಸನ್ಮಾನಿಸಿ ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ಮಂಜುಳಾ, ಅಣ್ಣಮ್ಮ ಎಂಬ ಇಬ್ಬರು ಪೌರಕಾರ್ಮಿಕರನ್ನು ಸನ್ಮಾನಿಸಿ ಗೌರವಿಸಲಾಯಿತು.
ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ವೇದಿಕೆಯಲ್ಲಿ ಒಕ್ಕಲಿಗರ ಸಂಘದ ಸಹಕಾರ್ಯದರ್ಶಿ ವೆಂಕಟರಾಮೇಗೌಡ, ರಾಮನಗರ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಶ್ರೀವತ್ಸ, ತಿಪ್ರೇಗೌಡ, ರಾಜು, ವರದರಾಜು, ಕುಸುಮಲತಾ, ಶಿವಕುಮಾರ್, ಗಂಗಾಧರ್, ಯೋಗೇಶ್ ಚಕ್ಕೆರೆ, ವೆಂಕಟೇಶ್ ಮೂರ್ತಿ, ಅಜಾದ್ ಬ್ರೀಗೇಡ್ ಅಧ್ಯಕ್ಷ ಗಜೇಂದ್ರ ಸಿಂಗ್, ರೇಣುಕಾ ಜಗದೀಶ್, ಡಾ. ಶೈಲಜಾ ಕೆಪಿ, ವಿ. ಕವಿತಾ, ಡಾ.ಕೆ.ಪಿ ನೀರಜಾ, ಡಾ.ಜಯಶ್ರೀ, ಕವಿತಾ ಎಸ್, ಹಾಗೂ ಸಮಾರಂಭದಲ್ಲಿ ವಿದ್ಯಾರ್ಥಿಗಳು ಪೋಷಕರು ಸೇರಿದಂತೆ ಹಲವರು ಭಾಗವಹಿಸಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in education »
ಅಂದು ಶಾಲೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಅಪ್ಪಗೆರೆ ತಿಮ್ಮರಾಜು
ಚನ್ನಪಟ್ಟಣ: ನಾವು ನಮ್ಮ ಕಾಲದಲ್ಲಿ ಶಾಲೆಗೆ ಹೋಗಿ ವಿದ್ಯೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಹಲವಾರು ಸಮಸ್ಯೆಗಳು ನಮ್ಮ ಎದುರಿಗಿದ್ದವು. ಆದರೆ, ಈಗ ಅಂತಹ
ಪ್ರತಿ ವಿದ್ಯಾರ್ಥಿಗಳು ಕೌಶಲ್ಯ ರೂಢಿಸಿಕೊಳ್ಳಬೇಕು: ಶಿಕ್ಷಣಾಧಿಕಾರಿ ಮರಿಗೌಡ
ಚನ್ನಪಟ್ಟಣ: ಶಾಲಾ ವಿದ್ಯಾರ್ಥಿಗಳು ಕೇವಲ ಪಾಠ ಮತ್ತು ಆಟಕ್ಕೆ ಸೀಮಿತವಾಗದೆ ವಿವಿಧ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಕೌಶಲ್ಯ ಕಲಿತ ಮಕ್ಕಳ ಪ್ರತಿಭೆಯನ್ನ
ಪ್ರತಿ ಸರ್ಕಾರಗಳು ಪದವೀಧರರ ಜೊತೆ ಚೆಲ್ಲಾಟವಾಡುತ್ತಿವೆ, ಉದಯ್ ಸಿಂಗ್
ಚನ್ನಪಟ್ಟಣ: ಪ್ರತಿ ವರ್ಷವೂ ಲಕ್ಷಾಂತರ ಯುವಕ ಯುವತಿಯರು ಪದವಿಯೊಂದಿಗೆ ಹೊರಬರುತ್ತಾರೆ. ವಿಶ್ವ ವಿದ್ಯಾಲಯಗಳಿಂದ ಪದವಿಯೊಂದಿಗೆ ಬರುವವರಿಗೆ ಸೂಕ್ತ ಉದ್ಯೋಗ
ದಿವ್ಯಚೇತನ ಇಂಗ್ಲಿಷ್ ಶಾಲೆಯಲ್ಲಿ ಮೇಳೈಸಿದ ಮಿನಿ ವಿಜ್ಞಾನ ಮೇಳ
ಚನ್ನಪಟ್ಟಣ: ಅಗಸ್ತ್ಯ ಅಂತರಾಷ್ಟ್ರೀಯ ಪ್ರತಿಷ್ಠಾನ ಬ್ರಾಡ್ಕಾಂ ವಿಜ್ಞಾನ ಕೇಂದ್ರ ಚನ್ನಪಟ್ಟಣ ಇವರ ವತಿಯಿಂದ ನಗರದ ದಿವ್ಯ ಚೇತನ ಇಂಗ್ಲಿಷ್ ಪ್ರೌಢಶಾಲೆಯಲ್ಲ
ಪಾಠದ ಜೊತೆಗೆ ಆಟದಲ್ಲಿಯೂ ಮುಂಚೂಣಿಗೆ ಬರಬೇಕು. ವಿ ಬಾಲಸುಬ್ರಹ್ಮಣ್ಯಂ
ಚನ್ನಪಟ್ಟಣ,: ಪ್ರತಿಯೊಬ್ಬ ವಿದ್ಯಾರ್ಥಿಯು ಶಿಕ್ಷಣದ ಜೊತೆಯಲ್ಲಿ ಕ್ರೀಡಾಮನೋಭಾವನೆ ಬೆಳಸಿಕೊಳ್ಳಬೇಕು. ಮನಸ್ಸು ಉಲ್ಲಸಿತವಾಗಲು ಕ್ರೀಡೆ ಸಹಕಾರಿ ಎಂದು ಬಾಲು
ಉಪನ್ಯಾಸಕರ ಧರಣಿ, ಕಲಿಕೆಗೆ ತೊಂದರೆ, ಎಬಿವಿಪಿ ಯಿಂದ ಪ್ರತಿಭಟನೆ
ಚನ್ನಪಟ್ಟಣ: ಸರ್ಕಾರಿ ಕಾಲೇಜುಗಳ ಉಪನ್ಯಾಸಕರು ಧರಣಿ ನಿರತರಾಗಿರುವುದರಿಂದ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯಿದೆ. ಇದರಿಂದ ಶೈಕ್ಷಣಿಕ ವರ್ಷದ ಕಲಿಕೆಗೆ ತೊ
ಆರೋಗ್ಯ, ಆಯಸ್ಸು ಹೆಚ್ಚಿಸುವ ವೈದ್ಯರು ಆರೋಗ್ಯ ಕಾಪಾಡಿಕೊಳ್ಳಬೇಕು. ಚಾಮುಂಡೇಶ್ವರಿ ಆಸ್ಪತ್ರೆ ಉದ್ಘಾಟನೆಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ
ಚನ್ನಪಟ್ಟಣ:bಆಸ್ಪತ್ರೆಗೆ ಬರುವ ರೋಗಿಗಳ ಅರೋಗ್ಯ ತಪಾಸಿಸಿ, ರೋಗ ವಾಸಿ ಮಾಡಿ, ಅವರ ಆರೋಗ್ಯ ದ ಜೊತೆಗೆ ಆಯಸ್ಸನ್ನು ಹೆಚ್ಚಿಸುವಲ್ಲಿ ನಿಷ್ಣಾತರಾದ ವೈದ್ಯರು
ಪೆಟ್ಟಾ ಸರ್ಕಾರಿ ಶಾಲಾ ಆವರಣದಲ್ಲಿ ನಗರಸಭೆಯ ಕಸದ ರಾಶಿ, ಅಲ್ಲಗಳೆದ ಪೌರಾಯುಕ್ತ
ಆರ್ಥಿಕವಾಗಿ ಬೆಳೆದವರೆಲ್ಲರೂ ವಿದ್ಯಾರ್ಜನೆಗೆ ಮುಂದಡಿಯಿಡಬೇಕು, ಸಚಿವ ಮಧುಬಂಗಾರಪ್ಪ
ಚನ್ನಪಟ್ಟಣ: ಬಡತನದ ಬೇಗೆಯಲ್ಲಿ ಬೆಂದು, ಉನ್ನತ ಶಿಕ್ಷಣ ಪಡೆದು, ಉತ್ತಮ ಸ್ಥಾನಮಾನದ ಜೊತೆಗೆ ಆರ್ಥಿಕವಾಗಿ ಸದೃಢವಾದ ನಂತರ ತನ್ನ ಜನ್ಮದಾತರಿಗೆ, ಹುಟ್ಡಿದೂರ
ಕಾವೇರಿ ಕಿಚ್ಚು, ರಾಮನಗರ ಜಿಲ್ಲೆ ಬಂದ್, ಶಾಲಾ-ಕಾಲೇಜಿಗೆ ರಜೆ, ಸರ್ಕಾರಿ ಕಛೇರಿ ರಜೆಗಾಗಿ ಕಾಯುತ್ತಿರುವ ನೌಕರರು
ರಾಮನಗರ: ನಮ್ಮ ರಾಜ್ಯದ ಕೆಲ ಭಾಗಗಳಿಗೆ ಕುಡಿಯುವ ನೀರಿಗೆ ತತ್ವಾರವಾಗಿದೆ, ಮಂಡ್ಯ, ಮೈಸೂರು ಭಾಗದ ರೈತರಿಗೆ ಬೆಳೆ ಬೆಳೆಯಲು ನೀರಿಲ್ಲಾ, ಇಂತಹ ಸಂಕಷ್ಟದ ಸಮಯ
ಪ್ರತಿಕ್ರಿಯೆಗಳು