ಪಿಯುಸಿ ವಿಜ್ಞಾನ ಪುಸ್ತಕ ಇನ್ನು ಮುಂದೆ ಕನ್ನಡ ಮಾಧ್ಯಮದಲ್ಲಿ
ಬೆಂಗಳೂರು: ಎಸ್ಎಸ್ಎಲ್ಸಿವರೆಗೆ ಕನ್ನಡ ಮಾಧ್ಯಮದಲ್ಲಿ ಓದಿದ ವಿದ್ಯಾರ್ಥಿಗಳು ಪಿಯುನಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡಲು ಇನ್ಮುಂದೆ ಯಾವುದೇ ಆತಂಕ ಪಡಬೇಕಾಗಿಲ್ಲ. ನಿರ್ಭೀತಿಯಿಂದ ವಿಜ್ಞಾನ ವಿಭಾಗ ಸೇರಿಕೊಂಡು, ಮಾತೃಭಾಷೆಯಲ್ಲೇ
ಅಧ್ಯಯನ ಮಾಡಬಹುದು. ಕಾರಣ, ಮುಂದಿನ ಶೈಕ್ಷಣಿಕ ವರ್ಷದಿಂದ (2018-19) ಪದವಿ ಪೂರ್ವ ಶಿಕ್ಷಣ ಇಲಾಖೆ, ವಿಜ್ಞಾನ ವಿಭಾಗದ ಎನ್ಸಿಆರ್ಟಿ ಪಠ್ಯಪುಸ್ತಕವನ್ನು ಇಂಗ್ಲಿಷ್ ಮಾಧ್ಯಮದ ಜತೆಗೆ ಕನ್ನಡ ಮಾಧ್ಯಮದಲ್ಲೂ ಮುದ್ರಿಸಲಿದೆ. ವಿದ್ಯಾರ್ಥಿಗಳು ತಮ್ಮ ಅಧ್ಯಯನಕ್ಕಾಗಿ ಅಥವಾ ಕಠಿಣ ವಿಷಯಗಳನ್ನು ಮಾತೃ ಭಾಷೆಯಲ್ಲಿ ಅರ್ಥೈಸಿಕೊಳ್ಳಲು ಕನ್ನಡ ಮಾಧ್ಯಮದ ವಿಜ್ಞಾನ
ಪಠ್ಯಪುಸ್ತಕ ಉಪಯೋಗವಾಗಲಿದೆ.
ವಿಜ್ಞಾನ ಬಹುತೇಕ ಪುಸ್ತಕಗಳು ಆಂಗ್ಲ ಮಾಧ್ಯಮದಲ್ಲೇ ಇದ್ದು, ಕನ್ನಡದಲ್ಲಿ ಇರುವುದು ಅತಿ ವಿರಳ. ಮುಂದಿನ ವರ್ಷದ ಪ್ರಥಮ ಹಾಗೂ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಅಗತ್ಯವಿರುವ ವಿಜ್ಞಾನ ವಿಷಯದ ಪುಸ್ತಕಗಳು ಈಗಾಗಲೇ ಮುದ್ರಣ ಹಂತದಲ್ಲಿದೆ. ಆಂಗ್ಲ ಮಾಧ್ಯಮದ ಪುಸ್ತಕಗಳು ಮಾರುಕಟ್ಟೆಯಲ್ಲಿ ಲಭ್ಯವಿದೆ. ಕನ್ನಡ ಮಾಧ್ಯಮದ ವಿಜ್ಞಾನ ಪುಸ್ತಕ ಮುಂದಿನ 15 ದಿನದಲ್ಲಿ ವಿದ್ಯಾರ್ಥಿ
ಗಳಿಗೆ ಲಭ್ಯವಾಗಲಿದೆ ಎಂದು ಇಲಾಖೆಯ ಅಧಿಕಾರಿ ಗಳು ತಿಳಿಸಿದ್ದಾರೆ.
ಪ್ರಸ್ತುತ ರಾಜ್ಯದ ಯಾವುದೇ ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಭಾಗವನ್ನು ಕನ್ನಡದಲ್ಲಿ ಮಾಧ್ಯಮದಲ್ಲಿ ಕಲಿಸುವ ವ್ಯವಸ್ಥೆ ಇಲ್ಲ. ವಿಜ್ಞಾನ ವಿಭಾಗಕ್ಕೆ ಸೇರಿದ ವಿದ್ಯಾರ್ಥಿಗಳು ಅಂಗ್ಲ ಮಾಧ್ಯಮದಲ್ಲೇ ಅಧ್ಯಯನ ಮಾಡಬೇಕಿತ್ತು. ಇದೀಗ ಕನ್ನಡ ಮಾಧ್ಯಮದ ವಿಜ್ಞಾನ ಪುಸ್ತಕ ಹೊರ ಬರುತ್ತಿರುವುದರಿಂದ ಬಹುತೇಕ ವಿದ್ಯಾರ್ಥಿಗಳಿಗೆ ಇದು ಸಹಕಾರಿಯಾಗಲಿದೆ.
2013-14ರಿಂದಲೇ ಈ ಪ್ರಕ್ರಿಯೆ ಆರಂಭವಾಗಿತ್ತು. ವಿಜ್ಞಾನ ಪುಸ್ತಕಗಳನ್ನು ಕನ್ನಡ ಮಾಧ್ಯಮಕ್ಕೆ ಭಾಷಾಂತರಿಸುವ ಕಾರ್ಯವನ್ನು ರಾಜ್ಯದ ವಿಶ್ವವಿದ್ಯಾಲಯವೊಂದಕ್ಕೆ ನೀಡಲಾಗಿತ್ತು. ತಾಂತ್ರಿಕ ಸಮಸ್ಯೆಯಿಂದಾಗಿ ಭಾಷಾಂತರ ಕಾರ್ಯ ಪೂರ್ಣಗೊಂಡಿರಲಿಲ್ಲ. ಆದರೆ, ಮುಂದಿನ ವರ್ಷದಿಂದ ರಾಜ್ಯದ ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಹೆಚ್ಚಿನ ಪ್ರಮಾಣದಲ್ಲಿ ವಿಜ್ಞಾನ ವಿಷಯಕ್ಕೆ ಆಕರ್ಷಿಸುವ ದೃಷ್ಟಿಯಿಂದ ವಿವಿಧ ಕಾಲೇಜುಗಳಲ್ಲಿರುವ ವಿಜ್ಞಾನ ಪ್ರಾಧ್ಯಾಪಕರ, ಕನ್ನಡ ಮತ್ತು ಇಂಗ್ಲಿಷ್ ಭಾಷೆಯ ಮೇಲೆ ಉತ್ತಮ ಹಿಡಿತ ಇರುವ ಪ್ರಾಧ್ಯಾಪಕರ ಸಹಕಾರದೊಂದಿಗೆ ಭಾಷಾಂತರ ಕಾರ್ಯ ಮಾಡಿಸಲಾಗಿದೆ. ಭಾಷಾಂತರ ಕಾರ್ಯ ಈಗಾಗಲೇ
ಪೂರ್ಣಗೊಂಡಿದ್ದು, ಮುದ್ರಣಕ್ಕೆ ಹೋಗಿದೆ.
ಕಾಲೇಜಿನಲ್ಲೇ ಲಭ್ಯ
ಕನ್ನಡ ಮಾಧ್ಯಮದ ವಿಜ್ಞಾನ ಪಠ್ಯಪುಸ್ತಕವನ್ನು ಪದವಿ ಪೂರ್ವ ಇಲಾಖೆಯಿಂದ ನೇರವಾಗಿ ಕಾಲೇಜುಗಳಿಗೆ ಕಳುಹಿಸಿಕೊಡಲಿದೆ.
ವಿದ್ಯಾರ್ಥಿಗಳು ತಮ್ಮ ಬಿಡುವಿನ ಸಮಯ ದಲ್ಲಿ ಇದರ ಅಧ್ಯಯನ ಮಾಡಬಹುದಾಗಿದೆ. ಪ್ರಥಮ ಹಾಗೂ ದ್ವಿತೀಯ ಪಿಯು
ಭೌತಶಾ, ರಸಾಯಶಾಸ್ತ್ರ, ಗಣಿತ, ಜೀವಶಾಸ್ತ್ರ (ಪಿಸಿಎಂಬಿ) ವಿಷಯದ ಪಠ್ಯಪುಸ್ತಗಳು ಕನ್ನಡ ಮಾಧ್ಯಮದಲ್ಲಿ
ಲಭ್ಯವಿರಲಿದೆ.
(ಸಂಗ್ರಹ ವರದಿ)
Recent news in education »
ಅಂದು ಶಾಲೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಅಪ್ಪಗೆರೆ ತಿಮ್ಮರಾಜು
ಚನ್ನಪಟ್ಟಣ: ನಾವು ನಮ್ಮ ಕಾಲದಲ್ಲಿ ಶಾಲೆಗೆ ಹೋಗಿ ವಿದ್ಯೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಹಲವಾರು ಸಮಸ್ಯೆಗಳು ನಮ್ಮ ಎದುರಿಗಿದ್ದವು. ಆದರೆ, ಈಗ ಅಂತಹ
ಪ್ರತಿ ವಿದ್ಯಾರ್ಥಿಗಳು ಕೌಶಲ್ಯ ರೂಢಿಸಿಕೊಳ್ಳಬೇಕು: ಶಿಕ್ಷಣಾಧಿಕಾರಿ ಮರಿಗೌಡ
ಚನ್ನಪಟ್ಟಣ: ಶಾಲಾ ವಿದ್ಯಾರ್ಥಿಗಳು ಕೇವಲ ಪಾಠ ಮತ್ತು ಆಟಕ್ಕೆ ಸೀಮಿತವಾಗದೆ ವಿವಿಧ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಕೌಶಲ್ಯ ಕಲಿತ ಮಕ್ಕಳ ಪ್ರತಿಭೆಯನ್ನ
ಪ್ರತಿ ಸರ್ಕಾರಗಳು ಪದವೀಧರರ ಜೊತೆ ಚೆಲ್ಲಾಟವಾಡುತ್ತಿವೆ, ಉದಯ್ ಸಿಂಗ್
ಚನ್ನಪಟ್ಟಣ: ಪ್ರತಿ ವರ್ಷವೂ ಲಕ್ಷಾಂತರ ಯುವಕ ಯುವತಿಯರು ಪದವಿಯೊಂದಿಗೆ ಹೊರಬರುತ್ತಾರೆ. ವಿಶ್ವ ವಿದ್ಯಾಲಯಗಳಿಂದ ಪದವಿಯೊಂದಿಗೆ ಬರುವವರಿಗೆ ಸೂಕ್ತ ಉದ್ಯೋಗ
ದಿವ್ಯಚೇತನ ಇಂಗ್ಲಿಷ್ ಶಾಲೆಯಲ್ಲಿ ಮೇಳೈಸಿದ ಮಿನಿ ವಿಜ್ಞಾನ ಮೇಳ
ಚನ್ನಪಟ್ಟಣ: ಅಗಸ್ತ್ಯ ಅಂತರಾಷ್ಟ್ರೀಯ ಪ್ರತಿಷ್ಠಾನ ಬ್ರಾಡ್ಕಾಂ ವಿಜ್ಞಾನ ಕೇಂದ್ರ ಚನ್ನಪಟ್ಟಣ ಇವರ ವತಿಯಿಂದ ನಗರದ ದಿವ್ಯ ಚೇತನ ಇಂಗ್ಲಿಷ್ ಪ್ರೌಢಶಾಲೆಯಲ್ಲ
ಪಾಠದ ಜೊತೆಗೆ ಆಟದಲ್ಲಿಯೂ ಮುಂಚೂಣಿಗೆ ಬರಬೇಕು. ವಿ ಬಾಲಸುಬ್ರಹ್ಮಣ್ಯಂ
ಚನ್ನಪಟ್ಟಣ,: ಪ್ರತಿಯೊಬ್ಬ ವಿದ್ಯಾರ್ಥಿಯು ಶಿಕ್ಷಣದ ಜೊತೆಯಲ್ಲಿ ಕ್ರೀಡಾಮನೋಭಾವನೆ ಬೆಳಸಿಕೊಳ್ಳಬೇಕು. ಮನಸ್ಸು ಉಲ್ಲಸಿತವಾಗಲು ಕ್ರೀಡೆ ಸಹಕಾರಿ ಎಂದು ಬಾಲು
ಉಪನ್ಯಾಸಕರ ಧರಣಿ, ಕಲಿಕೆಗೆ ತೊಂದರೆ, ಎಬಿವಿಪಿ ಯಿಂದ ಪ್ರತಿಭಟನೆ
ಚನ್ನಪಟ್ಟಣ: ಸರ್ಕಾರಿ ಕಾಲೇಜುಗಳ ಉಪನ್ಯಾಸಕರು ಧರಣಿ ನಿರತರಾಗಿರುವುದರಿಂದ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯಿದೆ. ಇದರಿಂದ ಶೈಕ್ಷಣಿಕ ವರ್ಷದ ಕಲಿಕೆಗೆ ತೊ
ಆರೋಗ್ಯ, ಆಯಸ್ಸು ಹೆಚ್ಚಿಸುವ ವೈದ್ಯರು ಆರೋಗ್ಯ ಕಾಪಾಡಿಕೊಳ್ಳಬೇಕು. ಚಾಮುಂಡೇಶ್ವರಿ ಆಸ್ಪತ್ರೆ ಉದ್ಘಾಟನೆಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ
ಚನ್ನಪಟ್ಟಣ:bಆಸ್ಪತ್ರೆಗೆ ಬರುವ ರೋಗಿಗಳ ಅರೋಗ್ಯ ತಪಾಸಿಸಿ, ರೋಗ ವಾಸಿ ಮಾಡಿ, ಅವರ ಆರೋಗ್ಯ ದ ಜೊತೆಗೆ ಆಯಸ್ಸನ್ನು ಹೆಚ್ಚಿಸುವಲ್ಲಿ ನಿಷ್ಣಾತರಾದ ವೈದ್ಯರು
ಪೆಟ್ಟಾ ಸರ್ಕಾರಿ ಶಾಲಾ ಆವರಣದಲ್ಲಿ ನಗರಸಭೆಯ ಕಸದ ರಾಶಿ, ಅಲ್ಲಗಳೆದ ಪೌರಾಯುಕ್ತ
ಆರ್ಥಿಕವಾಗಿ ಬೆಳೆದವರೆಲ್ಲರೂ ವಿದ್ಯಾರ್ಜನೆಗೆ ಮುಂದಡಿಯಿಡಬೇಕು, ಸಚಿವ ಮಧುಬಂಗಾರಪ್ಪ
ಚನ್ನಪಟ್ಟಣ: ಬಡತನದ ಬೇಗೆಯಲ್ಲಿ ಬೆಂದು, ಉನ್ನತ ಶಿಕ್ಷಣ ಪಡೆದು, ಉತ್ತಮ ಸ್ಥಾನಮಾನದ ಜೊತೆಗೆ ಆರ್ಥಿಕವಾಗಿ ಸದೃಢವಾದ ನಂತರ ತನ್ನ ಜನ್ಮದಾತರಿಗೆ, ಹುಟ್ಡಿದೂರ
ಕಾವೇರಿ ಕಿಚ್ಚು, ರಾಮನಗರ ಜಿಲ್ಲೆ ಬಂದ್, ಶಾಲಾ-ಕಾಲೇಜಿಗೆ ರಜೆ, ಸರ್ಕಾರಿ ಕಛೇರಿ ರಜೆಗಾಗಿ ಕಾಯುತ್ತಿರುವ ನೌಕರರು
ರಾಮನಗರ: ನಮ್ಮ ರಾಜ್ಯದ ಕೆಲ ಭಾಗಗಳಿಗೆ ಕುಡಿಯುವ ನೀರಿಗೆ ತತ್ವಾರವಾಗಿದೆ, ಮಂಡ್ಯ, ಮೈಸೂರು ಭಾಗದ ರೈತರಿಗೆ ಬೆಳೆ ಬೆಳೆಯಲು ನೀರಿಲ್ಲಾ, ಇಂತಹ ಸಂಕಷ್ಟದ ಸಮಯ
ಪ್ರತಿಕ್ರಿಯೆಗಳು