ಸರಳತೆಯ ಮೂಲಕವೆ ವಿದ್ಯಾರ್ಥಿಗಳ ಮನಗೆದ್ದ ಕೃಷ್ಣಮೂರ್ತಿ ಮೇಷ್ಟ್ರು
ಮಕ್ಕಳ ಭವಿಷ್ಯಕ್ಕೆ ತಮ್ಮ ಜೀವನದ ಬಹುಪಾಲನ್ನು ಮೀಸಲಾಗಿಡುವ ಶಿಕ್ಷಕರು ಅದೆಷ್ಟೋ ಮಂದಿ ಇದ್ದಾರೆ. ಅಂತವರಲ್ಲಿ ರಾಮನಗರ ತಾಲ್ಲೂಕಿನ ಕೂಟಗಲ್ ಹೋಬಳಿಯ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಎಚ್.ಎಸ್. ಕೃಷ್ಣಮೂರ್ತಿ ಅವರು ಒಬ್ಬರು.
ಪರಿಚಯ : ರಾಮನಗರ ತಾಲ್ಲೂಕಿನ ಕೈಲಾಂಚ ಹೋಬಳಿಯ ಹುಣಸನಹಳ್ಳಿ ಗ್ರಾಮದಲ್ಲಿ 27-11-1961 ರಂದು ಜನಿಸಿದರು. ತಂದೆ ಎಚ್.ಎನ್. ಸಿದ್ದಾಚಾರ್, ತಾಯಿ ಕಮಲಮ್ಮ. ರಾಮನಗರದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣವನ್ನು ಪಡೆದ ಇವರು ವೃತ್ತಿ ಶಿಕ್ಷಣವನ್ನು ಬಿಡದಿಯಲ್ಲಿ ಪಡೆದುಕೊಂಡರು.
ಸರ್ಕಾರಿ ಶಿಕ್ಷಕ ವೃತ್ತಿಗೆ ಸೇರುವ ಮೊದಲು ಇವರು ತಮ್ಮ ತಂದೆಯ ಕಸುಬಾದ ಮರಗೆಲಸದಲ್ಲಿ ತೊಡಗಿಸಿಕೊಂಡರು. ದಿನಾಂಕ: 30-08-1993 ರಂದು ಸರ್ಕಾರಿ ಶಾಲೆಯಲ್ಲಿ ಶಿಕ್ಷಕನಾಗಿ ಸೇರಿದರು. ಚಾಮನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕನಾಗಿ ಸೇವೆ ಪ್ರಾರಂಭಿಸಿ ಕಳೆದ 25 ವರ್ಷಗಳಿಂದ ಒಂದೇ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಲ್ಲಿ ಮೂರು ಬಾರಿ ಚುನಾಯಿತ ಪ್ರತಿನಿಧಿಯಾಗಿ, ಒಂದು ಬಾರಿ ಪ್ರಧಾನ ಕಾರ್ಯದರ್ಶಿಯಾಗಿ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿ ಇಲಾಖೆಯಿಂದ ಶಿಕ್ಷಕರಿಗೆ ಆಗಬೇಕಾದ ಕೆಲಸಗಳನ್ನು ಮಾಡಿಸಿದ್ದಾರೆ, ಈಗಲೂ ಮಾಡಿಸುತ್ತಿದ್ದಾರೆ.
ಎಚ್.ಎಸ್. ಕೃಷ್ಣಮೂರ್ತಿ ಅವರ ಪತ್ನಿ ರುಕ್ಮಿಣಿ. ಕೆ. ಮೇಘನಾ, ಕೆ. ಮನುಮಯೂರ್ ಇವರ ಇಬ್ಬರ ಮಕ್ಕಳು. ಇಬ್ಬರೂ ತಾಂತ್ರಿಕ ಶಿಕ್ಷಣದಲ್ಲಿ ಪದವಿ ಪಡೆದಿದ್ದಾರೆ.
ಈಗ ಐಜೂರಿನ ಮಲ್ಲೇಶ್ವರ ಬಡಾವಣೆಯಲ್ಲಿ ವಾಸವಾಗಿರುವ ಇವರು ಸರ್ಕಾರಿ ಶಾಲೆಗಳ ಸಬಲೀಕರಣದ ಬಗ್ಗೆ ಶ್ರಮಿಸುತ್ತಿದ್ದಾರೆ.
ಮಕ್ಕಳ ಭವಿಷ್ಯ ರೂಪಿಸುವ, ಸತ್ಪಥದಲ್ಲಿ ಮುನ್ನಡೆಯುವಂತೆ ಮಾರ್ಗ ತೋರುವ ಅಂಥ ಗುರುಗಳ ಸ್ಮರಣೆ ಸದಾ ಕಾಲಕ್ಕೂ ನಡೆಯಬೇಕು. ಒಬ್ಬ ವಿದ್ಯಾರ್ಥಿ ಗುರುವನ್ನೂ, ಶಿಕ್ಷಕ ಒಬ್ಬ ವಿದ್ಯಾರ್ಥಿ ಗುರುವನ್ನೂ, ಶಿಕ್ಷಕ ಒಬ್ಬ ವಿದ್ಯಾರ್ಥಿಯನ್ನೂ ಸ್ಮರಿಸಲು ಶಿಕ್ಷಕ ದಿನಾಚರಣೆ ಒಳ್ಳೆಯ ಸಂದರ್ಭ ಎಂದು ಮುಖ್ಯಶಿಕ್ಷಕ ಎಚ್.ಎಸ್. ಕೃಷ್ಣಮೂರ್ತಿ ತಿಳಿಸಿದರು.
ಶಿಕ್ಷಕರು ಹಾಗೂ ಮಕ್ಕಳ ಬಾಂಧವ್ಯ ಇಂದು ಔಪಚಾರಿಕ ಶಿಕ್ಷಣಕ್ಕೆ ಸೀಮಿತವಾಗಿದೆ. ಶಿಕ್ಷಕ ಪರಿಣಾಮಕಾರಿಯಾಗಿ ಬೋಧಿಸುವ ಕಲೆ ಕರಗತ ಮಾಡಿಕೊಳ್ಳಬೇಕು. ಇದರಿಂದ ಹೆಚ್ಚು ವಿಚಾರ ತಿಳಿಸಲು ಸಾಧ್ಯವಾಗುತ್ತದೆ. ಅದು ಮಕ್ಕಳ ಕೇಳುವಿಕೆಗೂ ಸಹಕಾರಿಯಾಗುತ್ತದೆ. ಇದು ಜೀವನದ ಉದ್ದಕ್ಕೂ ಉಳಿಯಲು ನೆರವಾಗುತ್ತದೆ ಎಂಬುದು ಇವರ ಅಭಿಪ್ರಾಯವಾಗಿದೆ. ಮಗು ಮೊದಲು ಶಾಲೆಗೆ ಹೋದಾಗ ಶಿಕ್ಷಕ ಹೇಳಿದ್ದೇ ಪರಮಸತ್ಯ ಎಂದು ನಂಬುತ್ತದೆ. ಮಗುವಿನ ಜಗತ್ತಿನಲ್ಲಿ ಶಿಕ್ಷಕನೇ ಮಾದರಿ ವ್ಯಕ್ತಿ. ತನ್ನ ಗುರುಗಳಿಗೆ ಎಲ್ಲವೂ ತಿಳಿದಿದೆ ಎಂದೇ ಮಗು ಭಾವಿಸುತ್ತದೆ ಎಂದು ತಿಳಿಸಿದರು.
ಇದಕ್ಕಾಗಿಯೇ ಶಿಕ್ಷಕರ ಜವಾಬ್ದಾರಿ, ಸ್ಥಾನವನ್ನು ಶ್ರೇಷ್ಠ ಎಂದು ಕಾಣಲಾಗುತ್ತದೆ. ಎಲ್ಲಾ ವಿಷಯಗಳಲ್ಲೂ ಸಮಾನತೆ ಕಾಯ್ದುಕೊಂಡು ಆರೋಗ್ಯ ಪೂರ್ಣ ಸಮಾನತೆ ಕಾಯ್ದುಕೊಂಡು ಆರೋಗ್ಯ ಪೂರ್ಣ ಸಮಾಜಕ್ಕಾಗಿ ಪ್ರಜೆಗಳನ್ನು ರೂಪುಗೊಳಿಸುವ ಜವಾಬ್ದಾರಿ ಗುರುವಿನದು
ಎಂದು ತಿಳಿಸಿದರು.
ಪ್ರಶಸ್ತಿ ಪ್ರಧಾನ : ಶಾಂತಲಾ ಚಾರಿಟಬಲ್ ಟ್ರಸ್ಟ್ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ಎಲ್. ನರಸಿಂಹಯ್ಯ ಶಿಕ್ಷಕ ಸೇವಾ ರತ್ನ ಪ್ರಶಸ್ತಿಗೆ ಎಚ್.ಎಸ್. ಕೃಷ್ಣಮೂರ್ತಿ ಅವರು ಭಾಜನರಾಗಿದ್ದಾರೆ. ಪ್ರಶಸ್ತಿ ಪ್ರಧಾನ ಸಮಾರಂಭವು ರಾಮನಗರ ತಾಲ್ಲೂಕಿನ ಕೃಷ್ಣಾಪುರದೊಡ್ಡಿಯಲ್ಲಿ ತಾನಿನಾ ರಂಗದಂಗಳದಲ್ಲಿ ದಿನಾಂಕ 08-09-2018ರಂದು ಬೆಳಿಗ್ಗೆ ಗಂಟೆಗೆ ನಡೆಯಲಿದೆ.
ಎಚ್.ಎಸ್. ಕೃಷ್ಣಮೂರ್ತಿ ಅವರು ಮಂಜುನಾಥನಗರದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದಾಗ ನನಗೂ ಶಿಕ್ಷಕರಾಗಿದ್ದರು. ಇವರ ಸರಳತೆ, ಪಠ್ಯ ಬೋಧಿಸುವ ಕ್ರಮ ಇತರರಿಗೆ ಮಾದರಿಯಾಗಬೇಕಿದೆ. ಶಿಕ್ಷಕರ ದಿನಾಚರಣೆಯ ಈ ಸುಸಂದರ್ಭದಲ್ಲಿ
ಕೃಷ್ಣಮೂರ್ತಿ ಅವರಿಗೆ ಅಭಿನಂದನೆಗಳು.
ಲೇಖನ : ಎಸ್. ರುದ್ರೇಶ್ವರ,
ಸಂಶೋಧನಾ ವಿದ್ಯಾರ್ಥಿ,
ಬೆಂಗಳೂರು ವಿಶ್ವವಿದ್ಯಾಲಯ.
Recent news in education »
ಅಂದು ಶಾಲೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಅಪ್ಪಗೆರೆ ತಿಮ್ಮರಾಜು
ಚನ್ನಪಟ್ಟಣ: ನಾವು ನಮ್ಮ ಕಾಲದಲ್ಲಿ ಶಾಲೆಗೆ ಹೋಗಿ ವಿದ್ಯೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಹಲವಾರು ಸಮಸ್ಯೆಗಳು ನಮ್ಮ ಎದುರಿಗಿದ್ದವು. ಆದರೆ, ಈಗ ಅಂತಹ
ಪ್ರತಿ ವಿದ್ಯಾರ್ಥಿಗಳು ಕೌಶಲ್ಯ ರೂಢಿಸಿಕೊಳ್ಳಬೇಕು: ಶಿಕ್ಷಣಾಧಿಕಾರಿ ಮರಿಗೌಡ
ಚನ್ನಪಟ್ಟಣ: ಶಾಲಾ ವಿದ್ಯಾರ್ಥಿಗಳು ಕೇವಲ ಪಾಠ ಮತ್ತು ಆಟಕ್ಕೆ ಸೀಮಿತವಾಗದೆ ವಿವಿಧ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಕೌಶಲ್ಯ ಕಲಿತ ಮಕ್ಕಳ ಪ್ರತಿಭೆಯನ್ನ
ಪ್ರತಿ ಸರ್ಕಾರಗಳು ಪದವೀಧರರ ಜೊತೆ ಚೆಲ್ಲಾಟವಾಡುತ್ತಿವೆ, ಉದಯ್ ಸಿಂಗ್
ಚನ್ನಪಟ್ಟಣ: ಪ್ರತಿ ವರ್ಷವೂ ಲಕ್ಷಾಂತರ ಯುವಕ ಯುವತಿಯರು ಪದವಿಯೊಂದಿಗೆ ಹೊರಬರುತ್ತಾರೆ. ವಿಶ್ವ ವಿದ್ಯಾಲಯಗಳಿಂದ ಪದವಿಯೊಂದಿಗೆ ಬರುವವರಿಗೆ ಸೂಕ್ತ ಉದ್ಯೋಗ
ದಿವ್ಯಚೇತನ ಇಂಗ್ಲಿಷ್ ಶಾಲೆಯಲ್ಲಿ ಮೇಳೈಸಿದ ಮಿನಿ ವಿಜ್ಞಾನ ಮೇಳ
ಚನ್ನಪಟ್ಟಣ: ಅಗಸ್ತ್ಯ ಅಂತರಾಷ್ಟ್ರೀಯ ಪ್ರತಿಷ್ಠಾನ ಬ್ರಾಡ್ಕಾಂ ವಿಜ್ಞಾನ ಕೇಂದ್ರ ಚನ್ನಪಟ್ಟಣ ಇವರ ವತಿಯಿಂದ ನಗರದ ದಿವ್ಯ ಚೇತನ ಇಂಗ್ಲಿಷ್ ಪ್ರೌಢಶಾಲೆಯಲ್ಲ
ಪಾಠದ ಜೊತೆಗೆ ಆಟದಲ್ಲಿಯೂ ಮುಂಚೂಣಿಗೆ ಬರಬೇಕು. ವಿ ಬಾಲಸುಬ್ರಹ್ಮಣ್ಯಂ
ಚನ್ನಪಟ್ಟಣ,: ಪ್ರತಿಯೊಬ್ಬ ವಿದ್ಯಾರ್ಥಿಯು ಶಿಕ್ಷಣದ ಜೊತೆಯಲ್ಲಿ ಕ್ರೀಡಾಮನೋಭಾವನೆ ಬೆಳಸಿಕೊಳ್ಳಬೇಕು. ಮನಸ್ಸು ಉಲ್ಲಸಿತವಾಗಲು ಕ್ರೀಡೆ ಸಹಕಾರಿ ಎಂದು ಬಾಲು
ಉಪನ್ಯಾಸಕರ ಧರಣಿ, ಕಲಿಕೆಗೆ ತೊಂದರೆ, ಎಬಿವಿಪಿ ಯಿಂದ ಪ್ರತಿಭಟನೆ
ಚನ್ನಪಟ್ಟಣ: ಸರ್ಕಾರಿ ಕಾಲೇಜುಗಳ ಉಪನ್ಯಾಸಕರು ಧರಣಿ ನಿರತರಾಗಿರುವುದರಿಂದ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯಿದೆ. ಇದರಿಂದ ಶೈಕ್ಷಣಿಕ ವರ್ಷದ ಕಲಿಕೆಗೆ ತೊ
ಆರೋಗ್ಯ, ಆಯಸ್ಸು ಹೆಚ್ಚಿಸುವ ವೈದ್ಯರು ಆರೋಗ್ಯ ಕಾಪಾಡಿಕೊಳ್ಳಬೇಕು. ಚಾಮುಂಡೇಶ್ವರಿ ಆಸ್ಪತ್ರೆ ಉದ್ಘಾಟನೆಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ
ಚನ್ನಪಟ್ಟಣ:bಆಸ್ಪತ್ರೆಗೆ ಬರುವ ರೋಗಿಗಳ ಅರೋಗ್ಯ ತಪಾಸಿಸಿ, ರೋಗ ವಾಸಿ ಮಾಡಿ, ಅವರ ಆರೋಗ್ಯ ದ ಜೊತೆಗೆ ಆಯಸ್ಸನ್ನು ಹೆಚ್ಚಿಸುವಲ್ಲಿ ನಿಷ್ಣಾತರಾದ ವೈದ್ಯರು
ಪೆಟ್ಟಾ ಸರ್ಕಾರಿ ಶಾಲಾ ಆವರಣದಲ್ಲಿ ನಗರಸಭೆಯ ಕಸದ ರಾಶಿ, ಅಲ್ಲಗಳೆದ ಪೌರಾಯುಕ್ತ
ಆರ್ಥಿಕವಾಗಿ ಬೆಳೆದವರೆಲ್ಲರೂ ವಿದ್ಯಾರ್ಜನೆಗೆ ಮುಂದಡಿಯಿಡಬೇಕು, ಸಚಿವ ಮಧುಬಂಗಾರಪ್ಪ
ಚನ್ನಪಟ್ಟಣ: ಬಡತನದ ಬೇಗೆಯಲ್ಲಿ ಬೆಂದು, ಉನ್ನತ ಶಿಕ್ಷಣ ಪಡೆದು, ಉತ್ತಮ ಸ್ಥಾನಮಾನದ ಜೊತೆಗೆ ಆರ್ಥಿಕವಾಗಿ ಸದೃಢವಾದ ನಂತರ ತನ್ನ ಜನ್ಮದಾತರಿಗೆ, ಹುಟ್ಡಿದೂರ
ಕಾವೇರಿ ಕಿಚ್ಚು, ರಾಮನಗರ ಜಿಲ್ಲೆ ಬಂದ್, ಶಾಲಾ-ಕಾಲೇಜಿಗೆ ರಜೆ, ಸರ್ಕಾರಿ ಕಛೇರಿ ರಜೆಗಾಗಿ ಕಾಯುತ್ತಿರುವ ನೌಕರರು
ರಾಮನಗರ: ನಮ್ಮ ರಾಜ್ಯದ ಕೆಲ ಭಾಗಗಳಿಗೆ ಕುಡಿಯುವ ನೀರಿಗೆ ತತ್ವಾರವಾಗಿದೆ, ಮಂಡ್ಯ, ಮೈಸೂರು ಭಾಗದ ರೈತರಿಗೆ ಬೆಳೆ ಬೆಳೆಯಲು ನೀರಿಲ್ಲಾ, ಇಂತಹ ಸಂಕಷ್ಟದ ಸಮಯ
ಪ್ರತಿಕ್ರಿಯೆಗಳು