Tel: 7676775624 | Mail: info@yellowandred.in

Language: EN KAN

    Follow us :


ಆರೋಗ್ಯಕ್ಕಾಗಿ ಸರ್ಕಾರದ ಯೋಜನೆಗಳ ಜೊತೆಗೆ ಸಾಂಪ್ರದಾಯಿಕ ಆಹಾರ ಪದ್ದತಿ ಅಳವಡಿಸಿಕೊಳ್ಳಬೇಕಾಗಿದೆ ಹರೂರು ರಾಜಣ್ಣ

Posted date: 09 Mar, 2020

Powered by:     Yellow and Red

ಆರೋಗ್ಯಕ್ಕಾಗಿ ಸರ್ಕಾರದ ಯೋಜನೆಗಳ ಜೊತೆಗೆ ಸಾಂಪ್ರದಾಯಿಕ ಆಹಾರ ಪದ್ದತಿ ಅಳವಡಿಸಿಕೊಳ್ಳಬೇಕಾಗಿದೆ ಹರೂರು ರಾಜಣ್ಣ

ಚನ್ನಪಟ್ಟಣ: ಇಪ್ಪತ್ತು, ಮೂವತ್ತರ ದಶಕದ ಮೊದಲು ಸಿಜೇರಿಯನ್ ಎಂದರೆ ಏನೆಂದು ತಿಳಿಯದ ನಾವುಗಳು ಇಂದು ಸಹಜ ಹೆರಿಗೆಯಾಯಿತು, ಎಂದರೆ ಹುಬ್ಬೇರಿಸುವಂತಾಗಿದೆ ಎಂದು ತಾಲ್ಲೂಕು ಪಂಚಾಯತಿ ಅಧ್ಯಕ್ಷ ಹರೂರು ರಾಜಣ್ಣ ಆತಂಕದಿಂದ ಹೇಳಿದರು.

ಅವರು ಇಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಇಲಾಖೆಯ ವತಿಯಿಂದ ನಗರದ ಸ್ತ್ರೀ ಶಕ್ತಿ ಭವನದಲ್ಲಿ ಆಯೋಜಿಸಿದ್ದ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಸಾವಯವ ಮತ್ತು ಸಾಂಪ್ರದಾಯಿಕ ವ್ಯವಸಾಯದ ಮೂಲಕ ಬೆಳೆದ ಸೊಪ್ಪು, ತರಕಾರಿ, ಕಾಳು ಮತ್ತು ಧವಸ ಧಾನ್ಯಗಳನ್ನು ತಿನ್ನುವುದರ ಜೊತೆಗೆ ಒಟ್ಟುಕುಟುಂಬದಲ್ಲಿದ್ದುದರಿಂದ ಮನೆಗೆಲಸ ಹಾಗೂ ವ್ಯವಸಾಯದ ಕೆಲಸಗಳಲ್ಲಿ ಮಹಿಳೆಯರು ತೊಡಗಿಸಿಕೊಳ್ಳುತ್ತಿದ್ದುದರು. ಆದ್ದರಿಂದ ದೇಹಕ್ಕೆ ಆರೋಗ್ಯದ ಜೊತೆಗೆ ವ್ಯಾಯಾಮವು ಸಿಗುತ್ತಿತ್ತು. ಆಧುನಿಕ ಕಾಲದಲ್ಲಿ ತಂತ್ರಜ್ಞಾನ ಹಾಗೂ ಆಸ್ಪತ್ರೆಯ ಔಷಧಗಳಿಗೆ ಮೊರೆಹೋದ ಕಾರಣ, ತಾಯಿ ಮತ್ತು ಮಗುವಿನ ಆರೋಗ್ಯವು ಕೆಡುತ್ತಿದ್ದು, ನಮ್ಮ ಹಿಂದಿನ ಜೀವನ ಪುನಾರವರ್ತನೆಯಾಗಬೇಕಾದ ಅನಿವಾರ್ಯತೆ ಇದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.


ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತಹಶಿಲ್ದಾರ್ ಸುದರ್ಶನ್ ರವರು ಶಿಶು ಆರೋಗ್ಯವಾಗಿರಬೇಕೆಂದರೆ ತಾಯಿ ಆರೋಗ್ಯವಾಗಿರಬೇಕು, ಆಕೆ ಗರ್ಭಿಣಿಯಿದ್ದಾಗಲೇ ಪೌಷ್ಟಿಕಾಹಾರವನ್ನು ಸೇವಿಸಿದರೆ ಮಗು ಆರೋಗ್ಯಕರವಾಗಿ ಜನಿಸುವುದರಲ್ಲಿ ಅನುಮಾನವಿಲ್ಲ. ನಮ್ಮ ಆಹಾರ ಪದ್ಧತಿಯಲ್ಲಿ ಬದಲಾವಣೆ ಮಾಡಿಕೊಂಡು ಯಾವಾಗ, ಎಷ್ಟು ಮತ್ತು ಹೇಗೆ ತಿನ್ನಬೇಕೆಂಬುದನ್ನು ತಿಳಿದು ತಿಂದರೆ ಅದೇ ನಮ್ಮ ಆರೋಗ್ಯ ಎಂದು ಅಭಿಪ್ರಾಯ ಪಟ್ಟರು.


ತಾಲ್ಲೂಕು ವೈದ್ಯಾಧಿಕಾರಿ ಡಾ ರಾಜು ಮಾತನಾಡಿ ನಮ್ಮ ಸಂಪ್ರದಾಯ ದ ಅಡುಗೆಯಲ್ಲಿ ಹೇರಳವಾದ ಪೌಷ್ಟಿಕಾಂಶ ಗಳಿದ್ದು, ಗರ್ಭಿಣಿಯರು ಮತ್ತು ಬಾಣಂತಿಯರು ಉಪಯೋಗಿಸಿದರೆ ಶಿಶುವಿನ ಆರೋಗ್ಯ ಉತ್ತಮವಾಗಿರುತ್ತದೆ. ಫಾಸ್ಟ್ ಫುಡ್ ಸಂಸ್ಕೃತಿಯನ್ನು ಬಿಟ್ಟು ಮೊಳಕೆ ಕಾಳು, ಗೆಡ್ಡೆಗೆಣಸು, ಸೊಪ್ಪು ತರಕಾರಿಗಳನ್ನು ಬಳಸಿದರೆ ಆರೋಗ್ಯದಲ್ಲಿ ಏರುಪೇರಾಗುವುದಿಲ್ಲ ಎಂದರು.


ರಾಷ್ಟ್ರ ಮತ್ತು ರಾಜ್ಯ ಸರ್ಕಾರಗಳು ಆರಂಭಿಸಿದ ಯೋಜನೆಗಳನ್ನು ಸ್ಥಳೀಯ ಅಧಿಕಾರಿಗಳು ಕಾರ್ಯರೂಪಕ್ಕೆ ತರಬೇಕು. ಮುಂದಿನ ಪೀಳಿಗೆಗೆ ಅನುಕೂಲ ಆಗುವಂತಹ ಪೋಷಣ್ ಪಕ್ವಾಡ್ ಕಾರ್ಯಕ್ರಮ ದ ಯೋಜನೆಯು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ಮೇಲೆ ಅವಲಂಬಿತವಾಗಿದ್ದು ಇದನ್ನು ಗರ್ಭಿಣಿ ಮತ್ತು ಬಾಣಂತಿಯರಿಗೆ ತಿಳಿಸಿ ಪೌಷ್ಟಿಕಾಹಾರವನ್ನು ನೀಡಬೇಕು ಎಂದು ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಣಾಧಿಕಾರಿ ಚಂದ್ರು ತಿಳಿಸಿದರು.


ಇದೇ ವೇಳೆ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೋಷಕರಿಗೆ ಕಾರ್ಯಕ್ರಮದ ಅರಿವು ಮೂಡಿಸಲಾಯಿತು.

ಕೆಲವು ಗರ್ಭಿಣಿಯರಿಗೆ ವಿಶೇಷವಾಗಿ ಮಡಿಲಕ್ಕಿ (ಮಡಿಲ ಹುಡಿ) ತುಂಬಿ ಸೀಮಂತ ಕಾರ್ಯವನ್ನು ಮಾಡಲಾಯಿತು.


ನಿನ್ನೆ ಆರಂಭವಾಗಬೇಕಾಗಿದ್ದ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಉದ್ಘಾಟನೆ ಮತ್ತು ಇಂದು ಆರಂಭವಾಗಬೇಕಾಗಿದ್ದ ಗ್ರಾಮ ಪಂಚಾಯತಿ ಮಟ್ಟದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಚಟುವಟಿಕೆಗಳ ಬಗ್ಗೆ ಅರಿವು ಮೂಡಿಸುವ ಜಾಥಾ ಕಾರ್ಯಕ್ರಮ ಎರಡೂ ಇಂದೇ ಉದ್ಘಾಟನೆ ಭಾಗ್ಯ ಕಂಡವು.


೦೮/೦೩/೨೦ ರ ಭಾನುವಾರ ದಿಂದ ೨೦/೦೩/೨೦ ರ ಶುಕ್ರವಾರ ರ ತನಕ  ಅಂಗನವಾಡಿ ಕೇಂದ್ರಗಳಲ್ಲಿ, ಕಿಶೋರಿಯರು ಮತ್ತು ಗರ್ಭಿಣಿಯರಿಗೆ ರಕ್ತ ತಪಾಸಣಾ ಶಿಬಿರ, ಆರೋಗ್ಯವಂತ ಮಕ್ಕಳ (ಬೇಬಿ) ಪ್ರದರ್ಶನ, ಐಎಲ್ಎ ತರಬೇತಿ, ಸ್ವಸಹಾಯ ಗುಂಪಿನ ಸದಸ್ಯರುಗಳ ಪೂರಕ ಆಹಾರ ಮತ್ತು ಪೋಷಣೆಯ ಬಗ್ಗೆ ಮಾಹಿತಿ, ಪೋಷಣ್ ರಥ ಪ್ರಾಜೆಕ್ಟ್, ಶಾಲೆ ಬಿಟ್ಟ ಕಿಶೋರಿಯರಿಗೆ ಅಥವಾ ಹದಿಹರೆಯದ ಹೆಣ್ಣು ಮಕ್ಕಳಿಗೆ ಪೌಷ್ಟಿಕಾಂಶದ ಬಗ್ಗೆ ಮಾಹಿತಿ, ಸಮುದಾಯದ ಜೊತೆಗೂಡಿ ಅಂಗನವಾಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಚಗೊಳಿಸುವುದು, ಸೀಮಂತ ಮತ್ತು ಅನ್ನ ಪ್ರಾಶನ, ಕಳೆದ ತಿಂಗಳ ಸಭೆಯ ನಡಾವಳಿ ಮತ್ತು ಸಮಸ್ಯೆಯ ಮೇಲ್ವಿಚಾರಣೆ, ಸಮುದಾಯ ಆಧಾರಿತ ಚಟುವಟಿಕೆ, (ಸುಪೋಷಣಾ ದಿವಸ ಪುರುಷರು ಭಾಗವಹಿಸುವಿಕೆ) ಬೆಂಕಿ ಇಲ್ಲದೆ ಅಡುಗೆ, (ಸಲಾಡ್, ಕೋಸಂಬರಿ, ಮತ್ತು ಮೊಳಕೆ ಕಾಳಿನ ಸಲಾಡ್ ಇತ್ಯಾದಿ) (ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಪುರುಷರಿಗೆ ತಲಾ ೧೦೦ ರೂಪಾಯಿಗಳನ್ನು ಕೊಡಲಾಗುವುದು.) ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಿಶು ಅಭಿವೃದ್ಧಿ ಅಧಿಕಾರಿ ಕಾಂತರಾಜು ತಿಳಿಸಿದರು.


ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ಧಿ ಇಲಾಖೆಯ ಅಹಲ್ಯಾ ಮತ್ತು ಸಿಬ್ಬಂದಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿಬ್ಬಂದಿಗಳು, ಅಂಗನವಾಡಿ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿ ಯಶೋಧಮ್ಮ ಮತ್ತು ಪದಾಧಿಕಾರಿಗಳು, ಆಶಾ ಕಾರ್ಯಕರ್ತೆಯರು ಮತ್ತು ಪೋಷಕರು ಹಾಜರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in health »

ವ್ಯವಹಾರಕ್ಕಾಗಿ ಆಸ್ಪತ್ರೆಯಲ್ಲಾ, ಸೇವೆಗಾಗಿ ನಮ್ಮ ಆಸ್ಪತ್ರೆ. ಕಾಂಗರೂ ಆಸ್ಪತ್ರೆಯ ಸಂಸ್ಥಾಪಕ ಡಾ ಶೇಖರ್ ಸುಬ್ಬಯ್ಯ
ವ್ಯವಹಾರಕ್ಕಾಗಿ ಆಸ್ಪತ್ರೆಯಲ್ಲಾ, ಸೇವೆಗಾಗಿ ನಮ್ಮ ಆಸ್ಪತ್ರೆ. ಕಾಂಗರೂ ಆಸ್ಪತ್ರೆಯ ಸಂಸ್ಥಾಪಕ ಡಾ ಶೇಖರ್ ಸುಬ್ಬಯ್ಯ

ರಾಮನಗರ: ನಾವು ಹಣಕ್ಕಾಗಿ ಆಸ್ಪತ್ರೆ ನಡೆಸುವುದಿಲ್ಲ, ಇದೊಂದು ಸೇವೆ ಎಂದು ಪರಿಗಣಿಸಿ ಆಸ್ಪತ್ರೆ ನಡೆಸುತ್ತಿದ್ದೇವೆ. ಬೆಂಗಳೂರು ಮೈಸೂರು ಸೇರಿದಂತೆ ನಾಲ್ಕು

೪೬ ವರ್ಷದ ಮಹಿಳೆಯ ಹೊಟ್ಟೆಯಲ್ಲಿದ್ದ ೧೦ ಕಿಲೋ ಕ್ಯಾನ್ಸರ್ ಗಡ್ಡೆ ಹೊರತೆಗೆದ ಬಾಲು ಆಸ್ಪತ್ರೆಯ ವೈದ್ಯರು
೪೬ ವರ್ಷದ ಮಹಿಳೆಯ ಹೊಟ್ಟೆಯಲ್ಲಿದ್ದ ೧೦ ಕಿಲೋ ಕ್ಯಾನ್ಸರ್ ಗಡ್ಡೆ ಹೊರತೆಗೆದ ಬಾಲು ಆಸ್ಪತ್ರೆಯ ವೈದ್ಯರು

ಚನ್ನಪಟ್ಟಣ: ತಾಲ್ಲೂಕಿನ ಗ್ರಾಮವೊಂದರ ೪೬ ವರ್ಷದ ಮಹಿಳೆಯೊಬ್ಬರ ಗರ್ಭ (ಅಂಡಾಶಯ) ದಲ್ಲಿದ್ದ ಬರೋಬ್ಬರಿ ೧೦ ಕಿಲೋ ೩೦೦ ಗ್ರಾಂ ತೂಕದ ಕ್ಯಾನ್ಸರ್ ಗಡ್ಡೆ ಯನ್ನ

ಹೊಂಗನೂರು, ಕೋಡಂಬಳ್ಳಿ ಗ್ರಾಮದಲ್ಲಿ ಪರವಾನಗಿ ಇಲ್ಲದ ಖಾಸಗಿ ಆಸ್ಪತ್ರೆಗಳಿಗೆ ಬೀಗ ಜಡಿದ ಟಿಹೆಚ್‌ಓ
ಹೊಂಗನೂರು, ಕೋಡಂಬಳ್ಳಿ ಗ್ರಾಮದಲ್ಲಿ ಪರವಾನಗಿ ಇಲ್ಲದ ಖಾಸಗಿ ಆಸ್ಪತ್ರೆಗಳಿಗೆ ಬೀಗ ಜಡಿದ ಟಿಹೆಚ್‌ಓ

ಚನ್ನಪಟ್ಟಣ: ತಾಲ್ಲೂಕಿನ ಹೊಂಗನೂರು ಗ್ರಾಮದಲ್ಲಿ ಗೋಪಿ ಕ್ಲಿನಿಕ್ ಎಂಬ ಖಾಸಗಿ ಆಸ್ಪತ್ರೆ ಇದ್ದು, ಗೋಪಿ ಎಂಬುವವರು ವೈದ್ಯರಾಗಿ ಸೇವೆ ನಿರ್ವಹಿಸುತ್ತಿದ್ದಾರ

ಉತ್ತಮ ಆರೋಗ್ಯಕ್ಕೆ ಆಯುರ್ವೇದವೇ ದಿವ್ಯ ಔಷಧ ಡಾ ಸಹನಾ ಕೃಷ್ಣ
ಉತ್ತಮ ಆರೋಗ್ಯಕ್ಕೆ ಆಯುರ್ವೇದವೇ ದಿವ್ಯ ಔಷಧ ಡಾ ಸಹನಾ ಕೃಷ್ಣ

ಚನ್ನಪಟ್ಟಣ: ಪುರಾಣೇತೀಹಾಸದಿಂದಲೂ ಪ್ರಖ್ಯಾತವಾಗಿರುವ ಔಷಧ ಎಂದರೆ ಅದು ಆಯುರ್ವೇದ ಔಷಧ, ಜಗತ್ತಿನ ಅತ್ಯಂತ ಪ್ರಾಚೀನ ಔಷಧವೂ ಹೌದು, ನಮ್ಮ ಪ್ರಕೃತಿ ಹೇಗೆ ಸಮ

ದೊಡ್ಡಮಳೂರು ಗ್ರಾಮದಲ್ಲಿ ದೀರ್ಘಾಯು ವೆಲ್ ನೆಸ್ ಆಯುರ್ವೇದ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ಶಿಬಿರ
ದೊಡ್ಡಮಳೂರು ಗ್ರಾಮದಲ್ಲಿ ದೀರ್ಘಾಯು ವೆಲ್ ನೆಸ್ ಆಯುರ್ವೇದ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ಶಿಬಿರ

ಚನ್ನಪಟ್ಟಣ: ತಾಲ್ಲೂಕಿನ ದೊಡ್ಡಮಳೂರು ಗ್ರಾಮದ ದೇವಸ್ಥಾನದ ಬೀದಿಯಲ್ಲಿರುವ ದೀರ್ಘಾಯು ವೆಲ್ ನೆಸ್ ಸೆಂಟರ್ ಇವರ ವತಿಯಿಂದ ನಾಳೆ (ಭಾನುವಾರ) ಬೆಳಿ

ಕ್ರಿಯೇಟಿವ್ ಅಸೋಸಿಯೇಷನ್ ಹಾಗೂ ಸೊಸೈಟಿ ವತಿಯಿಂದ ಶನಿವಾರ ನಗರದಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರ
ಕ್ರಿಯೇಟಿವ್ ಅಸೋಸಿಯೇಷನ್ ಹಾಗೂ ಸೊಸೈಟಿ ವತಿಯಿಂದ ಶನಿವಾರ ನಗರದಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರ

ಚನ್ನಪಟ್ಟಣ : ತಾಲ್ಲೂಕಿನಿಂದ ಬೆಂಗಳೂರಿಗೆ ಹೋಗಿ, ಜೀವನ ಕಟ್ಟಿಕೊಂಡು ತಾಲ್ಲೂಕಿಗೆ ಏನಾದರೂ ಕೊಡುಗೆ ನೀಡಬೇಕೆಂಬ ಹಂಬಲದಿಂದ ಕ್ರಿಯೇಟಿವ್ ಅಸೋಸಿಯೇಷನ್ ಮತ್ತ

ದುಶ್ಚಟದಿಂದ ದೂರವಿರಿ, ಆರೋಗ್ಯ ಕಾಪಾಡಿಕೊಳ್ಳಿ : ಪ್ರತಿಮಾ ಕೆ.ವಿ
ದುಶ್ಚಟದಿಂದ ದೂರವಿರಿ, ಆರೋಗ್ಯ ಕಾಪಾಡಿಕೊಳ್ಳಿ : ಪ್ರತಿಮಾ ಕೆ.ವಿ

ರಾಮನಗರ, ಜೂ. 17:   ಇತ್ತೀಚೆಗೆ ಅತಿ ಹೆಚ್ಚು ಹಲವಾರು ದುಶ್ಚಟಗಳು ಮನುಷ್ಯನನ್ನು ಆವರಸಿಕೊಂಡಿವೆ. ಇದರಿಂದಾಗಿ ನೂರಾರು ಖಾಯಿಲೆಗಳು ದೇಹ ಹೊಕ್ಕು ನಿತ್ಯ ಸಾ

ಫ್ಲೋರೋಸಿಸ್ ನಿಯಂತ್ರಿಸಿ ಉತ್ತಮ ಜೀವನ ನಡೆಸುವಂತೆ ಸಲಹೆ - ಡಾ.ಅನಿಲ್
ಫ್ಲೋರೋಸಿಸ್ ನಿಯಂತ್ರಿಸಿ ಉತ್ತಮ ಜೀವನ ನಡೆಸುವಂತೆ ಸಲಹೆ - ಡಾ.ಅನಿಲ್

ರಾಮನಗರ, ಜೂ. 15:   ಫ್ಲೋರೈಡ್ ನಮ್ಮ ದೇಹಕ್ಕೆ ಬೇಕಾದ ಒಂದು ಖನಿಜಾಂಶ ನಾವು ಸೇವಿಸುವ ಆಹಾರ ಮತ್ತು ಕುಡಿಯುವ ನೀರಿನಲ್ಲಿ ಅವಶ್ಯಕತೆಗಿಂತ ಹೆಚ್ಚು ಫ್ಲೋರೈಡ

ಆರೋಗ್ಯ ಕೇಂದ್ರದಲ್ಲಿ ದೊರೆಯುವ ಸೇವೆಗಳನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದ ಬಿ.ಎಸ್.ಗಂಗಾಧರ್.
ಆರೋಗ್ಯ ಕೇಂದ್ರದಲ್ಲಿ ದೊರೆಯುವ ಸೇವೆಗಳನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದ ಬಿ.ಎಸ್.ಗಂಗಾಧರ್.

ರಾಮನಗರ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಕೆ.ಕರೇನಹಳ್ಳಿ ಇವರ ಸಂಯುಕ್ತ ಆಶ್ರ

ಶ್ರೀಗಿರಿಪುರ ಗ್ರಾಪಂ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆದ ಆರೋಗ್ಯ ತಪಾಸಣಾ ಶಿಬಿರ
ಶ್ರೀಗಿರಿಪುರ ಗ್ರಾಪಂ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆದ ಆರೋಗ್ಯ ತಪಾಸಣಾ ಶಿಬಿರ

ರಾಮನಗರ, ಜೂ. 07:   ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಾತ್ಮಗಾಂಧಿ ನರೇಗಾ ಉದ್ಯೋಗ ಖಾತ್ರಿ ಯೋಜನೆ ಹಾಗೂ ಕುದೂರು ಪ್ರ

Top Stories »  


Top ↑