ಕರ್ನಾಟಕ ರಾಜ್ಯದಲ್ಲಿ ಸಂಪೂರ್ಣ ಮದ್ಯ ನಿಷೇಧಿಸಲು ಸ್ವರಾಜ್ ಸಂಘಟನೆ ಮನವಿ
ಚನ್ನಪಟ್ಟಣ:ಮೇ/೧೬/೨೦/ಶನಿವಾರ. ಬಡ ಜನರು, ಕೂಲಿಕಾರ್ಮಿಕರು ನೆಮ್ಮದಿಯಿಂದ ಬದುಕಬೇಕಾದರೆ, ಹೆಂಡತಿ ಮಕ್ಕಳ ಮೇಲೆ ಕುಡಿದು ಬಂದವರು ದೌರ್ಜನ್ಯ ನಡೆಸದೇ ಇರಬೇಕಾದರೆ, ರಾಜ್ಯ ಸರ್ಕಾರವು ಮದ್ಯ ನಿಷೇಧ ಮಾಡಬೇಕು. ಸರ್ಕಾರವು ಮದ್ಯವನ್ನು ಆದಾಯದ ಮೂಲವಾಗಿ ನೋಡದೆ ಬಡ ಮತ್ತು ಕೂಲಿಕಾರ್ಮಿಕರ ಹಿತ ಕಾಪಾಡಲು ಮುಂದಾಗಬೇಕು ಎಂದು ಸ್ವರಾಜ್ ಸಂಘಟನೆಯ ಮುಖ್ಯಸ್ಥೆ ಸುಕನ್ಯಾ ಅಭಿಪ್ರಾಯಪಟ್ಟರು.
ಸುಕನ್ಯಾ ಮತ್ತು ತಂಡದವರು ಇಂದು ತಾಲ್ಲೂಕು ಕಛೇರಿಯಲ್ಲಿ ತಹಶಿಲ್ದಾರ್ ಸುದರ್ಶನ್ ರವರಿಗೆ ಮನವಿ ಪತ್ರ ನೀಡಿ ಮಾತನಾಡಿದರು.
ಕೊರೊನಾ (ಕೋವಿಡ್-೧೯) ಸಂದರ್ಭದಲ್ಲಿ ಮಾಡಲಾದ ಎರಡನೇ ಹಂತದ ಲಾಕ್ಡೌನ್ ಸಮಯದಲ್ಲಿ ಎಲ್ಲಾ ಮದ್ಯದ ಅಂಗಡಿಗಳನ್ನು ಸರ್ಕಾರವೇ ಮುಚ್ಚಿಸಿತ್ತು. ಆಗ ಬಹುತೇಕ ಎಲ್ಲಾ ಕುಟುಂಬಗಳಲ್ಲೂ ಶಾಂತಿ ನೆಲೆಸಿತ್ತು. ದಿನಗುಡುಕರು ಸಹ ಆರೋಗ್ಯವಾಗಿದ್ದರು. ಆ ಸಮಯದಲ್ಲಿ ಸಂಸಾರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸಲಿಲ್ಲ.
ಸರ್ಕಾರವು ಮದ್ಯವನ್ನು ಆದಾಯದ ಮೂಲವಾಗಿ ಗುರುತಿಸದೆ, ಬಡ ಕುಟುಂಬಗಳನ್ನು ಒಳ್ಳೆಯ ಮಾರ್ಗದಲ್ಲಿ ಕೊಂಡೊಯ್ಯಲು, ಅವರ ಕುಟುಂಬದ ಮಕ್ಕಳನ್ನು ಸತ್ಪ್ರಜೆಗಳನ್ನು ಮಾಡಬೇಕಾದರೆ ಸರ್ಕಾರವು ರಾಜ್ಯಾದ್ಯಂತ ಮದ್ಯ ನಿಷೇಧ ಮಾಡಬೇಕು.
ಇಲ್ಲವಾದರೆ ಸ್ವರಾಜ್ ಸಂಘಟನೆಯ ಮೂಲಕ ಮುಂದಿನ ದಿನಗಳಲ್ಲಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದರು.
ಸ್ವರಾಜ್ ಸಂಘಟನೆಯ ಪದಾಧಿಕಾರಿಗಳಾದ ಉಮಾ, ಸುಮತಿ, ಚಂದ್ರಮ್ಮ, ವಿಜಯಕುಮಾರ್ ಮತ್ತಿತರರು ಹಾಜರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in health »
ವ್ಯವಹಾರಕ್ಕಾಗಿ ಆಸ್ಪತ್ರೆಯಲ್ಲಾ, ಸೇವೆಗಾಗಿ ನಮ್ಮ ಆಸ್ಪತ್ರೆ. ಕಾಂಗರೂ ಆಸ್ಪತ್ರೆಯ ಸಂಸ್ಥಾಪಕ ಡಾ ಶೇಖರ್ ಸುಬ್ಬಯ್ಯ
ರಾಮನಗರ: ನಾವು ಹಣಕ್ಕಾಗಿ ಆಸ್ಪತ್ರೆ ನಡೆಸುವುದಿಲ್ಲ, ಇದೊಂದು ಸೇವೆ ಎಂದು ಪರಿಗಣಿಸಿ ಆಸ್ಪತ್ರೆ ನಡೆಸುತ್ತಿದ್ದೇವೆ. ಬೆಂಗಳೂರು ಮೈಸೂರು ಸೇರಿದಂತೆ ನಾಲ್ಕು
೪೬ ವರ್ಷದ ಮಹಿಳೆಯ ಹೊಟ್ಟೆಯಲ್ಲಿದ್ದ ೧೦ ಕಿಲೋ ಕ್ಯಾನ್ಸರ್ ಗಡ್ಡೆ ಹೊರತೆಗೆದ ಬಾಲು ಆಸ್ಪತ್ರೆಯ ವೈದ್ಯರು
ಚನ್ನಪಟ್ಟಣ: ತಾಲ್ಲೂಕಿನ ಗ್ರಾಮವೊಂದರ ೪೬ ವರ್ಷದ ಮಹಿಳೆಯೊಬ್ಬರ ಗರ್ಭ (ಅಂಡಾಶಯ) ದಲ್ಲಿದ್ದ ಬರೋಬ್ಬರಿ ೧೦ ಕಿಲೋ ೩೦೦ ಗ್ರಾಂ ತೂಕದ ಕ್ಯಾನ್ಸರ್ ಗಡ್ಡೆ ಯನ್ನ
ಹೊಂಗನೂರು, ಕೋಡಂಬಳ್ಳಿ ಗ್ರಾಮದಲ್ಲಿ ಪರವಾನಗಿ ಇಲ್ಲದ ಖಾಸಗಿ ಆಸ್ಪತ್ರೆಗಳಿಗೆ ಬೀಗ ಜಡಿದ ಟಿಹೆಚ್ಓ
ಚನ್ನಪಟ್ಟಣ: ತಾಲ್ಲೂಕಿನ ಹೊಂಗನೂರು ಗ್ರಾಮದಲ್ಲಿ ಗೋಪಿ ಕ್ಲಿನಿಕ್ ಎಂಬ ಖಾಸಗಿ ಆಸ್ಪತ್ರೆ ಇದ್ದು, ಗೋಪಿ ಎಂಬುವವರು ವೈದ್ಯರಾಗಿ ಸೇವೆ ನಿರ್ವಹಿಸುತ್ತಿದ್ದಾರ
ಉತ್ತಮ ಆರೋಗ್ಯಕ್ಕೆ ಆಯುರ್ವೇದವೇ ದಿವ್ಯ ಔಷಧ ಡಾ ಸಹನಾ ಕೃಷ್ಣ
ಚನ್ನಪಟ್ಟಣ: ಪುರಾಣೇತೀಹಾಸದಿಂದಲೂ ಪ್ರಖ್ಯಾತವಾಗಿರುವ ಔಷಧ ಎಂದರೆ ಅದು ಆಯುರ್ವೇದ ಔಷಧ, ಜಗತ್ತಿನ ಅತ್ಯಂತ ಪ್ರಾಚೀನ ಔಷಧವೂ ಹೌದು, ನಮ್ಮ ಪ್ರಕೃತಿ ಹೇಗೆ ಸಮ
ದೊಡ್ಡಮಳೂರು ಗ್ರಾಮದಲ್ಲಿ ದೀರ್ಘಾಯು ವೆಲ್ ನೆಸ್ ಆಯುರ್ವೇದ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ಶಿಬಿರ
ಚನ್ನಪಟ್ಟಣ: ತಾಲ್ಲೂಕಿನ ದೊಡ್ಡಮಳೂರು ಗ್ರಾಮದ ದೇವಸ್ಥಾನದ ಬೀದಿಯಲ್ಲಿರುವ ದೀರ್ಘಾಯು ವೆಲ್ ನೆಸ್ ಸೆಂಟರ್ ಇವರ ವತಿಯಿಂದ ನಾಳೆ (ಭಾನುವಾರ) ಬೆಳಿ
ಕ್ರಿಯೇಟಿವ್ ಅಸೋಸಿಯೇಷನ್ ಹಾಗೂ ಸೊಸೈಟಿ ವತಿಯಿಂದ ಶನಿವಾರ ನಗರದಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರ
ಚನ್ನಪಟ್ಟಣ : ತಾಲ್ಲೂಕಿನಿಂದ ಬೆಂಗಳೂರಿಗೆ ಹೋಗಿ, ಜೀವನ ಕಟ್ಟಿಕೊಂಡು ತಾಲ್ಲೂಕಿಗೆ ಏನಾದರೂ ಕೊಡುಗೆ ನೀಡಬೇಕೆಂಬ ಹಂಬಲದಿಂದ ಕ್ರಿಯೇಟಿವ್ ಅಸೋಸಿಯೇಷನ್ ಮತ್ತ
ದುಶ್ಚಟದಿಂದ ದೂರವಿರಿ, ಆರೋಗ್ಯ ಕಾಪಾಡಿಕೊಳ್ಳಿ : ಪ್ರತಿಮಾ ಕೆ.ವಿ
ರಾಮನಗರ, ಜೂ. 17: ಇತ್ತೀಚೆಗೆ ಅತಿ ಹೆಚ್ಚು ಹಲವಾರು ದುಶ್ಚಟಗಳು ಮನುಷ್ಯನನ್ನು ಆವರಸಿಕೊಂಡಿವೆ. ಇದರಿಂದಾಗಿ ನೂರಾರು ಖಾಯಿಲೆಗಳು ದೇಹ ಹೊಕ್ಕು ನಿತ್ಯ ಸಾ
ಫ್ಲೋರೋಸಿಸ್ ನಿಯಂತ್ರಿಸಿ ಉತ್ತಮ ಜೀವನ ನಡೆಸುವಂತೆ ಸಲಹೆ - ಡಾ.ಅನಿಲ್
ರಾಮನಗರ, ಜೂ. 15: ಫ್ಲೋರೈಡ್ ನಮ್ಮ ದೇಹಕ್ಕೆ ಬೇಕಾದ ಒಂದು ಖನಿಜಾಂಶ ನಾವು ಸೇವಿಸುವ ಆಹಾರ ಮತ್ತು ಕುಡಿಯುವ ನೀರಿನಲ್ಲಿ ಅವಶ್ಯಕತೆಗಿಂತ ಹೆಚ್ಚು ಫ್ಲೋರೈಡ
ಆರೋಗ್ಯ ಕೇಂದ್ರದಲ್ಲಿ ದೊರೆಯುವ ಸೇವೆಗಳನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದ ಬಿ.ಎಸ್.ಗಂಗಾಧರ್.
ರಾಮನಗರ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಕೆ.ಕರೇನಹಳ್ಳಿ ಇವರ ಸಂಯುಕ್ತ ಆಶ್ರ
ಶ್ರೀಗಿರಿಪುರ ಗ್ರಾಪಂ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆದ ಆರೋಗ್ಯ ತಪಾಸಣಾ ಶಿಬಿರ
ರಾಮನಗರ, ಜೂ. 07: ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಾತ್ಮಗಾಂಧಿ ನರೇಗಾ ಉದ್ಯೋಗ ಖಾತ್ರಿ ಯೋಜನೆ ಹಾಗೂ ಕುದೂರು ಪ್ರ
ಪ್ರತಿಕ್ರಿಯೆಗಳು