ರಾಜರಾಜೇಶ್ವರಿ ವೈದ್ಯಕೀಯ ಕಾಲೇಜಿಗೆ ಉಪಮುಖ್ಯಮಂತ್ರಿಗಳಿಂದ ಎಚ್ಚರಿಕೆ

ಬೆಂಗಳೂರು/ರಾಮನಗರ:ಜು/೧೦/೨೦/ಶುಕ್ರವಾರ. ರಾಮನಗರ ಜಿಲ್ಲೆಯ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ವಿಳಂಬ ಮಾಡುತ್ತಿರುವ ರಾಜರಾಜೇಶ್ವರಿ ವೈದ್ಯಕೀಯ ಕಾಲೇಜಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಉಪಮುಖ್ಯಮಂತ್ರಿ ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ಥನಾರಾಯಣ ಅವರು ತಕ್ಷಣವೇ ಸ್ಪಂದಿಸುವಂತೆ ಆಸ್ಪತ್ರೆಯ ಆಡಳಿತ ಮಂಡಳಿಗೆ ಎಚ್ಚರಿಕೆ ನೀಡಿದರು.
ರಾಮನಗರದಿಂದ ಆಂಬುಲೆನ್ಸ್ ನಲ್ಲಿ ಬರುವ ರೋಗಿಗಳನ್ನು ತಕ್ಷಣವೇ ದಾಖಲಿಸಿಕೊಂಡು ಚಿಕಿತ್ಸೆ ನೀಡಬೇಕು. ವಿಳಂಬ ಧೋರಣೆ ಸಹಿಸಲು ಅಸಾಧ್ಯ. ತಪ್ಪಿದಲ್ಲಿ ಕ್ರಮಕ್ಕೆ ಮುಂದಾಗುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರು ಆಸ್ಪತ್ರೆಗೆ ಎಚ್ಚರಿಕೆ ನೀಡಿದ್ದಾರೆ.
ರಾಮನಗರ ಜಿಲ್ಲೆಯ ಕೋವಿಡ್-೧೯ ಪರಿಸ್ಥಿತಿ ಕುರಿತಂತೆ ಜಿಲ್ಲಾಡಳಿತದೊಂದಿಗೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಹಿತಿ ಪಡೆದುಕೊಂಡ ಉಪಮುಖ್ಯಮಂತ್ರಿಗಳು ರಾಜರಾಜೇಶ್ವರಿ ವೈದ್ಯಕೀಯ ಕಾಲೇಜು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂಬ ಮಾತುಗಳು ಕೇಳಿಬಂದ ಹಿನ್ನೆಲೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.
ಜಿಲ್ಲಾಡಳಿತದೊಂದಿಗೆ ಒಪ್ಪಂದ ಮಾಡಿಕೊಂಡಿರುವ ಬೆಂಗಳೂರಿನ ಕೆಂಗೇರಿ ಸಮೀಪದಲ್ಲಿರುವ ರಾಜರಾಜೇಶ್ವರಿ ವೈದ್ಯಕೀಯ ಕಾಲೇಜು ರಾಮನಗರದ ರೋಗಿಗಳಿಗೆ ೩೦೦ ಹಾಸಿಗೆಗಳನ್ನು ಒದಗಿಸುವುದಾಗಿ ತಿಳಿಸಿತ್ತು. ಈ ಬಗ್ಗೆ ಖುದ್ದಾಗಿ ಮುತುವರ್ಜಿ ವಹಿಸಿದ್ದ ಉಪಮುಖ್ಯಮಂತ್ರಿಗಳು ಆಸ್ಪತ್ರೆಯ ಮುಖ್ಯಸ್ಥ ನವೀನ್ ಅವರೊಂದಿಗೆ ಮಾತುಕತೆ ನಡೆಸಿದ್ದರು.
*ಖುದ್ದು ಮಾತುಕತೆ:* ಆಸ್ಪತ್ರೆಯ ಮುಖ್ಯಸ್ಥ ನವೀನ್ ಅವರೊಂದಿಗೆ ಈ ಬಗ್ಗೆ ಖುದ್ದಾಗಿ ಮಾತನಾಡಿ ಗಮನ ಸೆಳೆಯುವುದಾಗಿ ತಿಳಿಸಿದ ಉಪಮುಖ್ಯಮಂತ್ರಿಗಳು ಜಿಲ್ಲಾಡಳಿತವು ಸಹ ಈ ಬಗ್ಗೆ ವಿವರವಾದ ಪತ್ರವನ್ನು ಬರೆದು ಆಸ್ಪತ್ರೆಗೆ ಎಚ್ಚರಿಕೆ ನೀಡುವಂತೆಯೂ ಸೂಚಿಸಿದರು.
*ತಪಾಸಿಸಲು ನಿರ್ದೇಶನ:* ಪ್ರಸಕ್ತ ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ೫೧ ಮಂದಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಈ ರೋಗಿಗಳನ್ನು ರಾಮನಗರದ ವೈದ್ಯಾಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ವೈಯಕ್ತಿಕವಾಗಿ ಅವರಿಂದ ಮಾಹಿತಿ ಪಡೆದುಕೊಂಡು ಅಲ್ಲಿರುವ ಸೌಲಭ್ಯ ಮತ್ತು ನೀಡುತ್ತಿರುವ ಚಿಕಿತ್ಸೆಯ ಬಗ್ಗೆ ವರದಿ ನೀಡುವಂತೆ ಉಸ್ತುವಾರಿ ಸಚಿವರು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದರು.
ಜಿಲ್ಲಾಡಳಿತದೊಂದಿಗೆ ಮಾಡಿಕೊಂಡಿರುವ ಒಪ್ಪಂದದಂತೆ ವೈದ್ಯಕೀಯ ಕಾಲೇಜು ೧೫ ವೆಂಟಿಲೇಟರ್ ಮತ್ತು ೩೦ ಐಸಿಯು ವಾರ್ಡ್ ಗಳನ್ನು ನೀಡಬೇಕಾಗಿರುತ್ತದೆ. ಇವುಗಳ ಬಗ್ಗೆಯೂ ಪರೀಕ್ಷಿಸಿ ವರದಿ ನೀಡುವಂತೆ ಅವರು ತಿಳಿಸಿದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in health »

ವಿಸ್ತರಿತ ಆಸ್ಪತ್ರೆಯಾಗಿ ಕಂದಾಯ ಭವನ ಮುಂದುವರಿಕೆ: ಡಿಸಿಎಂ ಅಶ್ವಥ್ ನಾರಾಯಣ
ರಾಮನಗರ:ಜು/೧೬/೨೦/ಗುರುವಾರ. ಕೋವಿಡ್-೧೯ ರೆಫೆರೆಲ್ ಆಸ್ಪತ್ರೆಯಾಗಿ ಪರಿವರ್ತಿಸಲಾಗಿರುವ ಕಂದಾಯ ಭವನವನ್ನು ಮುಂದಿನ ದಿನಗಳಲ್ಲಿ ವಿಸ್ತರಿತ ಆಸ್ಪ

ರಾಜರಾಜೇಶ್ವರಿ ವೈದ್ಯಕೀಯ ಕಾಲೇಜಿಗೆ ಉಪಮುಖ್ಯಮಂತ್ರಿಗಳಿಂದ ಎಚ್ಚರಿಕೆ
ಬೆಂಗಳೂರು/ರಾಮನಗರ:ಜು/೧೦/೨೦/ಶುಕ್ರವಾರ. ರಾಮನಗರ ಜಿಲ್ಲೆಯ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ವಿಳಂಬ ಮಾಡುತ್ತಿರುವ ರಾಜರಾಜೇಶ್ವರಿ ವೈದ್ಯಕ

ಕೋವಿಡ್ ಸಮಯದಲ್ಲಿ ರಕ್ತದಾನ ಸರ್ವದಾನಕ್ಕಿಂತಲೂ ಮಿಗಿಲು ಡಾ ಮೋಹನ್
ಚನ್ನಪಟ್ಟಣ:ಜೂ/೨೮/೨೦/ಭಾನುವಾರ. ರಕ್ತದಾನ ಮಹಾದಾನ ಎಂಬುದು ವೈದ್ಯೋಕ್ತಿ. ಅದರಲ್ಲೂ ಈ ಕೋವಿಡ್ ಸಮಯದಲ್ಲಿ ರಕ್ತ ದಾನ ಮಾಡುವುದು ಸರ್ವದಾನಗಳಿಗೂ

ಮಾನಸಿಕ ಖಾಯಿಲೆ ಮಾರಕವಲ್ಲ; ಮಾನಸಿಕ ತಜ್ಞ ಡಾ ಆದರ್ಶ
ಚನ್ನಪಟ್ಟಣ:ಜೂ/೧೦/೨೦/ಬುಧವಾರ. ಮಾನಸಿಕ ಖಾಯಿಲೆಯು ವಾಸಿಯಾಗುವ ಖಾಯಿಲೆಯಾಗಿದ್ದು ಆತಂಕ ಪಡಬೇಕಾಗಿಲ್ಲ. ಶೇಕಡಾ ೧೦ ರಷ್ಟು ಮಾನಸಿಕ ರೋಗಿಗಳು ನಮ್

ಕರ್ನಾಟಕ ರಾಜ್ಯದಲ್ಲಿ ಸಂಪೂರ್ಣ ಮದ್ಯ ನಿಷೇಧಿಸಲು ಸ್ವರಾಜ್ ಸಂಘಟನೆ ಮನವಿ
ಚನ್ನಪಟ್ಟಣ:ಮೇ/೧೬/೨೦/ಶನಿವಾರ. ಬಡ ಜನರು, ಕೂಲಿಕಾರ್ಮಿಕರು ನೆಮ್ಮದಿಯಿಂದ ಬದುಕಬೇಕಾದರೆ, ಹೆಂಡತಿ ಮಕ್ಕಳ ಮೇಲೆ ಕುಡಿದು ಬಂದವರು ದೌರ್ಜನ್ಯ ನಡೆ

ನಾಳೆ (ಮೇ ೧೬) ರಂದು ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ
ರಾಮನಗರ:ಮೇ/೧೫/೨೦/ಶುಕ್ರವಾರ. ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದ ಅನ್ವಯ ಡೆಂಗ್ಯೂ ನಿಯಂತ್ರಣದಲ್ಲಿ ರೋಗ ಪ್ರಸರಣ ಅವಧ

ರಾಮನಗರದಲ್ಲಿ ಟೆಲಿ ಐಸಿಯು ಸೇವೆ: ಡಾ. ಅಶ್ವತ್ಥನಾರಾಯಣ
ರಾಮನಗರ:ಮೇ/೧೧/೨೦/ಸೋಮವಾರ. ತುರ್ತು ನಿರ್ವಹಣಾ (ಐಸಿಯು) ಘಟಕ ನಿರ್ವಹಣೆಗೆ ಅಗತ್ಯ ಇರುವ ತಜ್ಞ ವೈದ್ಯರ ಕೊರತೆ ನೀಗಿಸಲು ಜಿಲ್ಲೆಯ ಕೊವಿಡ್-೧೯ ಆ

ಮಾನಸಿಕ ಆರೋಗ್ಯ ಸಮಸ್ಯೆ: ಶುಲ್ಕ ರಹಿತ ಸಹಾಯವಾಣಿ ಪ್ರಾರಂಭ
ರಾಮನಗರ:ಮೇ/೦೬/೨೦/ಬುಧವಾರ. ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶದಂತೆ ನಿಮ್ಹಾನ್ಸ್ ಸಂಸ್ಥೆ ವತಿಯಿಂದ ಕೊವಿಡ್-೧೯ ಸಾಂಕ್ರಾಮಿ

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಜನಜಾಗೃತಿ ಅಭಿಯಾನ
ರಾಮನಗರ : ಕೊರೊನಾ ಸೋಂಕಿನಿಂದ ಇಡೀ ಜಗತ್ತು ತಲ್ಲಣಗೊಂಡಿದೆ. ಈ ಸೋಂಕು ಹರಡುವಿಕೆ ತಡೆಗೆ ಸಾಮಾಜಿಕ ಅಂತರವೇ ಮದ್ದು ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ತಿಳಿಸಿದರು

ಹೆಚ್ಚಿನ ಬೆಲೆಯಲ್ಲಿ ಮಾಸ್ಕ್ ಮಾರಾಟ: ಶ್ರೀ ಲಕ್ಷ್ಮಿ ಮೆಡಿಕಲ್ಸ್ ಅಂಡ್ ಜನರಲ್ ಸ್ಟೋರ್ ಗೆ ೫ ಸಾವಿರ ರೂ.ಗಳ ದಂಡ
ರಾಮನಗರ:ಏ/೦೩/೨೦/ಶುಕ್ರವಾರ. ರಾಮನಗರದ ಐಜೂರಿನ ಪಿ.ಎಲ್.ಡಿ. ಬ್ಯಾಂಕ್ ಬಳಿಯಿರುವ ಶ್ರೀ ಲಕ್ಷ್ಮಿ ಮೆಡಿಕಲ್ಸ್ ಅಂಡ್ ಜನರಲ್ ಸ್ಟೋರ್ ಅವರು ಹೆಚ್ಚ
ಪ್ರತಿಕ್ರಿಯೆಗಳು