Tel: 7676775624 | Mail: info@yellowandred.in

Language: EN KAN

    Follow us :


ಇಂದು ವಿಶ್ವ ದಾದಿಯರ ದಿನಾಚರಣೆ. ದಾದಿಯರನ್ನೂ ಬಿಡದ ಕೋವಿಡ್. ಅವರಿಗೊಂದು ಸಲಾಮ್

Posted date: 12 May, 2021

Powered by:     Yellow and Red

ಇಂದು ವಿಶ್ವ ದಾದಿಯರ ದಿನಾಚರಣೆ. ದಾದಿಯರನ್ನೂ ಬಿಡದ ಕೋವಿಡ್. ಅವರಿಗೊಂದು ಸಲಾಮ್

ಇಂದು ವಿಶ್ವ ದಾದಿಯರ ದಿನ. ಮೊದಲಿಗೆ ಅವರಿಗೊಂದು ಸಲಾಮು ಹೇಳಿಬಿಡೋಣಾ. ಹೆಂಗಸರನ್ನು ಸಿಸ್ಟರ್ ಎಂದು ಗಂಡಸರನ್ನು ಬ್ರದರ್ ಎಂದು ಸಂಬೋಧಿಸುವ ಮೂಲಕ ಒಟ್ಟಾರೆ ದಾದಿಯರೆಂದು ಕರೆಯುತ್ತಾರೆ. ಈ ದಾದಿಯರನ್ನೂ ಸಹ ಇಂದಿನ ಕೊರೊನಾ ಎಡೆಬಿಡದೆ ಕಾಡುತ್ತಿದ್ದು, ಅವರೂ ಸಹ ಜೀವ ಕೈಲಿಡಿದು ಕೆಲಸ ನಿರ್ವಹಿಸುತ್ತಿದ್ದಾರೆ.


ಇಂದು ಕೊರೊನಾ ಗೆ ಸಂಬಂಧಿಸಿದಂತೆ ಅವರ ಕೆಲಸದ ಬಗ್ಗೆ ಮಾಹಿತಿ ಪಡೆಯಲೋಸುಗ ನಾಲ್ಕಾರು ದಾದಿಯರನ್ನು ಹುಡುಕಿಕೊಂಡು ಹೋದೆ. ಅವರೆಲ್ಲಾ ಸಿಕ್ಕಿದರಾದರೂ ಕ್ಷಣವೂ ಪುರುಷೊತ್ತಿಲ್ಲದೆ ಕೆಲಸ ನಿರ್ವಹಿಸುತ್ತಿಸುತ್ತಿದುದರಿಂದ ಅವರನ್ನು ಮಾತನಾಡಿಸಲು ನಾನು ಹಿಂಜರಿದೆ. ಇದಕ್ಕೆ ಕಾರಣ ಅವರ ಕರ್ತವ್ಯ ನಿಷ್ಠೆ.


ಇಂದು ಸಹಸ್ರಾರು ಮಂದಿ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ಹಾಕಿಸಿಕೊಳ್ಳುತ್ತಿದ್ದಾರೆ. ಕನಿಷ್ಠ 50 ರಿಂದ 100 ಮಂದಿಗೆ ಇಬ್ಬರೋ, ಮೂವರೋ ದಾದಿಯರು ಲಸಿಕೆ ನೀಡುತ್ತಾರೆ. ಅವರಲ್ಲಿ ಎಷ್ಟು ಮಂದಿಗೆ ಆ ಕ್ಷಣದಲ್ಲಿ ಸೋಂಕು ಇರುತ್ತೋ ಎನ್ನುವುದು ಗೊತ್ತಿರುವುದಿಲ್ಲ. ಈ ಲಸಿಕೆ ಹಾಕಿಸಿಕೊಳ್ಳುವ ಮಂದಿಯೂ ಸಹ ತುಂಬಾ ತರಾತುರಿಯಲ್ಲಿದ್ದು, ಒಬ್ಬರ ಮೇಲೊಬ್ಬರು ಮುಗಿಬಿದ್ದು ಹಾಕಿಸಿಕೊಳ್ಳಲು ಪ್ರಯತ್ನಿಸುತ್ತಾರೆ.


ಲಸಿಕೆ ಅಷ್ಟೇ ಅಲ್ಲಾ, ಯಾವುದೇ ರೋಗಿ ನಾಮುಂದು ತಾಮುಂದು ಎಂದೇ ಚಿಕಿತ್ಸೆ ಪಡೆಯಲು ಮುಂದಾಗುತ್ತಾನೆ. ಅವನ ಅವಸರಕ್ಕೆ ಇವರು ಬಲಿಪಶುಗಳಾಗುತ್ತಾರೆ. ಅದರಲ್ಲೂ ಅಪಘಾತ, ಆತ್ಮಹತ್ಯೆ ಯತ್ನದಂತಹ ಕೇಸುಗಳಲ್ಲಿ ಪೋಷಕರ ಗಲಾಟೆ ಹೆಚ್ಚಾಗಿರುತ್ತದೆ. ವೈದ್ಯರು ಸೇರಿದಂತೆ ಎಲ್ಲಾ ನರ್ಸ್ ಗಳು ಇಲ್ಲಿ ಬಲಿಪಶುವೇ. ಇದಕ್ಕೆ ಕೆಲ ವೈದ್ಯರು ಸರಳೋಪಾಯ ಕಂಡುಕೊಂಡಿದ್ದು, ಪೋಷಕರ ದಂಡನ್ನು ನೋಡಿದಾಗ ಇಲ್ಲಿ ಸೌಲಭ್ಯಗಳಿಲ್ಲ. ನೀವು ದೊಡ್ಡಾಸ್ಪತ್ರೆಗೆ ಹೋಗಿ ಎಂದು ಹೇಳಿ ಕೈತೊಳೆದುಕೊಳ್ಳುತ್ತಾರೆ.


ಎಂತಹ ಕಷ್ಟದ ಪರಿಸ್ಥಿತಿಯಲ್ಲೂ ಹಗಲಿರುಳೆನ್ನದೆ, ರೋಗರುಜಿನಗಳು ನಮಗೆ ಅಂಟುತ್ತವೆ ಎಂಬುದರ ಪರಿವೆಯಿಲ್ಲದೆ, ಕೋವಿಡ್ ಸಮಯದಲ್ಲಿ ಕೊರೊನಾ ಸೋಂಕಿತರಿಗೆ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಚಿಕಿತ್ಸೆ ನೀಡುತ್ತಿರುವ ನಮ್ಮ ದಾದಿಯರಿಗೆ ಸರ್ವ ರೋಗಿಗಳ  ಧನ್ಯವಾದಗಳನ್ನು ನಮ್ಮ ಪತ್ರಿಕಾ ಬಳಗದಿಂದ ಅರ್ಪಿಸುತ್ತೇವೆ.


ಇದೇ ಸಮಯದಲ್ಲಿ ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾದಿಯವರ ಮೇಲ್ವಿಚಾರಕಿ ಸರಸ್ವತಿ ರವರ ನೇತೃತ್ವದಲ್ಲಿ ವಿಶ್ವ ದಾದಿಯರ ದಿನಾಚರಣೆಯನ್ನು ಕೇಕ್ ಕಟ್ ಮಾಡುವ ಮೂಲಕ ಆಚರಿಸಿದರು.


*ನಾವು ಸೇವೆಗಾಗಿಯೇ ಬಂದವರು. ಇಲ್ಲಿ ಯಾವುದೇ ರೀತಿಯ ರೋಗಿಗಳಿರಲಿ, ಮೈಯ್ಯೆಲ್ಲಾ ಹುಣ್ಣಾಗಿರುವವರಿರಲಿ, ಬಲಿ ಪಡೆಯುವ ಕೊರೋನಾ ಇರಲಿ ಅವರಿಗೆಲ್ಲಾ ಬದುಕುವ ಭರವಸೆ ನೀಡಿ, ವೈದ್ಯರ ಆದೇಶದ ಮೇರೆಗೆ ಸೂಕ್ತ ಚಿಕಿತ್ಸೆ ನೀಡುವುದು ನಮ್ಮ ಕರ್ತವ್ಯ. ರೋಗಿಗಳು ಮತ್ತು ಪೋಷಕರು ನಮಗೆ ಮೆಚ್ಚುಗೆ ನೀಡದಿದ್ದರೂ ಪರವಾಗಿಲ್ಲ, ಸಹಕರಿಸಿದರೆ ನಾವು ಧನ್ಯ ಎನ್ನುತ್ತಾರೆ. ಸದಾ ಲಸಿಕಾ ಕೇಂದ್ರದಲ್ಲೇ ಕೆಲಸ ನಿರ್ವಹಿಸುತ್ತಿರುವ ಸಾರ್ವಜನಿಕ ಆಸ್ಪತ್ರೆಯ ದಾದಿ ಶಾಂತಾ ಕೆ ರವರು*


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in health »

ವ್ಯವಹಾರಕ್ಕಾಗಿ ಆಸ್ಪತ್ರೆಯಲ್ಲಾ, ಸೇವೆಗಾಗಿ ನಮ್ಮ ಆಸ್ಪತ್ರೆ. ಕಾಂಗರೂ ಆಸ್ಪತ್ರೆಯ ಸಂಸ್ಥಾಪಕ ಡಾ ಶೇಖರ್ ಸುಬ್ಬಯ್ಯ
ವ್ಯವಹಾರಕ್ಕಾಗಿ ಆಸ್ಪತ್ರೆಯಲ್ಲಾ, ಸೇವೆಗಾಗಿ ನಮ್ಮ ಆಸ್ಪತ್ರೆ. ಕಾಂಗರೂ ಆಸ್ಪತ್ರೆಯ ಸಂಸ್ಥಾಪಕ ಡಾ ಶೇಖರ್ ಸುಬ್ಬಯ್ಯ

ರಾಮನಗರ: ನಾವು ಹಣಕ್ಕಾಗಿ ಆಸ್ಪತ್ರೆ ನಡೆಸುವುದಿಲ್ಲ, ಇದೊಂದು ಸೇವೆ ಎಂದು ಪರಿಗಣಿಸಿ ಆಸ್ಪತ್ರೆ ನಡೆಸುತ್ತಿದ್ದೇವೆ. ಬೆಂಗಳೂರು ಮೈಸೂರು ಸೇರಿದಂತೆ ನಾಲ್ಕು

೪೬ ವರ್ಷದ ಮಹಿಳೆಯ ಹೊಟ್ಟೆಯಲ್ಲಿದ್ದ ೧೦ ಕಿಲೋ ಕ್ಯಾನ್ಸರ್ ಗಡ್ಡೆ ಹೊರತೆಗೆದ ಬಾಲು ಆಸ್ಪತ್ರೆಯ ವೈದ್ಯರು
೪೬ ವರ್ಷದ ಮಹಿಳೆಯ ಹೊಟ್ಟೆಯಲ್ಲಿದ್ದ ೧೦ ಕಿಲೋ ಕ್ಯಾನ್ಸರ್ ಗಡ್ಡೆ ಹೊರತೆಗೆದ ಬಾಲು ಆಸ್ಪತ್ರೆಯ ವೈದ್ಯರು

ಚನ್ನಪಟ್ಟಣ: ತಾಲ್ಲೂಕಿನ ಗ್ರಾಮವೊಂದರ ೪೬ ವರ್ಷದ ಮಹಿಳೆಯೊಬ್ಬರ ಗರ್ಭ (ಅಂಡಾಶಯ) ದಲ್ಲಿದ್ದ ಬರೋಬ್ಬರಿ ೧೦ ಕಿಲೋ ೩೦೦ ಗ್ರಾಂ ತೂಕದ ಕ್ಯಾನ್ಸರ್ ಗಡ್ಡೆ ಯನ್ನ

ಹೊಂಗನೂರು, ಕೋಡಂಬಳ್ಳಿ ಗ್ರಾಮದಲ್ಲಿ ಪರವಾನಗಿ ಇಲ್ಲದ ಖಾಸಗಿ ಆಸ್ಪತ್ರೆಗಳಿಗೆ ಬೀಗ ಜಡಿದ ಟಿಹೆಚ್‌ಓ
ಹೊಂಗನೂರು, ಕೋಡಂಬಳ್ಳಿ ಗ್ರಾಮದಲ್ಲಿ ಪರವಾನಗಿ ಇಲ್ಲದ ಖಾಸಗಿ ಆಸ್ಪತ್ರೆಗಳಿಗೆ ಬೀಗ ಜಡಿದ ಟಿಹೆಚ್‌ಓ

ಚನ್ನಪಟ್ಟಣ: ತಾಲ್ಲೂಕಿನ ಹೊಂಗನೂರು ಗ್ರಾಮದಲ್ಲಿ ಗೋಪಿ ಕ್ಲಿನಿಕ್ ಎಂಬ ಖಾಸಗಿ ಆಸ್ಪತ್ರೆ ಇದ್ದು, ಗೋಪಿ ಎಂಬುವವರು ವೈದ್ಯರಾಗಿ ಸೇವೆ ನಿರ್ವಹಿಸುತ್ತಿದ್ದಾರ

ಉತ್ತಮ ಆರೋಗ್ಯಕ್ಕೆ ಆಯುರ್ವೇದವೇ ದಿವ್ಯ ಔಷಧ ಡಾ ಸಹನಾ ಕೃಷ್ಣ
ಉತ್ತಮ ಆರೋಗ್ಯಕ್ಕೆ ಆಯುರ್ವೇದವೇ ದಿವ್ಯ ಔಷಧ ಡಾ ಸಹನಾ ಕೃಷ್ಣ

ಚನ್ನಪಟ್ಟಣ: ಪುರಾಣೇತೀಹಾಸದಿಂದಲೂ ಪ್ರಖ್ಯಾತವಾಗಿರುವ ಔಷಧ ಎಂದರೆ ಅದು ಆಯುರ್ವೇದ ಔಷಧ, ಜಗತ್ತಿನ ಅತ್ಯಂತ ಪ್ರಾಚೀನ ಔಷಧವೂ ಹೌದು, ನಮ್ಮ ಪ್ರಕೃತಿ ಹೇಗೆ ಸಮ

ದೊಡ್ಡಮಳೂರು ಗ್ರಾಮದಲ್ಲಿ ದೀರ್ಘಾಯು ವೆಲ್ ನೆಸ್ ಆಯುರ್ವೇದ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ಶಿಬಿರ
ದೊಡ್ಡಮಳೂರು ಗ್ರಾಮದಲ್ಲಿ ದೀರ್ಘಾಯು ವೆಲ್ ನೆಸ್ ಆಯುರ್ವೇದ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ಶಿಬಿರ

ಚನ್ನಪಟ್ಟಣ: ತಾಲ್ಲೂಕಿನ ದೊಡ್ಡಮಳೂರು ಗ್ರಾಮದ ದೇವಸ್ಥಾನದ ಬೀದಿಯಲ್ಲಿರುವ ದೀರ್ಘಾಯು ವೆಲ್ ನೆಸ್ ಸೆಂಟರ್ ಇವರ ವತಿಯಿಂದ ನಾಳೆ (ಭಾನುವಾರ) ಬೆಳಿ

ಕ್ರಿಯೇಟಿವ್ ಅಸೋಸಿಯೇಷನ್ ಹಾಗೂ ಸೊಸೈಟಿ ವತಿಯಿಂದ ಶನಿವಾರ ನಗರದಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರ
ಕ್ರಿಯೇಟಿವ್ ಅಸೋಸಿಯೇಷನ್ ಹಾಗೂ ಸೊಸೈಟಿ ವತಿಯಿಂದ ಶನಿವಾರ ನಗರದಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರ

ಚನ್ನಪಟ್ಟಣ : ತಾಲ್ಲೂಕಿನಿಂದ ಬೆಂಗಳೂರಿಗೆ ಹೋಗಿ, ಜೀವನ ಕಟ್ಟಿಕೊಂಡು ತಾಲ್ಲೂಕಿಗೆ ಏನಾದರೂ ಕೊಡುಗೆ ನೀಡಬೇಕೆಂಬ ಹಂಬಲದಿಂದ ಕ್ರಿಯೇಟಿವ್ ಅಸೋಸಿಯೇಷನ್ ಮತ್ತ

ದುಶ್ಚಟದಿಂದ ದೂರವಿರಿ, ಆರೋಗ್ಯ ಕಾಪಾಡಿಕೊಳ್ಳಿ : ಪ್ರತಿಮಾ ಕೆ.ವಿ
ದುಶ್ಚಟದಿಂದ ದೂರವಿರಿ, ಆರೋಗ್ಯ ಕಾಪಾಡಿಕೊಳ್ಳಿ : ಪ್ರತಿಮಾ ಕೆ.ವಿ

ರಾಮನಗರ, ಜೂ. 17:   ಇತ್ತೀಚೆಗೆ ಅತಿ ಹೆಚ್ಚು ಹಲವಾರು ದುಶ್ಚಟಗಳು ಮನುಷ್ಯನನ್ನು ಆವರಸಿಕೊಂಡಿವೆ. ಇದರಿಂದಾಗಿ ನೂರಾರು ಖಾಯಿಲೆಗಳು ದೇಹ ಹೊಕ್ಕು ನಿತ್ಯ ಸಾ

ಫ್ಲೋರೋಸಿಸ್ ನಿಯಂತ್ರಿಸಿ ಉತ್ತಮ ಜೀವನ ನಡೆಸುವಂತೆ ಸಲಹೆ - ಡಾ.ಅನಿಲ್
ಫ್ಲೋರೋಸಿಸ್ ನಿಯಂತ್ರಿಸಿ ಉತ್ತಮ ಜೀವನ ನಡೆಸುವಂತೆ ಸಲಹೆ - ಡಾ.ಅನಿಲ್

ರಾಮನಗರ, ಜೂ. 15:   ಫ್ಲೋರೈಡ್ ನಮ್ಮ ದೇಹಕ್ಕೆ ಬೇಕಾದ ಒಂದು ಖನಿಜಾಂಶ ನಾವು ಸೇವಿಸುವ ಆಹಾರ ಮತ್ತು ಕುಡಿಯುವ ನೀರಿನಲ್ಲಿ ಅವಶ್ಯಕತೆಗಿಂತ ಹೆಚ್ಚು ಫ್ಲೋರೈಡ

ಆರೋಗ್ಯ ಕೇಂದ್ರದಲ್ಲಿ ದೊರೆಯುವ ಸೇವೆಗಳನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದ ಬಿ.ಎಸ್.ಗಂಗಾಧರ್.
ಆರೋಗ್ಯ ಕೇಂದ್ರದಲ್ಲಿ ದೊರೆಯುವ ಸೇವೆಗಳನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದ ಬಿ.ಎಸ್.ಗಂಗಾಧರ್.

ರಾಮನಗರ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಕೆ.ಕರೇನಹಳ್ಳಿ ಇವರ ಸಂಯುಕ್ತ ಆಶ್ರ

ಶ್ರೀಗಿರಿಪುರ ಗ್ರಾಪಂ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆದ ಆರೋಗ್ಯ ತಪಾಸಣಾ ಶಿಬಿರ
ಶ್ರೀಗಿರಿಪುರ ಗ್ರಾಪಂ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆದ ಆರೋಗ್ಯ ತಪಾಸಣಾ ಶಿಬಿರ

ರಾಮನಗರ, ಜೂ. 07:   ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಾತ್ಮಗಾಂಧಿ ನರೇಗಾ ಉದ್ಯೋಗ ಖಾತ್ರಿ ಯೋಜನೆ ಹಾಗೂ ಕುದೂರು ಪ್ರ

Top Stories »  


Top ↑