ಯೋಗವನ್ನು ಒಂದು ದಿನಕ್ಕೆ ಸೀಮಿತಗೊಳಿಸಬೇಡಿ. ಪ್ರತಿದಿನ ರೂಡಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಿ: ಡಾ: ರಾಕೇಶ್ ಕುಮಾರ್
ರಾಮನಗರ, ಜೂನ್.21. ಯೋಗವನ್ನು ಒಂದು ದಿನಕ್ಕೆ ಮೀಸಲಿಡದೆ, ಪ್ರತಿದಿನದ ಅಭ್ಯಾಸವಾಗಿ ರೂಢಿಸಿಕೊಂಡರೆ ಉತ್ತಮ ಆರೋಗ್ಯಭಾಗ್ಯ ಸಿಗುತ್ತದೆ. ಎಲ್ಲರು ಅಭ್ಯಾಸಿಸಿ, ಆರೋಗ್ಯವನ್ನು ಪರಿಣಾಮಕಾರಿಯಾಗಿ ಕಾಯ್ದುಕೊಳ್ಳಬಹುದು. ಯೋಗವು ಇಂದಿಗೆ ಮಾತ್ರ ಸೀಮಿತವಾಗದೆ, ಪ್ರತಿನಿತ್ಯ ರೂಢಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರು ಕರೆ ನೀಡಿದರು.
ಅವರು ಇಂದು 7 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅಂತರ್ಜಾಲ ಜೂಮ್ ವೇದಿಕೆಯಲ್ಲಿ ಚಾಲನೆ ನೀಡಿ ಹಾಗೂ ಸ್ವತಃ ಯೋಗಾಭ್ಯಾಸದಲ್ಲಿ ತೊಡಗಿ ಎಲ್ಲರಿಗೂ ಪ್ರೇರೇಪಿಸಿದರು. ಯೋಗಾಭ್ಯಾಸ ಮಾಡಿದರೆ ಪ್ರತಿಯೊಬ್ಬರು ದೈಹಿಕವಾಗಷ್ಟೆ ಅಲ್ಲದೆ ಮಾನಸಿಕ ವಾಗಿಯೂ ಪ್ರಭಾವಶಾಲಿಯಾಗಿರಬಹುದೆಂದು ತಿಳಿಸಿದರು.
ಬೆಳಿಗ್ಗೆ 6.30 ಕ್ಕೆ ಚನ್ನಪಟ್ಟಣ ದ ಆನಂದಾದ್ರಿ ಭಜನಾ ತಂಡದ ಮುಖ್ಯಸ್ಥೆ ಮಾಲತಿ ಸುರೇಶ್ ರವರು ಪ್ರಾರ್ಥನೆ ಮಾಡಿದರು. ಮದ್ದೂರು ಮಹಿಳಾ ಕಾಲೇಜಿನ ಪ್ರಾಂಶುಪಾಲ ಪ್ರೊ ಕೃಷ್ಣೇಗೌಡರು ಸಾಂದರ್ಭಿಕವಾಗಿ ಮಾತನಾಡಿದರು. ನಂತರ ರಾಮನಗರ ಜಿಲ್ಲಾ ಆಯುಷ್ ಅಧಿಕಾರಿ ಡಾ|| ಬಿ.ಎಸ್. ರಾಜಲಕ್ಷ್ಮಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಯೋಗವು ನಮ್ಮ ಭಾರತೀಯ ಸಂಸ್ಕೃತಿಯ ಪರಂಪರೆಯಿಂದ ಸಾವಿರಾರು ವರ್ಷಗಳ ಹಿಂದೆಯೇ ಹುಟ್ಟಿ ಬಂದಿರುವುದು ಅಂದಿನ ಮಹರ್ಷಿಗಳು ತಮ್ಮ ದಿವ್ಯ ಜ್ಞಾನದೃಷ್ಟಿಯಿಂದ ಇದರ ಮಹತ್ವ ತಿಳಿದು ಪ್ರತಿನಿತ್ಯ ಅಭ್ಯಾಸಿಸುತ್ತ ಉತ್ತಮ ಆರೋಗ್ಯವಂತರಾಗಿದ್ದರು ಎನ್ನುವುದು ನಮೆಲ್ಲರಿಗೂ ಉತ್ತಮ ನಿದರ್ಶನವಾಗಿದೆ. ಯೋಗವು ಮಾನಸಿಕ ಹಾಗೂ ಶಾರೀರಿಕ ಧೃಡತೆಯನ್ನು ತರುತ್ತದೆ ಹಾಗೂ ದೇಹ, ಮನಸ್ಸು, ಬುದ್ದಿ ಮತ್ತು ಆತ್ಮವನ್ನು ಸೇರಿಸಿ ಸಮಸ್ಥಿತಿಯಲ್ಲಿರಿಸುವುದೇ ಯೋಗದ ವೈಶಿಷ್ಟ್ಯತೆ ಎಂದು ತಿಳಿಸಿದರು.
ಭಾರತ ದೇಶದ ಕೊಡುಗೆಯಾದ ಇದನ್ನು ವಿಶ್ವವಿಡೀ ಯೋಗ ದಿನಾಚರಣೆಯನ್ನು ಆಚರಿಸುವಂತೆ ನಮ್ಮ ರಾಷ್ಟ್ರದ ಪ್ರಧಾನಿ ನರೇಂದ್ರ ಮೋದಿಯವರು 2004 ರಿಂದ ಪ್ರಾರಂಭಿಸಿ ಎಲ್ಲಾ ರಾಷ್ಟ್ರದವರು ಆಚರಿಸುವಂತೆ ಮಾಡಿರುವುದು ಭಾರತೀಯರೆಲ್ಲರಿಗು ಹೆಮ್ಮೆಯ ವಿಷಯವಾಗಿದೆ ಎಂದು ತಿಳಿಸಿದರು.
ಬೆಳಿಗ್ಗೆ 7.00 ಗಂಟೆಗೆ ಯೋಗಾಭ್ಯಾಸ ಪ್ರಾರಂಭವಾಯಿತು ರಾಧಿಕಾ ರವಿಕುಮಾರ್ ಅವರು ಯೋಗಾಸನಗಳನ್ನು ಮಾಡಿಸಿದರು. ನಂತರ 7.30 ಕ್ಕೆ ಪ್ರಾಣಾಯಾಮವನ್ನು ಮಾಡಿಸಿ, 7.45 ಕ್ಕೆ ಧ್ಯಾನವನ್ನು ಮಾಡಿಸಿ ಎಲ್ಲರ ಮನಸ್ಸನ್ನು ಪ್ರಪುಲ್ಲಗೊಳಿಸಿದರು. ಕಾರ್ಯಕ್ರಮದಲ್ಲಿ 93 ಕುಟುಂಬ ಹಾಗೂ ಸಂಸ್ಥೆಗಳ ಮೂಲಕ ಪಾಲ್ಗೊಂಡು ಒಟ್ಟು 345 ಜನ ಭಾಗವಹಿಸಿದ್ದರು.
ದಿನಾಚರಣೆ ಆಚರಿಸುವ ಸಲುವಾಗಿ ಪೂರ್ವಭಾವಿ ಸಭೆಯನ್ನು ಜೂನ್ 13 ರಂದು ಜಿಲ್ಲಾ ಆಯುಷ್ ಅಧಿಕಾರಿಗಳು ಹಾಗೂ ಸರ್ಕಾರೇತರ ಸಂಸ್ಥೆಗಳಾದ, ಆರ್ಟ್ ಆಫ್ ಲಿವಿಂಗ್, ಪತಂಜಲಿ ಯೋಗ ಟ್ರಸ್ಟ್, ಹಾಗೂ ಕೆಂಗಲ್ ಹನುಮಂತಯ್ಯ ಕ್ರೀಡಾ ಮತ್ತು ಸಾಂಸ್ಕೃತಿಕ ಕೇಂದ್ರ ಇವರೊಂದಿಗೆ ಚರ್ಚಿಸಿ ಕಾರ್ಯಕ್ರಮದ ರೂಪುರೇಷೆಯನ್ನು ಸಿದ್ದಗೊಳಿಸಿಕೊಳ್ಳಲಾಯಿತು.
ಆರ್ಟ್ ಆಫ್ ಲಿವಿಂಗ್ ಹಾಗೂ ಪತಂಜಲಿ ಯೋಗ ಟ್ರಸ್ಟ್ ಇವರು ಜೂನ್ 18, 19 ಮತ್ತು 20 ರಂದು ಉಚಿತ ಯೋಗ ತರಗತಿಗಳನ್ನು ನಡೆಸಿದರು. ಸುಮಾರು 50 ಕ್ಕೂ ಹೆಚ್ಚು ಸಾರ್ವಜನಿಕರು ಆಸಕ್ತಿಯಿಂದ ಪಾಲ್ಗೊಂಡು ಉಚಿತ ಯೋಗ ತರಗತಿಯ ಪ್ರಯೋಜನವನ್ನು ಪಡೆದುಕೊಂಡರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in health »
ವ್ಯವಹಾರಕ್ಕಾಗಿ ಆಸ್ಪತ್ರೆಯಲ್ಲಾ, ಸೇವೆಗಾಗಿ ನಮ್ಮ ಆಸ್ಪತ್ರೆ. ಕಾಂಗರೂ ಆಸ್ಪತ್ರೆಯ ಸಂಸ್ಥಾಪಕ ಡಾ ಶೇಖರ್ ಸುಬ್ಬಯ್ಯ
ರಾಮನಗರ: ನಾವು ಹಣಕ್ಕಾಗಿ ಆಸ್ಪತ್ರೆ ನಡೆಸುವುದಿಲ್ಲ, ಇದೊಂದು ಸೇವೆ ಎಂದು ಪರಿಗಣಿಸಿ ಆಸ್ಪತ್ರೆ ನಡೆಸುತ್ತಿದ್ದೇವೆ. ಬೆಂಗಳೂರು ಮೈಸೂರು ಸೇರಿದಂತೆ ನಾಲ್ಕು
೪೬ ವರ್ಷದ ಮಹಿಳೆಯ ಹೊಟ್ಟೆಯಲ್ಲಿದ್ದ ೧೦ ಕಿಲೋ ಕ್ಯಾನ್ಸರ್ ಗಡ್ಡೆ ಹೊರತೆಗೆದ ಬಾಲು ಆಸ್ಪತ್ರೆಯ ವೈದ್ಯರು
ಚನ್ನಪಟ್ಟಣ: ತಾಲ್ಲೂಕಿನ ಗ್ರಾಮವೊಂದರ ೪೬ ವರ್ಷದ ಮಹಿಳೆಯೊಬ್ಬರ ಗರ್ಭ (ಅಂಡಾಶಯ) ದಲ್ಲಿದ್ದ ಬರೋಬ್ಬರಿ ೧೦ ಕಿಲೋ ೩೦೦ ಗ್ರಾಂ ತೂಕದ ಕ್ಯಾನ್ಸರ್ ಗಡ್ಡೆ ಯನ್ನ
ಹೊಂಗನೂರು, ಕೋಡಂಬಳ್ಳಿ ಗ್ರಾಮದಲ್ಲಿ ಪರವಾನಗಿ ಇಲ್ಲದ ಖಾಸಗಿ ಆಸ್ಪತ್ರೆಗಳಿಗೆ ಬೀಗ ಜಡಿದ ಟಿಹೆಚ್ಓ
ಚನ್ನಪಟ್ಟಣ: ತಾಲ್ಲೂಕಿನ ಹೊಂಗನೂರು ಗ್ರಾಮದಲ್ಲಿ ಗೋಪಿ ಕ್ಲಿನಿಕ್ ಎಂಬ ಖಾಸಗಿ ಆಸ್ಪತ್ರೆ ಇದ್ದು, ಗೋಪಿ ಎಂಬುವವರು ವೈದ್ಯರಾಗಿ ಸೇವೆ ನಿರ್ವಹಿಸುತ್ತಿದ್ದಾರ
ಉತ್ತಮ ಆರೋಗ್ಯಕ್ಕೆ ಆಯುರ್ವೇದವೇ ದಿವ್ಯ ಔಷಧ ಡಾ ಸಹನಾ ಕೃಷ್ಣ
ಚನ್ನಪಟ್ಟಣ: ಪುರಾಣೇತೀಹಾಸದಿಂದಲೂ ಪ್ರಖ್ಯಾತವಾಗಿರುವ ಔಷಧ ಎಂದರೆ ಅದು ಆಯುರ್ವೇದ ಔಷಧ, ಜಗತ್ತಿನ ಅತ್ಯಂತ ಪ್ರಾಚೀನ ಔಷಧವೂ ಹೌದು, ನಮ್ಮ ಪ್ರಕೃತಿ ಹೇಗೆ ಸಮ
ದೊಡ್ಡಮಳೂರು ಗ್ರಾಮದಲ್ಲಿ ದೀರ್ಘಾಯು ವೆಲ್ ನೆಸ್ ಆಯುರ್ವೇದ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ಶಿಬಿರ
ಚನ್ನಪಟ್ಟಣ: ತಾಲ್ಲೂಕಿನ ದೊಡ್ಡಮಳೂರು ಗ್ರಾಮದ ದೇವಸ್ಥಾನದ ಬೀದಿಯಲ್ಲಿರುವ ದೀರ್ಘಾಯು ವೆಲ್ ನೆಸ್ ಸೆಂಟರ್ ಇವರ ವತಿಯಿಂದ ನಾಳೆ (ಭಾನುವಾರ) ಬೆಳಿ
ಕ್ರಿಯೇಟಿವ್ ಅಸೋಸಿಯೇಷನ್ ಹಾಗೂ ಸೊಸೈಟಿ ವತಿಯಿಂದ ಶನಿವಾರ ನಗರದಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರ
ಚನ್ನಪಟ್ಟಣ : ತಾಲ್ಲೂಕಿನಿಂದ ಬೆಂಗಳೂರಿಗೆ ಹೋಗಿ, ಜೀವನ ಕಟ್ಟಿಕೊಂಡು ತಾಲ್ಲೂಕಿಗೆ ಏನಾದರೂ ಕೊಡುಗೆ ನೀಡಬೇಕೆಂಬ ಹಂಬಲದಿಂದ ಕ್ರಿಯೇಟಿವ್ ಅಸೋಸಿಯೇಷನ್ ಮತ್ತ
ದುಶ್ಚಟದಿಂದ ದೂರವಿರಿ, ಆರೋಗ್ಯ ಕಾಪಾಡಿಕೊಳ್ಳಿ : ಪ್ರತಿಮಾ ಕೆ.ವಿ
ರಾಮನಗರ, ಜೂ. 17: ಇತ್ತೀಚೆಗೆ ಅತಿ ಹೆಚ್ಚು ಹಲವಾರು ದುಶ್ಚಟಗಳು ಮನುಷ್ಯನನ್ನು ಆವರಸಿಕೊಂಡಿವೆ. ಇದರಿಂದಾಗಿ ನೂರಾರು ಖಾಯಿಲೆಗಳು ದೇಹ ಹೊಕ್ಕು ನಿತ್ಯ ಸಾ
ಫ್ಲೋರೋಸಿಸ್ ನಿಯಂತ್ರಿಸಿ ಉತ್ತಮ ಜೀವನ ನಡೆಸುವಂತೆ ಸಲಹೆ - ಡಾ.ಅನಿಲ್
ರಾಮನಗರ, ಜೂ. 15: ಫ್ಲೋರೈಡ್ ನಮ್ಮ ದೇಹಕ್ಕೆ ಬೇಕಾದ ಒಂದು ಖನಿಜಾಂಶ ನಾವು ಸೇವಿಸುವ ಆಹಾರ ಮತ್ತು ಕುಡಿಯುವ ನೀರಿನಲ್ಲಿ ಅವಶ್ಯಕತೆಗಿಂತ ಹೆಚ್ಚು ಫ್ಲೋರೈಡ
ಆರೋಗ್ಯ ಕೇಂದ್ರದಲ್ಲಿ ದೊರೆಯುವ ಸೇವೆಗಳನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದ ಬಿ.ಎಸ್.ಗಂಗಾಧರ್.
ರಾಮನಗರ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಕೆ.ಕರೇನಹಳ್ಳಿ ಇವರ ಸಂಯುಕ್ತ ಆಶ್ರ
ಶ್ರೀಗಿರಿಪುರ ಗ್ರಾಪಂ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆದ ಆರೋಗ್ಯ ತಪಾಸಣಾ ಶಿಬಿರ
ರಾಮನಗರ, ಜೂ. 07: ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಾತ್ಮಗಾಂಧಿ ನರೇಗಾ ಉದ್ಯೋಗ ಖಾತ್ರಿ ಯೋಜನೆ ಹಾಗೂ ಕುದೂರು ಪ್ರ
ಪ್ರತಿಕ್ರಿಯೆಗಳು