Tel: 7676775624 | Mail: info@yellowandred.in

Language: EN KAN

    Follow us :


ವಾರದಲ್ಲಿ ಎರಡು ದಿನ ವಿಶೇಷ ಲಸಿಕೆ ಅಭಿಯಾನ:ಜಿಲ್ಲೆಯಲ್ಲಿ ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ಎಚ್ಚರಿಕೆ ವಹಿಸಿ : ಡಾ.ರಾಕೇಶ್ ಕುಮಾರ್

Posted date: 02 Jul, 2021

Powered by:     Yellow and Red

ವಾರದಲ್ಲಿ ಎರಡು ದಿನ ವಿಶೇಷ ಲಸಿಕೆ ಅಭಿಯಾನ:ಜಿಲ್ಲೆಯಲ್ಲಿ ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ಎಚ್ಚರಿಕೆ ವಹಿಸಿ : ಡಾ.ರಾಕೇಶ್ ಕುಮಾರ್

ರಾಮನಗರ, ಜುಲೈ.01. ಮಕ್ಕಳಿಗೆ ನೀಡಲಾಗುವ ಬಿ.ಸಿ.ಜಿ, ಪೆಂಟಾವೆಲೆಂಟ್ ದಡಾರಾ ರುಬೆಲ್ಲಾ, ಡಿ.ಟಿ.ಪಿ ವರ್ಧಕ ಮುಂತಾದ ಲಸಿಕೆಯನ್ನು ನೀಡಲು  ವಾರದಲ್ಲಿ ಎರಡು ದಿನ,  ಮಂಗಳವಾರ ಮತ್ತು ಬುಧವಾರ ವಿಶೇಷ ಲಸಿಕಾ ಅಭಿಯಾನ  ಹಮ್ಮಿಕೊಂಡು, ಶೇ.100 ರಷ್ಟು ಗುರಿ ಸಾಧಿಸುವಂತೆ  ಜಿಲ್ಲಾಧಿಕಾರಿ ಡಾ. ರಾಕೇಶ್ ಕುಮಾರ್ ಕೆ ಅವರು ತಿಳಿಸಿದರು.


ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ, ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಯಾವುದೇ ಮಗು ಲಸಿಕೆಯಿಂದ ವಂಚಿತರಾಗಬಾರದು. ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ನಿಗದಿಪಡಿಸಿರುವ ಕಾಲಮಿತಿಯಲ್ಲಿ ಲಸಿಕೆ ನೀಡಬೇಕು. ಕೋವಿಡ್ ಹಿನ್ನೆಲೆಯಲ್ಲಿ ಮಕ್ಕಳು ಲಸಿಕೆ ಪಡೆಯುವುದರಿಂದ ಬಿಟ್ಟು ಹೋಗಿರಬಹುದು. ಮಕ್ಕಳನ್ನು ಗುರುತಿಸಿ ಲಸಿಕೆ ನೀಡುವಂತೆ ಅವರು ತಿಳಿಸಿದರು.


ಆರೋಗ್ಯ ಇಲಾಖೆಯು ಯಾವ ಯಾವ ಹಂತದಲ್ಲಿ ಯಾವ ಬಗೆಯ ಲಸಿಕೆ ನೀಡುತ್ತದೆ ಮತ್ತು ಇವುಗಳು ಯಾವ ಖಾಯಿಲೆಯನ್ನು ತಡೆಗಟ್ಟುತ್ತದೆ, ಮುಂದಿನ ಹಂತದ ಲಸಿಕೆ ಯಾವಾಗ ಪಡೆಯಬೇಕು, ಲಸಿಕೆ ಪಡೆಯದಿದ್ದಲ್ಲಿ ಯಾವ ರೀತಿ ಅಡ್ಡ ಪರಿಣಾಮಗಳು ಉಂಟಾಗಬಹುದು ಎಂಬುದರ ಬಗ್ಗೆ ಜನರಲ್ಲಿ ಅರಿವು ಮೂಡಿಸಿ ಎಂದರು.


ರೋಗ ನಿರೋಧಕ ಚುಚ್ಚು ಮದ್ದು ಕಾರ್ಡ್ ಅನ್ನು  ಆರೋಗ್ಯ ಇಲಾಖೆಯಿಂದ  ನೀಡಲಾಗುವುದು. ಕಾರ್ಡನ್ನು ಸುರಕ್ಷಿತವಾಗಿ ಇಟ್ಟುಕೊಂಡು ಮುಂದಿನ ಲಸಿಕೆ ಪಡೆಯುವ ಸಂದರ್ಭದಲ್ಲಿ ಜೋತೆಯಲ್ಲಿ ತರಬೇಕು ಎಂದರು.


*ಮಕ್ಕಳಿಗೆ ನೀಡುವ ಲಸಿಕೆ ವಿವರ*


ಹುಟ್ಟಿದ ಕೂಡಲೇ ಬಿ.ಸಿ.ಜಿ, ಓ.ಪಿ.ವಿ ಹಾಗೂ ಹೆಪಪೈಟಿಸ್ ಬಿ ಲಸಿಕೆಯನ್ನು ಪಡೆಯಬೇಕು. ಕಾರಣಾಂತರದಿಂದ ಲಸಿಕೆ ಪಡೆಯದಿದ್ದಲ್ಲಿ, ಬಿ.ಸಿ.ಜಿ ಯನ್ನು 1 ವರ್ಷದ ವಯಸ್ಸಿನ ವರೆಗೆ  ಓ.ಪಿ.ವಿ ಯನ್ನು ಹುಟ್ಟಿದ  15  ದಿನವರೆಗೆ  ಹಾಗೂ ಹೆಪಪೈಟಿಸ್ ಬಿ ಲಸಿಕೆಯನ್ನುಹುಟ್ಟಿದ 24 ಗಂಟೆ ಒಳಗೆ  ಪಡೆಯಬಹುದು.


6 ವಾರದ ಮಗು ಓ.ಪಿ.ವಿ.-1, ರೊಟಾ-1, ಐ.ಪಿ.ವಿ-1 ಹಾಗೂ ಪೆಟಾವೆಲೆಂಟ್-1 ಲಸಿಕೆ ಪಡೆಯಬೇಕು, 10 ವಾರದ ಮಗು ಓ.ಪಿ.ವಿ.-2, ರೊಟಾ-2 ಹಾಗೂ ಪೆಟಾವೆಲೆಂಟ್-2,  14  ವಾರದ ಮಗು ಓ.ಪಿ.ವಿ.-3, ರೊಟಾ-3, ಐ.ಪಿ.ವಿ-2 ಹಾಗೂ ಪೆಟಾವೆಲೆಂಟ್-3 ಪಡೆಯಬೇಕು.


 ಓ.ಪಿ.ವಿ ಯನ್ನು ಕಾರಣಾಂತರಗಳಿಂದ ಪಡೆಯದಿದ್ದಲ್ಲಿ 5 ವರ್ಷ ವಯಸ್ಸಿನ ವರೆಗೆ ,ಐ.ಪಿ.ವಿ, ಪೆಟಾವೆಲೆಂಟ್ ಹಾಗೂ  ರೊಟಾವನ್ನು 1ವರ್ಷ ವಯಸ್ಸಿನ ವರೆಗೆ ಲಸಿಕೆ ಪಡೆಯಬಹುದು ಎಂದು ತಿಳಿಸಿದರು.


9 ತಿಂಗಳಿನ ಮಗು ದಡಾರ, ರುಬೆಲ್ಲಾ-1, ಜೆಇ-1* ಲಸಿಕೆ ಪಡೆಯಬೇಕು ಕಾರಣಾಂತರಗಳಿಂದ ಪಡೆಯದಿದ್ದಲ್ಲಿ ದಡಾರ, ರುಬೆಲ್ಲಾ 5 ವರ್ಷ ವಯಸ್ಸಿನ ವರೆಗೆ ಹಾಗೂ ಜೆಇ 15 ವರ್ಷ ವಯಸ್ಸಿನ ವರೆಗೆ ಲಸಿಕೆಯನ್ನು ಪಡೆಯಬಹುದು.


16-24  ತಿಂಗಳಿನ ಮಗು ದಡಾರ, ರುಬೆಲ್ಲಾ-2, ಜೆಇ-2, ಓ.ಪಿ.ವಿ ವರ್ಧಕ, ಡಿಪಿಟಿ ವರ್ಧಕ-1 ಲಸಿಕೆ ಪಡೆಯಬೇಕು ಕಾರಣಾಂತರಗಳಿಂದ ಪಡೆಯದಿದ್ದಲ್ಲಿ

ಡಿಪಿಟಿ ವರ್ಧಕ 7 ವರ್ಷದ ವರೆಗೆ ಪಡೆಯಬಹುದಾಗಿದೆ.


5-6 ವರ್ಷದ ಮಗು ಡಿಪಿಟಿ ವರ್ಧಕ-2  ಹಾಗೂ10 ವರ್ಷದ ಮಗು ಟಿ.ಡಿ, 16 ವರ್ಷದವರು  ಟಿ.ಡಿ ಲಸಿಕೆ ಪಡೆಯಬಹುದು ಎಂದರು.


ಲಸಿಕೆಗೆ ಸಂಭಂದಿಸಿದಂತೆ ದಿನ ನಿಗದಿ ಪಡಿಸಿ ಗುರಿ ಇಟ್ಟು ಕೊಂಡು 2 ಸೆಕ್ಷನ್ ವಿಭಾಗಿಸಿ ಬೆಳಿಗ್ಗೆ ಹಾಗೂ ಮಧ್ಯಾಹ್ನ ಅಂಗನವಾಡಿ ಸೂಪರ್‌ವೇಜರ್ ಹಾಗೂ ಕಾರ್ಯಕರ್ತೆಯರು ಮತ್ತು ಶಾಲಾ ಮುಖ್ಯ ಶಿಕ್ಷಕರಿಗೆ ತರಬೇತಿ ನೀಡಿ ಎಲ್ಲರೂ ಲಸಿಕೆ ಪಡೆಯುವಂತೆ ಜಾಗೃತಿ ಮೂಡಿಸಬೇಕು ಎಂದರು.


ಜಿಲ್ಲಾದ್ಯಾಂತ ಹುಟ್ಟಿದ ಮಕ್ಕಳ ಮಾಹಿತಿ ಪಡೆದು ಅಂಗನವಾಡಿ ಆಶಾ ಕಾರ್ಯಕರ್ತೆಯರು ಮಕ್ಕಳಿಗೆ ಬಿಸಿಜಿ ಲಸಿಕೆ ಕೊಡಿಸಿರುವುದರ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು.  ಇಲ್ಲಾವಾದಲ್ಲಿ ಲಸಿಕೆ ಪಡೆಯುವಂತೆ ತಿಳಿ ಹೇಳಬೇಕು ಎಂದರು.


ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇಕ್ರಂ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಿರಂಜನ್, ವೈಜ್ಞಾನಿಕ ವೈಧ್ಯಿಕಾರಿ ಡಾ.ನಾಗರಾಜು,  ಆರ್.ಸಿ.ಹೆಚ್ ಅಧಿಕಾರಿ ಡಾ: ಪದ್ಮಾ ಹಾಗೂ ಜಿಲ್ಲಾ ಶಿಕ್ಷಣಾಧಿಕಾರಿ ಬಿ.ಎಸ್ ಗಂಗಾಧರ್ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in health »

ವ್ಯವಹಾರಕ್ಕಾಗಿ ಆಸ್ಪತ್ರೆಯಲ್ಲಾ, ಸೇವೆಗಾಗಿ ನಮ್ಮ ಆಸ್ಪತ್ರೆ. ಕಾಂಗರೂ ಆಸ್ಪತ್ರೆಯ ಸಂಸ್ಥಾಪಕ ಡಾ ಶೇಖರ್ ಸುಬ್ಬಯ್ಯ
ವ್ಯವಹಾರಕ್ಕಾಗಿ ಆಸ್ಪತ್ರೆಯಲ್ಲಾ, ಸೇವೆಗಾಗಿ ನಮ್ಮ ಆಸ್ಪತ್ರೆ. ಕಾಂಗರೂ ಆಸ್ಪತ್ರೆಯ ಸಂಸ್ಥಾಪಕ ಡಾ ಶೇಖರ್ ಸುಬ್ಬಯ್ಯ

ರಾಮನಗರ: ನಾವು ಹಣಕ್ಕಾಗಿ ಆಸ್ಪತ್ರೆ ನಡೆಸುವುದಿಲ್ಲ, ಇದೊಂದು ಸೇವೆ ಎಂದು ಪರಿಗಣಿಸಿ ಆಸ್ಪತ್ರೆ ನಡೆಸುತ್ತಿದ್ದೇವೆ. ಬೆಂಗಳೂರು ಮೈಸೂರು ಸೇರಿದಂತೆ ನಾಲ್ಕು

೪೬ ವರ್ಷದ ಮಹಿಳೆಯ ಹೊಟ್ಟೆಯಲ್ಲಿದ್ದ ೧೦ ಕಿಲೋ ಕ್ಯಾನ್ಸರ್ ಗಡ್ಡೆ ಹೊರತೆಗೆದ ಬಾಲು ಆಸ್ಪತ್ರೆಯ ವೈದ್ಯರು
೪೬ ವರ್ಷದ ಮಹಿಳೆಯ ಹೊಟ್ಟೆಯಲ್ಲಿದ್ದ ೧೦ ಕಿಲೋ ಕ್ಯಾನ್ಸರ್ ಗಡ್ಡೆ ಹೊರತೆಗೆದ ಬಾಲು ಆಸ್ಪತ್ರೆಯ ವೈದ್ಯರು

ಚನ್ನಪಟ್ಟಣ: ತಾಲ್ಲೂಕಿನ ಗ್ರಾಮವೊಂದರ ೪೬ ವರ್ಷದ ಮಹಿಳೆಯೊಬ್ಬರ ಗರ್ಭ (ಅಂಡಾಶಯ) ದಲ್ಲಿದ್ದ ಬರೋಬ್ಬರಿ ೧೦ ಕಿಲೋ ೩೦೦ ಗ್ರಾಂ ತೂಕದ ಕ್ಯಾನ್ಸರ್ ಗಡ್ಡೆ ಯನ್ನ

ಹೊಂಗನೂರು, ಕೋಡಂಬಳ್ಳಿ ಗ್ರಾಮದಲ್ಲಿ ಪರವಾನಗಿ ಇಲ್ಲದ ಖಾಸಗಿ ಆಸ್ಪತ್ರೆಗಳಿಗೆ ಬೀಗ ಜಡಿದ ಟಿಹೆಚ್‌ಓ
ಹೊಂಗನೂರು, ಕೋಡಂಬಳ್ಳಿ ಗ್ರಾಮದಲ್ಲಿ ಪರವಾನಗಿ ಇಲ್ಲದ ಖಾಸಗಿ ಆಸ್ಪತ್ರೆಗಳಿಗೆ ಬೀಗ ಜಡಿದ ಟಿಹೆಚ್‌ಓ

ಚನ್ನಪಟ್ಟಣ: ತಾಲ್ಲೂಕಿನ ಹೊಂಗನೂರು ಗ್ರಾಮದಲ್ಲಿ ಗೋಪಿ ಕ್ಲಿನಿಕ್ ಎಂಬ ಖಾಸಗಿ ಆಸ್ಪತ್ರೆ ಇದ್ದು, ಗೋಪಿ ಎಂಬುವವರು ವೈದ್ಯರಾಗಿ ಸೇವೆ ನಿರ್ವಹಿಸುತ್ತಿದ್ದಾರ

ಉತ್ತಮ ಆರೋಗ್ಯಕ್ಕೆ ಆಯುರ್ವೇದವೇ ದಿವ್ಯ ಔಷಧ ಡಾ ಸಹನಾ ಕೃಷ್ಣ
ಉತ್ತಮ ಆರೋಗ್ಯಕ್ಕೆ ಆಯುರ್ವೇದವೇ ದಿವ್ಯ ಔಷಧ ಡಾ ಸಹನಾ ಕೃಷ್ಣ

ಚನ್ನಪಟ್ಟಣ: ಪುರಾಣೇತೀಹಾಸದಿಂದಲೂ ಪ್ರಖ್ಯಾತವಾಗಿರುವ ಔಷಧ ಎಂದರೆ ಅದು ಆಯುರ್ವೇದ ಔಷಧ, ಜಗತ್ತಿನ ಅತ್ಯಂತ ಪ್ರಾಚೀನ ಔಷಧವೂ ಹೌದು, ನಮ್ಮ ಪ್ರಕೃತಿ ಹೇಗೆ ಸಮ

ದೊಡ್ಡಮಳೂರು ಗ್ರಾಮದಲ್ಲಿ ದೀರ್ಘಾಯು ವೆಲ್ ನೆಸ್ ಆಯುರ್ವೇದ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ಶಿಬಿರ
ದೊಡ್ಡಮಳೂರು ಗ್ರಾಮದಲ್ಲಿ ದೀರ್ಘಾಯು ವೆಲ್ ನೆಸ್ ಆಯುರ್ವೇದ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ಶಿಬಿರ

ಚನ್ನಪಟ್ಟಣ: ತಾಲ್ಲೂಕಿನ ದೊಡ್ಡಮಳೂರು ಗ್ರಾಮದ ದೇವಸ್ಥಾನದ ಬೀದಿಯಲ್ಲಿರುವ ದೀರ್ಘಾಯು ವೆಲ್ ನೆಸ್ ಸೆಂಟರ್ ಇವರ ವತಿಯಿಂದ ನಾಳೆ (ಭಾನುವಾರ) ಬೆಳಿ

ಕ್ರಿಯೇಟಿವ್ ಅಸೋಸಿಯೇಷನ್ ಹಾಗೂ ಸೊಸೈಟಿ ವತಿಯಿಂದ ಶನಿವಾರ ನಗರದಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರ
ಕ್ರಿಯೇಟಿವ್ ಅಸೋಸಿಯೇಷನ್ ಹಾಗೂ ಸೊಸೈಟಿ ವತಿಯಿಂದ ಶನಿವಾರ ನಗರದಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರ

ಚನ್ನಪಟ್ಟಣ : ತಾಲ್ಲೂಕಿನಿಂದ ಬೆಂಗಳೂರಿಗೆ ಹೋಗಿ, ಜೀವನ ಕಟ್ಟಿಕೊಂಡು ತಾಲ್ಲೂಕಿಗೆ ಏನಾದರೂ ಕೊಡುಗೆ ನೀಡಬೇಕೆಂಬ ಹಂಬಲದಿಂದ ಕ್ರಿಯೇಟಿವ್ ಅಸೋಸಿಯೇಷನ್ ಮತ್ತ

ದುಶ್ಚಟದಿಂದ ದೂರವಿರಿ, ಆರೋಗ್ಯ ಕಾಪಾಡಿಕೊಳ್ಳಿ : ಪ್ರತಿಮಾ ಕೆ.ವಿ
ದುಶ್ಚಟದಿಂದ ದೂರವಿರಿ, ಆರೋಗ್ಯ ಕಾಪಾಡಿಕೊಳ್ಳಿ : ಪ್ರತಿಮಾ ಕೆ.ವಿ

ರಾಮನಗರ, ಜೂ. 17:   ಇತ್ತೀಚೆಗೆ ಅತಿ ಹೆಚ್ಚು ಹಲವಾರು ದುಶ್ಚಟಗಳು ಮನುಷ್ಯನನ್ನು ಆವರಸಿಕೊಂಡಿವೆ. ಇದರಿಂದಾಗಿ ನೂರಾರು ಖಾಯಿಲೆಗಳು ದೇಹ ಹೊಕ್ಕು ನಿತ್ಯ ಸಾ

ಫ್ಲೋರೋಸಿಸ್ ನಿಯಂತ್ರಿಸಿ ಉತ್ತಮ ಜೀವನ ನಡೆಸುವಂತೆ ಸಲಹೆ - ಡಾ.ಅನಿಲ್
ಫ್ಲೋರೋಸಿಸ್ ನಿಯಂತ್ರಿಸಿ ಉತ್ತಮ ಜೀವನ ನಡೆಸುವಂತೆ ಸಲಹೆ - ಡಾ.ಅನಿಲ್

ರಾಮನಗರ, ಜೂ. 15:   ಫ್ಲೋರೈಡ್ ನಮ್ಮ ದೇಹಕ್ಕೆ ಬೇಕಾದ ಒಂದು ಖನಿಜಾಂಶ ನಾವು ಸೇವಿಸುವ ಆಹಾರ ಮತ್ತು ಕುಡಿಯುವ ನೀರಿನಲ್ಲಿ ಅವಶ್ಯಕತೆಗಿಂತ ಹೆಚ್ಚು ಫ್ಲೋರೈಡ

ಆರೋಗ್ಯ ಕೇಂದ್ರದಲ್ಲಿ ದೊರೆಯುವ ಸೇವೆಗಳನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದ ಬಿ.ಎಸ್.ಗಂಗಾಧರ್.
ಆರೋಗ್ಯ ಕೇಂದ್ರದಲ್ಲಿ ದೊರೆಯುವ ಸೇವೆಗಳನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದ ಬಿ.ಎಸ್.ಗಂಗಾಧರ್.

ರಾಮನಗರ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಕೆ.ಕರೇನಹಳ್ಳಿ ಇವರ ಸಂಯುಕ್ತ ಆಶ್ರ

ಶ್ರೀಗಿರಿಪುರ ಗ್ರಾಪಂ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆದ ಆರೋಗ್ಯ ತಪಾಸಣಾ ಶಿಬಿರ
ಶ್ರೀಗಿರಿಪುರ ಗ್ರಾಪಂ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆದ ಆರೋಗ್ಯ ತಪಾಸಣಾ ಶಿಬಿರ

ರಾಮನಗರ, ಜೂ. 07:   ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಾತ್ಮಗಾಂಧಿ ನರೇಗಾ ಉದ್ಯೋಗ ಖಾತ್ರಿ ಯೋಜನೆ ಹಾಗೂ ಕುದೂರು ಪ್ರ

Top Stories »  


Top ↑