ವಿದ್ಯಾರ್ಥಿಗಳಿಗೆ ಏಡ್ಸ್ ಮುಕ್ತ ಸಮಾಜ ನಿರ್ಮಿಸಲು ಸಲಹೆ - ಡಾ. ಕುಮಾರ್

ರಾಮನಗರ, ಡಿ:22/21. ಜಿಲ್ಲಾಡಳಿತ ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳ ಕಛೇರಿ, ಜಿಲ್ಲಾ ನಿಯಂತ್ರಣ ಕೋಶ, ಜಿಲ್ಲಾ ಎಸ್ ಬಿ ಸಿ ಸಿ ಘಟಕ ರಾಮನಗರ ಇವರುಗಳ ಸಂಯುಕ್ತ ಆಶ್ರಯದಲ್ಲಿ ಬಿಡದಿ ಜ್ಞಾನ ವಿಕಾಸ್ ಇನ್ಸಿಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಎನ್ಎಸ್ಎಸ್. ವಿದ್ಯಾರ್ಥಿಗಳಿಗೆ ಏಡ್ಸ್ ನಿಯಂತ್ರಣ, ಕೋವಿಡ್ ನಿಯಂತ್ರಣ ಮತ್ತು ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿತು.
ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಕುಮಾರ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಹೆಚ್.ಐ.ವಿ / ಏಡ್ಸ್ ಕುರಿತು ಮಾತನಾಡುತ್ತಾ ಇದು ವೈರಸ್ನಿಂದ ಬರುವ ಖಾಯಿಲೆಯಾಗಿದ್ದು. ದೇಹದ ರೋಗ ನಿರೋಧಕ ಶಕ್ತಿಯನ್ನು ಕುಂಠಿತಗೊಳಿಸಿ ಅರ್ಜಿತ ರೋಗ ಲಕ್ಷಣಗಳ ಕೂಟವನ್ನು ಉಂಟುಮಾಡುತ್ತದೆ. ಇದು ಅಸುರಕ್ಷಿತ ಲೈಂಗಿಕ ಸಂಪರ್ಕ, ಪರೀಕ್ಷಿಸದೇ ಇರುವ ರಕ್ತ ಪಡೆಯುವುದು. ಸೋಂಕಿತ ತಾಯಿಯಿಂದ ಮಗುವಿಗೆ, ಸಂಸ್ಕರಿಸದ ಸೂಜಿ, ಸಿರಂಜ್ ಬಳಕೆಗಳಿಂದ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ. ಸೋಂಕಿತ ವ್ಯಕ್ತಿಯಲ್ಲಿ ದೀರ್ಘಕಾಲದವರೆಗೆ ಕೆಮ್ಮು, ಜ್ವರ, ಭೇದಿ, ತೂಕದಲ್ಲಿ ಶೇ%10 ರಷ್ಟು ಇಳಿಕೆ, ಹಸಿವಾಗದಿರುವುದು, ನಿಶಕ್ತಿ, ಚರ್ಮದ ಸೋಂಕು ಇತ್ಯಾದಿ ಲಕ್ಷಣಗಳು ಕಂಡುಬರುತ್ತವೆ. ಸಾರ್ವಜನಿಕರು ಆತಂಕ ಪಡುವ ಅವಶ್ಯಕತೆಯಿರುವುದಿಲ್ಲ ಎಲ್ಲಾ ಸರ್ಕಾರಿ ಸಂಸ್ಥೆಗಳಲ್ಲಿ ಉಚಿತವಾಗಿ ಪರೀಕ್ಷೆ ಮಾಡಿ ಸೂಕ್ತ ಚಿಕಿತ್ಸೆಯನ್ನು ನೀಡಲಾಗುತ್ತದೆ. ಯುವ ಪೀಳಿಗೆ ಈ ರೋಗಕ್ಕೆ ಹೆಚ್ಚಾಗಿ ಬಲಿಯಾಗುತ್ತಿದ್ದು ಜಾಗೃತರಾಗಬೇಕಿದೆ ಜೊತೆಗೆ ಏಡ್ಸ್ ಮುಕ್ತ ಸಮಾಜ ನಿರ್ಮಿಸಲು ಸಹಕರಿಸುವಂತೆ ಸಲಹೆ ನೀಡಿದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಎಸ್. ಗಂಗಾಧರ್ ಮಾತನಾಡುತ್ತಾ ಕೋವಿಡ್-19 ರ 3 ಅಲೆ ನಿಯಂತ್ರಿಸ ಬೇಕಾದರೆ 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡೆಯಬೇಕು ಇದರಿಂದ ರೂಪಾಂತರಿ ಓಮೀಕ್ರಾನ್ ನಿಯಂತ್ರಿಸಲು ಸಾಧ್ಯವಾಗುತ್ತದೆ. ಜೊತೆಗೆ ಕೋವಿಡ್ ನಿಯಂತ್ರಿಸಬೇಕಾದರೆ ಮುಂಜಾಗೃತ ಕ್ರಮವಾಗಿ ಸಾಮಾಜಿಕ ಅಂತರ, ಮಾಸ್ಕ್ ಬಳಕೆ, ಕೈಗಳ ಸ್ವಚ್ಛತೆ, ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಸಂಯೋಜಕ ಚಂದ್ರಶೇಖರ್ ಮಾತನಾಡಿ ತಂಬಾಕು ಉತ್ಪನ್ನಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಾತನಾಡುತ್ತಾ ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆ ಹೆಚ್ಚಾಗಿ ತಂಬಾಕು ಉತ್ಪನ್ನಗಳ ಸೇವನೆ ಚಟಕ್ಕೆ ಬಲಿಯಾಗಿ ತಮ್ಮ ಉಜ್ವಲ ಭವಿಷ್ಯವನ್ನು ಹಾಳುಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಜಾಗೃತರಾಗ ಬೇಕೆಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ರೂಪ, ಎ.ಬಿ.ಆರ್.ಕೆ ಜಿಲ್ಲಾ ಸಂಯೋಜಕರಾದ ಡಾ. ಸುಷ್ಮಾ, ಎನ್.ಎಸ್.ಎಸ್.ಸಂಯೋಜಕರಾದ ಶರತ್, ಜಿಲ್ಲಾ ಎಸ್.ಬಿ.ಸಿ.ಸಿ ಸಂಯೋಜಕರಾದ ಸುರೇಶ್ ಬಾಬು, ರೆಡ್ಕ್ರಾಸ್ ಸಂಯೋಜಕರಾದ ರಾಜು, ಆರೋಗ್ಯ ನಿರೀಕ್ಷಣಾಧಿಕಾರಿ ಅರುಣ್, ಆರೋಗ್ಯ ಸಿಬ್ಬಂದಿಗಳಾದ ಬಸವರಾಜು, ಕೃಷ್ಣ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in health »

ಬಿಜಿಎಸ್ ಗ್ಲೆನಿಗಲ್ಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಯಶಸ್ವಿ ಸಂಕಿರ್ಣ ಮತ್ತು ಪರಿಣಾಮಕಾರಿ ``ಟ್ರೂ ನೈಫ್ ವಿಧಾನದ ಚಿಕಿತ್ಸೆ
ರಾಮನಗರ: ಡಿ-17; ಬಿಜಿಎಸ್ ಗ್ಲೆನಿಗಲ್ಸ್ ಗ್ಲೋಬಲ್ ಆಸ್ಪತ್ರೆಯ ಕ್ಯಾನ್ಸರ್ ಶಸ್ತ್ರಚಿಕಿತ್ಸಕರು ಯುವ ರೋಗಿಯೊಬ್ಬನಿಗೆ ಉನ್ನತ ರೆಡಿಯೋ ಥೆರಪಿ ಟ್

ಗ್ಯಾಂಗ್ರೀನ್ ಆಗಿದ್ದ ಪತಿಯ ಕಾಲನ್ನು ಕತ್ತರಿಸಿ ಪತ್ನಿ ಕೈ ಗಿಟ್ಟ ಮಿಮ್ಸ್ ಆಸ್ಪತ್ರೆ. ಸಾರ್ವಜನಿಕರ ಆಕ್ರೋಶ
ಮಂಡ್ಯ: ಮಂಡ್ಯ ನಗರದ ಮಿಮ್ಸ್ ಆಸ್ಪತ್ರೆಯಲ್ಲಿ ರೋಗಿಯೊಬ್ಬರಿಗೆ ಗ್ಯಾಂಗ್ರೀನ್ ಆಗಿದ್ದ ಕಾಲನ್ನು ಶಸ್ತ್ರಚಿಕಿತ್ಸೆ ಮಾಡಿ ತೆಗೆದು, ಬಳಿಕ ಆಸ್ಪತ

ಬಾಲು ಆಸ್ಪತ್ರೆಯಲ್ಲಿನ ಸ್ಕ್ಯಾನಿಂಗ್ ಕೊಠಡಿಗೆ ಬೀಗ ಜಡಿದ ಭ್ರೂಣ ಹತ್ಯೆ ಜಾಗೃತ ದಳ
ಚನ್ನಪಟ್ಟಣ: ನಗರದ ಪ್ರತಿಷ್ಠಿತ ಬಾಲು ಆಸ್ಪತ್ರೆಗೆ ಕರ್ನಾಟಕ ಸರ್ಕಾರದ ಭ್ರೂಣ ಹತ್ಯೆ ಮತ್ತು ಭ್ರೂಣ ಲಿಂಗ ಪತ್ತೆ ಜಾಗೃತ ದಳದ ಅಧಿಕಾರಿಗಳು ದಿಢೀ

ಸ್ತನ್ಯಪಾನ ತಾಯಿ-ಮಗುವಿನ ಭಾವನಾತ್ಮಕ ಸಂಬಂಧವನ್ನು ಗಟ್ಟಿಗೊಳಿಸುತ್ತದೆ: ಡಾ. ಚಂದ್ರಶೇಖರಯ್ಯ
ರಾಮನಗರ, ಆ.04: ಎದೆ ಹಾಲಿನ ಮಹತ್ವ, ಹಾಲುಣಿಸುವಿಕೆ ಮತ್ತು ಮಕ್ಕಳ ಆರೈಕೆ ಕುರಿತು ಜಾಗೃತಿಯನ್ನು ಮೂಡಿಸುತ್ತಿದ್ದು, ತಾವೆಲ್ಲರೂ ಮಾಹಿತಿಯನ್ನು

ಚಂದ್ರು ಡಯಾಗ್ನೋಷಟಿಕ್ ನಿಂದ ಜಿಲ್ಲೆಯಲ್ಲೇ ಪ್ರಪ್ರಥಮ ಬಾರಿಗೆ ನೂತನ ತಂತ್ರಜ್ಞಾನದ ಎಂಆರ್ಐ ಸ್ಯ್ಕಾನಿಂಗ್
ಚನ್ನಪಟ್ಟಣ.ಆ.೦೨: ಜಿಲ್ಲೆಯಲ್ಲಿ ಕಳೆದ ೨೫ ವರ್ಷಗಳಿಂದ ಗುಣಮಟ್ಟದ ಪ್ರಯೋಗಲಾಯ ಸೇವೆ ನೀಡುತ್ತಿರುವ ಚಂದ್ರ ಡಯಾಗ್ನೋಷ್ಟಿಕ್ ಸೆಂಟರ್ ವತಿಯಿಂದ ಜ

ಹೆಂಗಸರಲ್ಲೇ ವಿಶೇಷವಾಗಿ ಯುವತಿಯರಲ್ಲೇ ಸ್ಥೂಲಕಾಯ ಹೆಚ್ಚು ಡಾ ಪುನೀತ್
ಚನ್ನಪಟ್ಟಣ: ದೇಶದಲ್ಲಿ ಪುರುಷರಿಗಿಂತ ಮಹಿಳೆಯರಲ್ಲೇ ಸ್ಥೂಲಕಾಯ ಹೆಚ್ಚಾಗಿದ್ದು, ವಿಶೇಷವಾಗಿ ಯುವತಿಯರಲ್ಲಿ ಹೆಚ್ಚಾಗುತ್ತಿದೆ ಎಂದು ನಗರದ ಸಾರ್ವ

ಜಿಲ್ಲೆಯಲ್ಲಿ ಕ್ಷಯ ರೋಗ ನಿರ್ಮೂಲನೆ ಮಾಡಲು ಸೂಕ್ತ ಕ್ರಮ ವಹಿಸಿ: ಚಿಕ್ಕಸುಬ್ಬಯ್ಯ
ರಾಮನಗರ, ಮೇ೨೧: ಕ್ಷಯರೋಗದಿಂದ ಆರೋಗ್ಯ, ಸಾಮಾಜಿಕ ಮತ್ತು ಆರ್ಥಿಕ ವಿನಾಶಕಾರಿ ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕ್ಷಯ ಸಾಂಕ್ರಾಮಿಕ ರೋಗವನ್ನು ಕೊನೆಗೊಳಿಸುವ ಪ್ರಯತ್ನಗಳು

ಮಾ.16 ರಂದು 12 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ
ರಾಮನಗರ ಮಾ.15: ರಾಮನಗರ ಜಿಲ್ಲಾ ಆಸ್ಪತ್ರೆಯಲ್ಲಿ 12 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕೋರ್ಬಿವ್ಯಾಕ್ಸ್ ಲಸಿಕಾ ಅಭಿಯಾನದಡಿಯಲ್ಲಿ ಕೋವಿ

ಸಮರ್ಥನಂ ಸಂಸ್ಥೆಯ ಸೇವೆ ಶ್ಲಾಘನೀಯ ಡಾ. ವೇಣುಗೋಪಾಲ್
ಚನ್ನಪಟ್ಟಣ ತಾಲ್ಲೂಕು, ಬಿ.ವಿ.ಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾ ಎಸ್.ಬಿ.ಸಿ.ಸಿ ಘಟಕ ಮತ್ತು ಸಮರ್ಥನಂ ಅಂಗವಿಕಲರ ಸಂಸ್ಥೆ ವತಿಯಿಂದ ಜಾಗೃತಿ ಕಾರ್ಯಕ್ರಮ ಮತ್ತು ಆರೋಗ್ಯ ಪರಿಕರ ವಿತರಣ

ಜನವರಿ 10 ರಿಂದ 60 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಬೂಸ್ಟರ್ ಡೋಸ್
ಆರೋಗ್ಯ ಇಲಾಖೆ ವತಿಯಿಂದ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟ ಸಹ ಅಸ್ವಸ್ಥತೆ ಹೊಂದಿರುವ ಫಲಾನುಭವಿಗಳಿಗೆ ಜನವರಿ 10 ರಿಂದ ಹಂತ ಹಂತವಾಗಿ ಕೋವಿಡ್-19 ಮುನ್ನೆಚ್ಚ
ಪ್ರತಿಕ್ರಿಯೆಗಳು