ಬೃಹತ್ ರೋಡ್ ಶೋ ನಡೆಸಿದ ಹೆಚ್ಡಿಕೆ

ಚನ್ನಪಟ್ಟಣ: ಬಹಿರಂಗ ಚುನಾವಣಾ ಪ್ರಚಾರ (ಏ-8) ಸಂಜೆ 6ಕ್ಕೆ ಅಂತ್ಯ ಆಗಲಿದ್ದು, ಈ ಹಿನ್ನೆಲೆಯಲ್ಲಿ ರೇಷ್ಮೆನಾಡು ರಾಮನಗರ ಹಾಗೂ ಚನ್ನಪಟ್ಟಣ, ಕನಕಪುರದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ರೋಡ್ ಶೋ ಮೂಲಕ ಅಬ್ಬರದ ಪ್ರಚಾರ ಕೈಗೊಂಡು ಗಮನ ಸೆಳೆದರು.
ಚನ್ನಪಟ್ಟಣ ಸರ್ಕಾರಿ ಬಸ್ ನಿಲ್ದಾಣದ ಬಳಿ ಮತದಾರರನ್ನು ಕುರಿತು ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ ಅವರು, ನಾನು ಸಿಎಂ ಆದರೂ ಸಹ ಬಿಡದಿಯ ಕೇತಗಾನ ಹಳ್ಳಿಯಲ್ಲಿಯೇ ಇರುತ್ತೇನೆ. ಮೈಸೂರು ಭಾಗದ ಜನರು ಏನೇ ಕಷ್ಟ ಇದ್ದರೂ ಮನೆ ಬಳಿ ಬನ್ನಿ ಪೋಲೀಸರು ತಡೆಯುವುದಿಲ್ಲ ಎಂದು ಮನವಿ ಮಾಡಿದರು.
ರಾಜ್ಯದಲ್ಲಿ ಸ್ವಂತ ಬಲದ ಮೇಲೆ ಈ ಭಾರಿ ಜನಪರ ಆಡಳಿತಕ್ಕೆ ಹೆಸರಾಗಿರುವ ಜೆಡಿಎಸ್ ತನ್ನ ಸರ್ಕಾರವನ್ನು ರಚನೆ ಮಾಡಲಿದ್ದು, ನಿಮ್ಮೆಲ್ಲರ ಆಶೀರ್ವಾದದಿಂದ ಅದರಲ್ಲೂ ಕ್ಷೇತ್ರದಿಂದ ಆಯ್ಕೆಯಾಗುವ ನಾನು ಮೂರನೇ ಭಾರಿಗೆ ಮುಖ್ಯಮಂತ್ರಿಯಾಗುವುದರಲ್ಲಿ ಸಂಶಯವೇ ಇಲ್ಲ ಎಂದು ತಮ್ಮ ಆತ್ಮವಿಶ್ವಾಸ ವ್ಯಕ್ತಪಡಿಸಿದರು.
ದೇಶವನ್ನು ಆಳಿದ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಜನರಿಗೆ ಅನುಕೂಲವಾಗುವ ಯಾವುದೇ ಯೋಜನೆಗಳನ್ನು ರೂಪಿಸದೆ,ಜನರಿಗೆ ಭ್ರಷ್ಟಚಾರವನ್ನೇ ಎಸೆಗುತ್ತಿರುವುದರಿಂದ,ಜನರು ರೋಸಿ ಹೋಗಿದ್ದು, ಈ ಭಾರಿ ಪ್ರಾದೇಶಿಕ ಪಕ್ಷಕ್ಕೆ ಬಹುಮತ ನೀಡಲು ತೀರ್ಮಾಸಿದ್ದಾರೆ ಎಂದು ತಿಳಿಸಿದರು.
ಸಮ್ಮಿಶ್ರ ಸರ್ಕಾರದಲ್ಲಿ ಜನಪರ ಆಡಳಿತ ನೀಡುತ್ತಿದ್ದ ನನ್ನನ್ನು ಈ ಕ್ಷೇತ್ರದ ಮಹಾನುಭಾವ ಕ್ರಿಕೆಟ್ ಬೆಟ್ಟಿಂಗ್ ಹಾಗೂ ಜೂಜಾಟದ ಪಾಪದ ಹಣವನ್ನು ತಂದು ನನ್ನ ಸರ್ಕಾರದ ಉಳಿಸಲು ಕಾರಣರಾದವರಿಗೆ ಇದೇ ತಾಲ್ಲೂಕಿನ ನನ್ನ ಜನರು ಈ ಭಾರಿ ತಕ್ಕ ಪಾಠ ಕಲಿಸಲಿದ್ದಾರೆ ಪರೋಕ್ಷವಾಗಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಮೇಲೆ ತೀವ್ರವಾಗಿ ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ ಜಲಧಾರೆ ಮಾಡುವುದರ ಮುಖಾಂತರ ರಾಜ್ಯದ ಕಟ್ಟಕಡೆಯ ನೀರಾವರಿ ಇಲ್ಲದ ಜಿಲ್ಲೆಗೂ ನೀರಾವರಿ ಮಾಡುವುದು ಹಾಗೂ ರಾಜ್ಯದ ಎಲ್ಲಾ ನದಿಗಳ ಜೋಡಣೆ ಮಾಡುವುದರ ಮುಖಾಂತರ ರಾಜ್ಯಕ್ಕೆ ನೀರಾವರಿ ಸೌಲಭ್ಯ ಒದಗಿಸುವುದು ಹಾಗೂ ರಾಜ್ಯವ್ಯಾಪ್ತಿ ನಡೆಸಿದ ಜಲಧಾರೆಯ ಉದ್ದೇಶವಾಗಿದೆ ಎಂದರು.
ಜಲಧಾರೆಯ ನಂತರ ಪಂಚರತ್ನ ಯೋಜನೆ ಯನ್ನು ಕೈಗೊಂಡು ರಾಜ್ಯವ್ಯಾಪ್ತಿ ಪ್ರಚಾರ ಕೈಗೊಂಡಿ ರುವುದು ಸಾಮಾನ್ಯದ ವಿಚಾರವಲ್ಲ ಈ ಪಂಚರತ್ನ ಯೋಜನೆ ರಾಜ್ಯದ ಜನರ ಕಲ್ಯಾಣದ ಯೋಜನಗಳಾಗಿದ್ದು,ಇದಲ್ಲದೆ ರಾಜ್ಯದ ಜನರ ಕಲ್ಯಾಣಕ್ಕೆ ಅಗತ್ಯವಾಗುವ ಯೋಜನೆಗಳನ್ನು ಜಾರಿಗೆ ತರುವ ಉದ್ದೇಶ ನನ್ನದಾಗಿದೆ ಎಂದರು.
ಕ್ಷೇತ್ರದಲ್ಲಿ ಈಗಾಗಲೇ ನೂರಾರು ಯೋಜನೆಗಳಿಗೆ ಚಾಲನೆ ನೀಡಲಾಗಿದ್ದು, 1,500 ಕೋಟಿ ರೂ ಹಣವನ್ನು ಕ್ಷೇತ್ರಕ್ಕೆ ತಂದಿರುವುದಾಗಿ ತಿಳಿಸಿ, ಚನ್ನಪಟ್ಟಣ ರಾಮನಗರ ನನಗೆ ಎರಡು ಕಣ್ಣುಗಳಾಗಿದ್ದು, ಹುಬ್ಬಳಿ-ದಾರವಾಡದಂತೆ ರಾಮನಗರ ಚನ್ನಪಟ್ಟಣವನ್ನು ಅವಳಿ ಜಿಲ್ಲೆಯನ್ನಾಗಿ ಮಾಡುತ್ತೇನೆ ಹಾಗೂ ಜಿಲ್ಲೆಯನ್ನು ಪ್ರತಿಯೊಂದು ಹಂತದಲ್ಲಿ ಅಭಿವೃದ್ದಿ ಪಡಿಸುತ್ತೇನೆ ನನ್ನ ಮೇಲೆ ನಂಬಿಕೆ ವಿಶ್ವಾಸವಿರಲಿ ಎಂದು ಮನವಿ ಮಾಡಿದರು.
ಇಷ್ಟು ಜನರು ಬಂದಿರುವುದನ್ನು ನೋಡಿ ನನ್ನ ಜನ್ಮ ಸಾರ್ಥಕ ಆಯಿತು. ಕಾಂಗ್ರೆಸ್ನವರು ಏನೂ ತಪ್ಪಿಲ್ಲದಿದ್ದರೂ ಕೂಡ ದೇವೇಗೌಡರನ್ನು ಪ್ರಧಾನಮಂತ್ರಿ ಸ್ಥಾನದಿಂದ ಕೆಳಗೆ ಇಳಿಸಿದ್ದರು. ಅಷ್ಟೇ ಅಲ್ಲದೆ ನನ್ನ ಸರ್ಕಾರವನ್ನು ಕೂಡ ಬೀಳಿಸಿದ್ದರು. ಹೀಗೆ ನನಗೆ ತುಂಬಾ ನೋವು ಕೊಟ್ಟಿದ್ದರು. ಆದರೆ ನಿಮ್ಮನ್ನೆಲ್ಲರನ್ನೂ ನೋಡಿ ನನಗೆ ಆನಂದಭಾಷ್ವ ಬರುತ್ತಿದೆ ಎಂದು ಹೇಳುವ ಮೂಲಕ ಬಂದ ಜನರ ಮುಂದೆ ಭಾವುಕರಾದರು. ನಾನು ಕಣ್ಣೀರು ಹಾಕಿದರೆ ನನ್ನ ವಿರೋಧಿಗಳು ಬೇರೆ ಬಣ್ಣ ಕಟ್ಟುತ್ತಾರೆ. ಆದ್ದರಿಂದ ಎಷ್ಟೇ ನೋವಿದ್ದರೂ ಕೂಡ ಮನಸ್ಸಿನಲ್ಲಿ ಇಟ್ಟುಕೊಂಡಿರುತ್ತೇನೆ. ನಾನು ಕನಕಪುರಕ್ಕೂ ಹೋಗಬೇಕಿದೆ. ನೀವು ನಿಖಿಲ್ ಕುಮಾರಸ್ವಾಮಿಗೂ ಆಶೀರ್ವಾದ ಮಾಡಿ ಅಂತಾ ಸಂದೇಶ ಬಂದಿದೆ. ನಿಖಿಲ್ ಅವರನ್ನು ರಾಮನಗರ ಜನರ ಮಡಿಲಿಗೆ ಹಾಕಿದ್ದೇನೆ ಅವರು ಯಾವತ್ತೂ ಕೂಡ ಕೈ ಬಿಡಲ್ಲ ಎನ್ನುವ ವಿಶ್ವಾಸವನ್ನು ವ್ಯಕ್ತಪಡಿಸಿದರು. ಹಾಗೆಯೆ ಇದೇ ವೇಳೆ ರಾಮನಗರ ಆಗಬಹುದು, ಚನ್ನಪಟ್ಟಣವೇ ಆಗಬಹುದು ಅವರು ನಮ್ಮ ಕುಟುಂಬದ ಸದಸ್ಯರನ್ನು ಕಾಪಾಡುತ್ತಾರೆ ಎಂದರು
ಇನ್ನು ಖಾಸಗಿ ಬಸ್ ನಿಲ್ದಾಣ ಕಾಮಗಾರಿ ಸ್ಥಗಿತ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸಿ.ಪಿ.ಯೋಗೇಶ್ವರ್ ಹೆಸರು ಪ್ರಸ್ತಾಪಿಸದೆ ಟಾಂಗ್ ನೀಡಿದರು. ಇದೊಂದು ಪಾಪದ ಕೂಸು. ಅದನ್ನು ಹಾಗೆಯೇ ಬಿಟ್ಟಿದ್ದಾನೆ. ಸರಿಪಡಿಸುವ ವೇಳೆಗೆ ಸರ್ಕಾರ ಹೋಯ್ತು, ನಾನು ಅಧಿಕಾರಕ್ಕೆ ಬಂದಮೇಲೆ ಸರಿಪಡಿಸಿಯೇ ತೀರುತ್ತೇನೆ ಎಂದು ವಿಶ್ವಾಸವ್ಯಕ್ತಪಡಿಸಿದರು. ನಂತರ ಚನ್ನಪಟ್ಟಣದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು, ಹಳೇ ಮೈಸೂರು ರಸ್ತೆಯ ಶೇರು ಹೋಟೆಲ್ ವೃತ್ತದಿಂದ ಮಂಗಳವಾರ ಪೇಟೆ ಬಸವನಗುಡಿ ಸರ್ಕಲ್ರೆಗೂ ರೋಡ್ ಶೋ ಮಾಡಿ ಗಮನ ಸೆಳೆದರು. ಈ ವೇಳೆ ರಸ್ತೆ ತುಂಬೆಲ್ಲಾ ಕುಮಾರಸ್ವಾಮಿ ಅವರ ಅಭಿಮಾನಿಗಳ ದಂಡೇ ನೆರೆದಿತ್ತು. ಅಲ್ಲದೆ ದಾರಿಯುದ್ದಕ್ಕೂ ಕುಮಾರಸ್ವಾಮಿ ಪರ ಅಭಿಮಾನಿಗಳು ಜಯಘೋಷ ಮೊಳಗಿಸಿದರು. ಮುಂದಿನ ಸಿಎಂ ನಮ್ಮ ಕುಮಾರಣ್ಣ ಎನ್ನುವ ಘೋಷಣೆ ಮೊಳಗಿಸಿದರು.
ಕುಮಾರಸ್ವಾಮಿರವರ ರೋಡ್ಶೋನಲ್ಲಿ ಸೇರಿದ್ದ ಭಾರಿ ಜನಸ್ತೋಮವನ್ನು ಕಣ್ತುಂಬಿಕೊಂಡ ಕುಮಾರಸ್ವಾಮಿ ನಗರದ ನಾಲ್ಕು ಕಡೆಗಳಲ್ಲಿ ನಾಲ್ಕು ತಾಸುಗಳ ಕಾಲ ಮಾತನಾಡಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಜಯಮುತ್ತು, ಪಿ.ಎಲ್.ಡಿ.ಬ್ಯಾಂಕ್ ಮಾಜಿ ಅಧ್ಯಕ್ಷ ಗೋವಿಂದಹಳ್ಳಿ ನಾಗರಾಜು, ನಗರಸಭಾ ಅಧ್ಯಕ್ಷ ಪ್ರಶಾಂತ್, ಕುಕ್ಕೂರು ದೊಡ್ಡಿ ಜಯರಾಮು, ಹಾಪ್ಕಾಮ್ಸ್ ದೇವರಾಜು, ವಡ್ಡರಹಳ್ಳಿ ರಾಜಣ್ಣ, ಸೇರಿದಂತೆ ಹಲವಾರು ಮಂದಿ ಮುಖಂಡರು ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in health »

ಮೆದುಳು ಜ್ವರ ನಿಯಂತ್ರಣಕ್ಕೆ ಸಹಕರಿಸಲು ಮನವಿ: ಡಾ. ಶಶಿಧರ್
ರಾಮನಗರ, ಮೇ 22: ಮೆದುಳು ಜ್ವರವು ವೈರಾಣುವಿನಿಂದ ಬರುವ ರೋಗವಾಗಿದ್ದು ಹೆಚ್ಚಾಗಿ ಮಕ್ಕಳು ಈ ರೋಗಕ್ಕೆ ತುತ್ತಾಗುತ್ತಾರೆ. ಕೆಲವರಿಗೆ ನರ ದೌರ್ಬಲ್ಯ

ಜಿಲ್ಲೆಯಲ್ಲಿ ಕ್ಷಯ ರೋಗ ನಿರ್ಮೂಲನೆ ಮಾಡಲು ಸೂಕ್ತ ಕ್ರಮ ವಹಿಸಿ: ಚಿಕ್ಕಸುಬ್ಬಯ್ಯ
ರಾಮನಗರ, ಮೇ೨೧: ಕ್ಷಯರೋಗದಿಂದ ಆರೋಗ್ಯ, ಸಾಮಾಜಿಕ ಮತ್ತು ಆರ್ಥಿಕ ವಿನಾಶಕಾರಿ ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕ್ಷಯ ಸಾಂಕ್ರಾಮಿಕ ರೋಗವನ್ನು ಕೊನೆಗೊಳಿಸುವ ಪ್ರಯತ್ನಗಳು

ಮಾ.16 ರಂದು 12 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ
ರಾಮನಗರ ಮಾ.15: ರಾಮನಗರ ಜಿಲ್ಲಾ ಆಸ್ಪತ್ರೆಯಲ್ಲಿ 12 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕೋರ್ಬಿವ್ಯಾಕ್ಸ್ ಲಸಿಕಾ ಅಭಿಯಾನದಡಿಯಲ್ಲಿ ಕೋವಿ

ಸಮರ್ಥನಂ ಸಂಸ್ಥೆಯ ಸೇವೆ ಶ್ಲಾಘನೀಯ ಡಾ. ವೇಣುಗೋಪಾಲ್
ಚನ್ನಪಟ್ಟಣ ತಾಲ್ಲೂಕು, ಬಿ.ವಿ.ಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾ ಎಸ್.ಬಿ.ಸಿ.ಸಿ ಘಟಕ ಮತ್ತು ಸಮರ್ಥನಂ ಅಂಗವಿಕಲರ ಸಂಸ್ಥೆ ವತಿಯಿಂದ ಜಾಗೃತಿ ಕಾರ್ಯಕ್ರಮ ಮತ್ತು ಆರೋಗ್ಯ ಪರಿಕರ ವಿತರಣ

ಜನವರಿ 10 ರಿಂದ 60 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಬೂಸ್ಟರ್ ಡೋಸ್
ಆರೋಗ್ಯ ಇಲಾಖೆ ವತಿಯಿಂದ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟ ಸಹ ಅಸ್ವಸ್ಥತೆ ಹೊಂದಿರುವ ಫಲಾನುಭವಿಗಳಿಗೆ ಜನವರಿ 10 ರಿಂದ ಹಂತ ಹಂತವಾಗಿ ಕೋವಿಡ್-19 ಮುನ್ನೆಚ್ಚ

ವಿದ್ಯಾರ್ಥಿಗಳಿಗೆ ಏಡ್ಸ್ ಮುಕ್ತ ಸಮಾಜ ನಿರ್ಮಿಸಲು ಸಲಹೆ - ಡಾ. ಕುಮಾರ್
ರಾಮನಗರ, ಡಿ:22/21. ಜಿಲ್ಲಾಡಳಿತ ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳ

ವಿದ್ಯಾರ್ಥಿಗಳಿಗೆ ಏಡ್ಸ್ ಮುಕ್ತ ಸಮಾಜ ನಿರ್ಮಿಸಲು ಸಲಹೆ - ಡಾ. ಕುಮಾರ್
ರಾಮನಗರ, ಡಿ:22/21. ಜಿಲ್ಲಾಡಳಿತ ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳ

ಪರಿಸರ ಉಳಿದರೆ ಮನು ಸಂಕುಲ ಉಳಿಯಲು ಸಾಧ್ಯ. ಸಚಿವ ಸಿ ಪಿ ಯೋಗೇಶ್ವರ್
ನಮ್ಮ ಪೂರ್ವಜರು ಪರಿಸರಕ್ಕೆ ಬಹಳ ಒತ್ತು ನೀಡಿದ್ದರು. ಅವರ ಜಮೀನಿನ ಜೊತೆಗೆ ರಸ್ತೆ ಬದಿಯಲ್ಲಿಯೂ ಸಹ ಗಿಡಗಳನ್ನು ನೆಟ್ಟು ಪೋಷಿಸಿತ್ತಿದ್ದರು. ಎಲ್ಲಿ ಒಂದು ಆಲದ ಮರ ಕಡಿದರೂ ಸಹ, ಅದೇ ಆಲದ ಮರದ ಹತ್ತಾರ

ವಾರದಲ್ಲಿ ಎರಡು ದಿನ ವಿಶೇಷ ಲಸಿಕೆ ಅಭಿಯಾನ:ಜಿಲ್ಲೆಯಲ್ಲಿ ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ಎಚ್ಚರಿಕೆ ವಹಿಸಿ : ಡಾ.ರಾಕೇಶ್ ಕುಮಾರ್
ರಾಮನಗರ, ಜುಲೈ.01. ಮಕ್ಕಳಿಗೆ ನೀಡಲಾಗುವ ಬಿ.ಸಿ.ಜಿ, ಪೆಂಟಾವೆಲೆಂಟ್ ದಡಾರಾ ರುಬೆಲ್ಲಾ, ಡಿ.ಟಿ.ಪಿ ವರ್ಧಕ ಮುಂತಾದ ಲಸಿಕೆಯನ್ನು ನೀಡಲು ವಾರದಲ್ಲಿ ಎರಡು ದಿನ, ಮಂಗಳವಾರ ಮತ್ತು ಬುಧವಾರ

ದೊಡ್ಡಮರಳವಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇ.ಸಿ.ಜಿ. ಸೇವೆ ಸಿಇಓ ಇಕ್ರಂ
- ಗ್ರಾಮೀಣ ಪ್ರದೇಶದ ಜನರಿಗೆ ಎಲ್ಲಾ ರೀತಿಯ ಆರೋಗ್ಯ ಸೇವೆಗಳು ದೊರೆಯಬೇಕು ಎಂಬ ದೃಷ್ಟಿಯಿಂದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇಕ್ರಂ ಅವರು ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಆರೋಗ್ಯ ಸೇವೆಗೆ ಬೇಕಿರುವ
ಪ್ರತಿಕ್ರಿಯೆಗಳು