ದುಶ್ಚಟದಿಂದ ದೂರವಿರಿ, ಆರೋಗ್ಯ ಕಾಪಾಡಿಕೊಳ್ಳಿ : ಪ್ರತಿಮಾ ಕೆ.ವಿ

ರಾಮನಗರ, ಜೂ. 17: ಇತ್ತೀಚೆಗೆ ಅತಿ ಹೆಚ್ಚು ಹಲವಾರು ದುಶ್ಚಟಗಳು ಮನುಷ್ಯನನ್ನು ಆವರಸಿಕೊಂಡಿವೆ. ಇದರಿಂದಾಗಿ ನೂರಾರು ಖಾಯಿಲೆಗಳು ದೇಹ ಹೊಕ್ಕು ನಿತ್ಯ ಸಾವು ನೋವುಗಳು ಸಂಭವಿಸುತ್ತಿವೆ. ಆದ್ದರಿಂದ ನಾವು ದುಶ್ಚಟಗಳಿಂದ ದೂರವಿರಬೇಕು ಎಂದು ಆಡಳಿತ ವೈದ್ಯಾಧಿಕಾರಿ ಕೆ.ವಿ ಪ್ರತಿಮಾ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.
ಜಿಲ್ಲಾ ಪಂಚಾಯತ್ ಮತ್ತು ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆ, ಬಿಳಗುಂಬ ಗ್ರಾಮ ಪಂಚಾಯ್ತಿ ಹಾಗೂ ತಗ್ಗಿಕುಪ್ಪೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಕಾರದೊಂದಿಗೆ ಬಿಳಗುಂಬ ಗ್ರಾಮದಲ್ಲಿ ಆರೋಗ್ಯ ಅಮೃತ ಅಭಿಯಾನದಡಿ ನರೇಗಾ ಕೂಲಿ ಕಾರ್ಮಿಕರು ಮತ್ತು ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.
ಆರೋಗ್ಯ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ, ಆಡಳಿತ ವೈದ್ಯಾಧಿಕಾರಿ ಪ್ರತಿಮಾ ಕೆ.ವಿ ಯಾವುದೇ ವ್ಯಕ್ತಿಗೆ ಆರೋಗ್ಯ ಸ್ಥಿತಿ ಎಂಬುದು ಆತನ ಬೆಳವಣಿಗೆಯಲ್ಲಿ ತೋರಿಸುತ್ತದೆ. ಇತ್ತೀಚೆಗೆ ಹಲವಾರು ದುಶ್ಚಟಗಳು ಮನುಷ್ಯನನ್ನು ಆವರಿಸಿಕೊಂಡಿದ್ದು, ಮಧುಮೇಹ, ರಕ್ತದೊತ್ತಡ, ಕ್ಷಯ, ರಕ್ತಹೀನತೆ, ಕ್ಯಾನ್ಸರ್, ಅಲ್ಸರ್ಗಳಂತ ರೋಗಗಳಿಗೆ ತುತ್ತಾಗಿ ಮಾನಸಿಕವಾಗಿ ಕುಗ್ಗುತ್ತಾ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ. ಇಂತಹ ರೋಗಗಳಿಂದ ತಾನು ಹಾಗೂ ತನ್ನ ಕುಟುಂಬವನ್ನು ದೂರವಿಡಲು, ಅಸಮರ್ಪಕ ಆಹಾರ ಸೇವನೆ, ದೇಹಕ್ಷಮತೆ ಅಗತ್ಯ. ಸಮಯಕ್ಕೆ ಅನುಗುಣವಾಗಿ ಆರೋಗ್ಯ ತಪಾಸಣೆ, ಉತ್ತಮ ಜೀವನ ಶೈಲಿಯನ್ನು ಅನುಸರಿಸಬೇಕು ಎಂದು ಕೂಲಿಕಾರರಿಗೆ ಅರಿವು ಮೂಡಿಸಿದರು.
ಜೊತೆಗೆ ತಾಯಂದಿರು ಸಹಾ ತನ್ನ ಮಗುವಿನ ಬೆಳವಣಿಗೆಗೆ ಕುಂಠಿತವಾಗುವಂತಹ ಆಹಾರ ಪದ್ಧತಿ, ಅವೈಜ್ಞಾನಿಕ ಪದ್ದತಿಗಳ ಅನುಸರಣೆಯಿಂದ ದೂರವಿರಬೇಕು ಹಾಗೂ ಇಂತಹ ಆರೋಗ್ಯ ಶಿಬಿರಗಳಲ್ಲಿ ಭಾಗಿಯಾಗಿ ತಪಾಸಣೆಮಾಡಿಸಿಕೊಳ್ಳುವುದರ ಮೂಲಕ ತಮ್ಮ ಆರೋಗ್ಯದ ಮೂಲಸ್ಥಿತಿಯನ್ನು ಅರಿತು ಸಮಸ್ಯೆಗನುಗುಣವಾಗಿ ಚಿಕಿತ್ಸೆಯನ್ನು ಪಡೆಯಬೇಕು. ಆರೋಗ್ಯ ಶಿಬಿರಗಳ ಅನುಕೂಲವನ್ನು ನೆರೆಮನೆಯವರಿಗೂ ತಿಳಿಸಿ ಅರಿವು ಮೂಡಿಸಬೇಕು ಎಂದು ಸಾರ್ವಜನಿಕರಿಗೆ ಸಲಹೆ ನೀಡಿದರು.
ಅರೋಗ್ಯ ಸುರಕ್ಷತಾಧಿಕಾರಿ ಅನ್ನಪೂರ್ಣ ಮಾತನಾಡಿ, ಗ್ರಾಮದ 30 ವರ್ಷ ಮೇಲ್ಪಟ್ಟ ಎಲ್ಲರೂ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ರೋಗಗಳು ವಯಸ್ಸಿನ ಮಾಪನದಿಂದ ಹರಡುವುದಿಲ್ಲ. ಬದಲಾಗಿ ನಾವು ಅವಳವಡಿಸಿಕೊಂಡ ಆರೋಗ್ಯ ಕ್ರಮಗಳು ಹಾಗೂ ವೈಜ್ಞಾನಿಕ ಅರಿವಿನಿಂದ ನಿರ್ಧರಿತವಾಗುತ್ತದೆ. ಹಳ್ಳಿಯ ಭಾಗದ ಜನರಲ್ಲಿ ಹೆಚ್ಚಾಗಿ ತಂಬಾಕು ಸೇವನೆ ದುರಾಭ್ಯಾಸಗಳು ಹೆಚ್ಚಾಗಿ ಕಂಡುಬರುತ್ತಿದ್ದು, ಮುಂದಿನ ದಿನಗಳಲ್ಲಿ ಮಾರಕ ರೋಗಗಳಿಗೆ ಆಹ್ವಾನವಿತ್ತಂತೆ. ಇಂತಹ ಅಭ್ಯಾಸಗಳನ್ನು ದೂರವಿಡುವುದರಿಂದ ತಮ್ಮ ಜೀವಿತಾವಧಿಗೆ ಕೊಡುಗೆ ನೀಡಿದಂತಾಗುತ್ತದೆ. ಈ ಬಗ್ಗೆ ಪ್ರತಿಯೊಬ್ಬರೂ ಎಚ್ಚರವಹಿಸಬೇಕು ಎಂದು ಹೇಳಿದರು.
*ಹಂಚಿಕುಪ್ಪೆ ಗ್ರಾ.ಪಂ.ನಲ್ಲಿ ಆರೋಗ್ಯ ಶಿಬಿರ:*
ಹಂಚಿಕುಪ್ಪೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಾರೇಗೌಡನದೊಡ್ಡಿಯಲ್ಲಿ ನರೇಗಾ ಕೂಲಿ ಕಾರ್ಮಿಕರಿಗೆ ಆರೋಗ್ಯ ಶಿಬಿರ ಆಯೋಜಿಸಲಾಗಿತ್ತು. ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿ ನೇತ್ರಾರವರು ನಮ್ಮ ದೈನಂದಿನ ಚಟುವಟಿಕೆಗಳ ಜೊತೆಗೆ ಪೌಷ್ಠಿಕಾಂಶ ಆಹಾರ ಸೇವನೆ, ಸುತ್ತಮುತ್ತಲಿನ ಪರಿಸರದ ಸ್ವಚ್ಛತೆ, ತಂಬಾಕು ಸೇವನೆಗಳಂತಹ ದುಶ್ಛಟಗಳಿಂದ ದೂರವಿರಬೇಕು ಎಂದು ಹೇಳಿದರು. ಶಿಬಿರದಲ್ಲಿ ನರೇಗಾ ಕೂಲಿಕಾರರು, ಹಿರಿಯ ನಾಗರಿಕರು, ಬಾಣಂತಿಯರು, ಮಕ್ಕಳಿಗೆ ತಪಾಸಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುರೇಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಧನಂಜಯ್ ಕುಮಾರ್, ಹಂಚಿಕುಪ್ಪೆ ಪಿಡಿಓ ಅಂಜನ್ ಕುಮಾರ್,
ಗೋ ರಾ ಶ್ರೀನಿವಾಸ...
ಮೊ:9845856139.
Recent news in health »

ಹೊಂಗನೂರು, ಕೋಡಂಬಳ್ಳಿ ಗ್ರಾಮದಲ್ಲಿ ಪರವಾನಗಿ ಇಲ್ಲದ ಖಾಸಗಿ ಆಸ್ಪತ್ರೆಗಳಿಗೆ ಬೀಗ ಜಡಿದ ಟಿಹೆಚ್ಓ
ಚನ್ನಪಟ್ಟಣ: ತಾಲ್ಲೂಕಿನ ಹೊಂಗನೂರು ಗ್ರಾಮದಲ್ಲಿ ಗೋಪಿ ಕ್ಲಿನಿಕ್ ಎಂಬ ಖಾಸಗಿ ಆಸ್ಪತ್ರೆ ಇದ್ದು, ಗೋಪಿ ಎಂಬುವವರು ವೈದ್ಯರಾಗಿ ಸೇವೆ ನಿರ್ವಹಿಸುತ್ತಿದ್ದಾರ

ಉತ್ತಮ ಆರೋಗ್ಯಕ್ಕೆ ಆಯುರ್ವೇದವೇ ದಿವ್ಯ ಔಷಧ ಡಾ ಸಹನಾ ಕೃಷ್ಣ
ಚನ್ನಪಟ್ಟಣ: ಪುರಾಣೇತೀಹಾಸದಿಂದಲೂ ಪ್ರಖ್ಯಾತವಾಗಿರುವ ಔಷಧ ಎಂದರೆ ಅದು ಆಯುರ್ವೇದ ಔಷಧ, ಜಗತ್ತಿನ ಅತ್ಯಂತ ಪ್ರಾಚೀನ ಔಷಧವೂ ಹೌದು, ನಮ್ಮ ಪ್ರಕೃತಿ ಹೇಗೆ ಸಮ

ದೊಡ್ಡಮಳೂರು ಗ್ರಾಮದಲ್ಲಿ ದೀರ್ಘಾಯು ವೆಲ್ ನೆಸ್ ಆಯುರ್ವೇದ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ಶಿಬಿರ
ಚನ್ನಪಟ್ಟಣ: ತಾಲ್ಲೂಕಿನ ದೊಡ್ಡಮಳೂರು ಗ್ರಾಮದ ದೇವಸ್ಥಾನದ ಬೀದಿಯಲ್ಲಿರುವ ದೀರ್ಘಾಯು ವೆಲ್ ನೆಸ್ ಸೆಂಟರ್ ಇವರ ವತಿಯಿಂದ ನಾಳೆ (ಭಾನುವಾರ) ಬೆಳಿ

ಕ್ರಿಯೇಟಿವ್ ಅಸೋಸಿಯೇಷನ್ ಹಾಗೂ ಸೊಸೈಟಿ ವತಿಯಿಂದ ಶನಿವಾರ ನಗರದಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರ
ಚನ್ನಪಟ್ಟಣ : ತಾಲ್ಲೂಕಿನಿಂದ ಬೆಂಗಳೂರಿಗೆ ಹೋಗಿ, ಜೀವನ ಕಟ್ಟಿಕೊಂಡು ತಾಲ್ಲೂಕಿಗೆ ಏನಾದರೂ ಕೊಡುಗೆ ನೀಡಬೇಕೆಂಬ ಹಂಬಲದಿಂದ ಕ್ರಿಯೇಟಿವ್ ಅಸೋಸಿಯೇಷನ್ ಮತ್ತ

ದುಶ್ಚಟದಿಂದ ದೂರವಿರಿ, ಆರೋಗ್ಯ ಕಾಪಾಡಿಕೊಳ್ಳಿ : ಪ್ರತಿಮಾ ಕೆ.ವಿ
ರಾಮನಗರ, ಜೂ. 17: ಇತ್ತೀಚೆಗೆ ಅತಿ ಹೆಚ್ಚು ಹಲವಾರು ದುಶ್ಚಟಗಳು ಮನುಷ್ಯನನ್ನು ಆವರಸಿಕೊಂಡಿವೆ. ಇದರಿಂದಾಗಿ ನೂರಾರು ಖಾಯಿಲೆಗಳು ದೇಹ ಹೊಕ್ಕು ನಿತ್ಯ ಸಾ

ಫ್ಲೋರೋಸಿಸ್ ನಿಯಂತ್ರಿಸಿ ಉತ್ತಮ ಜೀವನ ನಡೆಸುವಂತೆ ಸಲಹೆ - ಡಾ.ಅನಿಲ್
ರಾಮನಗರ, ಜೂ. 15: ಫ್ಲೋರೈಡ್ ನಮ್ಮ ದೇಹಕ್ಕೆ ಬೇಕಾದ ಒಂದು ಖನಿಜಾಂಶ ನಾವು ಸೇವಿಸುವ ಆಹಾರ ಮತ್ತು ಕುಡಿಯುವ ನೀರಿನಲ್ಲಿ ಅವಶ್ಯಕತೆಗಿಂತ ಹೆಚ್ಚು ಫ್ಲೋರೈಡ

ಆರೋಗ್ಯ ಕೇಂದ್ರದಲ್ಲಿ ದೊರೆಯುವ ಸೇವೆಗಳನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದ ಬಿ.ಎಸ್.ಗಂಗಾಧರ್.
ರಾಮನಗರ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಕೆ.ಕರೇನಹಳ್ಳಿ ಇವರ ಸಂಯುಕ್ತ ಆಶ್ರ

ಶ್ರೀಗಿರಿಪುರ ಗ್ರಾಪಂ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆದ ಆರೋಗ್ಯ ತಪಾಸಣಾ ಶಿಬಿರ
ರಾಮನಗರ, ಜೂ. 07: ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಾತ್ಮಗಾಂಧಿ ನರೇಗಾ ಉದ್ಯೋಗ ಖಾತ್ರಿ ಯೋಜನೆ ಹಾಗೂ ಕುದೂರು ಪ್ರ

ಆರೋಗ್ಯ ತಪಾಸಣೆ ನಿಮ್ಮ ಗ್ರಾಮಗಳ ಕಡೆ: ಡಾ.ಚೈತ್ರಗೌಡ
ಚನ್ನಪಟ್ಟಣ: ಆಸ್ಪತ್ರೆಗಳಿಗೆ ಹೋಗಿ ಆರೋಗ್ಯ ತಪಾಸಣೆ ಮಾಡಿಕೊಳ್ಳುವ ಬದಲು ನೀವಿರುವ ಗ್ರಾಮಗಳಿಗೆ ಬಂದು ಆರೋಗ್ಯ ತಪಾಸಣೆಯನ್ನು ಮಾಡಲಾಗುತ್ತಿದೆ ಇದನ್ನು ಎಲ

ಮೆದುಳು ಜ್ವರ ನಿಯಂತ್ರಣಕ್ಕೆ ಸಹಕರಿಸಲು ಮನವಿ: ಡಾ. ಶಶಿಧರ್
ರಾಮನಗರ, ಮೇ 22: ಮೆದುಳು ಜ್ವರವು ವೈರಾಣುವಿನಿಂದ ಬರುವ ರೋಗವಾಗಿದ್ದು ಹೆಚ್ಚಾಗಿ ಮಕ್ಕಳು ಈ ರೋಗಕ್ಕೆ ತುತ್ತಾಗುತ್ತಾರೆ. ಕೆಲವರಿಗೆ ನರ ದೌರ್ಬಲ್ಯ
ಪ್ರತಿಕ್ರಿಯೆಗಳು