ಹೊಂಗನೂರು, ಕೋಡಂಬಳ್ಳಿ ಗ್ರಾಮದಲ್ಲಿ ಪರವಾನಗಿ ಇಲ್ಲದ ಖಾಸಗಿ ಆಸ್ಪತ್ರೆಗಳಿಗೆ ಬೀಗ ಜಡಿದ ಟಿಹೆಚ್ಓ

ಚನ್ನಪಟ್ಟಣ: ತಾಲ್ಲೂಕಿನ ಹೊಂಗನೂರು ಗ್ರಾಮದಲ್ಲಿ ಗೋಪಿ ಕ್ಲಿನಿಕ್ ಎಂಬ ಖಾಸಗಿ ಆಸ್ಪತ್ರೆ ಇದ್ದು, ಗೋಪಿ ಎಂಬುವವರು ವೈದ್ಯರಾಗಿ ಸೇವೆ ನಿರ್ವಹಿಸುತ್ತಿದ್ದಾರೆ. ವೈದ್ಯಕೀಯಕ್ಕೆ ಸಂಬಂಧಿಸಿದ ಯಾವುದೇ ಪದವಿ ಪಡೆದಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಇತ್ತೀಚಿನ ದಿನಗಳಲ್ಲಿ ವಿಡಿಯೋ ವೈರಲ್ ಆಗಿತ್ತು. ಸಾರ್ವಜನಿಕರ ದೂರಿನ ಮೇರೆಗೆ ತಾಲೂಕು ವೈದ್ಯಾಧಿಕಾರಿ ರಾಜು ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಆ ಸಂದರ್ಭದಲ್ಲಿ ವೈದ್ಯರು ಮತ್ತು ರೋಗಿಗಳು ಇಲ್ಲದೆ ಆಸ್ಪತ್ರೆಗೆ ಬೀಗ ಜಡಿಯಲಾಗಿತ್ತು. ಇದನ್ನು ಗಮನಿಸಿ ಸ್ಥಳೀಯರೊಂದಿಗೆ ವಿಚಾರ ಮಾಡಿ ಅವರು ವೈದ್ಯರಲ್ಲ ಎಂಬುದನ್ನು ಖಚಿತ ಪಡಿಸಿಕೊಂಡಿದ್ದಾರೆ.
ಆಸ್ಪತ್ರೆಗೆ ವೈದ್ಯರು ಬಂದು ಕೆಲಸ ನಿರ್ವಹಿಸಿದರೆ ತಮಗೆ ವಿಚಾರವನ್ನು ತಿಳಿಸಬೇಕಾಗಿ ರಾಜು ಅವರು ಸ್ಥಳೀಯರಿಗೆ ಮನವಿ ಮಾಡಿದ್ದಾರೆ. ಈ ಹಿಂದೆಯೂ ಸಹ ಹಲವಾರು ಬಾರಿ ಸಾರ್ವಜನಿಕರು ಮೌಖಿಕ ದೂರು ನೀಡಿದ್ದು, ಗೋಪಿ ಅವರ ಪುತ್ರ ಡಾ.ವಂಸತ್ ಅವರು ಸಹ ವೈದ್ಯಕೀಯ ಸೇವೆ ಸಲ್ಲಿಸುತ್ತಿದ್ದು ಹೊಂಗನೂರು ಗ್ರಾಮದಲ್ಲಿರುವ ಗೋಪಿ ಕ್ಲಿನಿಕ್ನನ್ನು ನಾನೇ ಮುಂದುವರೆಸುತ್ತೇನೆಂದು ವಸಂತ್ ಹೆಸರಿನಲ್ಲಿ ಪರವಾನಗಿ ಪಡೆದುಕೊಂಡು ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.
ಇತ್ತೀಚಿಗೆ ಚನ್ನಪಟ್ಟಣ ನಗರಕ್ಕೆ ಅವರ ಆಸ್ಪತ್ರೆಯನ್ನು ವರ್ಗಾವಣೆ ಮಾಡಿಕೊಳ್ಳುವ ಸಂದರ್ಭದಲ್ಲಿ ಹೊಂಗನೂರಿನಲ್ಲಿರುವ ಗೋಪಿ ಕ್ಲಿನಿಕ್ ಮುಚ್ಚುವುದಾಗಿ ನಗರದಲ್ಲಿ ತೆರೆದಿರುವ ಆಸ್ಪತ್ರೆಗೆ ಪರವಾನಗಿ ನೀಡಬೇಕೆಂದು ತಾಲೂಕು ವೈದ್ಯಾಧಿಕಾರಿಗಳ ಬಳಿ ಪಡೆದುಕೊಂಡಿದ್ದರು. ಸದರಿ ಆಸ್ಪತ್ರೆಯನ್ನು ಮುಚ್ಚದೆ ಅವರ ತಂದೆ ಹೊಂಗನೂರು ಗ್ರಾಮದಲ್ಲಿ ಗೋಪಿ ಕ್ಲಿನಿಕ್ ನಡೆಸುತ್ತಿದ್ದಾರೆ. ಈ ದೂರಿನ ಮೇರೆಗೆ ಡಾ.ರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅದೇ ರೀತಿಯಲ್ಲಿ ಕೋಡಂಬಳ್ಳಿ ಗ್ರಾಮದಲ್ಲಿಯೂ ಸಹ ನಾಲ್ಕು ಕಟ್ಟಡಗಳ ಮಾಲೀಕರು ಯಾವುದೇ ಪರವಾನಗಿ ಪಡೆಯದೆ ಬಿಎ,ಎಂಎಸ್ ಪಡೆದಿರುವಂತ ವೈದ್ಯರಿಗೆ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದ್ದಾರೆ. ಈ ನಾಲ್ಕು ಮಂದಿ ವೈದ್ಯರು ತಾಲೂಕು ವೈದ್ಯಾಧಿಕಾರಿ ಹಾಗೂ ಜಿಲ್ಲಾ ವೈದ್ಯಾಧಿಕಾರಿಗಳಿಂದ ಪರವಾನಗಿ ಪಡೆದಿಲ್ಲ. ತಾಲೂಕು ವೈದ್ಯಾಧಿಕಾರಿಗಳು ಭೇಟಿ ನೀಡಿದ ಸಂದರ್ಭದಲ್ಲಿ ವೈದ್ಯರು ಇಲ್ಲದ ಕಾರಣ ಆ ನಾಲ್ಕು ಕ್ಲಿನಿಕ್ಗಳಿಗೆ ಬೀಗ ಜಡಿದು ಕಟ್ಟಡದ ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ. ಪರವಾನಗಿ ಇಲ್ಲದೆ ಯಾವುದೇ ವೈದ್ಯರು ಆಸ್ಪತ್ರೆ ತೆರೆಯಬಾರದು ಎಂದು ಹೇಳಿದ್ದಾರೆ. ಒಂದು ವೇಳೆ ವೈದ್ಯರು ಬಂದು ಕಾರ್ಯ ನಿರ್ವಹಿಸಿದರೆ ಮಾಹಿತಿ ನೀಡಬೇಕೆಂದು ಸೂಚಿಸಿದ್ದಾರೆ.
ಇತ್ತೀಚಿಗೆ ಬಿಎ,ಎಂಎಸ್ ಪದವಿ ಪಡೆದಿರುವ ಹಲವಾರು ವೈದ್ಯರು ಕೆಪಿಎಂಇ ಆಕ್ಟ್ನಡಿ ನೊಂದಾಯಿಸಿಕೊಳ್ಳದೆ ಕೆಲಸ ನಿರ್ವಹಿಸುತ್ತಿರುವುದು ಹೆಚ್ಚಾಗುತ್ತಿದೆ. ಬಿಎ, ಎಂಎಸ್ ಪದವಿ ಆಯುರ್ವೇದಕ್ಕೆ ಸಂಬಂಧಿಸಿದ್ದು ಆಲೋಪತಿ ಔಷಧಿ ನೀಡುತ್ತಿದ್ದಾರೆ. ತಾಲೂಕು ವೈದ್ಯಾಧಿಕಾರಿಗಳು, ಜಿಲ್ಲಾ ವೈದ್ಯಾಧಿಕಾರಿಗಳು, ಪೊಲೀಸರು, ಸ್ಥಳೀಯ ಆಡಳಿತ ಎಚ್ಚೆತ್ತುಕೊಂಡು ಸರಿಯಾದ ಕಾನೂನು ಕ್ರಮ ಜರುಗಿಸದೆ ಇದ್ದರೆ ರೋಗಿಗಳಿಗೆ ಜೀವ ಹೋಗುವ ಸಂಭವವಿರುತ್ತದೆ ಎಂದು ಸಾರ್ವಜನಿಕರ ಆಗ್ರಹವಾಗಿದೆ.
ಈ ಸಂಬಂಧ ಪತ್ರಿಕೆಯೊಂದಿಗೆ ಮಾತನಾಡಿದ ವೈದ್ಯಾಧಿಕಾರಿ ರಾಜು ರವರು, ನಗರ ಸೇರಿದಂತೆ ಹಲವಾರು ಗ್ರಾಮಗಳಲ್ಲಿ ಬಿಎಎಂಎಸ್ ಪದವಿ ಪಡೆದ ವೈದ್ಯರು ಖಾಸಗಿ ಕ್ಲಿನಿಕ್ ತೆರೆದು ಸೇವೆ ಮಾಡುತ್ತಿದ್ದಾರೆ. ಅವರು ಪರವಾನಗಿ ಪಡೆಯುತ್ತಿಲ್ಲ, ಪರವಾನಗಿ ಪಡೆಯಬೇಕಾದರೆ ಕೆಲವು ಮಾನದಂಡಗಳಿದ್ದು, ಅವುಗಳನ್ನು ಹೊಂದದೇ ಇರುವುದರಿಂದ ಪರವಾನಗಿ ಪಡೆಯಲು ಹಿಂಜರಿಯುತ್ತಿದ್ದಾರೆ. ಇದರಿಂದ ರೋಗಿಗಳಿಗೂ ಸಹ ತೊಂದರೆ ಯಾಗುತ್ತಿದೆ. ಇದನ್ನು ಮನಗಂಡು ಪರಿಶೀಲನೆ ನಡೆಸಿ, ವೈದ್ಯರಿಲ್ಲದ ಕಾರಣ ಕಟ್ಟಡದ ಮಾಲೀಕರಿಗೆ ಎಚ್ಚರಿಕೆ ನೀಡಲಾಗಿದೆ ಎಂದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in health »

ಹೊಂಗನೂರು, ಕೋಡಂಬಳ್ಳಿ ಗ್ರಾಮದಲ್ಲಿ ಪರವಾನಗಿ ಇಲ್ಲದ ಖಾಸಗಿ ಆಸ್ಪತ್ರೆಗಳಿಗೆ ಬೀಗ ಜಡಿದ ಟಿಹೆಚ್ಓ
ಚನ್ನಪಟ್ಟಣ: ತಾಲ್ಲೂಕಿನ ಹೊಂಗನೂರು ಗ್ರಾಮದಲ್ಲಿ ಗೋಪಿ ಕ್ಲಿನಿಕ್ ಎಂಬ ಖಾಸಗಿ ಆಸ್ಪತ್ರೆ ಇದ್ದು, ಗೋಪಿ ಎಂಬುವವರು ವೈದ್ಯರಾಗಿ ಸೇವೆ ನಿರ್ವಹಿಸುತ್ತಿದ್ದಾರ

ಉತ್ತಮ ಆರೋಗ್ಯಕ್ಕೆ ಆಯುರ್ವೇದವೇ ದಿವ್ಯ ಔಷಧ ಡಾ ಸಹನಾ ಕೃಷ್ಣ
ಚನ್ನಪಟ್ಟಣ: ಪುರಾಣೇತೀಹಾಸದಿಂದಲೂ ಪ್ರಖ್ಯಾತವಾಗಿರುವ ಔಷಧ ಎಂದರೆ ಅದು ಆಯುರ್ವೇದ ಔಷಧ, ಜಗತ್ತಿನ ಅತ್ಯಂತ ಪ್ರಾಚೀನ ಔಷಧವೂ ಹೌದು, ನಮ್ಮ ಪ್ರಕೃತಿ ಹೇಗೆ ಸಮ

ದೊಡ್ಡಮಳೂರು ಗ್ರಾಮದಲ್ಲಿ ದೀರ್ಘಾಯು ವೆಲ್ ನೆಸ್ ಆಯುರ್ವೇದ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ಶಿಬಿರ
ಚನ್ನಪಟ್ಟಣ: ತಾಲ್ಲೂಕಿನ ದೊಡ್ಡಮಳೂರು ಗ್ರಾಮದ ದೇವಸ್ಥಾನದ ಬೀದಿಯಲ್ಲಿರುವ ದೀರ್ಘಾಯು ವೆಲ್ ನೆಸ್ ಸೆಂಟರ್ ಇವರ ವತಿಯಿಂದ ನಾಳೆ (ಭಾನುವಾರ) ಬೆಳಿ

ಕ್ರಿಯೇಟಿವ್ ಅಸೋಸಿಯೇಷನ್ ಹಾಗೂ ಸೊಸೈಟಿ ವತಿಯಿಂದ ಶನಿವಾರ ನಗರದಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರ
ಚನ್ನಪಟ್ಟಣ : ತಾಲ್ಲೂಕಿನಿಂದ ಬೆಂಗಳೂರಿಗೆ ಹೋಗಿ, ಜೀವನ ಕಟ್ಟಿಕೊಂಡು ತಾಲ್ಲೂಕಿಗೆ ಏನಾದರೂ ಕೊಡುಗೆ ನೀಡಬೇಕೆಂಬ ಹಂಬಲದಿಂದ ಕ್ರಿಯೇಟಿವ್ ಅಸೋಸಿಯೇಷನ್ ಮತ್ತ

ದುಶ್ಚಟದಿಂದ ದೂರವಿರಿ, ಆರೋಗ್ಯ ಕಾಪಾಡಿಕೊಳ್ಳಿ : ಪ್ರತಿಮಾ ಕೆ.ವಿ
ರಾಮನಗರ, ಜೂ. 17: ಇತ್ತೀಚೆಗೆ ಅತಿ ಹೆಚ್ಚು ಹಲವಾರು ದುಶ್ಚಟಗಳು ಮನುಷ್ಯನನ್ನು ಆವರಸಿಕೊಂಡಿವೆ. ಇದರಿಂದಾಗಿ ನೂರಾರು ಖಾಯಿಲೆಗಳು ದೇಹ ಹೊಕ್ಕು ನಿತ್ಯ ಸಾ

ಫ್ಲೋರೋಸಿಸ್ ನಿಯಂತ್ರಿಸಿ ಉತ್ತಮ ಜೀವನ ನಡೆಸುವಂತೆ ಸಲಹೆ - ಡಾ.ಅನಿಲ್
ರಾಮನಗರ, ಜೂ. 15: ಫ್ಲೋರೈಡ್ ನಮ್ಮ ದೇಹಕ್ಕೆ ಬೇಕಾದ ಒಂದು ಖನಿಜಾಂಶ ನಾವು ಸೇವಿಸುವ ಆಹಾರ ಮತ್ತು ಕುಡಿಯುವ ನೀರಿನಲ್ಲಿ ಅವಶ್ಯಕತೆಗಿಂತ ಹೆಚ್ಚು ಫ್ಲೋರೈಡ

ಆರೋಗ್ಯ ಕೇಂದ್ರದಲ್ಲಿ ದೊರೆಯುವ ಸೇವೆಗಳನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದ ಬಿ.ಎಸ್.ಗಂಗಾಧರ್.
ರಾಮನಗರ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಕೆ.ಕರೇನಹಳ್ಳಿ ಇವರ ಸಂಯುಕ್ತ ಆಶ್ರ

ಶ್ರೀಗಿರಿಪುರ ಗ್ರಾಪಂ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆದ ಆರೋಗ್ಯ ತಪಾಸಣಾ ಶಿಬಿರ
ರಾಮನಗರ, ಜೂ. 07: ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಾತ್ಮಗಾಂಧಿ ನರೇಗಾ ಉದ್ಯೋಗ ಖಾತ್ರಿ ಯೋಜನೆ ಹಾಗೂ ಕುದೂರು ಪ್ರ

ಆರೋಗ್ಯ ತಪಾಸಣೆ ನಿಮ್ಮ ಗ್ರಾಮಗಳ ಕಡೆ: ಡಾ.ಚೈತ್ರಗೌಡ
ಚನ್ನಪಟ್ಟಣ: ಆಸ್ಪತ್ರೆಗಳಿಗೆ ಹೋಗಿ ಆರೋಗ್ಯ ತಪಾಸಣೆ ಮಾಡಿಕೊಳ್ಳುವ ಬದಲು ನೀವಿರುವ ಗ್ರಾಮಗಳಿಗೆ ಬಂದು ಆರೋಗ್ಯ ತಪಾಸಣೆಯನ್ನು ಮಾಡಲಾಗುತ್ತಿದೆ ಇದನ್ನು ಎಲ

ಮೆದುಳು ಜ್ವರ ನಿಯಂತ್ರಣಕ್ಕೆ ಸಹಕರಿಸಲು ಮನವಿ: ಡಾ. ಶಶಿಧರ್
ರಾಮನಗರ, ಮೇ 22: ಮೆದುಳು ಜ್ವರವು ವೈರಾಣುವಿನಿಂದ ಬರುವ ರೋಗವಾಗಿದ್ದು ಹೆಚ್ಚಾಗಿ ಮಕ್ಕಳು ಈ ರೋಗಕ್ಕೆ ತುತ್ತಾಗುತ್ತಾರೆ. ಕೆಲವರಿಗೆ ನರ ದೌರ್ಬಲ್ಯ
ಪ್ರತಿಕ್ರಿಯೆಗಳು