ಕನ್ನಮಂಗಲ ಗ್ರಾಮದ ದೇವರ ಕೊಡುಗೆ ಜಮೀನು ವಿವಾದ, ಕೊಂಡವನ ಮತ್ತು ಗ್ರಾಮಸ್ಥರ ನಡುವೆ ವಾಗ್ವಾದ, ಪ್ರೊ ಡಿವೈಎಸ್ಪಿ ಸ್ನೇಹರಾಜ್ ಭೇಟಿ

ಚನ್ನಪಟ್ಟಣ: ತಾಲ್ಲೂಕಿನ ಕನ್ನಮಂಗಲ ಗ್ರಾಮದಲ್ಲಿರುವ ಮಾಧವರಾಯ ಸ್ವಾಮಿ ದೇವಾಲಯದ ಅರ್ಚಕರಿಗೆ ದೇವರ ಕೊಡುಗೆ ಜಮೀನು ಎಂದು ಸರ್ವೇ ನಂಬರ್ 133/1, & 134/2 ರಲ್ಲಿ ಆರು ಎಕರೆ ಇಪ್ಪತ್ತೈದು ಗುಂಟೆ ಜಮೀನನ್ನು ನೀಡಲಾಗಿದ್ದು, ಇತ್ತೀಚೆಗೆ ಅರ್ಚಕರು ಆ ಜಮೀನನ್ನು ಬೇರೊಬ್ಬರಿಗೆ ಮಾರಾಟ ಮಾಡಿದ್ದರು. ಅದನ್ನು ವಿರೋಧಿಸಿ, ಗ್ರಾಮಸ್ಥರು ಜೆಎಂಎಫ್ಸಿ ನ್ಯಾಯಾಲಯದ ಮೊರೆ ಹೋಗಿದ್ದು, ಆ ಜಮೀನು ಅ ಕೊಂಡವರ ಪರವಾಗಿ ನ್ಯಾಯಾಲಯ ತೀರ್ಪಿತ್ತಿತ್ತು.
ಗ್ರಾಮಸ್ಥರು ಹೈಕೋರ್ಟ್ ಮೊರೆ ಹೋಗಿದ್ದು, ಅಲ್ಲಿ ಅವರ ಅರ್ಜಿ ವಜಾಗೊಂಡಿರುವುದಾಗಿ ಮಾಹಿತಿ ಇದೆ. ಇದರ ಮಧ್ಯೆ ಜೆಎಂಎಫ್ಸಿ ನ್ಯಾಯಾಲಯವು ಜಮೀನು ಮಾಲೀಕರಿಗೆ ಯಾರೂ ತೊಂದರೆ ನೀಡಬಾರದು, ಒಂದು ವೇಳೆ ತೊಂದರೆ ನೀಡಿದರೆ ಪೋಲೀಸರು ಅವರಿಗೆ ರಕ್ಷಣೆ ನೀಡಬೇಕೆಂದು ಆದೇಶ ನೀಡಿತ್ತು.
ಇಂದು ಜಮೀನು ಮಾಲೀಕರು ಬಂದು ಟ್ರ್ಯಾಕ್ಟರ್ ಮೂಲಕ ಉಳುಮೆ ಮಾಡುವ ಸಂದರ್ಭದಲ್ಲಿ ಗ್ರಾಮಸ್ಥರು ತಡೆಹಿಡಿದು ವಾಗ್ವಾದ ನಡೆಸಿದ ಹಿನ್ನೆಲೆಯಲ್ಲಿ ಮಾಲೀಕರು ಪೋಲೀಸರಿಗೆ ಮಾಹಿತಿ ನೀಡಿದ್ದು, ಎಂ ಕೆ ದೊಡ್ಡಿ ಪೋಲಿಸ್ ಠಾಣೆಯ ಪ್ರೊಬೆಷನರಿ ಡಿವೈಎಸ್ಪಿ ಸ್ನೇಹರಾಜ್ ಮತ್ತು ಸಿಬ್ಬಂದಿಗಳು ಭೇಟಿ ನೀಡಿ, ಪ್ರಕರಣದ ಸತ್ಯಾಸತ್ಯತೆಯನ್ನು ಗ್ರಾಮಸ್ಥರಿಗೆ ತಿಳಿ ಹೇಳಿ ಸಮಾಧಾನಿಸಿದ್ದಾರೆ. ಆದರೆ ಗ್ರಾಮಸ್ಥರು ಹೈಕೋರ್ಟ್ ನಲ್ಲಿ ಕೇಸು ಇದ್ದು, ಇತ್ಯರ್ಥ ಆಗುವವರೆಗೂ ಯಥಾಸ್ಥಿತಿ ಕಾಪಾಡಬೇಕೆಂದು ಪೋಲೀಸರಿಗೆ ಮನವಿ ಮಾಡಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಸ್ನೇಹರಾಜ್ ರವರು ನೀವು ಹೂಡಿರುವ ದಾವೆಗೆ ಸಂಬಂಧಿಸಿದಂತೆ, ತಡೆಯಾಜ್ಞೆ ಇದ್ದರೆ ನಾವು ಯಥಾಸ್ಥಿತಿ ಕಾಪಾಡುತ್ತೇವೆ. ಆದರೆ ಸದ್ಯಕ್ಕೆ ಆದೇಶ ಮಾಲೀಕರ ಪರವಾಗಿ ಇರುವುದರಿಂದ ಹಾಗೂ ನ್ಯಾಯಾಲಯವು ಅವರಿಗೆ ರಕ್ಷಣೆ ನೀಡಲು ಸೂಚಿಸಿರುವುದರಿಂದ ಕಾನೂನು ಪ್ರಕಾರ ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in jobs »

ಅತಿಥಿ ಶಿಕ್ಷಕರ ಹಾಗೂ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
ರಾಮನಗರ, ಜೂ. 09: ರಾಮನಗರ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ, ಕಾಲೇಜು ಹಾಗೂ ಮೌಲಾನಾ ಆಜಾ಼ದ

ವಿಕಲಚೇತನರಿಂದ ಅರ್ಜಿ ಆಹ್ವಾನ
ರಾಮನಗರ, ಜೂ. 03: ಕನಕಪುರ, ರಾಮನಗರ, ಚನ್ನಪಟ್ಟಣ ಹಾಗೂ ಮಾಗಡಿ ತಾಲ್ಲೂಕುಗಳ ಗ್ರಾಮ ಪಂಚಾಯಿತಿ/ ನಗರಸಭೆ/ ಪುರಸಭೆಗಳಲ್ಲಿ ಗ್ರಾಮೀಣ ಪುನರ್ವಸತಿ ಯೋಜನ

ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ
ಚನ್ನಪಟ್ಟಣ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಚನ್ನಪಟ್ಟಣ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಇರುವ ಮುದುಗೆರೆ ಅರಣ್ಯ, ರಾಂಪುರ-, ಗೊಲ್ಲರದೊಡ್ಡಿ(ಮಿನ

ಉಚಿತ ಸೆಲ್ ಫೋನ್ ರಿಪೇರಿ ಮತ್ತು ಸರ್ವಿಸಿಂಗ್ ತರಬೇತಿಗೆ ಅರ್ಜಿ ಆಹ್ವಾನ
ರಾಮನಗರ:ಅ/31/20/ಶನಿವಾರ.
ಬಿಡದಿ ಬಳಿಯ ಕೆನರಾ ಬ್ಯಾಂಕ್ ನ ಎ.ಡಿ.ಪೈ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕರಿಗಾಗಿ 30 ದಿನಗಳ ಉಚಿತ ಸೆಲ್ ಫೋನ್ ರಿಪೇರಿ ಮತ್ತು ಸರ್ವಿಸಿಂಗ್. ತರಬೇತಿಯನ್ನು

ಉಚಿತ ಎಲೆಕ್ಟ್ರಿಕಲ್ ಮೋಟರ್ ರೀವೈಂಡಿಗ್ ಅಂಡ್ ಪಂಪ್ ಸೆಟ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ
ರಾಮನಗರ:ಅ/11/20/ಭಾನುವಾರ. ಬಿಡದಿ ಬಳಿಯ ಕೆನರಾ ಬ್ಯಾಂಕ್ ನ ಎ.ಡಿ.ಪೈ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕರಿಗಾಗಿ

ನರೇಗಾ ಅಕೌಂಟ್ಸ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ
ರಾಮನಗರ:ಆ/08/20/ಶನಿವಾರ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ (ನರೇಗಾ) ಸಮರ್ಪಕ ಅನುಷ್ಠಾನಕ್ಕಾಗಿ ರಾಮನಗರ ಜಿಲ್ಲಾ ಪಂಚಾಯತಿ ವ್

ಅಗ್ನಿಶಾಮಕ ಇಲಾಖೆಯಿಂದ ೧೫೬೭ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು: ಜೂ:೨೦/೨೦/ಶನಿವಾರ. ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ಅಗ್ನಿಶಾಮಕ ಸಿಬ್ಬಂದಿಯ ೧೫೬೭ ವಿವಿಧ ವೃಂದಗಳ ಹು

ಗುತ್ತಿಗೆ ಆಧಾರದ ಮೇಲೆ ವೈದ್ಯರನ್ನು ನೇಮಕ ಮಾಡಿಕೊಳ್ಳಲು ಸಂದರ್ಶನ
ರಾಮನಗರ:ಏ/೦೩/೨೦/ಶುಕ್ರವಾರ. ರಾಜ್ಯಾದ್ಯಂತ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖ
ಸೇನೆ ಹುದ್ದೆಗೆ ಅರ್ಜಿ ಹಾಕಿ
ಹೊಸದಿಲ್ಲಿ: ಭಾರತೀಯ ಸೇನೆಯ ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸಶಸ್ತ್ರ ಪಡೆಯ ತಳಮಟ್ಟದಲ್ಲಿ ಹೋರಾಟ ನಡೆಸುವ ಘಟಕದ 175 ವಿವಿಧ ಶ್ರೇಣಿಯ ಹುದ್ದೆಗಳನ್ನು ತುಂಬಲಾಗುತ್ತದೆ. ಮಹ
2,997 ಅತಿಥಿ ಉಪನ್ಯಾಸಕರ ನೇಮಕ
ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಖಾಲಿ ಇರುವ 2,997 ಉಪನ್ಯಾಸಕರ ಹುದ್ದೆಗೆ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿ
ಪ್ರತಿಕ್ರಿಯೆಗಳು