2,997 ಅತಿಥಿ ಉಪನ್ಯಾಸಕರ ನೇಮಕ
ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಖಾಲಿ ಇರುವ 2,997 ಉಪನ್ಯಾಸಕರ ಹುದ್ದೆಗೆ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ದಕ್ಷಿಣ ಕನ್ನಡ- 217, ರಾಯಚೂರು-172, ಮೈಸೂರು- 154, ಹಾಸನ- 150,ತುಮಕೂರು- 141, ಬೆಳಗಾವಿ-125,ಬಾಗಲಕೋಟೆ-118, ಬಳ್ಳಾರಿ- 117, ಚಿಕ್ಕಮಗಳೂರು-111, ಕಲಬುರಗಿ ಮತ್ತು ಕೋಲಾರ- ತಲಾ 100, ಗದಗ- 86,ಕೊಪ್ಪಳ- 103 ಹಾಗೂ ಉಡುಪಿ-77 ಸೇರಿ ರಾಜ್ಯದ 32 ಶೈಕ್ಷಣಿಕ ಜಿಲ್ಲೆಗಳಲ್ಲಿ ಖಾಲಿ ಇರುವ 2,997 ಉಪನ್ಯಾಸಕರ ಹುದ್ದೆಗಳಿಗೆ ಅತಿ ಶೀಘ್ರದಲ್ಲೇ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳುವಂತೆ ಆಯಾ ಜಿಲ್ಲಾ ಉಪ ನಿರ್ದೇಶಕರಿಗೆ ನಿರ್ದೇಶಿಸಲಾಗಿದೆ.
ಅತಿಥಿ ಉಪನ್ಯಾಸಕರಿಗೆ ಪ್ರತಿ ತಿಂಗಳು 9,000 ರೂ.ಗೌರವಧನ ನೀಡಲಾಗುತ್ತದೆ.2019ರ ಮಾರ್ಚ್ ಅಥವಾ ಕಾಯಂ ಉಪನ್ಯಾಸಕರ ನೇಮಕಾತಿಯವರೆಗೆ ಮಾತ್ರ ಎಂಬ ಷರತ್ತುಗಳೊಂದಿಗೆ ಅತಿಥಿ ಉಪನ್ಯಾಸಕರನ್ನು ಭರ್ತಿಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
2018-19ನೇ ಸಾಲಿನಲ್ಲಿ ಬಿ.ಇಡಿ ವ್ಯಾಸಂಗಕ್ಕೆ ತೆರಳಿರುವ ಉಪನ್ಯಾಸಕರ ಸ್ಥಾನಗಳನ್ನು ಒಳಗೊಂಡಂತೆ 3,376 ಹುದ್ದೆಗೆ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲು ಸರ್ಕಾರ ಅನುಮೋದನೆ ನೀಡಿತ್ತು. ಸರ್ಕಾರಿ ಪಿಯು ಕಾಲೇಜಿನಲ್ಲಿ ಕಾರ್ಯಭಾರ ಇಲ್ಲದ ಉಪನ್ಯಾಸಕರನ್ನು ಸರಿದೂಗಿಸಿದ ನಂತರ ಉಳಿದ 2,997 ಹುದ್ದೆಗೆ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲಾಗುತ್ತಿದೆ.
ಅತಿಥಿ ಉಪನ್ಯಾಸಕರ ನೇಮಕಾತಿ ನಂತರ ಆಯಾ ಜಿಲ್ಲೆಯ ಉಪ ನಿರ್ದೇಶಕರು,ಕಾಲೇಜಿನ ಹೆಸರು, ಅತಿಥಿ ಉಪನ್ಯಾಸಕರ ಹೆಸರು, ಮಾಸಿಕ ವೇತನ ಸೇರಿ ಎಲ್ಲ ವಿವರಗಳನ್ನು ಜುಲೈ 31ರೊಳಗೆ ಇಲಾಖೆಗೆ ಸಲ್ಲಿಸುವಂತೆ ಸೂಚಿಸಲಾಗಿದೆ.
Recent news in jobs »

ಅತಿಥಿ ಶಿಕ್ಷಕರ ಹಾಗೂ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
ರಾಮನಗರ, ಜೂ. 09: ರಾಮನಗರ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ, ಕಾಲೇಜು ಹಾಗೂ ಮೌಲಾನಾ ಆಜಾ಼ದ

ವಿಕಲಚೇತನರಿಂದ ಅರ್ಜಿ ಆಹ್ವಾನ
ರಾಮನಗರ, ಜೂ. 03: ಕನಕಪುರ, ರಾಮನಗರ, ಚನ್ನಪಟ್ಟಣ ಹಾಗೂ ಮಾಗಡಿ ತಾಲ್ಲೂಕುಗಳ ಗ್ರಾಮ ಪಂಚಾಯಿತಿ/ ನಗರಸಭೆ/ ಪುರಸಭೆಗಳಲ್ಲಿ ಗ್ರಾಮೀಣ ಪುನರ್ವಸತಿ ಯೋಜನ

ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ
ಚನ್ನಪಟ್ಟಣ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಚನ್ನಪಟ್ಟಣ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಇರುವ ಮುದುಗೆರೆ ಅರಣ್ಯ, ರಾಂಪುರ-, ಗೊಲ್ಲರದೊಡ್ಡಿ(ಮಿನ

ಉಚಿತ ಸೆಲ್ ಫೋನ್ ರಿಪೇರಿ ಮತ್ತು ಸರ್ವಿಸಿಂಗ್ ತರಬೇತಿಗೆ ಅರ್ಜಿ ಆಹ್ವಾನ
ರಾಮನಗರ:ಅ/31/20/ಶನಿವಾರ.
ಬಿಡದಿ ಬಳಿಯ ಕೆನರಾ ಬ್ಯಾಂಕ್ ನ ಎ.ಡಿ.ಪೈ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕರಿಗಾಗಿ 30 ದಿನಗಳ ಉಚಿತ ಸೆಲ್ ಫೋನ್ ರಿಪೇರಿ ಮತ್ತು ಸರ್ವಿಸಿಂಗ್. ತರಬೇತಿಯನ್ನು

ಉಚಿತ ಎಲೆಕ್ಟ್ರಿಕಲ್ ಮೋಟರ್ ರೀವೈಂಡಿಗ್ ಅಂಡ್ ಪಂಪ್ ಸೆಟ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ
ರಾಮನಗರ:ಅ/11/20/ಭಾನುವಾರ. ಬಿಡದಿ ಬಳಿಯ ಕೆನರಾ ಬ್ಯಾಂಕ್ ನ ಎ.ಡಿ.ಪೈ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕರಿಗಾಗಿ

ನರೇಗಾ ಅಕೌಂಟ್ಸ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ
ರಾಮನಗರ:ಆ/08/20/ಶನಿವಾರ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ (ನರೇಗಾ) ಸಮರ್ಪಕ ಅನುಷ್ಠಾನಕ್ಕಾಗಿ ರಾಮನಗರ ಜಿಲ್ಲಾ ಪಂಚಾಯತಿ ವ್

ಅಗ್ನಿಶಾಮಕ ಇಲಾಖೆಯಿಂದ ೧೫೬೭ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು: ಜೂ:೨೦/೨೦/ಶನಿವಾರ. ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ಅಗ್ನಿಶಾಮಕ ಸಿಬ್ಬಂದಿಯ ೧೫೬೭ ವಿವಿಧ ವೃಂದಗಳ ಹು

ಗುತ್ತಿಗೆ ಆಧಾರದ ಮೇಲೆ ವೈದ್ಯರನ್ನು ನೇಮಕ ಮಾಡಿಕೊಳ್ಳಲು ಸಂದರ್ಶನ
ರಾಮನಗರ:ಏ/೦೩/೨೦/ಶುಕ್ರವಾರ. ರಾಜ್ಯಾದ್ಯಂತ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖ
ಸೇನೆ ಹುದ್ದೆಗೆ ಅರ್ಜಿ ಹಾಕಿ
ಹೊಸದಿಲ್ಲಿ: ಭಾರತೀಯ ಸೇನೆಯ ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸಶಸ್ತ್ರ ಪಡೆಯ ತಳಮಟ್ಟದಲ್ಲಿ ಹೋರಾಟ ನಡೆಸುವ ಘಟಕದ 175 ವಿವಿಧ ಶ್ರೇಣಿಯ ಹುದ್ದೆಗಳನ್ನು ತುಂಬಲಾಗುತ್ತದೆ. ಮಹ
2,997 ಅತಿಥಿ ಉಪನ್ಯಾಸಕರ ನೇಮಕ
ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಖಾಲಿ ಇರುವ 2,997 ಉಪನ್ಯಾಸಕರ ಹುದ್ದೆಗೆ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿ
ಪ್ರತಿಕ್ರಿಯೆಗಳು