ಸುಂಕ ವಸೂಲಿಗಾಗಿ ಬಹಿರಂಗ ಹರಾಜು ಪ್ರಕ್ರಿಯೆ
ರಾಮನಗರ, ಜೂ. 17: ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಕಸಬಾ ಹೋಬಳಿಯ ವಂದಾರಗುಪ್ಪೆ ಗ್ರಾಮದ ಶ್ರೀ ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಬರುವ ಭಕ್ತಾದಿಗಳ ವಾಹನಗಳನ್ನು ನಿಲ್ಲಿಸಲು ತ್ರಿಚಕ್ರವಾಹನ, ಕಾರು, ಜೀಪು, ಬಸ್, ಕ್ಯಾಂಟರ್ ವಾಹನಗಳ ಮೇಲಿನ ಸುಂಕ ವಸೂಲಿ ಮಾಡುವ ಹಕ್ಕನ್ನು ಒಂದು ವರ್ಷದ ಅವಧಿಗೆ ರೂಢಿಸಿಕೊಳ್ಳಲು 2023ರ ಜುಲೈ 3 ರಂದು ಬೆಳಿಗ್ಗೆ 11.30ಕ್ಕೆ ಶ್ರೀ ಕೆಂಗಲ್ ಆಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ಸಾರ್ವಜನಿಕ ಬಹಿರಂಗ ಹರಾಜು ಮೂಲಕ ಜಿಲ್ಲಾಧಿಕಾರಿಗಳ ಕಚೇರಿಯ ಧಾರ್ಮಿಕ ದತ್ತಿ ತಹಶೀಲ್ದಾರ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು/ಸದಸ್ಯರು, ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ, ತಹಶೀಲ್ದಾರ್ ಕಚೇರಿ ಅಧಿಕಾರಿಗಳು, ಚನ್ನಪಟ್ಟಣ ಸಮಕ್ಷಮದಲ್ಲಿ ಹರಾಜು ನಡೆಸಲಾಗುವುದು.
ಇಚ್ಛೆ ಉಳ್ಳವರು ಷರತ್ತುಗಳಿಗೆ ಒಳಪಟ್ಟು ಬಹಿರಂಗ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ, ಶ್ರೀ ಕ್ಷೇತ್ರ ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನ, ಕಾರ್ಯನಿರ್ವಾಹಕ ಅಧಿಕಾರಿಯವರ ಕಾರ್ಯಾಲಯ, ವಂದಾರಗುಪ್ಪೆ, ಚನ್ನಪಟ್ಟಣ ತಾಲ್ಲೂಕು, ರಾಮನಗರ ಜಿಲ್ಲೆ. ದೂ.ಸಂಖ್ಯೆ: 080-29911639, 9449359233, 9449357033ಗೆ ಸಂಪರ್ಕಿಸುವಂತೆ ಶ್ರೀ ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in kanakapura »

ಡಾ. ಶ್ರೀ ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳ ನೇತೃತ್ವದಲ್ಲಿ ಗುರು ಕೋರಣ್ಯ
ಕನಕಪುರ: ಪರಮಪೂಜ್ಯ ಶ್ರೀಡಾ. ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವ

ಜೂ. 17ರಂದು ವಿದ್ಯುತ್ ಅದಾಲತ್ ಸಭೆ
ರಾಮನಗರ, ಜೂ. 15: ಕನಕಪುರ ತಾಲ್ಲೂಕಿನ ಕನಕಪುರ ವಿಭಾಗದ ವ್ಯಾಪ್ತಿಗೆ ಒಳಪಡುವ ಗ್ರಾಮಗಳಲ್ಲಿ ಜೂ. 17 ರಂದು ಬೆಳಿಗ್ಗೆ 11 ಗಂಟೆಗೆ ವಿದ್
ಪ್ರತಿಕ್ರಿಯೆಗಳು