ಗುರುವಾರ 120 ನಾಮಪತ್ರಗಳು ಸಲ್ಲಿಕೆ
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಗುರುವಾರ ಘಟಾನುಘಟಿ ನಾಯಕರು ನಾಮಪತ್ರ ಸಲ್ಲಿಸಿದ್ದು, ಕದನ ಕಣ ಇನ್ನಷ್ಟು ರಂಗೇರಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ಸಚಿವ ಡಿ.ಕೆ.ಶಿವಕುಮಾರ್, ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್, ಜೆಡಿಎಸ್ನ ಮಧು ಬಂಗಾರಪ್ಪ ಸೇರಿ 135 ಮಂದಿ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ಪ್ರಮುಖ ನಾಯಕರು
ಏಳು ಬಂಡಾಯ ಶಾಸಕರು ಗೆಲ್ಲುತ್ತೇವೆ : ಬಾಲಕೃಷ್ಣ
ಮದ್ದೂರು: ‘ಎಲ್ಲ ಏಳು ಬಂಡಾಯ ಜೆಡಿಎಸ್ ನಾಯಕರು ಈ ಚುನಾವಣೆಯಲ್ಲಿ ಗೆಲುವು ಸಾಧಿಸುವುದು ನಿಶ್ಚಿತ’ ಎಂದು ಮಾಗಡಿ ಕ್ಷೇತ್ರದ ಮಾಜಿ ಶಾಸಕ ಬಾಲಕೃಷ್ಣ ವಿಶ್ವಾಸ ವ್ಯಕ್ತಪಡಿಸಿದರು. ಮದ್ದೂರಿನ ಹೊಳೆ ಆಂಜನೇಯ ಸ್ವಾಮಿ, ಮದ್ದೂರಮ್ಮ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ‘ಚುನಾವಣೆಯಲ್ಲಿ ಗೆಲುವು–ಸೋಲು ಸಾಮಾನ್ಯ. ಎಲ್ಲರೂ ಪ್ರತಿಸ್ಪರ್ಧಿಗಳನ್ನು ಸೋಲಿಸುವ ಗುರಿಯೊಂದಿಗೆ ಅಖ
ಅನಾರೋಗ್ಯ ಇದ್ದರೂ ಪ್ರಚಾರ ನಡೆಸಿದ ಕುಮಾರಸ್ವಾಮಿ
ಮಡಿಕೇರಿ: ನಿರಂತರ ಪ್ರಚಾರದಲ್ಲಿ ತೊಡಗಿಕೊಂಡಿರುವ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ದ ಅವರು, ರಾತ್ರಿ ವಿರಾಜಪೇಟೆಯ ಅಂಬಟಿ ಗ್ರೀನ್ ರೆಸಾರ್ಟ್ನಲ್ಲಿ ತಂಗಿದ್ದರು. ಮಂಗಳವಾರ ಬೆಳಿಗ್ಗೆ ಜ್ವರದಿಂದ ಬಳಲುತ್ತಿದ್ದ ಅವರಿಗೆ ವೈದ್ಯರು ಚಿಕಿತ್ಸೆ ನೀಡಿ ವಿಶ್ರಾಂತಿಗೆ ಸೂಚಿಸಿದ್ದರು. ರೆಸಾರ್ಟ್ನಲ್ಲೇ ಬೆಳಿಗ್ಗೆ 11 ಗಂಟೆವರೆಗೆ
ಬಿಜೆಪಿ ಎರಡನೆಯ ಪಟ್ಟಿಯ ಅಭ್ಯರ್ಥಿಗಳ ವಿವರ
ಬೆಂಗಳೂರು: ಬಿಜೆಪಿಯ ಎರಡನೇ ಪಟ್ಟಿಯಲ್ಲಿ 82 ಅಭ್ಯರ್ಥಿಗಳ ಹೆಸರುಗಳು. ಅರಕಲಗೂಡು-ಹೆಚ್.ಯೋಗಾರಮೇಶ್ ಇಂಡಿ-ದಯಾಸಾಗರ್ ಪಾಟೀಲ್ ಭಟ್ಕಳ-ಸುನೀಲ್ ನಾಯಕ್ ಬಳ್ಳಾರಿ-ಸಣ್ಣ ಫಕೀರಪ್ಪ ಬೀಳಗಿ-ಮುರುಗೇಶ್ ನಿರಾಣಿ ಜಮಖಂಡಿ- ಶ್ರೀಕಾಂತ್ ಕುಲಕರ್ಣಿ ಬ್ಯಾಡಗಿ-ವಿರೂಪಾಕ್ಷಪ್ಪ ಬಳ್ಳಾರಿ ಬಳ್ಳಾರಿ ನಗರ-ಸೋಮಶೇಖರ ರೆಡ್ಡಿ ಬೈಂದೂರು-ಬಿ.ಸುಕುಮಾರ ಶೆಟ್ಟಿ
ನಾಮ ಪತ್ರ ಸಲ್ಲಿಕೆ ಇಂದಿನಿಂದ
ಬೆಂಗಳೂರು : ಮುಂದಿನ ಐದು ವರ್ಷ ರಾಜ್ಯವನ್ನು ಆಳುವವರ ಹಣೆ ಬರಹ ಬರೆಯುವ ವಿಧಾನಸಭಾ ಚುನಾವಣೆಯ ಅಧಿಕೃತ ಪ್ರಕ್ರಿಯೆಗೆ ಮಂಗಳವಾರ ರಾಜ್ಯದಾದ್ಯಂತ ಚಾಲನೆ ಸಿಗಲಿದೆ. ಆಯಾ ಕ್ಷೇತ್ರಗಳ ಚುನಾವಣಾಧಿಕಾರಿಗಳು ಅಧಿಸೂಚನೆ ಹೊರಡಿಸಲಿದ್ದು, ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. 224 ಕ್ಷೇತ್ರಗಳಲ್ಲಿ ಐದನ್ನು ಬಿಟ್ಟು ಉಳಿದ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳು ಯಾರೆಂಬುದು ಈಗಾಗಲೇ ಸ್ಪಷ್ಟವಾಗಿದೆ. ಬಿಜೆಪಿ ಇನ್ನು 70 ಕ್ಷೇತ್ರಗಳಲ್ಲಿನ ಹುರಿಯಾಳುಗಳನ್ನು ಮಾತ್ರ ಆಯ್
ಈ ಬಾರಿ ಶೇಕಡಾ97 ರಷ್ಟು ಮಳೆ ಬೀಳುತ್ತದೆ
ನವದೆಹಲಿ : ಈ ಬಾರಿಯ ಮುಂಗಾರು ಸಾಮಾನ್ಯವಾಗಿರಲಿದೆ. ದೀರ್ಘಾವಧಿ ಸರಾಸರಿಯ ಶೇ 97ರಷ್ಟು ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಸೋಮವಾರ ಘೋಷಿಸಿದೆ. ಈ ಅಂದಾಜಿಗಿಂತ ಶೇ 5ರಷ್ಟು ಹೆಚ್ಚು ಅಥವಾ ಕಡಿಮೆ ಮಳೆ ಆಗಬಹುದು ಎಂದು ಇಲಾಖೆ ಮಹಾನಿರ್ದೇಶಕ ಕೆ.ಜೆ. ರಮೇಶ್ ಹೇಳಿದ್ದಾರೆ. ಭಾರತದಲ್ಲಿ ವರ್ಷದಲ್ಲಿ ಸುರಿಯುವ ಒಟ್ಟು ಮಳೆಯ ಶೇ 70ರಷ್ಟು ಮುಂಗಾರು ಅವಧಿಯಲ್ಲಿಯೇ ಆಗುತ್ತದೆ. ಅಕ್ಕಿ, ಗೋಧಿ, ಕಬ್ಬು ಮತ್ತು ಧಾನ್ಯಗಳ ಉತ್ಪಾದಕತೆಯು ಮುಂಗಾರು ಮಳೆಯನ್
ದೇವೇಗೌಡ ಮತ್ತು ಮಕ್ಕಳನ್ನು ರಾಜಕೀಯವಾಗಿ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ
ಅರಕಲಗೊಡು: ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನ ಕುಟುಂಬವನ್ನು ರಾಜಕೀಯದಿಂದ ಮುಗಿಸುವ ಮಾತುಗಳನ್ನಾಡುತ್ತಿದ್ದಾರೆ. ಇವರನ್ನು 1995ರಲ್ಲಿ ನಾನು ಪರಿಚಯ ಮಾಡದೇ ಇದ್ದಲ್ಲಿ ಇಂದು ಇಂತಹ ಮಾತನ್ನಾಡುತ್ತಿರಲಿಲ್ಲ. ಇಂತಹವರು ಸಮಯಸಾಧಕರು. ದೇವೇಗೌಡ ಮತ್ತು ಮಕ್ಕಳನ್ನು ರಾಜಕೀಯವಾಗಿ ಮುಗಿಸಲು ಯಾರಿಂದಲು ಸಾಧ್ಯವಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ನುಡಿದರು. ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಸಿದ್ದರಾಮಯ್ಯ ಅವರ ದುರಹಂಕಾರದ ಮಾತಿಗೆ ಮ
ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿ ಪ್ರಕಟ
ನವದೆಹಲಿ: ಕರ್ನಾಟಕ ವಿಧಾನಸಭೆಗೆ ಇದೇ ಬರುವ ಮೇ 12ರಂದು ನಡೆಯಲಿರುವ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ತನ್ನ ಪಕ್ಷದ ಹುರಿಯಾಳುಗಳ ಪಟ್ಟಿಯನ್ನು ಕಾಂಗ್ರೆಸ್ ವರಿಷ್ಠರು ಅಂತಿಮಗೊಳಿಸಿದ್ದು ಆ ಪಟ್ಟಿ ಇದೀಗ ಹೊರಬಿದ್ದಿದೆ. ಒಟ್ಟು 224 ಕ್ಷೇತ್ರಗಳಲ್ಲಿ 'ಕೈ' ಹೈಕಮಾಂಡ್ ಇದೀಗ 218 ಕ್ಷೇತ್ರಗಳ ಪಟ್ಟಿಯನ್ನು ಮಾತ್ರ ಬಿಡುಗಡೆ ಮಾಡಲಾಗಿದ್ದು 5 ಮತಕ್ಷೇತ್ರಗಳ ಅಭ್ಯರ್ಥಿ ಪಟ್ಟಿಯನ್ನು ಇನ್ನಷ್ಟೇ ಬಿಡುಗಡೆ ಮಾಡಬೇಕಾಗ
ಸಿದ್ದರಾಮಯ್ಯ ಅವರಿಗೂ ರಾಮನಗರಕ್ಕೂ ಏನು ಸಂಬಂಧ? : ಕುಮಾರಸ್ವಾಮಿ ಪ್ರಶ್ನೆ
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಮನಗರ ಹಾಗೂ ಚನ್ನಪಟ್ಟಣದಲ್ಲಿ ಒಂದು ತಿಂಗಳು ಕ್ಯಾಂಪ್ ಮಾಡಲಿ. ಆ ಎರಡು ಕ್ಷೇತ್ರಗಳಿಗೆ ನಾನು ಪ್ರಚಾರಕ್ಕೆ ಹೋಗುವುದಿಲ್ಲ. ಅವರೇನು ಮಾಡುತ್ತಾರೆ ಮಾಡಿಕೊಳ್ಳಲಿ. ಅಲ್ಲಿ ನಾನೇ ಗೆಲ್ಲುವುದು. ರಾಮನಗರದಲ್ಲಿ ನನ್ನ ನಡವಳಿಕೆಗೂ ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯ ಅವರ ನಡವಳಿಕೆಗೂ ಹೋಲಿಕೆ ಮಾಡಬೇಡಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ಮೈಸೂರಿನ ಕೋಟೆಹುಂಡಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅ
ಮುಖ್ಯ ಮಂತ್ರಿಗೆ ಸೋಲು ಖಚಿತ : ಜಗದೀಶ್ ಶೆಟ್ಟರ್
ಹುಬ್ಬಳ್ಳಿ: ಸೋಲಿನ ಭೀತಿಯಲ್ಲಿ ಕಂಗೆಟ್ಟಿರುವ ಸಿದ್ದರಾಮಯ್ಯ ಎರಡು ಕ್ಷೇತ್ರದಲ್ಲಲ್ಲ, ನಾಲ್ಕು ಕ್ಷೇತ್ರದಲ್ಲಿ ಸ್ಪರ್ಧಿಸಿದರೂ ಸೋಲು ಮಾತ್ರ ಕಟ್ಟಿಟ್ಟ ಬುತ್ತಿ ಎಂದು ವಿಧಾನಸಭೆ ಪ್ರತಿಪಕ್ಷ ಜಗದೀಶ ಶೆಟ್ಟರ್ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಪರ ಅಲೆ ಆರಂಭವಾಗಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ ಪಾಳೆಯದಲ್ಲಿ ನಡುಕ ಆರಂಭವಾಗಿದೆ. ಈ ಎರಡೂ ಪಕ್ಷದ ಮುಖಂಡರಿಗೆ ತಾವು ಸೋಲುವುದು ಖಚಿತ ಎನ್ನುವುದು ಅರಿವಾ