
ಅಪಾರ ಮಹಿಳೆಯರು ಉತ್ಸಾಹದಿಂದ ಭಾಗವಹಿಸಿದ ಮಿಸೆಸ್ ಇಂಡಿಯಾ ಕರ್ನಾಟಕ 2018ರ ಆಡಿಷನ್
ಬೆಂಗಳೂರು : ಮಿಸೆಸ್ ಇಂಡಿಯಾ-ಕರ್ನಾಟಕ 2018 ರ ಆಡಿಷನ್ ಚಾನ್ಸೆರಿ ಪೆವಿಲಿಯನ್ನಲ್ಲಿ ಶನಿವಾರ ಅದ್ಧೂರಿಯಾಗಿ ಪ್ರಾರಂಭವಾಯಿತು. ರಾಜ್ಯದ ಮೂಲೆ ಮೂಲೆಯಿಂದ ಮಹಿಳೆಯರು ಅಪಾರ ಸಂಖ್ಯೆಯಲ್ಲಿ ನೆರೆದಿದ್ದು ಅವರ ಸಾಮಥ್ರ್ಯ, ಪ್ರತಿಭೆ ಹಾಗೂ ಸೌಂದರ್ಯದ ಮೂಲಕ ತೀವ್ರ ಸ್ಪರ್ಧೆ ಒಡ್ಡಿದರು. ಭಾಗವಹಿಸಿದ ಎಲ್ಲರಿಗೂ ಸಂಘಟಕರು ಆತ್ಮೀಯ ಸ್ವಾಗತ ನೀಡಿ ಸ್ಪರ್ಧೆಯ ನೀತಿ ನಿಯಮಗಳನ್ನು ವಿವರಿಸಿದರು. ಆಡಿಷನ್ ಪ್ರಾರಂಭವಾದ ನಂತರ ಸ್ಪರ್ಧಿಗಳಿಗೆ ಕ್ಯಾಟ್ ವಾಕ್ ನಡೆಸಿ ತಮ್ಮ ಪರಿಚಯ ಹೇಳಿಕೊಳ್ಳಲು ಸೂಚಿ

ರೈತ ಮೃತಪಟ್ಟಲ್ಲಿ ವಿಮೆ ಪಾವತಿ : ಪಿ. ನಾಗರಾಜ್ ಅವರ ರೈತಪರ ಕಾಳಜಿಯ ಕೆಲಸ
ಗ್ರಾಮೀಣ ಪ್ರದೇಶದ ರೈತರನ್ನು ಹೈನುಗಾರಿಕೆಯತ್ತ ಆಕರ್ಷಿಸಲು ಹಲವು ಯೋಜನೆಗಳನ್ನು ರೂಪಿಸಿದ್ದು, ಸಹಕಾರ ಸಂಘಕ್ಕೆ ಹಾಲು ಸರಬರಾಜು ಮಾಡಿದ 70 ವರ್ಷ ಮೇಲ್ಪಟ್ಟ ರೈತರಿಗೂ 50 ಸಾವಿರ ರೂಪಾಯಿ ವಿಮೆ ನೀಡಲು ಬೆಂಗಳೂರು ಹಾಲು ಒಕ್ಕೂಟ ತೀರ್ಮಾನಿಸಿರುವುದು ಸ್ವಾಗತಾರ್ಹ. 70 ವರ್ಷ ಮೇಲ್ಪಟ್ಟ ರೈತರಿಗೆ ವಿಮೆ ಹಣ ನೀಡುತ್ತಿರುವುದು ದೇಶದ ಹೈನುಗಾರಿಕೆಯ ಇತಿಹಾಸದಲ್ಲಿಯೆ ಪ್ರಥಮ ಯೋಜನೆಯಾಗಿದೆ. ಇದರಿಂದಾಗಿ ಶ್ರಮಿಕ ರೈತನ ಕೊನೆಯ ದಿನಗಳಲ್ಲಿ ಆತನ ಕುಟುಂಬಕ್ಕೆ ಅಲ್ಪ ಆರ್ಥಿಕ ಆಸರೆ ದೊರೆತ

ಜಿಲ್ಲಾಧಿಕಾರಿ ಡಾ.ಬಿ.ಆರ್. ಮಮತಾ ಅವರಿಗೆ ಲಕ್ಷ್ಮೀದೇವಿ ಪ್ರಶಸ್ತಿ ಪ್ರಧಾನ
ಬೆಂಗಳೂರು : ನಾಡಪ್ರಭು ರಾಜ್ಯ ಒಕ್ಕಲಿಗರ ಕೇಂದ್ರದ ದಶಮಾನೋತ್ಸವ ನಿಮಿತ್ತ ಬೆಂಗಳೂರಿನ ಕೆಂಗಲ್ ಹನುಮಂತಯ್ಯ ಕಲಾಸೌಧದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಮನಗರ ಜಿಲ್ಲಾಧಿಕಾರಿ ಡಾ.ಬಿ.ಆರ್.ಮಮತಾ ಅವರಿಗೆ ಮಹಾತ್ಯಾಗಿ ಲಕ್ಷೀದೇವಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ನಿವೃತ್ತ ನ್ಯಾಯಮೂರ್ತಿ ಚಂದ್ರಶೇಖರಯ್ಯ, ರಾಜ್ಯ ಒಕ್ಕಲಿಗರ ಕೇಂದ್ರದ ಅಧ್ಯಕ್ಷ ಲಕ್ಕೇಗೌಡ, ಗೌರವಾಧ್ಯಕ್ಷ ಕೆ.ಬಾಗೇಗೌಡ, ಆಡಳಿತ ಲೆಕ್ಕಪರಿಶೋಧಕರಾದ ಸಾಮಾಜಿಕ ಕಾರ್ಯಕರ್ತೆ ಶಾಂತಾ ರಾಮಸ್ವಾಮಿ, ಪಾಲಿಕೆ ಸದಸ್ಯ ಕೆಂಪೇಗೌಡ ಮತ
ಶೇ ೪೫% ರಷ್ಟು ವೇತನ ಹೆಚ್ಚಿಸಬೇಕು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಂದು ಸಲ್ಲಿಸಲಾದ ಆರನೇ ವೇತನ ಆಯೋಗದ ಶಿಫಾರಸ್ಸಿಗೆ ಪ್ರತಿಕ್ರಿಯಿಸಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ.ಪಿ. ಮಂಜೇಗೌಡ ಅವರು "ರಾಜ್ಯ ಸರ್ಕಾರಕ್ಕೆ ಆರನೇ ವೇತನ ಆಯೋಗ ವರದಿ ಸಲ್ಲಿಸಿರುವುದನ್ನು ನಾವು ಸ್ವಾಗತಿಸುತ್ತೆವೆ. ಆದರೆ ವೇತನ ಹೆಚ್ಚಳದ ಬಗ್ಗೆ ನೀಡಿರುವ ಶಿಫಾರಸ್ಸಿನಿಂದ ನಮಗೆ ಸ್ವಲ್ಪ ಆಘಾತ ಉಂಟಾಗಿದೆ. ಆಯೋಗವು ಕೇವಲ ೩೦% ವೇತನ ಹೆಚ್ಚಿಸುವಂತೆ ಸರ್ಕಾರಕ್ಕೆ ಶಿಫಾರಸು ಮಾಡಿರುವುದು ರಾಜ್ಯ ಸರ್ಕ

ಶಾಸ್ತ್ರೀಯ ಸಂಗೀತವನ್ನು ಸಾಧನೆ ಮಾಡುವ ವಿದ್ಯಾರ್ಥಿಗಳು ಜಗತ್ತಿಗೇ ಪ್ರಭೆ ಚೆಲ್ಲುವ ಪ್ರಖರ ಸೂರ್ಯನಂತೆ
ಬೆಂಗಳೂರು : ನಗರದ ರಾಜರಾಜೇಶ್ವರಿನಗರದಲ್ಲಿರುವ ಸ್ವರಮೇಧಾ ಇಂಟರ್ ನ್ಯಾಷನಲ್ ಮ್ಯೂಸಿಕ್ ಅಕಾಡೆಮಿಯ 2017-18ನೆಯ ಶೈಕ್ಷಣಿಕ ವರ್ಷದ ವಾರ್ಷಿಕೋತ್ಸವ ಕಳೆದ ಭಾನುವಾರ ಜನವರಿ ಇಪ್ಪತ್ತೊಂದರಂದು ರಾಜರಾಜೇಶ್ವರಿನಗರದ ಐಡಿಯಲ್ ಹೋಮ್ಸ್ ಟೌನ್ ಶಿಪ್ ನ ಗುಡ್ಡದ ಮೇಲಿರುವ ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿ ಕಾಲೇಜಿನ ಒಳಾಂಗಣ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿಜಯನಗರದ ಹೆಚ್.ಎನ್ ರಾಘವೇಂದ್ರ ರಾವ್ ಗುರೂಜಿ ಶಾಸ್ತ್ರೀಯ ಸಂಗೀತವನ್ನು ಸಾಧನೆ ಮಾಡುವ ವಿದ್ಯ
ಮಹಾಮಸ್ತಕಾಭಿಷೇಕ ಸಂದರ್ಭದಲ್ಲಿ ತ್ಯಾಜ್ಯ ನೀರು ಸಂಸ್ಕರಿಸಲು ಕೊಳಚೆ ನೀರು ಶುದ್ಧೀಕರಣ ಘಟಕ ಸ್ಥಾಪನೆ
ಶ್ರವಣಬೆಳಗೊಳ : ಶ್ರವಣಬೆಳಗೊಳದಲ್ಲಿ ಈ ಬಾರಿ ಮಹಾಮಸ್ತಕಾಭಿಷೇಕದ ಸಂದರ್ಭದಲ್ಲಿ ಉಂಟಾಗಬಹುದಾದ ಕೊಳಚೆ ನೀರಿನ ಸಮಸ್ಯೆಯನ್ನು ವೈಜ್ಞಾನಿಕವಾಗಿ ನಿರ್ವಹಿಸಲು ಜಿಲ್ಲಾಡಳಿತ ಸಜ್ಜಾಗಿದೆ. ಇಲ್ಲಿ ನಿರ್ಮಾಣವಾಗಿರುವ 12 ತಾತ್ಕಾಲಿಕ ನಗರಗಳಲ್ಲಿನ ಕೊಳಚೆ ನೀರನ್ನು ಶುದ್ಧೀಕರಿಸಲು ಒಂದು ಅತ್ಯಾಧುನಿಕ ಕೊಳಚೆ ನೀರಿನ ಸಂಸ್ಕರಣ ಘಟಕವನ್ನು ಸ್ಥಾಪಿಸಿದೆ. ಮಹಾಮಸ್ತಕಾಭಿಷೇಕದಲ್ಲಿ ಲಕ್ಷಾಂತರ ಮಂದಿ ಭಾಗವಹಿಸುತ್ತಿರುವ ಹಿನ್ನಲೆಯಲ್ಲಿ ಒಳಚರಂಡಿ ನೀರನ್ನು ಶುದ್ಧೀಕರಿಸುವ ಸಲುವಾಗಿ
ಪಿಯು ಉಪನ್ಯಾಸಕರ ವೇಳಾಪಟ್ಟಿ ಪ್ರಟ
ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಉಪನ್ಯಾಸಕರ ಹುದ್ದೆಗಳ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಿದೆ.* *ನಾಲ್ಕು ದಿನಗಳ ಕಾಲ ಪರೀಕ್ಷೆ ನಡೆಯಲಿದ್ದು, ಅಭ್ಯರ್ಥಿಗಳ ಮಾಹಿತಿಗಾಗಿ ವಿಷಯವಾರು ವೇಳಾಪಟ್ಟಿಯನ್ನು ಪ್ರಾಧಿಕಾರದ ವೆಬ್ಸೈಟ್ ನಲ್ಲಿ ಸದ್ಯದಲ್ಲಿಯೇ ಪ್ರಕಟಿಸಲಾಗುವುದು ಎಂದು ಪ್ರಕಟಣಿಯಲ್ಲಿ ತಿಳಿಸಲಾಗಿದೆ.* *ಪರೀಕ್ಷೆಗಳು ನಡೆಯುವ ದಿನಾಂಕ: 23-02-2018, 24-02-2018, 25-02-2018 ಮತ್ತು 26-02-2018

ಹಿರಿಯ ಚಿತ್ರ ನಟ ಚಂದ್ರಶೇಖರ್ ನಿಧನ
ಹಿರಿಯ ನಟ,‘ಎಡಕಲ್ಲು ಗುಡ್ಡದ ಮೇಲೆ’ ಚಿತ್ರದ ಖ್ಯಾತಿಯ ಕೂದುವಳ್ಳಿ ಚಂದ್ರಶೇಖರ್ ಅವರು ಹೃದಯಾಘಾತದಿಂದ ಕೆನಡಾದಲ್ಲಿ ಶನಿವಾರ ನಿಧನರಾದರು. ಬಾಲ ನಟನಾಗಿ ಚಿತ್ರರಂಗ ಪ್ರವೇಶಿಸಿದ್ದ ಚಂದ್ರಶೇಖರ್, ವಿಷ್ಣುವರ್ಧನ್, ರಾಜ್ಕುಮಾರ್ ಸೇರಿದಂತೆ ಹಲವು ನಟರೊಂದಿಗೆ ನಟಿಸಿದ್ದರು.ಪುಟ್ಟಣ್ಣ ಕಣಗಾಲ್ ಗರಡಿಯಲ್ಲಿ ಅರಳಿದ ಪ್ರತಿಭೆ ಈ ಚಂದ್ರಶೇಖರ್. ಶಿವಲಿಂಗ, ಅಸ್ತಿತ್ವ, ರೋಸ್, ಕಾರಂಜಿ, ಜೀವ, ಪೂರ್ವಾಪರ, ಮಾನಸ ಸರೋವರ ಸೇರಿದಂತೆ

ಮುಖ್ಯಮಂತ್ರಿ ಹುದ್ದೆಗಾಗಿ ತಾಳ್ಮೆಯಿಂದ ಕಾಯುತ್ತೇನೆ : ಡಿ.ಕೆ. ಶಿವಕುಮಾರ್
ರಾಮನಗರ : ಮುಂದಿನ ಮುಖ್ಯಮಂತ್ರಿ ನಾನೇ ಎಂದು ಎಲ್ಲಿಯೂ ಹೇಳಿಲ್ಲ. ಅರ್ಜೆಂಟ್ ನಲ್ಲಿ ಇರುವವರು ರೇಸ್ ಮುಗಿಸಲಿ. ತಾಳ್ಮೆಯಿಂದ ಕಾಯಲು ನಾನು ತಯಾರಿz್ದÉೀನೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 69ನೇ ಗಣರಾಜ್ಯೋತ್ಸವ ಸಮಾರಂಭದ ನಂತರ ಮಾಧ್ಯಮದವ ಪ್ರಶ್ನೆಗಳಿಗೆ ಅವರು ಉತ್ತರಿಸಿದರು. ಮುಖ್ಯಮಂತ್ರಿ ಹುದ್ದೆ ವಿಚಾರದಲ್ಲಿ ನಾನು ಯಾರಿಗೂ ಅರ್ಜೆಂಟ್ ಮಾಡಬೇಡಿ ಎಲ್ಲರದು ಮುಗಿಯಲಿ ಎಂದಷ್ಟೇ ಹೇಳಿz್ದÉೀನೆ. ಶ