ಅಂತರಾಷ್ಟ್ರೀಯ ಯೋಗೋತ್ಸವದಲ್ಲಿ ವಿ. ಸಮೀಕ್ಷಾ ಸಾಧನೆ
ಚನ್ನಪಟ್ಟಣ: ಮಲೇಶಿಯಾದ ಕ್ಲಾಂಗ್ನಲ್ಲಿ ನಡೆದ ಅಂತರಾಷ್ಟ್ರೀಯ ಯೋಗೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ತಾಲೂಕಿನ ಸೌಭಾಗ್ಯ ಯೋಗ ಕೇಂದ್ರ ಯೋಗಪಟು ವಿ.ಸಮೀಕ್ಷ ದ್ವಿತೀಯ ಸ್ಥಾನ ಪಡೆಯುವ ಮೂಲಕ ತಾಲೂಕಿನ ಕೀರ್ತಿ ಹೆಚ್ಚಿಸಿದ್ದಾರೆ.
ಮಲೇಶಿಯಾದ ಸೆಲಂಗಾರ್ ಯೋಗಾ ಸೊಸೈಟಿ ಮಾ.22 ರಿಂದ 28 ವರೆಗೆ ಆಯೋಜಿಸಿದ್ದ ಉತ್ಸವದಲ್ಲಿ ಎಸ್ಜಿಎಸ್ ಇಂಟರ್ ನ್ಯಾಷನಲ್ ಯೋಗಾ ಪೌಂಢೇಷನ್ ವತಿಯಿಂದ ಭಾರತವನ್ನು ಪ್ರತಿನಿಧಿಸಿದ ಸಮೀಕ್ಷಾ, ಕಲಾ ಯೋಗ ವಿಭಾಗದಲ್ಲಿ ದ್ವಿತೀಯ ಬಹುಮಾನ, ಉಳಿದೆರಡು ವಿಭಾಗದಲ್ಲಿ ತೃತೀಯ ಬಹುಮಾನ ಪಡೆದಿದ್ದಾರೆ.
ಅಂತರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಬಹುಮಾನ ಪಡೆದಿರುವ ಸಮೀಕ್ಷಾ ಅವರನ್ನು ತಾಲೂಕಿನ ವಿವಿಧ ಸಂಘ ಸಂಸ್ಥೆಗಳು, ಕ್ರೀಡಾಪಟುಗಳು ಅಭಿನಂದಿಸಿದ್ದಾರೆ.
ಪರಿಚಯ: ಕಳೆದ 30 ವರ್ಷಗಳಿಂದ ತಾಲೂಕಿನ ಅಸಂಖ್ಯಾತ ಜನತೆಗೆ ಯೋಗ ತರಬೇತಿ ನೀಡುತ್ತಾ ಬಂದಿರುವ ಸೌಭಾಗ್ಯ ಯೋಗಾ ಕೇಂದ್ರದ ಸಂಸ್ಥಾಪಕ ಕಾರ್ಯದರ್ಶಿ ಜೆ.ಎನ್.ಸೌಭಾಗ್ಯ ಅವರ ಪುತ್ರಿಯಾದ ಸಮೀಕ್ಷಾ, ತಮ್ಮ ತಾಯಿಯನ್ನೇ ಗುರುವಾಗಿ ಸ್ವೀಕರಿಸಿ ತಮ್ಮ 5ನೇ ವಯಸ್ಸಿನಿಂದಲೇ ಯೋಗ ಅಭ್ಯಾಸ ಆರಂಭಿಸಿದರು.
ಎಂಟೆಕ್ ಪದವೀಧರೆಯಾಗಿರುವ ಸಮೀಕ್ಷಾ ಶಿಕ್ಷಣದ ಜತೆಗೆ ಯೋಗಾಸನವನ್ನು ಅಭ್ಯಾಸ ಮಾಡಿಕೊಂಡು ಬಂದಿರುವ ಇವರು ರಾಜ್ಯ ಮತ್ತು ರಾಷ್ಟ್ರ ಮಟ್ಟದ ಹಲವಾರು ಯೋಗ ಸ್ಪರ್ಧೆಯಲ್ಲಿ ಪಾಲ್ಗೊಂಡು ಹಲವಾರು ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಇದುವರೆಗೆ ಯೋಗಕ್ಷೇತ್ರದಲ್ಲಿ ಇವರು ಮಾಡಿರುವ ಸಾಧನೆಯನ್ನು ಗುರುತಿಸಿ ವಿವಿಧ ಸಂಸ್ಥೆಗಳು ಹಲವಾರು ಬಿರುದು ನೀಡಿ ಗೌರವಿಸಿವೆ.2009ರಲ್ಲಿ ಎಸ್ಜಿಎಸ್ ಇಂಟನ್ರ್ಯಾಷನಲ್ ಯೋಗ ಫೌಂಡೇಶನ್ ಮತ್ತು ರೀಸರ್ಚ್ ಫೌಂಡೇಶನ್ ಯೋಗ ಸಾಧಕಿ ಬಿರುದು ನೀಡಿತು.2010ರಲ್ಲಿ ಕರ್ನಾಟಕ ಸೌತ್ ಝೋನ್ ಅಸೋಸಿಯೇಷನ್ ಯೋಗ ಸಾಧಕಿ ಗೌರವ ಮತ್ತು ವಿಶ್ವಪ್ರಕೃತಿ ಯೋಗ ಕೇಂದ್ರದಿಂದ 'ಭಾರತ ಯೋಗ ನಿಧಿ ಪ್ರಶಸ್ತಿ ನೀಡಿ ಗೌರವಿಸಿವೆ.
ಇವರ ಯೋಗ ಸಾಧನೆಯನ್ನು ಗುರುತಿಸಿದ ಎಸ್ಜಿಎಸ್ ಯೋಗಪೌಂಢೇಷನ್ ಇವರನ್ನು ಅಂತರ್ರಾಷ್ಟ್ರೀಯ ಯೋಗೋತ್ಸವಕ್ಕೆ ಆಯ್ಕೆ ಮಾಡಿತ್ತು. ಯೋಗೋತ್ಸವದಲ್ಲಿ ಉತ್ತಮ ಪ್ರದರ್ಶನ ನೀಡಿದ ಸಮೀಕ್ಷಾ ಎಲ್ಲಾ ವಿಭಾಗದಲ್ಲಿ ಉತ್ತಮ ಪ್ರದರ್ಶನ ನೀಡಿ ಬಹುಮಾನ ಪಡೆಯುವ ಮೂಲಕ ತಮ್ಮ ಪ್ರತಿಭೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ವಿಸ್ತಾರ ಗೊಳಿಸಿದ್ದಾರೆ.
Recent news in karnataka »
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ರಾಮನಗರ, ಫೆ. 02 : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ
ಸಂವಿಧಾನ ಜಾಗೃತಿ ಜಾಥಾ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ
ಪ್ರತಿಕ್ರಿಯೆಗಳು