ಮಂಜುಳಾ ಮರಿದೇವರು ಬಿಜೆಪಿಗೆ ?
ರಾಮನಗರ: ರಾಜಕೀಯವಾಗಿ ರಾಮನಗರ ವಿಧಾನಸಭಾ ಕ್ಷೇತ್ರ ಒಂದಲ್ಲಾ ಒಂದು ಸುದ್ದಿಗೆ ಹೆಸರು ವಾಸಿಯಾಗಿದ್ದು. ಚುನಾವಣೆ ಹೊಸ್ತಿಲಲ್ಲಿಯೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಪ್ರಬಲ ಪೈಪೋಟಿ ನೀಡಿದ್ದ ದಿವಂಗತ ಮರಿದೇವರು ಪತ್ನಿ ಮಂಜುಳಾ ಅವರ ನಿವಾಸದಲ್ಲಿ ಯಡಿಯೂರಪ್ಪ ಅವರ ಆದೇಶದ ಮೇರೆಗೆ ಬಿಜೆಪಿ ಮುಖಂಡ ಎಂ.ರುದ್ರೇಶ್ ಮತ್ತು ಮುಖಂಡರ ಬೇಟಿ ಕುತೂಹಲ ಮೂಡಿಸಿದೆ.
ವಿದ್ಯಾನಗರದಲ್ಲಿರುವ ಮಂಜುಳಾ ಅವರ ನಿವಾಸಕ್ಕೆ ಮಂಗಳವಾರ ದಿಡೀರನೆ ಬೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಂಠೀರವ ಸ್ಟುಡಿಯೋ ಮಾಜಿ ಅಧ್ಯಕ್ಷ ಎಂ.ರುದ್ರೇಶ್ ಮಾತನಾಡಿ ಜಿಲ್ಲೆಯಲ್ಲಿ ಬಿಜೆಪಿ ಪಕ್ಷವನ್ನು ಬಲಗೊಳಿಸುವ ನಿಟ್ಟಿನಲ್ಲಿ ಪಣ ತೊಟ್ಟಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಚುನಾವಣಾ ಜಿಲ್ಲಾ ಉಸ್ತುವಾರಿ ವಹಿಸಿರುವ ಸಿ.ಟಿ.ರವಿ ಅವರ ಸೂಚನೆಯಂತೆ ಮಂಜುಳಾ ಮರಿದೇವರು ಅವರನ್ನು ಬೇಟಿ ಮಾಡಿದ್ದೇನೆ.
ಬಿಜೆಪಿಯ ಪರಿವರ್ತನಾ ರ್ಯಾಲಿ ಸಂಧರ್ಭದಲ್ಲಿ ಸಿ.ಟಿ.ರವಿ ಅವರು ಕನಕಪುರಕ್ಕೆ ತೆರಳುತ್ತಿದ್ದಾಗ ಮರಿದೇವರು ಅಭಿಮಾನಿಗಳು ಕೈಲಂಚಾ ಭಾಗದಲ್ಲಿ ಮರಿದೇವರು ಅವರ ಕುಟುಂಬವನ್ನು ಕಾಂಗ್ರೆಸ್ ಪಕ್ಷ ಹೀನಾಯವಾಗಿ ನಡೆಸುಕೊಳ್ಳುತ್ತಿದ್ದು, ಅವರಿಗೆ ಬಿಜೆಪಿ ಪಕ್ಷದಲ್ಲಿ ರಾಜಕೀಯ ಶಕ್ತಿ ತುಂಬುವ ಬಗ್ಗೆ ಗಮನ ಸೆಳೆದಿದ್ದಾರೆ. ಆಗಾಗಿ ಬಿಜೆಪಿ ಪಕ್ಷಕ್ಕೆ ಮಂಜುಳಾ ಮತ್ತು ಅನೇಕ ಮುಖಂಡರ ಅವರ ಸೇವೆ ಅವಶ್ಯಕತೆಯಿದೆ ಎಂದರು.
2008 ರ ಚುನಾವಣೆಯಲ್ಲಿ ಮೂರನೆ ಸ್ಥಾನದಲ್ಲಿದ್ದ ಕಾಂಗ್ರೆಸ್ ಪಕ್ಷವನ್ನು 2013 ರ ಚುನಾವಣೆಯಲ್ಲಿ ರಾಜಕೀಯವಾಗಿ ರಾಜ್ಯವೆ ರಾಮನಗರದತ್ತ ನೋಡುವಂತಹ ವಾತಾವರಣವನ್ನು ಮರಿದೇವರು ಕುಟುಂಬ ಸೃಷ್ಟಿ ಮಾಡಿದ್ದರು. ಮಂಜುಳಾ ಅವರಿಗೆ ರಾಜಕೀಯವೇನೂ ಹೊಸದಲ್ಲ ಎರಡು ಬಾರಿ ತಾಲ್ಲೂಕು ಪಂಚಾಯಿತಿ ಸದಸ್ಯೆಯಾಗಿ, ಕೂಟಗಲ್ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ, ಈ ಹಿಂದೆ ಮಹಿಳಾ ಕಾಂಗ್ರೆಸ್ನ ತಾಲ್ಲೂಕು ಅಧ್ಯಕ್ಷರಾಗಿ ಕೆಲಸ ಮಾಡಿದ ಅನುಭವವಿದ್ದು, ಅವರದೆ ಆದ ರಾಜಕೀಯ ಅಸ್ಥಿತ್ವವನ್ನು ಉಳಿಸಿಕೊಂಡಿದ್ದಾರೆ.
ಮರಿದೇವರು ಅವರು ಅಕಾಲಿಕವಾಗಿ ಮರಣ ಹೊಂದಿದ ನಂತರದ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಸರಿಯಾಗಿ ನಡೆಸಿಕೊಂಡಿಲ್ಲ. ಆ ನೋವು ಅವರನ್ನು ಕಾಡುತಿದ್ದು, ಅವರ ಬೆಂಬಲಕ್ಕಿದ್ದ ನೂರಾರು ಮುಖಂಡರು ಇಂದಿಗೂ ಸಹ ಪಕ್ಷದಿಂದ ದೂರ ಇದ್ದು ಅವರನ್ನು ಬಿಜೆಪಿ ಪಕ್ಷಕ್ಕೆ ಸೇರಿಸಿಕೊಳ್ಳುವಂತೆ ಮನವಿ ಮಾಡಲಾಗುತ್ತಿದೆ. ಮಂಜುಳಾ ಅವರು ಬಿಜೆಪಿ ಸೇರ್ಪಡೆಯಾದರೆ ಪಕ್ಷಕ್ಕೆ ಬಲ ಬರಲಿದೆ ಎಂದರು.
ಮಂಜುಳಾ ಮರಿದೇವರು ಮಾತನಾಡಿ ರಾಮನಗರ ಕ್ಷೇತ್ರದಲ್ಲಿ ನನ್ನ ಪತಿ ಮರಿದೇವರು ಅವರ ಅಭಿಮಾನಿಗಳು ಮತ್ತು ರಾಜಕೀಯ ಶಕ್ತಿ ತುಂಬಿದ ಮುಖಂಡರುಗಳಿದ್ದು, ಅವರ ಅಭಿಪ್ರಾಯ ಮತ್ತು ಚರ್ಚೆ ನಡೆಸಿ ರಾಜಕೀಯ ನಿರ್ಧಾರ ಕೈಗೊಳ್ಳುತ್ತೇವೆ. ಬಿಜೆಪಿ ಮುಖಂಡರು ಪಕ್ಷಕ್ಕೆ ಸೇರುವಂತೆ ಬೇಟಿ ಮಾಡಿ ಮನವಿ ಮಾಡಿದ್ದಾರೆ. ಆದರೆ ಈ ಬಗ್ಗೆ ಮರಿದೇವರು ಅವರ ಆಪ್ತ ಮುಖಂಡರು ಮತ್ತು ಅವರ ಅಪಾರ ಅಭಿಮಾನಿಗಳೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇನೆ.
ಈ ಸಂದರ್ಭದಲ್ಲಿ ತಾಲ್ಲೂಕು ಬಿಜೆಪಿ ಅಧ್ಯಕ್ಷ ಪ್ರವೀಣ್ಗೌಡ, ರಾ-ಚ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಅರ್.ನಾಗರಾಜು, ಬಿಜೆಪಿ ಮುಖಂಡರಾದ ಜಯಣ್ಣ, ಪದ್ಮನಾಭ್, ಪತ್ರಿಕಾ ವಕ್ತಾರ ರುದ್ರದೇವರು, ಯುವ ಮುಖಂಡ ಸಂಗಬಸವನದೊಡ್ಡಿ ಬಾಬು, ರಾಮಯ್ಯ, ಚಂದ್ರಶೇಖರರೆಡ್ಡಿ, ಭೂಪತಿ ಮತ್ತಿತರರು ಇದ್ದರು.
Recent news in karnataka »
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ರಾಮನಗರ, ಫೆ. 02 : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ
ಸಂವಿಧಾನ ಜಾಗೃತಿ ಜಾಥಾ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ
ಪ್ರತಿಕ್ರಿಯೆಗಳು