ಡಿ ಕೆ ಶಿ ಆರೆಸ್ಟ್, ಪ್ರತಿಭಟನೆಗೂ ಒಂದಾದ ಮೈತ್ರಿ, ರಾಷ್ಟ್ರ ಮಟ್ಟದ ನಾಯಕ ಚಿದಂಬರ್ ಬಂಧನಕ್ಕಿಂತಲೂ ಭಿನ್ನ ಡಿಕೆಶಿ ಬಂಧನ
*ಹೊತ್ತಿ ಉರಿದ ಕನಕಪುರ ಮತ್ತು ಸಾತನೂರು,* *ರಾಮನಗರದಲ್ಲಿಯೂ ಉಗ್ರ ಪ್ರತಿಭಟನೆ,* *ಚನ್ನಪಟ್ಟಣ ದಲ್ಲಿ ಹೇಳಿಕೊಳ್ಳುವಂತ ಪ್ರತಿಭಟನೆ* *ಇಲ್ಲಾ, ಮಾಗಡಿಯಲ್ಲಿಯೂ ಸಹ ತಣ್ಣನೆ* *ಪ್ರತಿಭಟನೆ. ರಾಜ್ಯದಾದ್ಯಂತ ಹಲವಾರು* *ಜಿಲ್ಲೆಗಳಲ್ಲಿ ಸಹ ಪ್ರತಿಭಟನೆ ಇವಿಷ್ಟೂ ಡಿ ಕೆ* *ಶಿವಕುಮಾರ್ ಬಂಧನದಿಂದ ರಾಜ್ಯ ಮತ್ತು* *ರಾಮನಗರ ಜಿಲ್ಲೆಯಲ್ಲಿ ಇಂದು ನಡೆದ,* *ನಡೆಯುತ್ತಿರುವ ಪ್ರತಿಭಟನೆ.*
ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸುವ ಮುನ್ನ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿ ಚನ್ನಪಟ್ಟಣ ದ ಶಾಸಕ ಹೆಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮನ್ವಯ ಸಮಿತಿ ಅಧ್ಯಕ್ಷರಾಗಿ ಹದಿನಾಲ್ಕು ತಿಂಗಳು ರಾಜ್ಯ ಸರ್ಕಾರ ಮುನ್ನಡೆಸಲು ಪ್ರಯತ್ನ ಪಟ್ಟಿದ್ದಕ್ಕಿಂತಲೂ ಸರ್ಕಾರದ ಭಾಗವಾದ ಕೆಲವು ಶಾಸಕರು ಮತ್ತು ಮಂತ್ರಿಗಳನ್ನು ಹಿಡಿದಿಟ್ಟುಕೊಳ್ಳುವುದಕ್ಕಾಗಿಯೇ ವರ್ಷವನ್ನು ಸವೆಸಿದ್ದು ಎಲ್ಲರಿಗೂ ತಿಳಿದ ವಿಷಯವೇ !
ಕಪ್ಪು ಹಣ ಶೇಖರಣೆ ಮಾಡಿದ ಸಂಬಂಧ ಡಿ ಕೆ ಶಿವಕುಮಾರ್ ರವರನ್ನು ಕಳೆದ ನಾಲ್ಕು ದಿನಗಳಿಂದ ಇ ಡಿ ಇಲಾಖೆಯು ದೆಹಲಿಯ ತನ್ನ ಕಛೇರಿಯಲ್ಲಿ ವಿಚಾರಣೆ ನಡೆಸಿದ್ದು ಸಮರ್ಪಕವಾದ ಉತ್ತರ ನೀಡದೆ ಪ್ರತಿ ಪ್ರಶ್ನೆಗೂ ಸಮಯಾವಕಾಶ ಕೇಳುತ್ತಿದ್ದ ಡಿಕೆಶಿ ಯನ್ನು ನಿನ್ನೆ ರಾತ್ರಿ ೦೮:೩೦ ಸಮಯದಲ್ಲಿ ಬಂಧಿಸಿಲಾಗಿತ್ತು. ಇದನ್ನು ಖಂಡಿಸಿ ರಾಜ್ಯ ಮತ್ತು ರಾಷ್ಟ್ರ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಡಿಕೆಶಿ ಬೆಂಬಲಿಗರಷ್ಟೇ ಅಲ್ಲದೆ ಜೆಡಿಎಸ್ ಕಾರ್ಯಕರ್ತರು ಸಹ ಪ್ರತಿಭಟನೆ ನಡೆಸುತ್ತಿದ್ದಾರೆ.
ಕಾಂಗ್ರೆಸ್ ನ ರಾಷ್ಟ್ರ ಮಟ್ಟದ ನಾಯಕ ಕೇಂದ್ರದ ಮಾಜಿ ಹಣಕಾಸು ಸಚಿವ ಪಿ ಚಿದಂಬರಂ ರವರನ್ನು ಇತ್ತೀಚೆಗೆ ಬಂಧಿಸಿದರೂ ಸಹ ಹಿರಿಯ ರಾಜಕಾರಣಿಗಳು ಅವರ ಪರ ಹೇಳಿಕೆ ಹಾಗೂ ಬಿಜೆಪಿ ಗೆ ಧಿಕ್ಕಾರ ಕೂಗಿದರೇ ವಿನಹ ಪಕ್ಷದ ಕಾರ್ಯಕರ್ತರಾಗಲಿ, ಚಿದಂಬರಂ ಬೆಂಬಲಿಗರಾಗಲಿ ಬೀದಿಗಿಳಿದು ಪ್ರತಿಭಟಿಸಲಿಲ್ಲ, ಡಿಕೆಶಿ ರಾಜ್ಯ ಮಟ್ಟದ ನಾಯಕರಾದರು ರಾಷ್ಟ್ರದಾದ್ಯಂತ ಅವರದೇ ವರ್ಚಸ್ಸು ಹೊಂದಿದ್ದು ಹೈಕಮಾಂಡ್ ಆದೇಶದ ಮೇರೆಗೆ ಹಲವಾರು ರಾಜ್ಯಗಳಲ್ಲಿ ತನ್ನದೇ ವರ್ಚಸ್ಸು ಉಳಿಸಿಕೊಂಡಿದ್ದರು, ಸ್ಥಳೀಯವಾಗಿ ತನ್ನ ಬೆಂಬಲಿಗರನ್ನು ಬೆಳೆಸುವಲ್ಲಿಯೂ ಬೇರೆ ನಾಯಕರಿಗಿಂತ ಭಿನ್ನವಾಗಿದ್ದರಿಂದ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿರುವುದು ಅವರ ಅಭಿಮಾನಕ್ಕೆ ಸಾಕ್ಷಿಯಾಗಿದೆ.
ಕಳೆದ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಯವರ ಪ್ರತಿ ನಡೆಯನ್ನು ಡಿ ಕೆ ಶಿವಕುಮಾರ್ ಸಮರ್ಥಿಸಿಕೊಂಡು ಬಂದಿದ್ದರು, ಸರ್ಕಾರ ಬೀಳುವ ಸಮಯದಲ್ಲಿ ಕುಮಾರಸ್ವಾಮಿ ಯವರ ಜೊತೆ ನಿಂತಿದ್ದರಿಂದ ನಿನ್ನೆ ರಾತ್ರಿಯೇ ಜೆಡಿಎಸ್ ಕಾರ್ಯಕರ್ತರಿಗೆ ಡಿಕೆಶಿ ಬೆಂಬಲಿಗರ ಜೊತೆ ಪ್ರತಿಭಟನೆ ಗೆ ಕೈಜೋಡಿಸಬೇಕೆಂಬ ಸಂದೇಶ ರವಾನಿಸಿದರು, ಹಾಗಾಗಿ ರಾಜ್ಯದಾದ್ಯಂತ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಒಟ್ಟಾಗಿ ಕೆಲವು ಕಡೆ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿ ಒಗ್ಗಟ್ಟು ಪ್ರದರ್ಶಿಸಿದರು.
ಟೈರ್ ಗಳಿಗೆ ಬೆಂಕಿ ಹಚ್ಚಿದ್ದು, ಬಸ್ ಗೆ ಬೆಂಕಿ ಹಚ್ಚಿರುವುದು, ಕಲ್ಲು ತೂರಾಟ ನಡೆಸಿದ್ದು, ಅಂಗಡಿ ಮುಂಗಟ್ಟುಗಳನ್ನು ಬಲವಂತವಾಗಿ ಮುಚ್ಚಿಸಲು ಪ್ರಯತ್ತಿಸುತ್ತಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರಿಗೆ ಜನಸಾಮಾನ್ಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪ್ರತಿಭಟನೆ ನಡೆಸಲಿ, ಪ್ರತಿಭಟನೆಯನ್ನು ಶಾಂತಿಯಿಂದ ಮಾಡಿ ನ್ಯಾಯ ಒದಗಿಸಿಕೊಳ್ಳಲಿ, ನಾವು ಅವರ ಜೊತೆ ಇರುತ್ತೇವೆ, ಆದರೆ ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟ ಮಾಡುವುದರಿಂದ ನಮ್ಮ ಮೇಲೆ ಹೊರೆ ಬೀಳುತ್ತದೆ, ಟೈರ್ ಗಳನ್ನು ಸುಡುವುದರಿಂದ ಜನರ ಆರೋಗ್ಯ ಮತ್ತು ಪರಿಸರ ಹಾಳಾಗುತ್ತದೆ ಎಂಬ ಸಾಮಾನ್ಯ ಜ್ಞಾನ ಇರಬೇಕು ಎಂಬುದು ಅವರ ಜಿಜ್ಞಾಸೆ.
ಸಾಮಾಜಿಕ ಜಾಲತಾಣಗಳಲ್ಲಿಯೂ ಪರವಿರೋಧ ಸಂದೇಶಗಳು ಹರಿದಾಡುತ್ತಿದ್ದು ಡಿಕೆಶಿ ತನ್ನ ತಂದೆಗೆ ಎಡೆ ಇಡಲು ಬಿಡಲಿಲ್ಲ ಎಂಬ ಸಂದೇಶಕ್ಕೆ ಮಾಹಿತಿ ಕಾರ್ಯಕರ್ತರೊಬ್ಬರು ಅದೆಷ್ಟೋ ಮಂದಿಗೆ ಎಡೆ ಇಡುವುದಿರಲಿ ಊಟಕ್ಕೂ ಕಣ್ಣೀರಿನಲ್ಲಿ ಕೈತೊಳೆಯುವಂತೆ ಮಾಡಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ, ಇದೇ ರೀತಿ ಪರವಿರೋಧ ಚರ್ಚೆಗಳು ನಿರಂತರವಾಗಿ ಸಾಗುತ್ತಿವೆ.
*(ಇಡಿ ಇಡಿ ಇಡಿ, ಎಷ್ಟಾದರೂ ಕೂಡಿ ಇಡಿ,* *ಹೇಗಾದರೂ ಸಂಪಾದಿಸಿ ಕೂಡಿ ಇಡಿ, ಬಡವರ* *ಹೊಟ್ಟೆ ಮೇಲಾದರು ಹೊಡೆದು ಕೂಡಿ ಇಡಿ,* *ಶ್ರೀಮಂತರ ಬಳಿ ಕೊಳ್ಳೆ ಹೊಡೆದು ಇಡಿ, ನೀವು* *ಕೂಡಿಟ್ಟ ಹಣ ಇಡಿ ಗೆ ಗೊತ್ತಾಗದಂತೆ ಇಡಿ,* *ಗೊತ್ತಾದರೆ ಜೈಲಿಗೋಗಲು ಆಗಿರಿ ರೆಡಿ.)*
*ಗೋ ರಾ ಶ್ರೀನಿವಾಸ...)
*ಮೊ:9845856139.*
Recent news in karnataka »
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ರಾಮನಗರ, ಫೆ. 02 : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ
ಸಂವಿಧಾನ ಜಾಗೃತಿ ಜಾಥಾ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ
ಪ್ರತಿಕ್ರಿಯೆಗಳು