ಕಾಡು ಪ್ರಾಣಿಗಳು ನಾಡಿಗೆ ಲಗ್ಗೆ ಇಡಲು ಮಾನವನ ದುರಾಸೆಯೇ ಕಾರಣ ಸಂಜಯ್ ಗುಬ್ಬಿ
ಮಂಡ್ಯ/ಮಳವಳ್ಳಿ: ಬಹುತೇಕ ಕಾಡು ಪ್ರಾಣಿಗಳು ರೈತರ ಜಮೀನಿಗೆ ಲಗ್ಗೆ ಇಟ್ಟು ಬೆಳೆದ ಬೆಳೆಯನ್ನು ತಿನ್ನುವುದಲ್ಲದೆ ತುಳಿದು ಹಾಳು ಮಾಡುವುದು ಹಾಗೂ ನೇರವಾಗಿ ಕೊಟ್ಟಿಗೆಗೆ ನುಗ್ಗಿ ಸಾಕು ಪ್ರಾಣಿಗಳನ್ನು ತಿಂದು ಜನರಲ್ಲಿ ಭಯ ಉಂಟು ಮಾಡುತ್ತಿವೆ ಎಂದಾದರೆ ಅದಕ್ಕೆ ನೇರ ಹೊಣೆ *ನಮ್ಮ ದುರಾಸೆಯ ಬದುಕು ಮತ್ತು ವ್ಯವಸ್ಥೆ ಎಂದು ವನ್ಯಜೀವಿ ವಿಜ್ಞಾನಿ ಸಂಜಯ್ ಗುಬ್ಬಿ ತಿಳಿಸಿದರು.*
ಅವರು ಇಂದು *ಭೀಮೇಶ್ವರಿ* ಯಲ್ಲಿ ಹಮ್ಮಿಕೊಂಡಿದ್ದ ಪತ್ರಕರ್ತರಿಗಾಗಿ ವನ್ಯಜೀವಿ ಸಂರಕ್ಷಣಾ ಕಾರ್ಯಾಗಾರದಲ್ಲಿ ಪತ್ರಕರ್ತರಿಗೆ *ವನ್ಯಜೀವಿ ಮತ್ತು ಮಾನವ ಸಂಘರ್ಷ* ಹೇಗೆ ಉಂಟಾಗುತ್ತದೆ ಎಂದು ಪತ್ರಕರ್ತರಿಗೆ ವಿವರಿಸಿದರು.
ಪ್ರಮುಖ ಪ್ರಾಣಿಗಳಾದ ಆನೆ, ಹುಲಿ ಮತ್ತು ಚಿರತೆ ಸೂಕ್ಷ್ಮ ಹಾಗೂ ಅಪಾಯಕಾರಿ ಪ್ರಾಣಿಗಳಾಗಿದ್ದು ಅವುಗಳು ಸಣ್ಣದಾದ ಕಾಡಿನೊಳಗೆ ಜೀವಿಸುವುದಿಲ್ಲ, ಅವುಗಳಿಗೆ ಸಹಸ್ರಾರು ಹೆಕ್ಟೇರ್ ಪ್ರದೇಶದ ದೊಡ್ಡ ಪ್ರಮಾಣದ ಅರಣ್ಯ ಇರಬೇಕು, ಅಂತಹ ಕಾಡುಗಳು ಇಂದು ಕೆಲವು ಕಡೆ ಬೆಂಕಿ ಬಿದ್ದು ನಶಿಸಿ ಹೋಗುತ್ತಿವೆ ಇದರಿಂದ ಪ್ರಾಣಿಗಳಿಗೆ ಸಕಾಲದಲ್ಲಿ ಮೇವು ಮತ್ತು ನೀರಿನ ಕೊರತೆಯಿಂದ ಸ್ಥಳೀಯ ಗ್ರಾಮಗಳಿಗೆ ಮತ್ತು ರೈತರ ಜಮೀನಿಗೆ ಪಾದ ಬೆಳೆಸಿ ತಿಂದು ವಾಪಸ್ಸಾಗುತ್ತಿವೆ ಎಂದು ತಿಳಿಸಿದರು.
ಕಾಡಿಗೆ ಬೆಂಕಿ ಹಾಕುವವರು ಮತ್ತು ಬೇಟೆಯಾಡುವವರು *ಮೂಢನಂಬಿಕೆ ಮತ್ತು ಪ್ರತಿಷ್ಠೆಗಾಗಿ* ಮಾಡುತ್ತಾರೆ, *ಕಾಡಿನ ಮಧ್ಯೆ ಮತ್ತು ಅಕ್ಕಪಕ್ಕದಲ್ಲಿ ಸ್ವಲ್ಪ ಕೃಷಿ ಜಮೀನು ಹೊಂದಿದ ಹಲವಾರು ಮಂದಿ ರೆಸಾರ್ಟ್ ಮಾಡಿದರೆ ಕೆಲವರು ರಜಾದಿನ ಮತ್ತು ವೀಕೆಂಡ್* ಗಳನ್ನು ಕಳೆಯಲು ಬಂದು ಮೋಜುಮಸ್ತಿಯಲ್ಲಿ ತೊಡಗುವುದರಿಂದಲೂ ಪ್ರಾಣಿಗಳಿಗೆ ಚದುರಿ ಗ್ರಾಮಗಳತ್ತ ಮುಖಮಾಡುತ್ತಿವೆ, ಇಂತಹವರಿಂದ ಪರಿಸರವೂ ಹಾಳಾಗುತ್ತಿರುವುದು ಬಹಿರಂಗ ಸತ್ಯ.
*ಕಾವೇರಿ ವನ್ಯಜೀವಿ ಧಾಮದಲ್ಲಿ ಹುಲಿ, ತರಕರಡಿ (ಜೇನೀರಕ) ಮತ್ತು ಬೆಟ್ಟಳಿಲು ಗಳಿದ್ದು ಇವು ಬೇರೆಲ್ಲೂ ಕಂಡುಬರುವುದಿಲ್ಲ. ಸೀಳುನಾಯಿ, ಆನೆ, ಕಾಡುಕೋಣ, (ಕಾಟಿ) ಜಿಂಕೆ, (ಸಾರಂಗ) ಕಡವೆ, ಬೆಟ್ಟದ ಆಡು (ಕೊಂಬು ಕುರಿ) ಇದು ಪ್ರಪಂಚದ ಏಕೈಕ ನಾಲ್ಕು ಕೊಂಬಿರುವ ಪ್ರಾಣಿ, ಇವುಗಳಲ್ಲದೆ ಅನೇಕ ಪ್ರಾಣಿ ಪಕ್ಷಿಗಳು ಇಲ್ಲಿವೆ, ಐದು ಹುಲಿಗಳಿದ್ದು ಇವು ಮಹದೇಶ್ವರ ಬೆಟ್ಟ, ಬಿಳಿಗಿರಿರಂಗನ ಬೆಟ್ಟ ದ ತನಕವೂ ತಮ್ಮ ವಾಸಸ್ಥಾನವನ್ನಾಗಿ ಮಾಡಿಕೊಂಡಿವೆ.*
*ಹಲವಾರು ಅಭಿವೃದ್ಧಿಗಳಿಂದಲೂ ಕಾಡು ಪ್ರಾಣಿಗಳಿಗೆ ಕಂಟಕ ಎದುರಾಗಿವೆ, ನಾಡಿನ ಪ್ರಾಣಿಗಳನ್ನು ಕಾಡಿಗೆ ಅಟ್ಟುವುದರಿಂದಲೂ ಅನೇಕ ಕಾಡು ಪ್ರಾಣಿಗಳು ಸಂಕಸ್ಟಕ್ಕೀಡಾಗಿವೆ,* ತಾವುಗಳು ವರದಿ ಮಾಡುವಾಗ ಇವುಗಳನ್ನೆಲ್ಲಾ ಗಮನದಲ್ಲಿಟ್ಟುಕೊಂಡು ಕಾಡು ಪ್ರಾಣಿಗಳಿಂದಲೇ ಸರ್ವನಾಶ ಎಂದು ಬರೆಯುವ ಬದಲಿಗೆ ವಾಸ್ತವಾಂಶ ಅರಿತು ಸಕಾರಾತ್ಮಕವಾಗಿ ಬರೆದು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕೆಂದರು.
ಕಾವೇರಿ ವನ್ಯಜೀವಿ ಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ ಎಸ್ ರಮೇಶ್ ರವರು ಮಾತನಾಡಿ ಇಂದಿನ ಅರಣ್ಯ ಕಾನೂನು ಪಂಡಿತರು ಸಮಸ್ಯೆಗಳನ್ನು ಅಧ್ಯಯನ ಮಾಡದೆ ಮನಸೋ ಇಚ್ಛೆ ಕಾನೂನು ಮಾಡಿದಂತಿದೆ, *ಕಾಡಿನೊಳಗಿರುವ ದೇವರ ಹೆಸರಿನಲ್ಲಿ ನಡೆಯುವ ಜಾತ್ರೆ ಗೆ ಬರುವವರು ಭಕ್ತಿಗೆ ಸೀಮಿತವಾಗದೆ ಮೋಜು ಮಸ್ತಿ ಮಾಡುತ್ತಾರೆ, ಮೂಢನಂಬಿಕೆ ಗೆ ಓಗೊಟ್ಟು ಕಾಡಿಗೆ ಬೆಂಕಿ ಇಡುವುದು, ಅದೇ ಹೆಸರಿನಲ್ಲಿ ಕಳ್ಳಬೇಟೆಯಾಡಿ ಸೀಮಿತ ಪ್ರಾಣಿಗಳನ್ನು ಕೊಂದು ಅಂಗಾಂಗ ಸಂಗ್ರಹ ಮತ್ತು ಮಾರಾಟ ಮಾಡುವುದು ನಡೆಯುತ್ತಿರುವುದು ಸಹ ಕಾಡು ಪ್ರಾಣಿಗಳು ನಾಡಿಗೆ ಲಗ್ಗೆ ಇಡುವಂತಾಗಿದೆ,* ಅರಣ್ಯ ಇಲಾಖೆಯಲ್ಲಿ ಶೇಕಡಾ ನಲವತ್ತರಷ್ಟು ಸಿಬ್ಬಂದಿ ಕೊರತೆ ಮತ್ತು ಅನುದಾನದ ಕೊರತೆಯಿಂದಲೂ ಕಾಡಿನ ರಕ್ಷಣೆ ಗೆ ಸ್ವಲ್ಪ ಹಿನ್ನಡೆಯಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ರಾಮನಗರ ವಾರ್ತಾ ಮತ್ತು ಪ್ರಸಾರ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಎಸ್ ಶಂಕರಪ್ಪ ಮಾತನಾಡಿ ವನ್ಯಜೀವಿಗಳು ಮತ್ತು ಕಾಡಿನ ಬಗ್ಗೆ ಪತ್ರಕರ್ತರಿಗೆ ಮಾಹಿತಿ ಇರಬೇಕು, ಸಮಸ್ಯೆಗಳಾದಾಗ ಸಕಾರಾತ್ಮಕವಾಗಿ ಬರೆಯಲು ಇವು ನೆರವಾಗುತ್ತವೆ, ಇಂತಹ ಕಾರ್ಯಾಗಾರಗಳನ್ನು ಸ್ಥಳೀಯವಾಗಿ ಹಮ್ಮಿಕೊಳ್ಳಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಮಟ್ಟದ ಪರಿಸರ ತರಬೇತುದಾರರಾದ ಲತಾ, ಸಂತೋಷ್, ಅರಣ್ಯಾಧಿಕಾರಿಗಳು, ವಾರ್ತಾ ಇಲಾಖೆಯ ಯೋಗೀಶ್ ಗೌಡ ಮತ್ತು ಸಿಬ್ಬಂದಿ, ರಾಮನಗರ ಹಾಗೂ ಮಂಡ್ಯ ಜಿಲ್ಲೆಯ ಅನೇಕ ಪತ್ರಕರ್ತರು ಭಾಗವಹಿಸಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in karnataka »
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ರಾಮನಗರ, ಫೆ. 02 : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ
ಸಂವಿಧಾನ ಜಾಗೃತಿ ಜಾಥಾ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ
ಪ್ರತಿಕ್ರಿಯೆಗಳು