Tel: 7676775624 | Mail: info@yellowandred.in

Language: EN KAN

    Follow us :


ಗಾಂಧಿ ಭವನದ ಆಸ್ತಿ, ಆದಾಯ ಯಾರ ವಶದಲ್ಲಿದೆ ? ಸತ್ಯಾಗ್ರಹ ದಲ್ಲಿ ಸು ತ ರಾಮೇಗೌಡ ಆಗ್ರಹ

Posted date: 02 Oct, 2019

Powered by:     Yellow and Red

ಗಾಂಧಿ ಭವನದ ಆಸ್ತಿ, ಆದಾಯ ಯಾರ ವಶದಲ್ಲಿದೆ ? ಸತ್ಯಾಗ್ರಹ ದಲ್ಲಿ ಸು ತ ರಾಮೇಗೌಡ ಆಗ್ರಹ

ಚನ್ನಪಟ್ಟಣ: ನಗರದ ಹೃದಯ ಭಾಗದಲ್ಲಿರುವ ಮಹಾತ್ಮ ಗಾಂಧಿ ಹೆಸರಿನ ಸ್ಮಾರಕ (ಗಾಂಧಿ ಭವನ) ಕ್ಕೆ ಅರವತ್ತೈದು ವರ್ಷಗಳಾಗಿದ್ದು ಶಿಥಿಲಗೊಂಡಿದೆ, *ಗೋಖಲೆ ಟ್ರಸ್ಟ್* ಹೆಸರಿನಲ್ಲಿ ಈ ಆಸ್ತಿ ಇದ್ದು ನಾಲ್ಕು ಅಂಗಡಿಗಳ ಬಾಡಿಗೆ ಇಂದಿಗೂ ಬರುತ್ತಿದ್ದು ಇದಕ್ಕೂ‌ ಮೊದಲು ಗ್ರಂಥಾಲಯದ ಬಾಡಿಗೆ ಸಹ ಬರುತ್ತಿದ್ದು ಈ ಹಣವು ಟ್ರಸ್ಟ್ ನ ಖಾತೆಗಾಗಲಿ, ಅಥವಾ ಗಾಂಧಿ ಭವನದ ರಿಪೇರಿಗಾಗಲಿ ಬಳಕೆ ಆಗದೆ ಯಾರೋ ಒಬ್ಬ ಏಕವ್ಯಕ್ತಿಯು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ಹಿರಿಯ ಹೋರಾಟಗಾರ, ಪತ್ರಕರ್ತ ಸು ತ ರಾಮೇಗೌಡ ತಿಳಿಸಿದರು.

ಅವರು ಇಂದು ಗಾಂಧಿ ಭವನದ ಮುಂದೆ ಸತ್ಯಾಗ್ರಹ ಕುಳಿತು ಸತ್ಯಕ್ಕೆ ಆಗ್ರಹಿಸಿದರು.

ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿಯವರು ಭೇಟಿ ಕೊಟ್ಟ ನೆನಪಿಗಾಗಿ ಈ ಜಾಗವನ್ನು ಕಾಯ್ದಿರಿಸಿದ್ದು, ಅಂದಿನ ಮೈಸೂರು ರಾಜ್ಯದ ಮುಖ್ಯಮಂತ್ರಿ ಚಂಗಲರಾಯರೆಡ್ಡಿ ಯವರು ೨೯/೦೪/೧೯೫೦ ರಲ್ಲಿ ಅಸ್ತಿಭಾರ ಶಿಲಸ್ಥಾಪನೆ ಮಾಡಿ, ೩೦/೧೦/೧೯೫೪ ರಲ್ಲಿ ಶ್ರೀ ಮನ್ ಮಹಾರಾಜ ರಾದ ಜಯಚಾಮರಾಜೇಂದ್ರ ಒಡೆಯರ್ ಅವರು ಈ ಭವನವನ್ನು ಉದ್ಘಾಟಿಸಿದರು.

ಮೂರೂವರೆ ಗುಂಟೆ ಜಮೀನನ್ನು ಆರ್ಯಮೂರ್ತಿ ಎಂಬುವವರು ಸ್ಮಾರಕ ನಿರ್ಮಿಸಲು ದಾನ ನೀಡಿದ್ದು ಮಿಕ್ಕ ಜಾಗ ಸರ್ಕಾರಿ ಖರಾಬು ಜಮೀನಾಗಿದ್ದು, ಇತ್ತೀಚಿನ ಮಾಹಿತಿ ಪ್ರಕಾರ ಸಂಪೂರ್ಣ ಸರ್ಕಾರಿ ಖರಾಬು ಎಂದು ತಿಳಿದಿದೆ, ಸ್ಮಾರಕದ ಮುಂದೆ ರಾಜ್ಯದ ಮೊದಲ ವಿದ್ಯಾಮಂತ್ರಿ ವಿ ವೆಂಕಟಪ್ಪ ಮತ್ತು ವಿಶ್ವ ವಿಖ್ಯಾತ ಆರ್ಥಿಕ ತಜ್ಞ ವೆಂಕಟಗಿರಿಗೌಡರ ಪ್ರತಿಮೆಗಳಿದ್ದು ಇವೆರಡರ ಮುಂದಿನ ಮಧ್ಯ ಭಾಗದಲ್ಲಿ ರಾಷ್ಟ್ರಕವಿ ಕುವೆಂಪು ರವರ ಪ್ರತಿಮೆ ಪ್ರತಿಷ್ಟಾಪನೆ ಮಾಡಲಾಗಿದೆ.

ಗೋಖಲೆ ಟ್ರಸ್ಟ್ ಈಗ ಅಸ್ತಿತ್ವದಲ್ಲಿ ಇದೆಯಾ ? ಅಲ್ಲಿನ ಟ್ರಸ್ಟಿಗಳಾರು ? ಅಂದಿನ ಗ್ರಂಥಾಲಯ ಮತ್ತು ನಾಲ್ಕು ಅಂಗಡಿಗಳ ಬಾಡಿಗೆಯ ಕೋಟ್ಯಂತರ ರೂಪಾಯಿ ಯಾರ ವಶದಲ್ಲಿದೆ ಎಂಬುದನ್ನು ತಿಳಿಸಿ ಇದರ ಪರಭಾರೆಗೆ ಅನುವು ಮಾಡಿಕೊಡಲಿ*
ಸು ತ ರಾಮೇಗೌಡ

ಅರವತ್ತೈದು ವರ್ಷಗಳ ಹಿಂದೆ ಗಾಂಧೀಜಿಯವರ ಭೇಟಿಯ ನೆನಪಿಗಾಗಿ ನಿರ್ಮಾಣವಾಗಿರುವ ಈ ಸ್ಮಾರಕವನ್ನು ಶಾಶ್ವತವಾಗಿ, ಉತ್ಕೃಷ್ಟ ದರ್ಜೆಯಲ್ಲಿ ನಿರ್ಮಾಣ ಮಾಡುವತ್ತ ಸಂಬಂಧಿಸಿದವರು ಶೀಘ್ರವಾಗಿ ಕ್ರಮ ಕೈಗೊಳ್ಳಬೇಕು. ಸ್ಮಾರಕ ಮತ್ತು ಜಾಗಕ್ಕೆ ಸಂಬಂಧಿಸಿದಂತೆ ಯಾರ ಬಳಿ ಯಾವ ದಾಖಲೆಗಳಿವೆ ಎಂಬುದನ್ನು ಜಾಹೀರುಗೊಳಿಸಲಿ*
*ಗೋ ರಾ ಶ್ರೀನಿವಾಸ...

ಸಂಪೂರ್ಣ ದಾಖಲೆ ಸಮೇತ ನಮ್ಮ ಇಲಾಖೆಗೆ ಹಸ್ತಾಂತರಿಸಿದರೆ ಮೂರು ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡುತ್ತೇವೆ, ಹಸ್ತಾಂತರ ಮಾಡಿದ ಒಂದು ವಾರದಲ್ಲೇ ಅಸ್ತಿಭಾರ ಹಾಕುತ್ತೇವೆ.*
*ಶಂಕರಪ್ಪ, ಹಿರಿಯ ಸಹಾಯಕ ನಿರ್ದೇಕರು, ವಾರ್ತಾ ಮತ್ತು ಪ್ರಸಾರ ಇಲಾಖೆ, ರಾಮನಗರ.

ಸತ್ಯಾಗ್ರಹದಲ್ಲಿ ಲ್ಯಾಬ್ ಚಂದ್ರು, ಪತ್ರಕತ್ರರಾದ ಸು ನಾ ನಂದಕುಮಾರ್, ಕರೀಂ, ಸಾಧು ರಮೇಶ್, ಡಿ ಎಂ ಮಂಜುನಾಥ, ಅಭಿಲಾಸ್, ಮಂಜು ಎಲೆಕೇರಿ, ಕುಮಾರ್ ಮತ್ತು ಕೆಲವು ನಿವೃತ್ತ ನೌಕರರಾದ ಎಂ ಸಿ ಮಲ್ಲಯ್ಯ, ರೇವಣ್ಣ, ಬೆಟ್ಟಯ್ಯ ಶಿಕ್ಷಕ ವಸಂತಕುಮಾರ್, ಮಾತೃಭೂಮಿ ಮಹೇಶ್ ಸತ್ಯಾಗ್ರಹಕ್ಕೆ ಸಾಥ್ ನೀಡಿ ತಮ್ಮ ಅಭಿಪ್ರಾಯಗಳನ್ನು ದಾಖಲಿಸಿದರು.

*ಗೋ ರಾ ಶ್ರೀನಿವಾಸ...*
*ಮೊ:9845856139.*

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ

ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ

ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ರಾಮನಗರ, ಫೆ. 02  :  ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು

ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ

ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ

ಸಂವಿಧಾನ ಜಾಗೃತಿ ಜಾಥಾ

ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,

ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ರಾಮನಗರ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ

ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ

ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ  ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ

೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ  ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ

ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ

ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ

Top Stories »  


Top ↑