Tel: 7676775624 | Mail: info@yellowandred.in

Language: EN KAN

    Follow us :


ದಂಡಾಧಿಕಾರಿಗಳಿಗೆ ಸಿಕ್ಕಿಬಿದ್ದ ನಕಲಿ ಐಎಎಸ್‌ ಅಧಿಕಾರಿ ಮತ್ತು ತಂಡ

Posted date: 16 Nov, 2019

Powered by:     Yellow and Red

ದಂಡಾಧಿಕಾರಿಗಳಿಗೆ ಸಿಕ್ಕಿಬಿದ್ದ ನಕಲಿ ಐಎಎಸ್‌ ಅಧಿಕಾರಿ ಮತ್ತು ತಂಡ

ಚನ್ನಪಟ್ಟಣ: ನಗರದ ಪ್ರವಾಸಿ ಮಂದಿರಕ್ಕೆ ಐಷಾರಾಮಿ ಕಾರು ಮತ್ತು ತನ್ನದೇ ಭದ್ರತಾ ಸಿಬ್ಬಂದಿಗಳ ಜೊತೆ ಆಗಮಿಸಿ ತಾಲ್ಲೂಕಿನ ಕೆಲ ಅಧಿಕಾರಿಗಳಿಂದ ಆತಿಥ್ಯ ಸ್ವೀಕರಿಸುತ್ತಿದ್ದ *ನಕಲಿ ಐಎಎಸ್‌ ಅಧಿಕಾರಿ ಮಹಮ್ಮದ್ ಸಲ್ಮಾನ್ (೩೭)* ಮತ್ತು ತಂಡದವರನ್ನು ತಾಲ್ಲೂಕಿನ *ತಹಶಿಲ್ದಾರ್/ದಂಡಾಧಿಕಾರಿಗಳಾದ ಸುದರ್ಶನ್* ರವರು ಅನುಮಾನದ ಮೇರೆಗೆ ಪ್ರಶ್ನಿಸಲಾಗಿ ತಡವರಿಸಿದ ತಂಡದವರನ್ನು ತಮ್ಮ ಸಿಬ್ಬಂದಿಯೊಡಗೂಡಿ ಹಿಡಿದು ನಗರದ ಪೋಲಿಸ್ ಠಾಣೆ ಗೆ ಒಪ್ಪಿಸಿದ್ದಾರೆ.


ಕೆಲ ಅಧಿಕಾರಿಗಳಿಂದ ಆತಿಥ್ಯ ಸ್ವೀಕರಿಸುವ ವೇಳೆ ವಿಶ್ರಾಂತಿಗೆಂದು ತಹಶಿಲ್ದಾರ್ ಸುದರ್ಶನ್ ರವರು ಆಗಮಿಸಿದ್ದು ಅಧಿಕಾರಿ ಬಂದಿದ್ದಾರೆನ್ನುವ ಮಾಹಿತಿ ತಿಳಿದ ತಕ್ಷಣ ಭೇಟಿ ಮಾಡಿದ್ದಾರೆ. ನಂತರ ಇಲಾಖೆಯ ಬಗ್ಗೆ ವಿಚಾರಿಸಲಾಗಿ ಸರ್ಕಾರದಲ್ಲಿ ಇಲ್ಲದ ಇಲಾಖೆ ಹೆಸರೇಳಿದ್ದಾರೆ. ಅನುಮಾನಗೊಂಡ ತಹಶಿಲ್ದಾರ್ ರವರು ಮತ್ತಷ್ಟು ಪ್ರಶ್ನಿಸಲಾಗಿ ತಡವರಿಸಿದ ನಕಲಿ ತಂಡದವರು ಪಲಾಯನಗೊಳ್ಳಲು ಯತ್ನಿಸಿದ್ದಾರೆ. ಎಚ್ಚೆತ್ತ ತಹಶಿಲ್ದಾರ್ ರವರು ತಮ್ಮ ಸಿಬ್ಬಂದಿಗಳೊಂದಿಗೆ ಹಿಡಿದು ಠಾಣೆಗೆ ಒಪ್ಪಿಸಿದ್ದಾರೆ.


ತಾವು ಬಳಸುತ್ತಿದ್ದ ಐಷಾರಾಮಿ ಇನ್ನೋವಾ (ಕೆಎ ೫೩ ಎನ್ ೯೮೫೩) ಕಾರಿಗೆ ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ನೋಂದಣಿ ಸಂಖ್ಯೆ ನಮೂದಿಸಿದ್ದು ಕರ್ನಾಟಕ ಸರ್ಕಾರ ಎಂದು ಬರೆಸಿಕೊಂಡಿದ್ದಾರೆ. ನೋಂದಣಿ ಸಂಖ್ಯೆ ಯ ಕೆಳಗೆ *ಅಧ್ಯಕ್ಷರು ಕರ್ನಾಟಕ ರಾಜ್ಯ ಸಮಗ್ರ ಜನಸ್ಪಂದನ ಕಾರ್ಯಕ್ರಮ. ಸಮಗ್ರ ಯೋಜನೆಗಳ ಜನಜಾಗೃತಿ ಕಾರ್ಯಕ್ರಮ* ಎಂದು ಬರೆಸಿಕೊಂಡಿದ್ದು ರಾಜಾರೋಷವಾಗಿ ಓಡಾಡುತ್ತಿದ್ದರೆಂದು ಹೇಳಲಾಗಿದೆ.


ಮಹಮ್ಮದ್ ಸಲ್ಮಾನ್ ಅಂಗರಕ್ಷಕರನ್ನೂ ನೇಮಿಸಿಕೊಂಡಿದ್ದು ತಾಲ್ಲೂಕಿನ *ಬೆಳಕೆರೆ ಗ್ರಾಮದ ಸುಬ್ಬೇಗೌಡ ಉ ಗುಂಡ ಎಂಬುವವರ ಮಗನಾದ ಮಂಜು (೨೫) ಮತ್ತು ಬೆಟ್ಟಯ್ಯ ನ ಮಗನಾದ ರವಿ ಎಂಬುವವರು (೩೫)* ಒಗ್ಗೂಡಿ ರಿಯಲ್ ಎಸ್ಟೇಟ್ ಮತ್ತಿತರ ಖಾಸಗಿ ವ್ಯಾಜ್ಯಗಳನ್ನು ಪರಿಹರಿಸುವುದಾಗಿ ಹೇಳಿ ಹಣ ವಸೂಲಿ ಮಾಡುತ್ತಿದ್ದುದಾಗಿ ತಿಳಿದು ಬಂದಿದ್ದು ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ

ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ

ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ರಾಮನಗರ, ಫೆ. 02  :  ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು

ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ

ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ

ಸಂವಿಧಾನ ಜಾಗೃತಿ ಜಾಥಾ

ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,

ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ರಾಮನಗರ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ

ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ

ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ  ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ

೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ  ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ

ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ

ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ

Top Stories »  


Top ↑