Tel: 7676775624 | Mail: info@yellowandred.in

Language: EN KAN

    Follow us :


ನಟಿಮಣಿ ಪರಾರಿ, ವಿಷ ಸೇವಿಸಿದ ಕುಟುಂಬ

Posted date: 09 Jan, 2020

Powered by:     Yellow and Red

ನಟಿಮಣಿ ಪರಾರಿ, ವಿಷ ಸೇವಿಸಿದ ಕುಟುಂಬ

ಚನ್ನಪಟ್ಟಣ: ಸಿನಿಮಾ ನಟಿಯೊಬ್ಬಳು ನಿರ್ದೇಶಕನೊಂದಿಗೆ ಪರಾರಿಯಾದ ಹಿನ್ನೆಲೆಯಲ್ಲಿ ಮನನೊಂದ ನಟಿಯ ಅಜ್ಜಿ ಹಾಗೂ ತಾಯಿ ವಿಷ ಸೇವಿಸಿರುವ ಘಟನೆ ಚನ್ನಪಟ್ಟಣದಲ್ಲಿ ನಡೆದಿದೆ.


ವಿಷ ಸೇವನೆಯಿಂದ ಅಜ್ಜಿ ಚೆನ್ನಮ್ಮ ಮೃತಪಟ್ಟಿದ್ದರೆ, ತಾಯಿ ಸವಿತಾ ಅವರ ಸ್ಥಿತಿ ಗಂಭೀರವಾಗಿದ್ದು ಮಂಡ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ನಟಿ ವಿಜಯಲಕ್ಷ್ಮಿ, ನಿರ್ದೇಶಕ ಆಂಜನಪ್ಪ ಎಂಬುವವರ ಜೊತೆ ಪರಾರಿಯಾದ ಹಿನ್ನೆಲೆಯಲ್ಲಿ ಮುಂಗಡ​ ನೀಡಿದ ನಿರ್ಮಾಪಕರ ಕಿರುಕಳ ಸಹಿಸಲು ಸಾಧ್ಯವಾಗದೆ ಚೆನ್ನಮ್ಮ ಹಾಗೂ ಸವಿತಾ ವಿಷ ಸೇವನೆ ಮಾಡಿದ್ದರು.


ಮೂಲತಃ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಮೆಳ್ಳಹಳ್ಳಿ ಗ್ರಾಮದ ವಿಜಯಲಕ್ಷ್ಮಿ ಸಾಕು ತಂದೆ ಸ್ವಾಮಿ ಹಾಗೂ ತಾಯಿ ಸವಿತಾ ಅವರೊಟ್ಟಿಗೆ ಚನ್ನಪಟ್ಟಣದಲ್ಲಿ ವಾಸವಾಗಿದ್ದರು. ಕನ್ನಡದ ಹಲವು ಸಿನಿಮಾಗಳಲ್ಲಿ ಅವರು ಬಣ್ಣ ಹಚ್ಚಿದ್ದರು.

ತುಂಗಭದ್ರಾ ಎಂಬ ಸಿನಿಮಾದಲ್ಲಿ ವಿಜಯಲಕ್ಷ್ಮಿ ನಟನೆ ಮಾಡುತ್ತಿದ್ದರು.


೧೦ ದಿನಗಳ ಕಾಲ ರಾಯಚೂರಿನಲ್ಲಿ ಸಿನಿಮಾ ಚಿತ್ರೀಕರಣ ನಡೆಯಿತಿದ್ದು, ಆ ವೇಳೆ ನಟಿ ವಿಜಯಲಕ್ಷ್ಮಿ ನಿದೇರ್ಶಕ ಆಂಜನಪ್ಪ ಜೊತೆ ಇರುತ್ತಿದ್ದರು ಎಂದು ತಿಳಿದು ಬಂದಿದೆ. ಡಿ.೧೫ರಂದು ನಟಿ ವಿಜಯ ಲಕ್ಷ್ಮಿ ನಿರ್ದೇಶಕ ಆಂಜಿನಪ್ಪ ಅವರೊಂದಿಗೆ ಮನೆ ಬಿಟ್ಟು ತೆರಳಿದ್ದರು. ೧೫ ದಿನಗಳ ನಂತರ ಆಕೆ ಮನೆಗೆ ಆಗಮಿಸಿ ಅಜ್ಜಿ ಹಾಗೂ ತಾಯಿ ಜೊತೆ ಮಾತನಾಡಿ ಇನ್ನು ಮುಂದೆ ಈ ರೀತಿ ನಡೆದುಕೊಳ್ಳುವುದಿಲ್ಲ, ಆಂಜಿನಪ್ಪನ ಜೊತೆ ಓಡಾಡುವುದಿಲ್ಲ ಎಂದು ಕ್ಷಮೆ ಕೋರಿದ್ದರು. ತಂದೆ ಸ್ವಾಮಿಯವರು ಸಹ ಮಗಳಿಗೆ ಬುದ್ಧಿ ಹೇಳಿದ್ದರು.


*ಮತ್ತೆ ನಾಪತ್ತೆ:*

ಜ.೦೩ ರಂದು ಮತ್ತೆ ಆಂಜಿನಪ್ಪ ಜತೆ ಆಕೆ ಪರಾರಿಯಾಗಿದ್ದಾರೆ. ವಾರ ಕಳೆದರೂ ಇಬ್ಬರು ಎಲ್ಲಿದ್ದಾರೆ ಎಂಬ ಮಾಹಿತಿ ಕುಟುಂಬದವರಿಗೆ ದೊರೆಯದ ಹಿನ್ನೆಲೆಯಲ್ಲಿ ನಿರ್ದೇಶಕ ಆಂಜಿನಪ್ಪ ಸ್ವಗ್ರಾಮವಾದ ಕೊಪ್ಪಳ ಜಿಲ್ಲೆಯ ಹಳ್ಳಿ ಹೊಸೂರಿಗೆ ತೆರಳಿ ಕುಟುಂಬದವರು ಮಗಳ ಬಗ್ಗೆ ವಿಚಾರಿಸಿದ್ದರು. ಮಗಳು ಅಲ್ಲಿಯೂ ಪತ್ತೆಯಾಗದ ಹಿನ್ನೆಲೆಯಲ್ಲಿ ಮಾನಸಿಕವಾಗಿ ಜರ್ಜರಿತರಾಗಿದ್ದರು.


*ನಿರ್ಮಾಪಕರ ಕಿರುಕುಳ:*

ನಟಿ ವಿಜಯಲಕ್ಷ್ಮಿ ಅವರಿಗೆ ಪ್ರೇಮಮಹಲ್, ಜವಾರಿಲವ್, ಪ್ರೊಡಕ್ಷನ್​ ನಂ ೦೧ ಚಿತ್ರಗಳ ನಿರ್ಮಾಪಕರು ಮುಂಗಡ ನೀಡಿದ್ದರು. ನಿರ್ಮಾಪಕರು ಮನೆ ಬಾಗಿಲಿಗೆ ಬಂದು ತಂದೆ ಸ್ವಾಮಿ ಹಾಗೂ ತಾಯಿಯನ್ನು ಪೀಡಿಸುತ್ತಿದ್ದರು. ಮಗಳನ್ನು ಪತ್ತೆ ಮಾಡಿ ಸಿನಿಮಾ ಚಿತ್ರೀಕರಣಕ್ಕೆ ಕಳುಹಿಸುವಂತೆ ಒತ್ತಾಯಿಸುತ್ತಿದ್ದರು. ಇದರಿಂದ ಮನನೊಂದ ಚೆನ್ನಮ್ಮ ಹಾಗೂ ಸವಿತಾ ಮನೆಯಲ್ಲಿ ವಿಷ ಸೇವಿಸಿದ್ದರು. ವಿಷ ಸೇವನೆಗೂ ಮೊದಲು ನಮ್ಮ ಸಾವಿಗೆ ನಿರ್ದೇಶಕ ಆಂಜಿನಪ್ಪ ಕಾರಣ ಎಂದು ನಟಿಯ ತಾಯಿ ಸವಿತಾ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ ಎಂದು ತಿಳಿದು ಬಂದಿದೆ.


ನಟಿ ವಿಜಯಲಕ್ಷ್ಮಿ ಶಿವರಾಜ್‌ಕುಮಾರ್ ನಟನೆಯ ಆಯುಷ್ಮಾನ್ಭವ, ಮಯೂರ್ ಪಟೇಲ್ ಅಭಿನಯದ ರಾಜೀವ ಸೇರಿದಂತೆ ಅಂದಾಜು ೧೬ ಸಿನಿಮಾಗಳಲ್ಲಿ ನಟಿಸಿದ್ದರು.


ಚನ್ನಪಟ್ಟಣ ಪೂರ್ವ ಪೋಲಿಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಪೊಲೀಸರು ಇಬ್ಬರ ಪತ್ತೆಗೆ ಬಲೆ ಬೀಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ

ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ

ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ರಾಮನಗರ, ಫೆ. 02  :  ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು

ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ

ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ

ಸಂವಿಧಾನ ಜಾಗೃತಿ ಜಾಥಾ

ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,

ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ರಾಮನಗರ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ

ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ

ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ  ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ

೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ  ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ

ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ

ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ

Top Stories »  


Top ↑