ಹನ್ನೆರಡರಲ್ಲಿದ್ದ ಸಿಪಿವೈ, ಹತ್ತರಲ್ಲೊಬ್ಬರಾಗಲಿಲ್ಲ. ಅಭಿಮಾನಿಗಳ ಸಂಭ್ರಮಾಚರಣೆಗೆ ಬಿತ್ತು ಬ್ರೇಕ್
ಚನ್ನಪಟ್ಟಣ: ಹಲವಾರು ಪಕ್ಷಗಳ ಸುತ್ತಿ, ರಾಜ್ಯದಲ್ಲಿ ಹೆಸರಿಲ್ಲದ ಪಕ್ಷದಿಂದಲೂ ಸ್ಪರ್ಧಿಸಿ ಗೆದ್ದು ಬಂದಿದ್ದ ಸ್ವತಂತ್ರ ನಾಯಕ, ಮಾಜಿ ಸಚಿವ ಹಾಗೂ ಚನ್ನಪಟ್ಟಣ ದ ಮಾಜಿ ಶಾಸಕ ಸಿ ಪಿ ಯೋಗೇಶ್ವರ್ ಗೆ ಕೈಗೆ ಬಂದ ತುತ್ತು ಬಾಯಿಗಿಲ್ಲ ಎಂಬ ನಾಣ್ಣುಡಿಯಂತೆ ಇತ್ತೀಚೆಗೆ ಕೊನೆಗಳಿಗೆಯಲ್ಲಿ ಕೈ ಕೊಡುತ್ತಲೇ ಇದ್ದು ಅದು ಇಂದು ಸಹ ಸಾಬೀತಾಗಿದೆ.
*ಆಪರೇಷನ್ ಕಮಲದ ಕಟ್ಟಾಳು*
ಸಮ್ಮಿಶ್ರ ಸರ್ಕಾರವನ್ನು ಉರುಳಿಸಿ ಬಿಜೆಪಿ ಪಕ್ಷ ಸರ್ಕಾರ ರಚಿಸಲು ನಡೆಸಿದ ಆಪರೇಷನ್ ಕಮಲದ ಹಿಂದಿದ್ದ ಕೆಲವೇ ಕೈಗಳಲ್ಲಿ ಒಬ್ಬರಾಗಿದ್ದ ಸಿಪಿವೈ ಗೆ ಹೈಕಮಾಂಡ್ ಒಲವು ಹೆಚ್ಚಿತ್ತಾದರೂ ಮೂಲ ಬಿಜೆಪಿಗರು ಹಾಗೂ ಹಾಲಿ ಶಾಸಕರು ಅಡ್ಡಗಾಲಾಗಿದ್ದರಿಂದ ಹೈಕಮಾಂಡ್ ಬಜೆಟ್ ವರೆಗೆ ಕಾಯುವಂತೆ ಸೂಚನೆ ನೀಡಿದ್ದಾಗಿ ತಿಳಿದು ಬಂದಿದೆ.
*ಕೈತುತ್ತು ಜಾರಿ ಕೆಳಕ್ಕೆ*
ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಶುರುವಾದ ಸೋಲು, ಹುಣಸೂರಿನ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಸಿಗದ ಟಿಕೇಟ್, ಆಪರೇಷನ್ ಕಮಲದ ನಂತರ ಹಲವು ಬಾರಿ ಕೈ ತಪ್ಪಿದ ಸಚಿವಗಿರಿ ಹೀಗೆ ಸಾಲುಸಾಲಾಗಿ ಸೋಲಿನ ಭೀತಿಯಲ್ಲಿ ಸಿಪಿವೈ ಕಂಗಾಲಾಗಿರುವುದು ನಿಜವಾದರೂ ತಾಳ್ಮೆಯಿಂದಲೇ ಕಾಯುತ್ತಿದ್ದು ಬಜೆಟ್ ನಂತರ ಸಚಿವರಾಗೋದು ಸಿದ್ಧ ಎಂದು ಅಭಿಮಾನಿಗಳ ಆಶಾದಾಯಕವಾಗಿದೆ.
*ಬೆಂಗಳೂರು ಮೈಸೂರು ಹೆದ್ದಾರಿಯ ತುಂಬೆಲ್ಲಾ ಫ್ಲೆಕ್ಸ್ ಬ್ಯಾನರ್*
ಸಿ ಪಿ ಯೋಗೇಶ್ವರ್ ಸಚಿವರಾಗೋದು ಶತ:ಸಿದ್ಧ ಎಂದರಿತ ತಾಲ್ಲೂಕಿನ ಅಭಿಮಾನಿಗಳು, ಬೆಂಬಲಿಗರು ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತರು ನಗರದಲ್ಲಷ್ಟೇ ಅಲ್ಲದೆ ಬೆಂಗಳೂರು ಮೈಸೂರು ಹೆದ್ದಾರಿಯುದ್ದಕ್ಕೂ ಫ್ಲೆಕ್ಸ್, ಬ್ಯಾನರ್ ಗಳನ್ನು ಎರಡು ದಿನಗಳಿಂದ ಕಟ್ಟಿದ್ದು, ಹೈಕಮಾಂಡ್ ಸೂಚನೆಯ ಮೇರೆಗೆ ವಲಸಿಗರಿಗೆ ಮಾತ್ರ ಸಚಿವಗಿರಿ ನೀಡಲು ತಾಕೀತಾದ ನಂತರ ನಿರಾಸೆ ಮೂಡಿದ್ದು ಕಾಲಕ್ಕೆ ಅವಕಾಶ ಕೊಟ್ಟು ಚಾತಕ ಪಕ್ಷಿಯಂತೆ ಕಾಯಲು ಸಿದ್ದರಾಗಿದ್ದಾರೆ.
*ನೂತನ ಹತ್ತು ಸಚಿವರು*
ಚನ್ನಪಟ್ಟಣ ಮೂಲದವರಾದ ಎಸ್ ಟಿ ಸೋಮಶೇಖರ, ಶ್ರೀಮಂತ ಪಾಟೀಲ್, ಭೈರತಿ ಬಸವರಾಜ್, ರಮೇಶ್ ಜಾರಕಿಹೊಳಿ, ಡಾ ಸುಧಾಕರ್, ಶಿವರಾಮ ಹೆಬ್ಬಾರ್, ನಾರಾಯಣಗೌಡ, ಆನಂದಸಿಂಗ್, ಗೋಪಾಲಯ್ಯ ಮತ್ತು ಬಿ ಸಿ ಪಾಟೀಲ್ ರು ನೂತನ ಸಚಿವರಾಗಿ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in karnataka »
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ರಾಮನಗರ, ಫೆ. 02 : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ
ಸಂವಿಧಾನ ಜಾಗೃತಿ ಜಾಥಾ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ
ಪ್ರತಿಕ್ರಿಯೆಗಳು