ಒಂದಂಕಿ ಲಾಟರಿ ಪ್ರಕರಣದಲ್ಲಿ ಧರಣೇಂದ್ರ ಸೇರಿ ಮೂವರ ಖುಲಾಸೆ, ಸುಳ್ಳು ಕೇಸು ದಾಖಲಿಸಿದವರ ವಿರುದ್ಧ ಸಿಬಿಐ ಚಾಜ್೯ ಶೀಟ್
ಬೆಂಗಳೂರು: ೨೦೧೫ ರಲ್ಲಿ ಭಾರಿ ಸದ್ದು ಮಾಡಿ ಇಬ್ಬರು ಪೋಲೀಸ್ ಅಧಿಕಾರಿಗಳ ಅಮಾನತ್ತಿಗೆ ಕಾರಣವಾಗಿದ್ದ ಒಂದಂಕಿ ಲಾಟರಿ ಪ್ರಕರಣದಲ್ಲಿ ಸಿಬಿಐ ಕ್ಲೀನ್ ಚಿಟ್ ನೀಡಿದ್ದು, ಸುಳ್ಳು ಮೊಕದ್ದಮೆ ಹೂಡಲು ಕಾರಣಕರ್ತರಾಗಿದ್ದ, ಹತ್ತು ಮಂದಿ ಪೋಲೀಸರ ವಿರುದ್ದ ಸಿಬಿಐ ಕೋಟ್೯ ನಲ್ಲಿ ಚಾಜ್೯ಶೀಟ್ ಸಲ್ಲಿಸಲಾಗಿದೆ.
ಅಂದಿನ ಬೆಂಗಳೂರು ನಗರ ಪೋಲಿಸ್ ವತಿಷ್ಠಾಧಿಕಾರಿ ಅಲೋಕ್ ಕುಮಾರ್ ಮತ್ತು ಲಾಟರಿ ನಿಷೇಧ ದಳದ ಎಸ್ಪಿ ಆಗಿದ್ದ ಧರಣೇಂದ್ರ ರವರು ಅಮಾನತು ಶಿಕ್ಷೆಗೆ ಒಳಗಾದರೆ, ಒಂದಂಕಿ ಲಾಟರಿಯ ಪ್ರಮುಖ ಆರೋಪಿ, ಏಜೆಂಟ್ ಪಾರಿ ರಾಜನ್ ಜೈಲು ಪಾಲಾಗಿದ್ದರು.
ಅಂದಿನ ವಿರೋಧ ಪಕ್ಷಗಳು ನೂರಾರು ಕೋಟಿ ರೂಪಾಯಿಗಳ ಅವ್ಯವಹಾರ ಇದಾಗಿದ್ದು ಕಿಂಗ್ ಫಿನ್ ಜೊತೆ ಅಧಿಕಾರಿಗಳು ಶಾಮೀಲಾಗಿರುವುದರಿಂದ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದವು.
ಸರ್ಕಾರವೂ ಮೊದಲು ಸಿಐಡಿ ಗೆ ವಹಿಸಿತ್ತಾದರೂ ನಂತರ ಸಿಬಿಐ ಗೆ ವಹಿಸಲಾಯಿತು. ನಾಲ್ಕು ವರ್ಷಗಳ ಸುಧೀರ್ಘ ತನಿಖೆ ನಡೆಸಿದ ಸಿಬಿಐ ಅಧಿಕಾರಿಗಳಿಗೆ ಮತ್ತು ಲಾಟರಿ ಏಜೆಂಟ್ ಗೆ ಕ್ಲೀನ್ ಚಿಟ್ ನೀಡಿದ್ದಲ್ಲದೆ ಸುಳ್ಳು ಆರೋಪ ಮಾಡಿದ್ದ ಅಂದಿನ ಐಜಿ ಪದ್ಮನಯನ ಸೇರಿದಂತೆ ಹತ್ತು ಪೋಲೀಸರ ವಿರುದ್ದ ಸಿಬಿಐ ಕೋಟ್೯ನಲ್ಲಿ ಚಾಜ್೯ಶೀಟ್ ಸಲ್ಲಿಸಿದ್ದಾರೆ.
ಅಲೋಕ್ ಕುಮಾರ್ ಮತ್ತು ಧರಣೇಂದ್ರ ರವರು ಖಡಕ್ ಅಧಿಕಾರಿಗಳಾಗಿದ್ದು ಅಲೋಕ್ ಕುಮಾರ್ ಸೇವೆಯಲ್ಲಿದ್ದು, ಧರಣೇಂದ್ರ ರವರು ನಿವೃತ್ತರಾಗಿದ್ದಾರೆ.
ಧರಣೇಂದ್ರ ರವರು ಚನ್ನಪಟ್ಟಣ ದಲ್ಲಿ ಸಬ್ ಇನ್ಸ್ಪೆಕ್ಟರ್, ಇನ್ಸ್ಪೆಕ್ಟರ್ ಅಲ್ಲದೆ ಡಿವೈಎಸ್ಪಿ ಆಗಿಯೂ ಕೆಲಸ ನಿರ್ವಹಿಸಿದ್ದು ಒಳ್ಳೆಯ ಹೆಸರು ಗಳಿಸಿಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.
ಯಾವುದೇ ತಪ್ಪು ಮಾಡದೇ ಹದಿನಾಲ್ಕು ತಿಂಗಳುಗಳ ಕಾಲ ಅಮಾನತುಗೊಂಡು ಅಪಮಾನಕ್ಕೆ ಗುರಿಯಾದ, ಅಧಿಕಾರಿಗಳಿಗೆ ನಾಲ್ಕು ವರ್ಷಗಳ ನಂತರ ನ್ಯಾಯ ಸಿಕ್ಕರೂ ಸಹ ಅಂದು ಅವರು ಅನುಭವಿಸಿದ ಅಪಮಾನಕ್ಕೆ ಯಾರೂ ಹೊಣೆಯಾಗುತ್ತಾರೆ, ಕಳೆದು ಹೋದ ಮಾನಕ್ಕೆ ಪ್ರತಿಫಲ ಏನು ಎಂಬುದು ಯಕ್ಷ ಪ್ರಶ್ನೆಯಾಗಿದೆ.
ಒಂದನೇ ಆರೋಪಿಯಾಗಿ ನಿವೃತ್ತ ಐಜಿ ಪದ್ಮನಯನ, ಎರಡನೇ ಆರೋಪಿಯಾಗಿ ಕನಕಲಕ್ಷ್ಮಿ, ಇನ್ನಿತರ ಪೋಲೀಸ್ ಅಧಿಕಾರಿ ಹಾಗೂ ಕಾನ್ಸಟೇಬಲ್ ಗಳಾದ ಜಿ.ಟಿ ರಾಮಸ್ವಾಮಿ, ಸಿ.ಆರ್ ರಂಗನಾಥ, ಲೋಕೇಶ್, ಶ್ರೀಕಂಠ, ರವಿಪ್ರಕಾಶ್, ತಿಪ್ಪೇಸ್ವಾಮಿ, ವೇಣುಗೋಪಾಲ, ರವಿಕುಮಾರ್ ವಿರುದ್ದ ೧೨೦ಬಿ ಕ್ರಿಮಿನಲ್, ಐಪಿಸಿ ೧೬೭, ೧೮೨, ೧೯೩, ೧೯೫, ೨೧೧, ೨೧೮ ರ ಅಡಿಯಲ್ಲಿ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in karnataka »
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ರಾಮನಗರ, ಫೆ. 02 : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ
ಸಂವಿಧಾನ ಜಾಗೃತಿ ಜಾಥಾ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ
ಪ್ರತಿಕ್ರಿಯೆಗಳು