ಪ್ರಯಾಣಿಕರಿಗೆ ಭೀತಿ ಮೂಡಿಸಿದ್ದ ಹೆದ್ದಾರಿ ದರೋಡೆಕೋರರ ಬಂಧನ
ಮಂಡ್ಯ: ಮೋಜು-ಮಸ್ತಿ ಮಾಡಲು ರಾತ್ರಿ ವೇಳೆ ಹೆದ್ದಾರಿಯಲ್ಲಿ ದರೋಡೆ ಮಾಡುತ್ತಿದ್ದ ೦೯ ಮಂದಿ ಆರೋಪಿಗಳು ಶ್ರೀರಂಗಪಟ್ಟಣ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ.
ಮೈಸೂರು ತಾಲ್ಲೂಕು ರಮ್ಮನಹಳ್ಳಿಯ ಯು. ಉಪೇಂದ್ರ (೧೯), ಕಿರಣ (೨೦), ಪ್ರತಾಪ್ (೨೩), ಮಾದಪ್ಪ (೨೧), ಎಂ.ಶೇಖರ (೨೮), ಅನೂಜ್ (೨೧), ಕಿರಣ (೨೦), ಮೈಸೂರಿನ ಗಾಂಧಿ ನಗರ ನಿವಾಸಿಗಳಾದ ರವಿಕುಮಾರ (೨೪), ಜಿ.ಶಿವಕುಮಾರ (೨೨) ಬಂಧಿತರು.
ಆರೋಪಿಗಳಿಂದ ೧೧ ಮೊಬೈಲ್ ಫೋನ್, ೧೪೦೦ ರೂ. ನಗದು, ಅಪರಾಧ ಕೃತ್ಯಕ್ಕೆ ಬಳಸುತ್ತಿದ್ದ ಕಾರು, ೨ ಸ್ಕೂಟರ್, ಮಾರಕಾಸ್ತ್ರ ಸೇರಿದಂತೆ ೨.೫೪ ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
*ಶೋಕಿಲಾಲಾಗಳು:*
ಬಂಧಿತ ಆರೋಪಿಗಳು ಪೈಕಿ ಕೆಲವರು ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಇನ್ನೂ ಕೆಲವರು ತರಕಾರಿ, ಹಣ್ಣು ವ್ಯಾಪಾರ ಮಾಡಿ ಜೀವನ ನಡೆಸುತ್ತಿದ್ದರು. ಮೋಜಿನ ಜೀವನ ನಡೆಸಲು ಹೆಚ್ಚು ಹಣ ಬೇಕಿದ್ದ ಕಾರಣ ಎಲ್ಲರೂ ಸೇರಿ ಬೆಂಗಳೂರು- ಮೈಸೂರು ಹೆದ್ದಾರಿ, ಹಾಸನ-ಮೈಸೂರು ಹೆದ್ದಾರಿ, ಮೈಸೂರು-ಅರಕೆರೆ ರಸ್ತೆ ಸೇರಿದಂತೆ ಹಲವೆಡೆ ದರೋಡೆ ನಡೆಸುತ್ತಿದ್ದರು.
ಹಗಲಿನಲ್ಲಿ ವ್ಯಾಪಾರ, ಗಾರೆ ಕೆಲಸ ಮುಗಿಸಿ ರಾತ್ರಿ ವೇಳೆ ದರೋಡೆಗೆ ಸಂಚು ರೂಪಿಸುತ್ತಿದ್ದರು. ರಾತ್ರಿ ವೇಳೆ ಹೆದ್ದಾರಿಗಳಲ್ಲಿ ಓಡಿ ಸುತ್ತಿದ ಗದ್ದರ್ ದತ್ ಸವಾಾರರುುುುುುುುುುು
ಹಲ್ಲೆ ಮಾಡಿ ಹಣ, ಚಿನ್ನಾಭರಣ, ಮೊಬೈಲ್ ಫೋನ್ಗಳನ್ನು ದೋಚುತ್ತಿದ್ದರು. ಇದರಿಂದ ಸಿಕ್ಕ ಹಣದಲ್ಲಿ ಶೋಕಿ ಮಾಡುತ್ತಿದ್ದೆವು. ಮೋಜು ಮಾಡಲು ಹಣ ಬೇಕಾಗಿದ್ದರಿಂದ ದರೋಡೆ ಮಾಡುತ್ತಿದ್ದೆವು ಎಂದು ವಿಚಾರಣೆ ವೇಳೆ ಒಪ್ಪಿಕೊಂಡಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಪರಶುರಾಮ ಶುಕ್ರವಾರ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದರು.
*ಸಿಕ್ಕಿ ಬಿದ್ದದ್ದು ಹೇಗೆ?:*
ಫೆ.೫ರಂದು ಸಂಜೆ ೬.೩೦ರಲ್ಲಿ ಹಂಪಾಪುರ ಚೆಕ್ಪೋಸ್ಟ್ ಬಳಿ ಪಿಎಸ್ಐ ಮತ್ತು ಸಿಬ್ಬಂದಿ ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ನೀಲಿ ಬಣ್ಣದ ಕಾರಿನಲ್ಲಿದ್್ದದವ ರನ್ನು ಪರಿಶೀಲಿಸಿದಾಗ ಅದರಲ್ಲಿ ಲಾಂಗ್, ದೊಣ್ಣೆ ಇದ್ದದ್ದು ಕಂಡು ಬಂದಿದ್ದು ೬ ಮಂದಿಯನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದರು. ಆಗ ದರೋಡೆ ಕೃತ್ಯ ನಡೆಸುತ್ತಿದ್ದೇವೆ ಎಂದು ಬಾಯಿ ಬಿಟ್ಟಿದ್ದಾರೆ. ಬಂಧಿತರು ನೀಡಿದ ಮಾಹಿತಿ ಮೇರೆಗೆ ಉಳಿದ ಮೂವರು ಆರೋಪಿಗಳನ್ನು ಶ್ರೀರಂಗಪಟ್ಟಣ ಪೊಲೀಸರು ಬಂಧಿಸಿದ್ದಾರೆ.
*ಪ್ರಕರಣಗಳೇನು?:*
೨೦೨೦ ಜ.೨೧ರ ತಡರಾತ್ರಿ ೧.೩೦ರಲ್ಲಿ ಅರಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಪಾಳ್ಯ ಗ್ರಾಮದ ಸ್ಮಶಾನದ ಬಳಿ ಶಿವನಸಮುದ್ರ-ಬನ್ನೂರು-ಶ್ರೀರಂಗಪಟ್ಟಣ ಹೆದ್ದಾರಿಯಲ್ಲಿ ಗೂಡ್ಸ್ ವಾಹನವನ್ನು ತಡೆದು ದರೋಡೆ ನಡೆಸಿದ್ದರು. ವಾಹನದಲ್ಲಿದ್ದ ಕೆ.ಆರ್.ನಗರ ತಾಲ್ಲೂಕು ಭೇೇೇೇರ್ಯರ್ರ ಗ್ರಾಮದ ರಂಗನಾಥ, ವೆಂಕಟೇಶ, ಚಾಮರಾಜನಗರ ತಾಲ್ಲೂಕು ಕುಡ್ಲೂರಿನ ಚಾಲಕ ನಾಗೇಶ್ನನ್ನು ಲಾಂಗ್-ದೊಣ್ಣೆಗಳನ್ನು ತೋರಿಸಿ ಅಡಿಕೆ ವ್ಯಾಪಾರದಿಂದ ಬಂದಿದ್ದ ೧೧ ಸಾವಿರ ರೂ. ನಗದು ಹಣವನ್ನು ದೋಚಿ ಪರಾರಿಯಾಗಿದ್ದರು. ಈ ಸಂಬAಧ ಅರಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
೨೦೨೦ ಜ.೩೦ರ ರಾತ್ರಿ ೧೨.೧೦ರ ಸುಮಾರಿನಲ್ಲಿ ಮೈಸೂರು-ಅರಕೆರೆ ರಸ್ತೆ ಹಂಪಾಪುರ ಗ್ರಾಮದ ಕ್ರಾಸ್ ಬಳಿ ಮೈಸೂರಿನಿಂದ ಮಹದೇವಪುರ ಗ್ರಾಮಕ್ಕೆ ಬೈಕ್ನಲ್ಲಿ ಬರುತ್ತಿದ್ದ ಚಂದ್ರಶೇಖರ, ಪುರುಷೋತ್ತಮ ಅವರನ್ನು ನಾಲ್ಕು ಮಂದಿ ದುಷ್ಕರ್ಮಿಗಳು ಬೆದರಿಸಿ ೯೮೦೦ ರೂ. ಹಾಗೂ ಎರಡು ಮೊಬೈಲ್ ಫೋನ್ಗಳನ್ನು ಕಳವು ಮಾಡಿದ್ದರು.
ಅಲ್ಲದೆ, ಅದೇ ದಿನ ಮೈಸೂರು ತಾಲ್ಲೂಕು ರಮ್ಮನಹಳ್ಳಿ ಬಳಿಯ ಮೈಸೂರು-ಮಹದೇವಪುರ ರಸ್ತೆಯಲ್ಲಿ ರಾತ್ರಿ ೧.೩೦ರ ಸುಮಾರಿನಲ್ಲಿ ಮೈಸೂರಿನ ಹಾಲಿನ ಡೇರಿಯಲ್ಲಿ ಉದ್ಯೋಗಿಯಾಗಿದ್ದ ಗೊಬ್ಬರಗಾಲ ನಿವಾಸಿ ಸಂಜಯ್ ಎಂಬುವವರನ್ನು ಅಡ್ಡಗಟ್ಟಿ ನಗದು, ಮೊಬೈಲ್ ಫೋನ್ ದೋಚಿದ್ದರು.
ಎರಡೂ ಪ್ರಕರಣದ ಆರೋಪಿಗಳ ಪತ್ತೆಗೆ ಎಎಸ್ಪಿ ಡಾ.ವಿ.ಜೆ.ಶೋಭಾರಾಣಿ, ಶ್ರೀರಂಗಪಟ್ಟಣ ಡಿವೈಎಸ್ಪಿ ಅರುಣ್ ಎನ್.ನಾಗೇಗೌಡ ಮಾರ್ಗದರ್ಶನದಲ್ಲಿ ತಂಡ ರಚಿಸಲಾಗಿತ್ತು. ಸಿಪಿಐ ಕೆ.ವಿ.ಕೃಷ್ಣಪ್ಪ, ಅರಕೆರೆ ಪಿಎಸ್ಐ ಸಿ.ಚೌಡೇಗೌಡ, ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯ ಪಿಎಸ್ಐ ಗಿರೀಶ್, ಕೆಆರ್.ಸಾಗರ ಪಿಎಸ್ಐ ಎಸ್.ಬಿ.ನವೀನ್ಗೌಡ, ಶ್ರೀರಂಗಪಟ್ಟಣ ಪಿಎಸ್ಐ ಮುದ್ದುಮಹದೇವ, ಎಎಸ್ಐ ಮಂಚಪ್ಪ, ಕುಮಾರ, ಕೃಷ್ಣಶೆಟ್ಟಿ, ರಾಜಶೇಖರ, ಮಂಜೇಗೌಡ, ಎಸ್.ಅರುಣ್ಕುಮಾರ, ರವೀಶ, ಎಸ್.ಎಸ್.ಚಂದ್ರ ಶೇಖರ, ದಿನೇಶ, ಕಿರಣ್ ಕುಮಾರ, ಚಾಲಕರಾದ ಪ್ರಕಾಶ, ನವೀನ ಪೊಲೀಸ್ ಕಚೇರಿ ತಾಂತ್ರಿಕ ವಿಭಾಗದ ಸಿಬ್ಬಂದಿ ರವಿಕಿರಣ್, ಲೋಕೇಶ್, ಗೃಹರಕ್ಷಕದಳದ ಶ್ರೀನಿವಾಸ್ ಕಾರ್ಯಾಚರಣೆ ತಂಡದಲ್ಲಿ ದ್ದರು. ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in karnataka »
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ರಾಮನಗರ, ಫೆ. 02 : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ
ಸಂವಿಧಾನ ಜಾಗೃತಿ ಜಾಥಾ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ
ಪ್ರತಿಕ್ರಿಯೆಗಳು