ನಾವೂ ಹೊರಹೋಗಲ್ಲ, ನೀವು ಬರಬೇಡಿ. ಕೊರೊನಾ ಬಗ್ಗೆ ಎಚ್ಚರಿಕೆ ವಹಿಸಿದ ಕೆಲವು ಗ್ರಾಮಸ್ಥರು
ಗೋವಿಂದೇಗೌಡನದೊಡ್ಡಿ ಮತ್ತು ಚನ್ನಂಕೇಗೌಡನದೊಡ್ಡಿ ಗ್ರಾಮದ ಯುವಕರಿಗೆ ತಿಳಿ ಹೇಳುತ್ತಿರುವ ಸಬ್ ಇನ್ಸ್ಪೆಕ್ಟರ್
ಚನ್ನಪಟ್ಟಣ:ಮಾ/೨೬/೨೦/ಗುರುವಾರ.ಕೊರೊನಾ ವೈರಸ್ ದಿನೇದಿನೇ ಹೆಚ್ಚಾಗುತ್ತಿರುವುದನ್ನು ನಿಧಾನವಾಗಿ ಅರ್ಥೈಸಿಕೊಳ್ಳುತ್ತಿರುವ ಗ್ರಾಮೀಣ ಭಾಗದ ಯುವಕರು ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿದ್ದು, ನಮ್ಮ ಗ್ರಾಮದಿಂದ ಯಾರೂ ಹೊರಹೋಗುವುದಿಲ್ಲ. ನಮ್ಮ ಗ್ರಾಮಗಳಿಗೆ ಬೇರೆ ಗ್ರಾಮದವರು ಬರುವುದು ಬೇಡ ಎಂದು ತಾಲ್ಲೂಕಿನ ಕೆಲ ಗ್ರಾಮದ ಗಡಿ ಭಾಗಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು.
ವಂದಾರಗುಪ್ಪೆ ಗ್ರಾಮದಲ್ಲಿ ಹೆದ್ದಾರಿಯಿಂದ ಊರೊಳಗೆ ಹೋಗುವ ರೈಲ್ವೇ ಗೇಟ್, ದೇವರಹೊಸಹಳ್ಳಿ ಗ್ರಾಮದಿಂದ ಬರುವ ರಸ್ತೆ ಮತ್ತು ಕಣ್ವ ದಿಂದ ಬರುವ ರಸ್ತೆಯನ್ನು ಮುಚ್ಚಿದ ಗ್ರಾಮಸ್ಥರು, ನಿಷೇಧ ಜಾರಿಯಲ್ಲಿದ್ದರೂ ಸಹ ನಗರದಿಂದ ಒಂದು ಕೋಮಿನ ಯುವಕರು ಬೈಕ್ ನಲ್ಲಿ ಬಂದು ಸುತ್ತು ಹಾಕುತ್ತಿದ್ದಾರೆ.
ಕೆಲವು ಜಮೀನುಗಳಿಗೆ ನುಗ್ಗಿ ನೀರಿನ ತೊಟ್ಟಿಯಲ್ಲಿ ಈಜಾಡುವುದಲ್ಲದೆ ಬೈಕ್ ವ್ಹೀಲಿಂಗ್ ಮಾಡುತ್ತಿದ್ದು ಗ್ರಾಮಸ್ಥರು ಯುವಕರ ಅಜಾಗರೂಕತೆ ಹಾಗೂ ಕೊರೊನಾ ವೈರಸ್ ಬಗ್ಗೆ ಆತಂಕಗೊಂಡಿರುವುದರಿಂದ ನಮ್ಮೂರಿಗೆ ಪರ ಊರಿನವರು ಬರದಂತೆ ಎಚ್ಚರವಹಿಸಿರುವುದಾಗಿ ತಿಳಿಸಿದರು.
ಈ ಸಮಯದಲ್ಲಿ ಜೆಡಿಎಸ್ ಮುಖಂಡ ವಿ ಬಿ ಚಂದ್ರು, ಗ್ರಾಮ ಪಂಚಾಯತಿ ಸದಸ್ಯೆ ವಿಮಲಾ, ಕಿರಣ್, ನಂದೀಶ ಸೇರಿದಂತೆ ಗ್ರಾಮದ ಹಿರಿಯರು ಹಾಗೂ ಯುವಕರು ಪಾಲ್ಗೊಂಡಿದ್ದರು.
ತಾಲ್ಲೂಕಿನ ಗೋವಿಂದೇಗೌಡನದೊಡ್ಡಿ ಮತ್ತು ಚನ್ನಂಕೇಗೌಡನದೊಡ್ಡಿ ಗ್ರಾಮದ ಯುವಕರು ಸಹ ನೀಲಕಂಠನಹಳ್ಳಿ, ಹೊಡಿಕೆಹೊಸಹಳ್ಳಿ ಮತ್ತು ಕೂಡ್ಲೂರು ಗ್ರಾಮದ ಗಡಿ ಭಾಗದಲ್ಲಿ ಮರದ ದಿಮ್ಮಿಗಳನ್ನು ಇಟ್ಟು ಯಾರೂ ನಮ್ಮೂರಿನೊಳಗೆ ಬರಬಾರದೆಂದು ತಡೆ ಹಿಡಿದರು.
ನಮ್ಮೂರಿನ ಕೆಲ ಕಿರಾಣಿ ಅಂಗಡಿಗಳಲ್ಲಿ, ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ಅಕ್ಕಪಕ್ಕದ ಗ್ರಾಮಸ್ಥರು ಹುಡುಕಿಕೊಂಡು ಬರುತ್ತಿರುವುದರಿಂದ ಪ್ರತಿದಿನವೂ ನೂರಾರು ಮಂದಿ ಬಂದು-ಹೋಗುತ್ತಿದ್ದಾರೆ.
ನಗರದ ಕೆಲ ಯುವಕರು ಗಾಂಜಾ ಮತ್ತಿನಲ್ಲಿ ಬೈಕ್ ರೈಡಿಂಗ್ ಮಾಡಿಕೊಂಡು ಬರುತ್ತಿರುವುದರಿಂದ ಇವರಿಗೇನಾದರೂ ಕೊರೊನಾ ಸೋಂಕು ಇದ್ದರೆ ನಮ್ಮೂರಿನ ಗತಿ ಏನು ಎಂದು ಪ್ರಶ್ನಿಸಿದರು.
ನಂತರ ಗ್ರಾಮಾಂತರ ಠಾಣೆಯ ಪೋಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಶಿವಕುಮಾರ್ ಮತ್ತು ಸಿಬ್ಬಂದಿಗಳು ಬಂದು ರಸ್ತೆಯನ್ನು ತೆರವುಗೊಳಿಸಿ ಯುವಕರಿಗೆ ತಿಳಿ ಹೇಳಿದರು.
ಮನೆಯಲ್ಲಿ ಕೂರಬೇಕಾದ ನೀವು ಗುಂಪುಗುಂಪಾಗಿ ಹೊರಬಂದಿರುವುದು ಕೊರೊನಾ ವೈರಸ್ ಗೆ ದಾರಿ ಮಾಡಿಕೊಟ್ಟಂತಾಗಿದೆ. ಅಕ್ರಮ ಚಟುವಟಿಕೆಗಳಿದ್ದರೆ ಲಿಖಿತವಾಗಿ ನಮಗೆ ದೂರು ನೀಡಿದರೆ ಕಾನೂನು ರೀತ್ಯಾ ಕ್ರಮ ಕೈಗೊಳ್ಳುತ್ತೇವೆ ಎಂದರು.
ಗ್ರಾಮದ ಅಂಗಡಿಗಳನ್ನು ಮುಚ್ಚಿಸಿ, ಯುವಕರನ್ನು ಚದುರಿಸಿ ಕಳುಹಿಸಿದರು.
ರಸ್ತೆ ತಡೆಯಲ್ಲಿ ಗ್ರಾಮಗಳ ಮುಖಂಡರಾದ ರಾಮಕೃಷ್ಣ, ವಿಜೇಂದ್ರ, ರೈಲ್ವೇ ಚನ್ನೇಗೌಡ, ಕುಮಾರ, ಚಿಕ್ಕತಿಮ್ಮಯ್ಯ ಸೇರಿದಂತೆ ಅನೇಕ ಯುವಕರು ಪಾಲ್ಗೊಂಡಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in karnataka »
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ರಾಮನಗರ, ಫೆ. 02 : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ
ಸಂವಿಧಾನ ಜಾಗೃತಿ ಜಾಥಾ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ
ಪ್ರತಿಕ್ರಿಯೆಗಳು