ಹತ್ತನೇ ತರಗತಿ ಹೊರತುಪಡಿಸಿ ಒಂಭತ್ತನೆಯ ತರಗತಿಯ ತನಕ ಎಲ್ಲರೂ ಪಾಸು ಸುರೇಶ್ ಕುಮಾರ್
ಬೆಂಗಳೂರು/ರಾಮನಗರ/೦೨/೨೦/ಗುರುವಾರ. ೨೦೧೯/೨೦ ನೇ ಶೈಕ್ಷಣಿಕ ಸಾಲಿನ ೭, ೮ ಮತ್ತು ೯ ನೇ ತರಗತಿಯ ವಿದ್ಯಾರ್ಥಿಗಳನ್ನು ಪರೀಕ್ಷೆ ನಡೆಸದೇ ಉತ್ತೀರ್ಣಗೊಳಿಸುವಂತೆ ರಾಜ್ಯದ ಎಲ್ಲಾ ಜಿಲ್ಲಾ ಶಿಕ್ಷಣ ಉಪ ನಿರ್ದೇಶಕರ ಮೂಲಕ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಆಯಾಯ ಶಾಲೆಯ ಮುಖ್ಯೋಪಾಧ್ಯಾಯರಿಗೆ ಸಚಿವ ಸುರೇಶ್ ಕುಮಾರ್ ಆದೇಶಿಸಿದ್ದಾರೆ.
ನೊವೆಲ್ ಕೊರೊನಾ (ಕೋವಿಡ್-೧೯) ನ ವೈರಸ್ ಸೋಂಕು ತಡೆಗಟ್ಟುವಿಕೆಗೆ ಮುಂಜಾಗ್ರತಾ ಕ್ರಮವಾಗಿ *ಒಂದರಿಂದ ಆರನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ರದ್ದುಪಡಿಸಿದ್ದು ೨೦೧೯/೨೦ ನೇ ಶೈಕ್ಷಣಿಕ ಸಾಲಿನಲ್ಲಿ ವಿದ್ಯಾರ್ಥಿಗಳು FA-1, FA-2, FA-3, FA-4 ಮತ್ತು 5A-1 ರಲ್ಲಿ ಗಳಿಸಿರುವ ಅಂಕಗಳ ಆಧಾರದ ಮೇಲೆ ಶ್ರೇಣಿಕೃತ ಫಲಿತಾಂಶವನ್ನು ಪ್ರಕಟಿಸಿ ಮುಂದಿನ ತರಗತಿಗೆ ತೇರ್ಗಡೆಗೊಳಿಸುವಂತೆ* ಈಗಾಗಲೇ ಉಲ್ಲೇಖ (೧) ಸುತ್ತೋಲೆಯನ್ನು ದಿನಾಂಕ ೧೩/೦೩/೨೦ ರಲ್ಲೇ ಸೂಚಿಸಲಾಗುತ್ತು.
ಉಲ್ಲೇಖ (೧) ರ ಸುತ್ತೋಲೆ ದಿನಾಂಕ *೨೬/೦೩/೨೦ ರಲ್ಲಿ ೭ ರಿಂದ ೯ ವಿದ್ಯಾರ್ಥಿಗಳಿಗೆ ದಿನಾಂಕ ೨೦/೦೪/೨೦ ರವರೆಗೆ ಪರೀಕ್ಷಾ ಪೂರ್ವಸಿದ್ಧತಾ ರಜೆಯನ್ನು* ಘೋಷಿಸಿದ್ದು ಪರೀಕ್ಷಾ ವೇಳಾಪಟ್ಟಿಯನ್ನು ನಂತರದ ದಿನಗಳಲ್ಲಿ ಪ್ರಕಟಿಸುವುದಾಗಿ ಈ ಹಿಂದೆ ತಿಳಿಸಲಾಗಿತ್ತು.
ದಿನಾಂಕ ೦೨/೦೪/೨೦ ರಂದು ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ತೀರ್ಮಾನದಲ್ಲಿ ಕೈಗೊಂಡ ತೀರ್ಮಾನದಂತೆ, ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹರಡುತ್ತಿರುವುದು ಮುಂದುವರೆಯುತ್ತಿರುವ ಹಿನ್ನೆಲೆಯಲ್ಲಿ *೭ ಮತ್ತು ೮ ನೇ ತರಗತಿಯ ವಿದ್ಯಾರ್ಥಿಗಳಿಗೂ ಸಹ ೨೦೧೯/೨೦ ನೇ ಸಾಲಿಗೆ ಪರೀಕ್ಷೆಗಳನ್ನು ರದ್ದುಪಡಿಸಿದ್ದು, ಸದರಿ ವಿದ್ಯಾರ್ಥಿಗಳಿಗೆ ಯಾವುದೇ ಷರತ್ತುಗಳನ್ನು ವಿಧಿಸದೇ ಮುಂದಿನ ತರಗತಿಗೆ ಉತ್ತೀರ್ಣಗೊಳಿಸುವುದು* ಹಾಗೂ ಸದರಿ ವಿದ್ಯಾರ್ಥಿಗಳಿಗೆ ೨೦೧೯/೨೦ ಶೈಕ್ಷಣಿಕ ಸಾಲಿನಲ್ಲಿ ಈಗಾಗಲೇ ನಡೆಸಿರುವ ರೂಪಾತ್ಮಕ (ಫಾರಮೇಟಿವ್) ಹಾಗೂ ಸಂಕಾತ್ಮಕ (ಸಮ್ಮೆಟಿವ್) ಮೌಲ್ಯ ಮಾಪನದ ಆಧಾರದ ಮೇಲೆ ಶ್ರೇಣೀಕೃತ ಫಲಿತಾಂಶವನ್ನು ಪ್ರಕಟಿಸುವುದಾಗಿ ತಿಳಿಸಿದರು.
೯ ನೇ ತರಗತಿ ವಿದ್ಯಾರ್ಥಿಗಳನ್ನು ಶಾಲೆಯು ಈಗಾಗಲೇ ನಡೆಸಿರುವ ರೂಪಾತ್ಮಕ (ಫಾರಮೆಟಿವ್) ಹಾಗೂ ಸಂಕಲಾತ್ಮಕ (ಸಮ್ಮೆಟಿವ್) ಮೌಲ್ಯ ಮಾಪನದ ಆಧಾರದ ಮೇಲೆ ಮುಂದಿನ ತರಗತಿಗೆ ಉತ್ತೀರ್ಣಗೊಳಿಸಲು ಆದೇಶಿಸಲಾಗಿದೆ. ಆದರೆ ಯಾವುದೇ ವಿದ್ಯಾರ್ಥಿಯು ಈ ಆಂತರಿಕ ಮೌಲ್ಯಮಾಪನದಲ್ಲಿ ಉತ್ತೀರ್ಣರಾಗದೇ ಇದ್ದಲ್ಲಿ, ಶಾಲೆಗಳು ಈ ರಜಾ ಅವಧಿಯನ್ನು ಅಂತಹ ವಿದ್ಯಾರ್ಥಿಯ ಕಲಿಕೆಯ ಮಟ್ಟವನ್ನು ಉತ್ತಮಗೊಳಿಸುವ ಪ್ರಯತ್ನಕ್ಕೆ ಬಳಸಿಕೊಳ್ಳುವುದು ಹಾಗೂ *ಮುಂದಿನ ಶೈಕ್ಷಣಿಕ ಸಾಲಿನ ಆರಂಭದ ಮುನ್ನಾ ಸದರಿ ವಿದ್ಯಾರ್ಥಿಗಳಿಗೆ ಆನ್ಲೈನ್ ಅಥವಾ ಆಫ್ಲೈನ್ ಮೂಲಕ ಮೌಲ್ಯಾಂಕನ ಪರೀಕ್ಷೆಯನ್ನು ಬರೆಯುವ ಅವಕಾಶವನ್ನು ಒದಗಿಸಿ ಮುಂದಿನ ತರಗತಿಗೆ ಉತ್ತೀರ್ಣಗೊಳಿಸುವ* ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕೆಂದು ಸೂಚಿಸಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in karnataka »
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ರಾಮನಗರ, ಫೆ. 02 : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ
ಸಂವಿಧಾನ ಜಾಗೃತಿ ಜಾಥಾ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ
ಪ್ರತಿಕ್ರಿಯೆಗಳು