ಸಮಸ್ಯೆಗಳ ಪರಿಹಾರಕ್ಕೆ ಗಾಂಧಿ ಮಾರ್ಗ ಅಗತ್ಯ: ಪ್ರೊ.ಜಿ.ಬಿ. ಶಿವರಾಜು
ಮೈಸೂರು : ಜಗತ್ತಿನ ಎಲ್ಲಾ ಸಮಸ್ಯೆಗಳಿಗೆ ಗಾಂಧೀಜಿ ಅವರ ಶಾಂತಿ ಮತ್ತು ಅಹಿಂಸೆ ಮಾರ್ಗವೇ ಸರಿಯಾದ ಮಾರ್ಗ ಎಂದು ಕರ್ನಾಟಕ ಸ್ಮಾರಕ ನಿಧಿ ಉಪಾಧ್ಯಕ್ಷ ಪ್ರೊ.ಜಿ.ಬಿ. ಶಿವರಾಜು ಅವರು ತಿಳಿಸಿದರು.
ಕಿರು ರಂಗಮಂದಿರದಲ್ಲಿ ಆಯೋಜಿಸಿದ್ದ ಗಾಂಧಿ ಧ್ವನಿ ಮತ್ತು ಬೆಳಕು ಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಬಹಳಷ್ಟು ರಾಷ್ಟ್ರಗಳ ಮಕ್ಕಳು ಗಾಂಧಿ ವಿಚಾರಗಳನ್ನು ತಿಳಿಯಲು ವೆಬಸೈಟ್ನಲ್ಲಿ ಹುಡುಕುತ್ತಾರೆ. ನೆಮ್ಮದಿಯ ಬದುಕು ನಡೆಸಲು ಯುವಜನತೆಯು ಗಾಂಧೀಜಿಯ ಬಗ್ಗೆ ತಿಳಿದುಕೊಳ್ಳಬೇಕು, ಅವರ ತತ್ವಗಳನ್ನು ಪಾಲಿಸಬೇಕು ಎಂದರು.
ಇಂದಿನ ವಿದ್ಯಾಭ್ಯಾಸ ಪಠ್ಯಕ್ರಮ, ಉದ್ಯೋಗ ಆಧಾರಿತವಾಗಿದೆ. ನೈತಿಕ ಮೌಲ್ಯವನ್ನು ಮರೆತಿದೆ. ಇದು ಸಮಾಜದ ದ್ವಂಸೀಕರಣದ ಕಡೆ ಸಾಗುತ್ತಿದೆ. ಸತ್ಯ, ಅಹಿಂಸೆಯ ಮೂಲಕ ಎಲ್ಲಾವನ್ನು ಪಡೆಯಬಹುದು ಎಂದು ತೊರಿಸಿಕೊಟ್ಟವರು ಮಹಾತ್ಮ ಗಾಂಧೀಜಿ. 130 ವರ್ಷಗಳ ಕಾಲ ಕಪ್ಪು ಜನರಿಗೆ ಮತದಾನದ ಮಾಡಲು ಅವಕಾಶವಿಲ್ಲದಿದ್ದಾಗ ಪರಕೀಯರ ವಿರುದ್ಧ ಹೋರಾಡಿ ಮತದಾನದ ಹಕ್ಕು ತಂದುಕೊಟ್ಟವರು ಗಾಂಧೀಜಿಯವರು ಎಂದು ತಿಳಿಸಿದರು.
ಮಹಾತ್ಮ ಗಾಂಧೀಜಿ ಅವರ ಪ್ರತಿಮೆಯನ್ನು ಕೇವಲ ನಮ್ಮ ದೇಶದಲ್ಲಿ ಮಾತ್ರವಲ್ಲಾ ಇಡೀ ಜಗತ್ತಿನಲ್ಲಿ ನೋಡಬಹುದು. ಇದಕ್ಕೆ ಕಾರಣ ಅವರು ಪಾಲಿಸಿದ ಆದರ್ಶಗಳು. ಮಹಾತ್ಮ ಗಾಂಧೀಜಿಯವರ 32 ಸಾವಿರ ಪ್ರತಿಮೆಗಳಿವೆ. ವಿವಿಧ ಲೇಖಕರು ಬರೆದಿರುವ 450 ಜೀವನ ಚರಿತ್ರೆಗಳಿವೆ 23 ಭಾಷೆಗಳಲ್ಲಿ ಭಾಷಾಂತರವಾಗಿವೆ. ಮಹಾತ್ಮ ಗಾಂಧೀಜಿಯವರ ಭಾವಚಿತ್ರವುಳ್ಳ ವಿವಿಧ ಬಗೆಯ ಸ್ಟಾಂಪ್ಗಳಿವೆ ಎಂದರು.
ಗಾಂಧೀಜಿ ಅವರು ಮಾಡಿದ ಸ್ವಾತಂತ್ರ್ಯ ಹೋರಾಟಗಳಲ್ಲಿ ಮಾಡಿದ ಭಾಷಣ ಇಡೀ ಭಾರತದ ಚಿತ್ರಣವನ್ನು ಬದಲಾವಣೆ ಮಾಡಿದೆ. ಗಾಂಧೀಜಿಯ ತತ್ವಗಳನ್ನು ನಾನು ಅನುಸರಿಸುತ್ತೇನೆ ಎಂದು ಅಮೇರಿಕಾದ ಅಧ್ಯಕ್ಷರಾಗಿದ್ದ ಒಬಾಮ ಅವರು ಹೇಳಿದ್ದಾರೆ ಎಂದು ತಿಳಿಸಿದರು.
ಮೈಸೂರು ವಿಶ್ವವಿದ್ಯಾನಿಲಯದ ಗಾಂಧಿ ಅಧ್ಯಯನ ಸಂಸ್ಥೆ ನಿರ್ದೇಶಕ ಡಾ|| ಎಂ.ಎಸ್. ಶೇಖರ್ ಅವರು ಮಾತನಾಡಿ ಇಡೀ ದೇಶಕ್ಕೆ ಗಾಂಧೀಜಿ ಅವರು ನೀಡಿದ ಸಂದೇಶ ಮಾನವೀಯತೆ. ಜಗತ್ತಿನಲ್ಲಿ ಪ್ರೀತಿ, ವಿಶ್ವಾಸದಿಂದ ಬದುಕಬೇಕು ಎಂದರು.
ಕಾರ್ಯಕ್ರಮದಲ್ಲಿ ಮೈಸೂರು ವಿಶ್ವವಿದ್ಯನಿಲಯ ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಪಕ ಪ್ರೊ|| ಸಿ.ಕೆ.ಪುಟ್ಟಸ್ವಾಮಿ, ನಿವೃತ್ತ ಪ್ರಾಧ್ಯಪಕ ಪ್ರೊ|| ಬಿ.ಕೆ.ಶಿವಣ್ಣ, ರಂಗಾಯಾಣದ ಜಂಟಿ ನಿರ್ದೇಶಕ ಮಲ್ಲಿಕಾರ್ಜುನ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಆರ್.ರಾಜು ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
Recent news in karnataka »
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ರಾಮನಗರ, ಫೆ. 02 : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ
ಸಂವಿಧಾನ ಜಾಗೃತಿ ಜಾಥಾ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ
ಪ್ರತಿಕ್ರಿಯೆಗಳು