ಎಲ್ಲಿ ಸ್ತ್ರೀಯರನ್ನು ಪೂಜಿಸುತ್ತಾರೂ ಅಲ್ಲಿ ದೇವರು ನೆಲೆಸುತ್ತಾರೆ: ಬಿ.ಎಸ್ ಶ್ವೇತಾ ದೇವರಾಜು
ಹಾಸನ : ಮಹಿಳೆ ಅಬಲೆಯಲ್ಲ ಸಬಲೆ, ಎಲ್ಲಿ ಸ್ತ್ರೀಯರನ್ನು ಪೂಜಿಸುತ್ತಾರೂ ಅಲ್ಲಿ ದೇವರು ನೆಲೆಸುತ್ತಾರೆ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಿ.ಎಸ್ ಶ್ವೇತಾ ದೇವರಾಜು ಅವರು ಹೇಳಿದರು.
ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳಾ ಅಭಿವೃದ್ಧಿ ಇಲಾಖೆ, ಜಿಲ್ಲೆಯ ಸ್ತ್ರೀ ಶಕ್ತಿ ಒಕ್ಕೂಟ ಹಾಗೂ ವಿವಿಧ ಮಹಿಳಾಪರ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರ ದಿನ ನಮ್ಮೆಲ್ಲರ ದಿನ, ದೇಶ, ರಾಜ್ಯ, ಜಿಲ್ಲೆಯಲ್ಲಿ ಅಧಿಕವಾಗಿ ಮಹಿಳೆಯರು ಉನ್ನತ ಸ್ಥಾನದಲ್ಲಿದ್ದಾಗ ಹೆಮ್ಮೆ ಎನಿಸುತ್ತದೆ. ಹಾಸನ ಜಿಲ್ಲೆಯಲ್ಲಿ ಎಲ್ಲಾ ಮಹಿಳಾ ಅಧಿಕಾರಿಗಳು ಇರುವುದು ಹೆಮ್ಮೆ ವಿಚಾರ ಎಂದು ಶ್ವೇತಾ ದೇವರಾಜು ಅವರು ಶ್ಲಾಘಿಸಿದರು.
ಪ್ರತಿಯೊಬ್ಬ ಮಹಿಳೆಯರ ಯಶಸ್ಸಿಗೆ ಪುರುಷರ ಸಹಕಾರವು ಅತೀ ಮುಖ್ಯ. ಮಹಿಳೆಯರು ಮತ್ತು ಪುರುಷರು ಇಬ್ಬರು ಸಮಾಜದಲ್ಲಿ ಸರಿಸಮಾನರು, ಪ್ರತಿ ಕ್ಷೇತ್ರದಲು ಮಹಿಳೆಯರ ಸಾಧನೆ ಅಪಾರವಿದ್ದು ಇದು ನಿರಂತರವಾಗಿ ನಡೆದುಕೊಂಡು ಹೋಗಲಿ ಎಂದು ಆಶಯ ವ್ಯಕ್ತ ಪಡಿಸಿದರು.
ಗ್ರಾಮಾಂತರ ಪ್ರದೇಶದಲ್ಲಿರುವ ಹೆಣ್ಣು ಮಕ್ಕಳಿಗೂ ಏನಾದರು ಸಾಧಿಸುವ ಚಲಾವಿರುತ್ತದೆ ಆದರೆ ಇನ್ನೂ ಕೆಲವು ಕಟ್ಟುಪಡುಗಳಿಗೆ ಆಚರಣೆಗೆ ಒಳಗಾಗಿದ್ದಾರೆ, ಅವರನ್ನು ನಮ್ಮ ಜೊತೆಗೂಡಿಸಿಕೊಂಡು ಸ್ತ್ರೀ ಸಂಘಟನೆ ಮಾಡುವುದು ಅತೀ ಮುಖ್ಯವಾಗಿದೆ ಎಂದು ಹೇಳಿದರು.
ಮಹಿಳೆ ಮತ್ತು ನವಜಾತ ಶಿಶುಗಳಲ್ಲಿ ಪೌಷ್ಠಿಕಾಂಶದ ಕೊರತೆಯನ್ನು ಹೊಗಲಾಡಿಸಲು ರಾಜ್ಯ ಸರ್ಕಾರ ಮಾತೃಪೂರ್ಣ ಯೋಜನೆಯನ್ನು ಜಾರಿಗೆ ತಂದಿದೆ. ಮಹಿಳೆಯರಿಗಾಗಿ ಸಾಕಷ್ಟು ಅಭಿವೃದ್ಧಿ ಕಾರ್ಯಕ್ರಮಗಳು, ಕಾನೂನುಗಳು ಇದ್ದು ಅದನ್ನು ಎಲ್ಲಾ ಮಹಿಳೆಯರು ಸದುಪಯೋಗ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಎಂ ಜಾನಕಿ ಅವರು ಮಾತನಾಡಿ ಮಹಿಳಾ ದಿನಾಚರಣೆಯೂ ಒಂದು ಅರ್ಥಪೂರ್ಣ ದಿನವಾಗಿದ್ದು ಗ್ರಾಮೀಣ ಪ್ರದೇಶಗಳಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸುವಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಎಲ್ಲಾ ಇಲಾಖೆಗಳಿಗೆ ಮೂಲ ಆಧಾರವಾಗಿದೆ ಎಂದು ಹೇಳಿದರು.
ಮಹಿಳೆಯರ ಸ್ಥಾನಮಾನ ತಲೆಮಾರುಗಳು ಕಳೆದಂತೆ ಅಭಿವೃದ್ಧಿ ಹೊಂದುತ್ತಿರುವುದು ಖುಷಿಯ ಸಂಗತಿ ಎಂದರಲ್ಲದೆ ಲಿಂಗ ಅಸಮಾನತೆ ವಿರೋಧಿಸಿ ಸಮಸಮಾಜ ನಿರ್ಮಾಣ ಮಾಡಲು ಕುಟುಂಬದಿಂದಲೆ ಸಾಧ್ಯ ಎಂದು ತಿಳಿಸಿದರು.
ಮನೆಯಲ್ಲಿ ಮಕ್ಕಳು ಸಣ್ಣವರಿದ್ದಾಗಲೆ ಗಂಡು ಹೆಣ್ಣು ಬೇದ ತೋರಿಸದೆ ಇಬ್ಬರನ್ನು ಸಮಾನರು, ಎಲ್ಲರು ಎಲ್ಲಾ ಕೆಲಸವನ್ನು ಮಾಡಬಲ್ಲರು ಎಂಬ ಸಂಗತಿಯನ್ನು ಮನದಟ್ಟು ಮಾಡಬೇಕು ಇದ್ದರಿಂದ ದೇಶಕ್ಕೂ ಒಳ್ಳೆಯದು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾಣಬಹುದು ಎಂದು ಹೇಳಿದರು.
ಮಹಿಳೆಯರು ಸಕರಾತ್ಮಕ ಯೋಚನೆಗಳನ್ನು ಮಾಡಿ ದೇಹ, ಮನಸ್ಸನ್ನು ಸ್ವಸ್ಥವಾಗಿಟ್ಟುಕೊಂಡು ತಮ್ಮ ಬಗ್ಗೆಯು ಯೋಚಿಸಿ ಸ್ವಲ್ಪ ಸಮಯ ತಮಗಾಗಿ ಮಿಸಲಿಡಬೇಕು ಎಂದು ಹೇಳಿದರು.
ಮುಂಬರುವ ಚುನಾವಣೆಯಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಹೆಸರು ನೋಂದಾಯಿಸುವುದರ ಜೊತೆಗೆ ಸ್ವಯಂ ಪ್ರೇರಿತರಾಗಿ ಮತಚಲಾಯಿಸಿ, ಚುನಾವಣ ಆಯೋಗದ ಜೊತೆ ಕೈ ಜೋಡಿಸಿ ಎಂದು ಸ್ವೀಪ್ ಸಮಿತಿಯ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಎಂ ಜಾನಕಿ ಅವರು ಹೇಳಿದರು.
ಅತ್ಯುತ್ತಮ ಸೇವೆ ಪ್ರಶಸ್ತಿ: ಕಾರ್ಯಕ್ರಮದಲ್ಲಿ ಹೊಳೆನರಸೀಪುರ ತಾಲ್ಲೂಕಿನ ಸ್ಲಮ್ ಬೋರ್ಡ್ ಅಂಗನವಾಡಿಯಲ್ಲಿ ನಿರಂತರವಾಗಿ ಸೇವೆ ಸಲ್ಲಿಸಿಕೊಂಡು ಬರುತ್ತಿರುವ ಅಂಗನವಾಡಿ ಕಾರ್ಯಕರ್ತೆಗೆ ಜಿಲ್ಲಾ ಮಟ್ಟದಲ್ಲಿ ಅತ್ಯುತ್ತಮ ಸೇವೆ ಮಾಡಿದವರು ಎಂದು ಪಾರಿತೋಷಕ ನೀಡಿ ಸನ್ಮಾನ ಮಾಡಲಾಯಿತು.
8 ತಾಲ್ಲೂಕುಗಳಿಂದ ಇಬ್ಬರು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಅತ್ಯುತ್ತಮ ಸೇವೆ ಸಲ್ಲಿಸಿದವರಿಗೆ ಪ್ರಶಸ್ತಿ ಹಾಗೂ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ವೇತಾ ದೇವರಾಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಎಂ ಜಾನಕಿ ಮತ್ತು ಅಪರ ಜಿಲ್ಲಾಧಿಕಾರಿ ಪೂರ್ಣಿಮ
ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆ: ಮಹಿಳಾ ಸ್ವಸಹಾಯ ಸಂಘಗಳಿಂದ ಮನೆಯಲ್ಲಿ ತಯಾರಿಸಲಾಗಿದ್ದ ಖಾದ್ಯ ಪದಾರ್ಥಗಳು, ಬಟ್ಟೆಗಳ ಮಳಿಗೆ, ಮೊಬೈಲ್ ಕ್ಯಾಂಟೀನ್ ಹೀಗೆ ವಿವಿಧ ಮಳಿಗೆಗಳನ್ನು ನಿರ್ಮಿಸಲಾಗಿತು.್ತ
ಅಪರ ಜಿಲ್ಲಾಧಿಕಾರಿ ಪೂರ್ಣಿಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಪದ್ಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಪಾಪಬೋವಿ, ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿಜ್ಞಾನ ವಿಭಾಗದ ಉಪನ್ಯಾಸಕರಾದ ನವ್ಯಗೌಡ, ಭವ್ಯ, ವಿವಿಧ ತಾಲ್ಲೂಕು ಅಂಗನವಾಡಿ ಕಾರ್ಯಕರ್ತೆಯರು ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು. ಕುಮಾರಿ ಭೂಮಿಕ ಸ್ವಾಗತ ನೃತ್ಯ ಮಾಡಿದರು.
Recent news in karnataka »
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ರಾಮನಗರ, ಫೆ. 02 : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ
ಸಂವಿಧಾನ ಜಾಗೃತಿ ಜಾಥಾ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ
ಪ್ರತಿಕ್ರಿಯೆಗಳು