ಪ್ರಧಾನ ಮಂತ್ರಿಗಳಿಂದ ರಾಮನಗರದ ಫಲಾನುಭವಿಗಳಿಗೆ ಆಸ್ತಿ ಕಾರ್ಡ್ ವಿತರಣೆ, ಸಾಂಕೇತಿಕವಾಗಿ ವಿತರಿಸಿದ ಸಿಇಓ

ರಾಮನಗರ:ಅ/11/20/ಭಾನುವಾರ. ಗ್ರಾಮೀಣ ಪ್ರದೇಶದ ಜಮೀನನ್ನು ಡ್ರೋಣ್ ತಂತ್ರಜ್ಞಾನದಿಂದ ಭೂಮಾಪನ ಮಾಡಿಸಿ, ಆಸ್ತಿ ಕಾರ್ಡ್ ನೀಡುವ ಕೇಂದ್ರ ಸರ್ಕಾರದ ‘ಸ್ವಾಮಿತ್ವ’ ಯೋಜನೆಯಡಿ ರಾಜ್ಯದ ರಾಮನಗರದ ಫಲಾನುಭವಿಗಳು ಸೇರಿದಂತೆ ದೇವರ ಆರು ರಾಜ್ಯಗಳಲ್ಲಿನ ಫಲಾನುಭವಿಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ವಿತರಿಸಿದರು.
ಪ್ರಧಾನ ಮಂತ್ರಿ ಅವರು ಒಟ್ಟು 763 ಗ್ರಾಮಗಳ ಫಲಾನುಭವಿಗಳಿಗೆ ಅವರುಗಳ ಮೊಬೈಲ್ ಫೋನುಗಳಿಗೆ ಆಸ್ತಿ ಕಾರ್ಡ್ ನ್ನು ಡೌನ್ ಲೋಡ್ ಲಿಂಕ್ ಕಳುಹಿಸುವ ಮೂಲಕ ವಿತರಿಸಿದರು. ಇದೇ ವೇಳೆ ರಾಮನಗರ ತಾಲ್ಲೂಕಿನ ಎಂ.ಜಿ ಪಾಳ್ಯ, ಮಜರೆ ಸೀಬಕಟ್ಟೆ ಹಾಗೂ ಮಾಗಡಿ ತಾಲ್ಲೂಕಿನ ಬಸವಾಪಟ್ಟಣ ಮತ್ತು ಮಜರೆ ಶಂಭಯ್ಯನ ಪಾಳ್ಯ ಗ್ರಾಮಗಳಲ್ಲಿನ 157 ಫಲಾನುಭವಿಗಳು ಸಹ ಅವರುಗಳ ಮೊಬೈಲ್ ನಲ್ಲಿ ಡೌನ್ಲೋಡ್ ಲಿಂಕ್ ಅನ್ನು ಸ್ವೀಕರಿಸಿದರು.
ಕೇಂದ್ರ ಸರ್ಕಾರದ ‘ಸ್ವಾಮಿತ್ವ’ ಯೋಜನೆಗೆ ಪ್ರಧಾನ ಮಂತ್ರಿಗಳು ಕಳೆದ ಏಪ್ರಿಲ್ 24 ರಂದು ದೇಶದಾದ್ಯಂತ ಚಾಲನೆ ನೀಡಿದ್ದರು. ದೇಶದಲ್ಲಿ ಪ್ರಾಯೋಗಿಕವಾಗಿ ಆರು ರಾಜ್ಯಗಳಲ್ಲಿ ಜಾರಿಗೆ ತಂದ ಈ ಯೋಜನೆಗಾಗಿ ಕರ್ನಾಟಕದಿಂದ ರಾಮನಗರ ಜಿಲ್ಲೆಯನ್ನು ಆಯ್ಕೆ ಮಾಡಲಾಗಿತ್ತು. ರಾಜ್ಯದಲ್ಲಿಯೆ ಪ್ರಥಮವಾಗಿ ರಾಮನಗರ ಜಿಲ್ಲೆಯ 4 ಗ್ರಾಮಗಳಲ್ಲಿ ಈ ಯೋಜನೆಯನ್ನು ಯಶಸ್ವಿಯಾಗಿ ಇಲ್ಲಿನ ಜಿಲ್ಲಾ ಪಂಚಾಯಿತಿ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿದೆ.
*ಅಡ್ಡಿಯಾದ ನೀತಿ ಸಂಹಿತೆ:* ಪ್ರಧಾನ ಮಂತ್ರಿಗಳು ಆಸ್ತಿ ಕಾರ್ಡ್ ಗಳನ್ನು ವಿತರಿಸಿದ ಬಳಿಕ ಆರು ರಾಜ್ಯಗಳ ಆಯ್ದ ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಪೂರ್ವ ನಿಗದಿಯಾದಂತೆ ರಾಮನಗರ ಜಿಲ್ಲೆಯಿಂದ ಶ್ರೀಮತಿ ಮಂಜುಳಾ ಅವರೊಂದಿಗೆ ಪ್ರಧಾನ ಮಂತ್ರಿಗಳು ಸಂವಾದ ನಡೆಸಬೇಕಾಗಿತ್ತು. ಆದರೆ, ಬೆಂಗಳೂರು ಶಿಕ್ಷಕರ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ರಾಮನಗರ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಹೀಗಾಗಿ, ಪ್ರಧಾನ ಮಂತ್ರಿಗಳು ಮಂಜುಳಾ ಅವರೊಂದಿಗೆ ಸಂವಾದ ನಡೆಸಲಿಲ್ಲ.
*ಆಸ್ತಿ ಕಾರ್ಡ್ ವಿತರಣೆ:* ಪ್ರಧಾನಿ ಮಂತ್ರಿಗಳ ಕಾರ್ಯಕ್ರಮದ ನಂತರ ರಾಮನಗರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಇಕ್ರಂ ಅವರು ಜಿಲ್ಲಾ ಪಂಚಾಯತಿ ಕಛೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಸಾಂಕೇತಿಕವಾಗಿ 4 ಗ್ರಾಮಗಳ ಫಲಾನುಭವಿಗಳಿಗೆ ಆಸ್ತಿ ಕಾರ್ಡುಗಳನ್ನು ವಿತರಿಸಿದರು.
ಭೂದಾಖಲೆಗಳ ಉಪನಿರ್ದೇಶಕ ಬಿ.ಜಿ. ಉಮೇಶ ಅವರ ಮಾರ್ಗದರ್ಶನದಲ್ಲಿ ಇನ್ನುಳಿದ ಎಲ್ಲಾ ಫಲಾನುಭವಿಗಳಿಗೆ ಗ್ರಾಮ ಪಂಚಾಯಿತಿ ಸಿಬ್ಬಂದಿ ಮತ್ತು ಭೂಮಾಪನ ಇಲಾಖೆಯ ಸಿಬ್ಬಂದಿಗಳು ಭೌತಿಕವಾಗಿ ಆಸ್ತಿ ಕಾರ್ಡುಗಳನ್ನು ವಿತರಿಸಿದರು.
ಈ ಯೋಜನೆಯನ್ನು ಕೇಂದ್ರ ಸರ್ಕಾರವು ಸರ್ವೆ ಆಫ್ ಇಂಡಿಯಾ ಸಂಸ್ಥೆಯ ನೆರವಿನೊಂದಿಗೆ ರಾಜ್ಯದ ಕಂದಾಯ ಇಲಾಖೆ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಯೋಗದೊಂದಿಗೆ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸುತ್ತಿದೆ. ರಾಮನಗರ ಜಿಲ್ಲೆಯಲ್ಲಿ ಇದುವರೆವಿಗೆ 67 ಗ್ರಾಮಗಳ 24,804 ಆಸ್ತಿಗಳ ಗಡಿಗಳನ್ನು ಗುರುತಿಸಿ ಡ್ರೋಣ್ ಮೂಲಕ ನಕ್ಷೆ ಸಿದ್ಧಪಡಿಸಲಾಗುತ್ತಿದ್ದು, ಯೋಜನೆ ಪ್ರಗತಿಯಲ್ಲಿರುತ್ತದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಇಕ್ರಂ ಉಲ್ಲಾ ಷರೀಫ್ ಅವರು ತಿಳಿಸಿದರು.
*ಅಕ್ರಮಕ್ಕೆ ತಡೆ:* ಸ್ವಾಮಿತ್ವ ಯೋಜನೆಯಿಂದ ಪ್ರತಿಯೊಂದು ಆಸ್ತಿಯ ಆಸ್ತಿ ತೆರಿಗೆಯನ್ನು ಸ್ಪಷ್ಟವಾಗಿ ಮತ್ತು ವೈಜ್ಞಾನಿಕವಾಗಿ ನಿರ್ಧರಿಸಲು ಸಹಾಯ ಮಾಡಿಕೊಡುತ್ತದೆ. ಇದರಿಂದ ಗ್ರಾಮ ಪಂಚಾಯಿತಿಗಳು ಆರ್ಥಿಕವಾಗಿ ಸದೃಢವಾಗಲು ನೆರವಾಗುತ್ತದೆ. ಜೊತೆಗೆ, ಆಸ್ತಿಯ ಮಾಲೀಕರು ಪರಸ್ಪರ ವಿವಾದಗಳಿಲ್ಲದೆ ಆಸ್ತಿ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ಸಹಕಾರಿಯಾಗುತ್ತದೆ. ಕಟ್ಟಡ ಪರವಾನಗಿಯನ್ನು ಪಡೆಯುವ ಪ್ರಕ್ರಿಯೆ ಸರಳವಾಗುತ್ತದೆ ಮತ್ತು ಸರ್ಕಾರಿ ಆಸ್ತಿಯಲ್ಲಿನ ಅಕ್ರಮ ಸ್ವಾಧೀನವನ್ನು ತೆರವುಗೊಳಿಸಬಹುದಾಗಿರುತ್ತದೆ ಎಂದು ಇಕ್ರಂ ಅವರು ಯೋಜನೆಯಿಂದಾಗುವ ಪ್ರಯೋಜನಗಳನ್ನು ವಿವರಿಸಿದರು.
*ಯೋಜನೆ ಉದ್ದೇಶ:* ‘ಸ್ವಾಮಿತ್ವ’ (SVAMITVA -Survey of vilages and mapping with improvised technology in village areas) ಯೋಜನೆಯಡಿ ಗ್ರಾಮೀಣ ವಸತಿ ಪ್ರದೇಶಗಳಲ್ಲಿರುವ ಆಸ್ತಿಯ ಗಡಿಗಳನ್ನು ಡ್ರೋಣ್ ಕ್ಯಾಮರಾ ಬಳಸಿಕೊಂಡು ಭೂಮಾಪನ ಮಾಡಿಸಿ ಆಸ್ತಿ ಮಾಲೀಕರಿಗೆ ನಕ್ಷೆ ಸಹಿತ ಆಸ್ತಿ ಕಾರ್ಡುಗಳನ್ನು (Property Card) ವಿತರಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಮಾಲೀಕರ ಹೆಸರು, ಆಸ್ತಿಯ ವಿಸ್ತೀರ್ಣ, ಕಟ್ಟಡದ ವಿಸ್ತೀರ್ಣ, ಆಸ್ತಿಯ ಚೆಕ್ಕುಬಂದಿ ವಿವರ, ಆಸ್ತಿಯ ಮೇಲೆ ಋಣಭಾರಗಳು ಇದ್ದಲ್ಲಿ ಅದರ ವಿವರ ಮತ್ತು ಸವಿವರವಾದ ನಕ್ಷೆಯ ವಿವರಗಳನ್ನು ಆಸ್ತಿ ಕಾರ್ಡು ಹೊಂದಿರುತ್ತದೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in karnataka »

ಟಾಟಾ ಮೋಟಾರ್ಸ್ ನ ಯಾವುದೇ ವಾಣಿಜ್ಯ ವಾಹನ ಖರೀದಿ ಮತ್ತು ಸೇವೆಯ ಪ್ರಯುಕ್ತ ಸಸಿ ನೆಡುವ ಕಾರ್ಯಕ್ರಮ ನಡೆಸಲಿದ್ದೇವೆ. ಸಿಇಓ ಘೋಷಣೆ
ಟಾಟಾ ಮೋಟಾರ್ಸ್ ಹಸಿರು ಭಾರತ ನಿರ್ಮಾಣಕ್ಕೆ ದಾರಿ ಮಾಡುತ್ತಿದೆ.
ಬೆಂಗಳೂರು:19/20/ಶನಿವಾರ.
ಭಾರತದ ಅತಿದೊಡ್ಡ ವಾಣಿಜ್ಯ ವಾಹನ ತಯಾರಕರಾದ ಟಾಟಾ ಮೋಟಾರ್ಸ್, ಅವರ ಚಾನೆಲ್ ಪಾಲುದಾರರೊಂದಿಗೆ, ಪರಿಸರ ಸುಸ್ಥಿ

ಪ್ರಧಾನ ಮಂತ್ರಿಗಳಿಂದ ರಾಮನಗರದ ಫಲಾನುಭವಿಗಳಿಗೆ ಆಸ್ತಿ ಕಾರ್ಡ್ ವಿತರಣೆ, ಸಾಂಕೇತಿಕವಾಗಿ ವಿತರಿಸಿದ ಸಿಇಓ
ರಾಮನಗರ:ಅ/11/20/ಭಾನುವಾರ. ಗ್ರಾಮೀಣ ಪ್ರದೇಶದ ಜಮೀನನ್ನು ಡ್ರೋಣ್ ತಂತ್ರಜ್ಞಾನದಿಂದ ಭೂಮಾಪನ ಮಾಡಿಸಿ, ಆಸ್ತಿ ಕಾರ್ಡ್ ನೀಡುವ ಕೇಂದ್ರ ಸರ್ಕಾರದ

ಶ್ರೀರಂಗ ಯೋಜನೆ ವರ್ಷದಲ್ಲಿ ಪೂರ್ಣ. ಗುಣಮಟ್ಟಕ್ಕೆ ಆದ್ಯತೆ ನೀಡಲು ಡಿಸಿಎಂ ಸೂಚನೆ
ಬೆಂಗಳೂರು:/ರಾಮನಗರ:ಆ/26/20/ಬುಧವಾರ. ಶ್ರೀರಂಗ ಏತ ನೀರಾವರಿ, ಸತ್ತೇಗಾಲ ಕುಡಿಯುವ ನೀರು ಯೋಜನೆ ಸೇರಿದಂತೆ ರಾಮನಗರ ಜಿಲ್ಲೆಯಲ್ಲಿ ನಡೆಯುತ್ತಿರ

ಚರ್ಮ ಕುಶಲ ಕರ್ಮಿಗಳಿಗೆ ವಿಶೇಷ ಪ್ಯಾಕೇಜ್ ಘೋಷಿಸಿದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ
ಬೆಂಗಳೂರು:ಮೇ/೦೮/೨೦/ಶುಕ್ರವಾರ. ಕೊರೊನಾ (ಕೋವಿಡ್-೧೯) ರ ಪರಿಣಾಮ ಹಾಗೂ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ರಸ್ತೆ ಬದಿಯಲ್ಲಿ ಚರ್ಮ

ಕೊರೊನಾ (ಕೋವಿಡ್-೧೯) ದಿಂದಾಗಿ ನಷ್ಟ ಅನುಭವಿಸಿದವರಿಗೆ ೧,೬೧೦ ಕೋಟಿ ರೂ ಪರಿಹಾರ ಘೋಷಿಸಿದ ಸರ್ಕಾರ
ಕಳೆದ ಒಂದೂವರೆ ತಿಂಗಳಿನಿಂದ ಲಾಕ್ ಡೌನ್ ನ ಪರಿಣಾಮವಾಗಿ ವಿವಿಧ ನಿರ್ಬಂಧಗಳನ್ನು ಹೇರಿರುವುದರಿಂದ ಎಲ್ಲಾ ವರ್ಗದ ಜನರು ಆರ್ಥಿಕವಾಗಿ ಸಂಕಷ್ಟವನ್ನು ಅನುಭವಿಸುತ್ತಾರೆ.
ಲಾಕ

ವಲಸೆ ಕಾರ್ಮಿಕರಿಗೆ ಉಚಿತ ಬಸ್ ಸೌಲಭ್ಯ: ಇನ್ನೂ ಎರಡು ದಿನ ವಿಸ್ತರಿಸಿದ ಮುಖ್ಯಮಂತ್ರಿ
ಬೆಂಗಳೂರು:ಮೇ/೦೪/೨೦/ಸೋಮವಾರ. ವಲಸೆ ಕಾರ್ಮಿಕರಿಗೆ ಪ್ರಕಟಿಸಿರುವ ಉಚಿತ ಬಸ್ ಪ್ರಯಾಣ ಸೌಲಭ್ಯ ಸುಗಮವಾಗಿ ನಡೆಯುತ್ತಿದ್ದು, ಅದನ್ನು ಇನ್ನು ಎರಡು

ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ಆನ್ಲೈನ್ ತರಗತಿಗಳು ಪ್ರಾರಂಭ ಡಾ ವಿಜಯ ಪ್ರಕಾಶ
ರಾಮನಗರ:ಮೇ/೦೩/೨೦/ಭಾನುವಾರ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ೨೦೧೯-೨೦ ನೇ ಶೈಕ್ಷಣಿಕ ಸಾಲಿನ ಜುಲೈ ಮತ್ತು ಜನವರಿ ಆವೃತ್ತಿಯಲ್ಲಿ

ಮೃತ ಹನುಮಂತು ಕುಟುಂಬಕ್ಕೆ ೦೫ ಲಕ್ಷ ರೂ ಚೆಕ್ ನೀಡಿದ ಎಚ್ಡಿಕೆ
ಕನಕಪುರ:ಏ/೨೨/೨೦/ಬುಧವಾರ. ನೆನ್ನೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ರಾಮನಗರ ಜಿಲ್ಲಾ ಪಬ್ಲಿಕ್ ಟಿವಿ ವರದಿಗಾರ ಹನುಮಂತು ಅವರ ಕುಟುಂಬದ ಸದಸ್ಯ

ಕಾರಿನಲ್ಲಿ ಮದ್ಯ ಸಾಗಣೆ ಚನ್ನಪಟ್ಟಣ ಮಾಕಳಿ ಗ್ರಾಮದ ಮೂವರ ಬಂಧನ
ನಾಗಮಂಗಲ:೨೨/೨೦/ಬುಧವಾರ. ಚಾಮರಾಜನಗರ- ಜೇವರ್ಗಿ ರಾಷ್ಟ್ರೀಯ ಹೆದ್ದಾರಿ ನಾಗಮಂಗಲ ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆ ಎದುರಿನ ಚೆಕ್ ಪೋಸ್ಟ್ ನಲ್

ಕಾರ್ಮಿಕರ ವೇತನ ಕಡಿತಕ್ಕೆ ಅವಕಾಶ ನೀಡುವುದಿಲ್ಲ : ಕಾರ್ಮಿಕ ಸಚಿವ ಅರೆಬೈಲ್ ಶಿವರಾಮ ಹೆಬ್ಬಾರ್
ಬೆಂಗಳೂರು:ಏ/೧೯/೨೦/ಭಾನುವಾರ. ಕಾರ್ಮಿಕರದ್ದಾಗಲೀ ಅಥವಾ ಇತರೆ ಯಾವುದೇ ಕಾರ್ಮಿಕರದ್ದಾಗಲೀ ವೇತನ ಕಡಿತಕ್ಕೆ ರಾಜ್ಯ ಸರ್ಕಾರ ಅವಕಾಶ ನೀಡುವುದಿಲ್ಲ
ಪ್ರತಿಕ್ರಿಯೆಗಳು