ಮಹಿಳೆಗೂ ಸಮಾನ ಸ್ಥಾನಮಾನ ನೀಡಬೇಕು: ಎಂ.ಕೃಷ್ಣಪ್ಪ
ಮಂಡ್ಯ : ದೇಶವು ಅಭಿವೃದ್ದಿ ಹೊಂದಲು ಮಹಿಳೆಗೂ ಸಮಾನ ಸ್ಥಾನ ಮಾನ ನೀಡಬೇಕು ಎಂದು ವಸತಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಕೃಷ್ಣಪ್ಪರವರು ತಿಳಿಸಿದರು.
ಅವರು ಇಂದು ನಗರದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಡ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಮಂಡ್ಯ ಜಿಲ್ಲಾ ಕಾವೇರಿ ಸ್ತ್ರೀ ಶಕ್ತಿ ಒಕ್ಕೂಟ ಇವರ ಸಂಯುಕ್ತಾಶ್ರಯದಲ್ಲಿ ನಾಲ್ವಡಿ ಕೃಷ್ಣರಾಜ ಕಲಾಮಂದಿರದಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ದೇಶವು ಅಭಿವೃದ್ಧಿ ಹೊಂದಲು ಮಹಿಳೆಗೂ ಸಮಾನ ಸ್ಥಾನಮಾನ ನೀಡಬೇಕು ಪುರಷರಷ್ಟೆ ಸಮಾನವಾಗಿ ಶೇ 50ರಷ್ಟು ಮೀಸಲಾತಿಯನ್ನು ಸರ್ಕಾರ ಎಲ್ಲಾ ರಂಗದಲ್ಲಿ ನೀಡಿದೆ ಎಂದು ತಿಳಿಸಿದ ಸಚಿವರು ಯಾವ ಹೆಣ್ಣು ಕೂಡ ಅಬಲೆಯೆಲ್ಲ ಅವಳು ಸಬಲೆ ಹೆಣ್ಣು, ಮಕ್ಕಳಿಗೆ ತಾಯಿಯಾಗಿ, ಗಂಡನಿಗೆ ಹೆಂಡತಿಯಾಗಿ ಸಂಸಾರದ ಭಾರವನ್ನು ಒತ್ತು ಸಂಸಾರವನ್ನು ಉನ್ನತ ಮಟ್ಟಕೆ ಒಯ್ಯತ್ತಾ ಇಡಿ ಕುಟುಂಬಕ್ಕೆ ಮಾದರಿಯಾಗಿದ್ದಾಳೆ ಎಂದು ಹೇಳಿದರು.
ಸ್ತ್ರೀ ಶಕ್ತಿ ಸಂಘ ಒಕ್ಕೂಟದಿಂದ ಬಹಳಷ್ಟು ಹೆಣ್ಣು ಮಕ್ಕಳು ಸ್ವಾಭಿಮಾನ, ಹೋರಾಟ ಹಾದಿಯನ್ನು ಒಳಗೊಂಡಿದ್ದಾರೆ. ಅಲ್ಲದೆ ಸ್ತ್ರೀ ಶಕ್ತಿ ಗುಂಪುಗಳಿಂದ ಎಲ್ಲಾ ರಂಗದಲ್ಲೂ ರಾಜಕೀಯ, ಕ್ರೀಡೆ, ವ್ಯಾಪಾರ ವ್ಯವಹಾರ, ಶಿಕ್ಷಣ ಎಲ್ಲಾ ಕಡೆಗೂ ಪ್ರೋತ್ಸಾಹ ದೊರೆಯುತ್ತಿದೆ ಎಂದು ತಿಳಿಸಿದರು.
ಅಂತರಾಷ್ಟ್ರಿಯ ಮಹಿಳಾ ದಿನಾಚರಣೆ ಒಂದು ದಿನ ಆಚರಿಸುತ್ತಿಲ್ಲ ವರ್ಷ ಪೂರ್ತಿ ಆಚರಿಸಲಾಗುತ್ತಿದೆ. ಹೆಣ್ಣು ಇಲ್ಲದೆ ಪ್ರಪಂಚ ನಡೆಯುವುದಿಲ್ಲ ತಾಯಿ, ತಂಗಿ, ಮಡದಿ ರೂಪದಲ್ಲಿ ಹೆಣ್ಣನ್ನು ಕಾಪಾಡಿಕೊಂಡು ಬಂದಿದ್ದೆವೆ. ತಾಯಿಯಿಂದ ಜನಿಸಿ ಅವಳ ಆಶ್ರಯದಿಂದ ಬುದ್ದಿ ಕಲಿತು ಬೆಳೆದು ಬಂದಿದ್ದೆವೆ. ಅವಳು ಇಲ್ಲದಿದ್ದರೆ ಯಾರು ಬದುಕಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಇದೆ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎನ್.ಮಂಜುಶ್ರೀಯವರು ಮಂಡ್ಯ ಜಿಲ್ಲೆಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪಡೆದ ಅರುಣಾಕುಮಾರಿ, ಸಾವಿತ್ರಮ್ಮ, ರತ್ನಮ್ಮ ಹಾಗೂ ಮಂಡ್ಯ ಜಿಲ್ಲೆಯ ವಿವಿಧ ರಂಗದಲ್ಲಿ ಅತ್ಯುನ್ನತ ಸೇವೆಗೈದ ಸಾಧಕರನ್ನು ಸನ್ಮಾನ ಮಾಡುವುದರ ಮೂಲಕ ಗೌರವಿಸಿದರು.
ವಸತಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಕೃಷ್ಣಪ್ಪರವರು ಸ್ತ್ರೀಶಕ್ತಿ ಗುಂಪುಗಳ ಸದಸ್ಯರು ತಯಾರಿಸಿದ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಮಂಡ್ಯ ನಗರಸಭೆಯ ಅಧ್ಯಕ್ಷರಾದ ಹೊಸಹಳ್ಳಿ ಬೋರೇಗೌಡ, ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಬಿ.ಶರತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಡಾ.ಎಸ್.ದಿವಾಕರ್, ಕಾವೇರಿ ಸ್ತ್ರೀ ಶಕ್ತಿ ಒಕ್ಕೂಟದ ಅಧ್ಯಕ್ಷರಾದ ಜ್ಯೋತಿ ರವಿಕುಮಾರ್, ಸ್ತ್ರೀ ಶಕ್ತಿ ಒಕ್ಕೂಟದ ಉಪಾಧ್ಯಕ್ಷÀರಾದ ಲಕ್ಷೀ, ನಾಗಮಂಗಲ ತಾಲ್ಲೂಕಿನ ಸ್ತ್ರೀ ಶಕ್ತಿ ಒಕ್ಕೂಟದ ಅಧ್ಯಕ್ಷರಾದ ಯಶೋದಮ್ಮ ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.
Recent news in karnataka »
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ರಾಮನಗರ, ಫೆ. 02 : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ
ಸಂವಿಧಾನ ಜಾಗೃತಿ ಜಾಥಾ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ
ಪ್ರತಿಕ್ರಿಯೆಗಳು