ಪುಸ್ತಕಗಳಿಂದ ತನ್ನದಲ್ಲದ ಅನುಭವಗಳನ್ನು ಮನುಷ್ಯ ರೂಢಿಸಿಕೊಳ್ಳುತ್ತಾನೆ: ಡಾ. ಭಾರತೀದೇವಿ
ಹಾಸನ : ಮನುಷ್ಯ ಪುಸ್ತಕಗಳಿಂದ ತನ್ನದಲ್ಲದ ಅನುಭವಗಳನ್ನು ತನ್ನದಾಗಿಸಿಕೊಳ್ಳುವ ಮೂಲಕ ಜ್ಞಾನವನ್ನು ಹೆಚ್ಚಿಸಿಕೊಂಡು ಉತ್ತಮ ಬದುಕನ್ನು ರೂಪಿಸಿಕೊಳ್ಳಲು ಸಾಧ್ಯ ಎಂದು ಡಾ. ಭಾರತೀದೇವಿ ಹೇಳಿದರು.
ಹೊಳೆನರಸೀಪುರ ಪಟ್ಟಣದ ಸರ್ಕಾರಿ ಮಹಿಳಾ ಕಾಲೇಜಿನ ‘ಜಾಣ – ಜಾಣೆಯರ ಬಳಗ’ವು ಏರ್ಪಡಿಸಿದ್ದ ‘ನನ್ನ ಮೆಚ್ಚಿನ ಪುಸ್ತಕ’ ಕಾರ್ಯಕ್ರಮದಲ್ಲಿ ತೀರ್ಪುಗಾರರಾಗಿ ಭಾಗವಹಿಸಿ ಮಾತನಾಡಿದ ಅವರು ನಾವು ಓದುವ ಪುಸ್ತಕಗಳು ನಮ್ಮ ಭವಿಷ್ಯದ ದಾರಿಯನ್ನು ನಿರ್ಧರಿಸುತ್ತವೆ. ಗಾಂಧೀಜಿಯವರು ಜಾನ್ ರಸ್ಕಿನ್ನ ‘ಆನ್ ಟು ದ ಲಾಸ್ಟ್’ ಕೃತಿಯನ್ನು ಓದಿ ಪಡೆದ ಪ್ರೇರಣೆ, ಪರೋಕ್ಷವಾಗಿ ಭಾರತದ ಸ್ವಾತಂತ್ರ ಸಂಗ್ರಾಮದ ದಾರಿಯನ್ನು ನಿರ್ಧರಿಸಿತು. ಆದ್ದರಿಂದ ವಿದ್ಯಾರ್ಥಿಗಳು ಸರಿಯಾದ ಸಮಯದಲ್ಲಿ ಸರಿಯಾದ ಕೃತಿಗಳನ್ನು ಓದುವುದರಿಂದ ಬದುಕಿನಲ್ಲಿ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಳ್ಳಲು ಸಹಾಯವಾಗುತ್ತದೆ ಎಂದರು.
ಕನ್ನಡ ಸಾಹಿತ್ಯವು ಸಮೃದ್ಧವಾಗಿದ್ದು ಅತ್ಯುತ್ತಮ ಕೃತಿಗಳು ಲಭ್ಯವಿವೆ. ವಿದ್ಯಾರ್ಥಿ ದೆಸೆಯಲ್ಲಿಯೇ ಇಂತಹ ಪುಸ್ತಕಗಳನ್ನು ಓದುವ ಅಗತ್ಯವಿದೆ. ಅದು ಬಿಟ್ಟು ಇಂದಿನ ವಾಟ್ಸಾಪ್ ಮತ್ತು ಫೇಸ್ಬುಕ್ಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳುವುದರಿಂದ ನೀವು ಸ್ವಂತಿಕೆಯಿಲ್ಲದವರಾಗುವ ಸಾಧ್ಯತೆಯಿದೆ. ಆದ್ದರಿಂದ ಇಂದಿನ ಯುವಜನತೆಗೆ ಸಾಮಾಜಿಕ ಮತ್ತು ರಾಜಕೀಯ ತಿಳುವಳಿಕೆಯ ಕೊರತೆಯಿದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡುಗಳನ್ನಾಡಿದ ಜಾಣ - ಜಾಣೆಯರ ಬಳಗದ ಸಂಚಾಲಕರಾದ ದಿನೇಶ್ ಕೆ.ಎಸ್. ಮಾತನಾಡಿ ವಿದ್ಯಾರ್ಥಿನಿಯರು ಜಾಣೆಯರಾಗಬೇಕೆಂಬ ಆಶಯದಿಂದ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಜಾಣ-ಜಾಣೆಯರ ಬಳಗದ ವತಿಯಿಂದ ಏರ್ಪಡಿಸಲಾಗುತ್ತಿದೆ. ಪ್ರಸ್ತುತ ಪುಸ್ತಕ ಪ್ರಾಧಿಕಾರದ ಮುಖ್ಯ ಕಾರ್ಯಕ್ರಮವಾಗಿರುವ ನನ್ನ ಮೆಚ್ಚಿನ ಪುಸ್ತಕ ಕಾರ್ಯಕ್ರಮ ಏರ್ಪಡಿಸಲಾಗಿದೆ. ಇದರ ದೆಸೆಯಿಂದ ವಿದ್ಯಾರ್ಥಿನಿಯರು, ಪಠ್ಯೇತರವಾದ ಕೃತಿಗಳನ್ನೂ ಗಂಭೀರವಾಗಿ ಓದಲು ಸಾಧ್ಯವಾಗುತ್ತದೆ ಎಂದರು. ಪ್ರಾಂಶುಪಾಲರಾದ ಡಾ. ಲಲಿತಾದೇವಿಯವರು ಮಾತನಾಡಿ, ನಾವು ವಿದ್ಯಾರ್ಥಿಗಳಾಗಿದ್ದಾಗ ಪುಸ್ತಕಗಳು ಮತ್ತು ರೇಡಿಯೊಗಳಷ್ಟೆ ಮನರಂಜನೆಗೆ ಲಭ್ಯವಾಗುತ್ತಿದ್ದವು. ಆದ್ದರಿಂದ ರಜಾದಿನಗಳಲ್ಲಿ ಹೆಚ್ಚೆಚ್ಚು ಪುಸ್ತಕಗಳನ್ನು ಓದುತ್ತಿದ್ದೆವು. ಆದರೆ ಈಗಿನ ಕಾಲದ ವಿದ್ಯಾರ್ಥಿಗಳಿಗೆ ಟಿ.ವಿ. ಮತ್ತು ಮೊಬೈಲ್ ಕಾರಣಗಳಿಂದಾಗಿ ಓದುವ ಹವ್ಯಾಸ ಕಡಿಮೆಯಾಗಿದೆ. ಆದರೆ ಉತ್ತಮ ಕೃತಿಗಳ ಅಭ್ಯಾಸದಿಂದಷ್ಟೆ ಉತ್ತಮ ಭವಿಷ್ಯ ರೂಪುಗೊಳ್ಳುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಕಾಲೇಜಿನ ವಿವಿಧ ವಿಭಾಗಗಳ ಸುಮಾರು 27 ಮಂದಿ ವಿದ್ಯಾರ್ಥಿನಿಯರು ತಮ್ಮ ಮೆಚ್ಚಿನ ಪುಸ್ತಕಗಳನ್ನು ಕುರಿತು ಮಾತನಾಡಿದರು. ಲಕ್ಷ್ಮಿ ಆರ್. ಎಸ್. ಪ್ರಥಮ ಸ್ಥಾನ ಪಡೆದರೆ, ಹಾಜಿರಾ ಬೇಗಂ ದ್ವಿತೀಯ ಸ್ಥಾನ ಮತ್ತು ಅಪೂರ್ವ ತೃತೀಯ ಸ್ಥಾನ ಪಡೆದರು. ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳ ಅಧ್ಯಾಪಕರು ಹಾಗೂ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.
Recent news in karnataka »
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ರಾಮನಗರ, ಫೆ. 02 : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ
ಸಂವಿಧಾನ ಜಾಗೃತಿ ಜಾಥಾ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ
ಪ್ರತಿಕ್ರಿಯೆಗಳು